Homeಕರ್ನಾಟಕದೇವಿಪ್ರಸಾದ್ ಚಟ್ಟೋಪಾಧ್ಯಾಯರ ’ಲೋಕಾಯತ’ವನ್ನು ಏಕೆ ಓದಬೇಕೆಂದರೆ.. : ಯೋಗೇಶ್ ಮಾಸ್ಟರ್‌

ದೇವಿಪ್ರಸಾದ್ ಚಟ್ಟೋಪಾಧ್ಯಾಯರ ’ಲೋಕಾಯತ’ವನ್ನು ಏಕೆ ಓದಬೇಕೆಂದರೆ.. : ಯೋಗೇಶ್ ಮಾಸ್ಟರ್‌

- Advertisement -
- Advertisement -

ಪುಟಕಿಟ್ಟ ಪುಟಗಳು : ಯೋಗೇಶ್ ಮಾಸ್ಟರ್‌

ಇಂದಿನ ರಾಜ್ಯಾಡಳಿತದ ಸಾಂಸ್ಥಿಕತೆಯು ರೂಪುಗೊಂಡಿರುವುದು ಅಂದಿನ ಬುಡಕಟ್ಟು ಸಮುದಾಯಗಳ ಸಮಾಧಿಗಳ ಮೇಲೆ. ಈ ಸ್ಪಷ್ಟತೆಯ ಅರಿವಿನ ಮೇಲೆಯೇ ದೇವಿಪ್ರಸಾದ್ ಚಟ್ಟೋಪಾಧ್ಯಾಯ ಭಾರತದಲ್ಲಿ ಬುಡಕಟ್ಟುಗಳ ಸಂಸ್ಕೃತಿ ಮತ್ತು ಸಮಾಜದ ಆಳ, ಎತ್ತರಗಳನ್ನು ಶೋಧಿಸುತ್ತಾ ಹೋಗುತ್ತಾರೆ.

ಬಹಳ ಮುಖ್ಯವಾಗಿ ವೈದಿಕ ಸಮುದಾಯದಿಂದ ಇಂದು ಅತ್ಯಂತ ಅಪವ್ಯಾಖ್ಯಾನಕ್ಕೊಳಗಾಗಿರುವ ಅನೇಕ ಪರಿಕಲ್ಪನೆಗಳ ಸಾಮಾಜಿಕ ಹಿನ್ನೆಲೆ ಮತ್ತು ಸಾಂಸ್ಕೃತಿಕ ಚರಿತ್ರೆಯನ್ನು ನಿಖರ ಮಾಹಿತಿಗಳ ಮೂಲಕ ಅರಿವಿಗೆ ಗ್ರಾಸ ಒದಗಿಸುತ್ತಾರೆ.

ಲೋಕಾಯತ, ಹೆಸರೇ ಧ್ವನಿಸುವಂತೆ, ಕೃತಿಯು ಬರೀ ಭೌತವಾದಕ್ಕೆ ಸೀಮಿತವಾಗುವುದಿಲ್ಲ. ಇಂದಿನ ಭಾರತದಲ್ಲಿ ಪ್ರಚಲಿತದಲ್ಲಿರುವ ಅನೇಕಾನೇಕ ಪರಿಕಲ್ಪನೆಗಳ ಉಗಮ, ಬೆಳವಣಿಗೆ ಮತ್ತು ರೂಪಾಂತರಗೊಂಡಿರುವುದರ ಬಗ್ಗೆ ಯಾವುದೇ ಸೃಜನಶೀಲ ಕಾದಂಬರಿಗಿಂತ ರೋಚಕತೆಯನ್ನು ನೀಡುತ್ತದೆ. ನಾವು ಯಾವುದನ್ನೋ ತಲೆತಲಾಂತರಗಳಿಂದ ಶ್ರೇಷ್ಠವೆಂದೋ, ಪವಿತ್ರವೆಂದೋ ಶ್ರದ್ಧೆಯಿಂದ ನಂಬಿಕೊಂಡು ಬಂದಿರುವುದು, ಅದೇ ನಾವು ಯಾವುದನ್ನು ಕನಿಷ್ಟ ಅಥವಾ ನೀಚ ಎಂದು ಅಂದುಕೊಂಡಿದ್ದೇವೋ, ಅದೇ ಆ ಪಾವಿತ್ರ‍್ಯತೆಯ ಉಗಮವೆಂದು ತಿಳಿದಾಗ ಅಚ್ಚರಿಯಾಗುತ್ತದೆ.

ಅತಿ ಮುಖ್ಯವಾಗಿ ಯಾವ ರಾಕ್ಷಸರನ್ನು ಕ್ರೂರಿಗಳೆಂದು, ದುಷ್ಟರೆಂದು ಪೌರಾಣಿಕ ಕಥನಗಳು ವಿವರಿಸಿಕೊಂಡು ಮತ್ತು ನಂಬಿಸಿಕೊಂಡು ಬಂದಿದ್ದವೋ ಅದಕ್ಕೆ ವ್ಯತಿರಿಕ್ತವಾಗಿ ಅವರು ಅರಣ್ಯಕರೆಂದು, ಬುಡಕಟ್ಟಿನವರೆಂದು ತಿಳಿದುಬರುತ್ತದೆ. ಜೊತೆಗೆ ಅವರ ಅಸ್ತಿತ್ವಕ್ಕಾಗಿ ಮತ್ತು ಉಳಿವಿಗಾಗಿ ಮಾಡಿದಂತಹ ಅನಿವಾರ್ಯದ ಕದನಗಳು, ಪ್ರತಿಭಟನೆಗಳೆಲ್ಲಾ ಇಂದು ಪೀಡೆಗಳನ್ನಾಗಿ ಬಿಂಬಿಸಿರುವ ಕಾರಣಗಳು ಸ್ಪಷ್ಟವಾಗುತ್ತದೆ.

ಇನ್ನು ಧಾರ್ಮಿಕವಾಗಿ ಗುರುತಿಸಲ್ಪಡುವ ಗೋತ್ರಗಳು ಟೋಟಮ್ ಅಥವಾ ಪ್ರಾಣಿ ಲಾಂಛನದ ಬುಡಕಟ್ಟು ಅಧ್ಯಯನಗಳ ಕಡೆಗೆ ಹೊರಳುತ್ತವೆ. ಅಲ್ಲೇ ಸ್ವಾರಸ್ಯವೂ ಇರುವುದು. ಕಶ್ಯಪ, ಗೌತಮ, ಭಾರಧ್ವಜ ಇತ್ಯಾದಿ ಬ್ರಾಹ್ಮಣ ಗೋತ್ರದವರ ಮೂಲ ಆಮೆ, ಗೂಬೆ ಮತ್ತು ಇತರ ಕಾಡಿನ ಪ್ರಾಣಿ, ಪಕ್ಷಿ ಮತ್ತು ಮರಗಿಡಗಳ ಗುರುತುಗಳನ್ನು ಹೊಂದಿರುವ ಬುಡಕಟ್ಟು ಪಂಗಡಗಳು.

ಹಾಗೆಯೇ ತಾಯಾಳಿಕೆಯ ಜಾಡು ಹಿಡಿದು ಗೌರಿಯ ಸ್ತ್ರೀ ತತ್ವದ ಎಳೆಗಳಿಂದ ವ್ರತ ಮತ್ತು ವ್ರಾತ್ಯ ಇತ್ಯಾದಿಗಳ ತಿಳಿವಳಿಕೆ ನೀಡುತ್ತಾ ಕೃಷಿಯನ್ನು ಆರಂಭ ಮಾಡಿದ್ದು ಹೆಂಗಸು ಎಂಬ ಅಂಶವನ್ನು ಹೊರಗೆಡವುತ್ತಾರೆ.

ಆದಿಪೂಜಿತ ಗಣಪತಿಯ ಗಾಣಪತ್ಯದ ರಹಸ್ಯವನ್ನು ಹೊರಗೆಡವುತ್ತಾರೆ. ವಿನಾಯಕನ ಬಗ್ಗೆ ಏನೆಲ್ಲಾ ಭಯಭಕ್ತಿಗಳನ್ನು ಇಟ್ಟುಕೊಂಡಿರುವ ಜನರಿಗೆ ಇದೇ ವಿನಾಯಕ ದುಃಸ್ವಪ್ನದ ಕುರುಹಾಗಿದ್ದರ ಬಗ್ಗೆ ಬೆಚ್ಚಿಬೀಳಿಸದೇ ಇರದು. ಇಂದು ಗಣಪತಿಯ ಬಗ್ಗೆ ಏನೇನೆಲ್ಲಾ ಶುಭ ಎಂದು ಕಾಣುತ್ತೇವೋ ಅದೆಲ್ಲವೂ ಅರಣ್ಯಕಗಳಲ್ಲಿ, ಯಾಜ್ಞವಲ್ಯ ಸ್ಮೃತಿಯಲ್ಲಿ, ಬ್ರಾಹ್ಮಣಗಳಲ್ಲಿ ಅಷ್ಟೇ ಅಶುಭವಾಗಿ, ಕೀಳಾಗಿ ಕಾಣುತ್ತಿದ್ದ ಉಲ್ಲೇಖಗಳನ್ನು ಕಾಣಿಸುತ್ತಾರೆ.

ಮಾನವಶಾಸ್ತ್ರೀಯ ಅಧ್ಯಯನಕ್ಕೆ ನೆರವಾಗುತ್ತಲೇ ಭಾರತದ ಧಾರ್ಮಿಕ, ಆಧ್ಯಾತ್ಮಿಕ, ತಾತ್ವಿಕ, ಸಾಂಸ್ಕೃತಿಕ ಚರಿತ್ರೆಗಳನ್ನು ಇಂದು ಯಾವ ಪ್ರತಿಕೃತಿಗಳಲ್ಲಿ ಕಾಣುತ್ತಿದ್ದೇವೆ ಎಂಬ ಅರಿವು ಮೂಡಿಸುವ ಮಹಾನ್ ವಿದ್ವಾಂಸ ದೇವಿಪ್ರಸಾದ್ ಚಟ್ಟೋಪಾಧ್ಯಾಯ.

ದೇವಿಪ್ರಸಾದ್ ಚಟ್ಟೋಪಾಧ್ಯಾಯ.

ಬರಿಯ ಪೌರಾಣಿಕತೆಯ ಆಯಾಮದಿಂದಷ್ಟೇ ಧಾರ್ಮಿಕತೆಯ ಶ್ರದ್ಧೆಯನ್ನು ಕಟ್ಟಿಕೊಂಡವರಿಗೆ ಲೋಕಾಯತ ಗಾಬರಿ ಬೀಳಿಸದೇ ಇರದು. ಆದರೆ ಯಾವುದೇ ಸಂಪ್ರದಾಯ, ಆಚರಣೆ ಮತ್ತು ಧಾರ್ಮಿಕ ವಿಧಿವಿಧಾನಗಳ ಜಾಡು ಹಿಡಿದು ಹೊರಟರೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಚರಿತ್ರೆಗಳು ಒಂದಷ್ಟು ಧೂಳೊದರಿಕೊಂಡು ಬೆಳಕಿಗೆ ಬರುತ್ತವೆ. ಅದು ಅದೇ ಪರಿಕಲ್ಪನೆಗಳ ಆಧಾರದಲ್ಲಿ ಇಂದು ನಡೆಯುತ್ತಿರುವ ಶೋಷಣೆಗಳೂ ಅರಿವಿಗೆ ನಿಲುಕುತ್ತವೆ. ಪೌರಾಣಿಕ ಕಥನಗಳ ರೂಪಕಗಳನ್ನು ತಿಳಿಯಲು, ಒಗಟುಗಳನ್ನು ಬಿಡಿಸಲು ನೆರವಾಗುತ್ತವೆ.

ಲೋಕಾಯತದ ಪುಟಪುಟವೂ ಸಾಂಸ್ಕೃತಿಕ ಚರಿತ್ರೆ ಮತ್ತು ಒಳನೋಟಗಳ ಬಳುವಳಿಗಳೇ.

ನವಕರ್ನಾಟಕ ಪ್ರಕಾಶನದಲ್ಲಿ ಈ ಕೃತಿ ಕನ್ನಡದಲ್ಲಿಯೂ ಲಭ್ಯವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...