Homeಕರ್ನಾಟಕದೇವಿಪ್ರಸಾದ್ ಚಟ್ಟೋಪಾಧ್ಯಾಯರ ’ಲೋಕಾಯತ’ವನ್ನು ಏಕೆ ಓದಬೇಕೆಂದರೆ.. : ಯೋಗೇಶ್ ಮಾಸ್ಟರ್‌

ದೇವಿಪ್ರಸಾದ್ ಚಟ್ಟೋಪಾಧ್ಯಾಯರ ’ಲೋಕಾಯತ’ವನ್ನು ಏಕೆ ಓದಬೇಕೆಂದರೆ.. : ಯೋಗೇಶ್ ಮಾಸ್ಟರ್‌

- Advertisement -
- Advertisement -

ಪುಟಕಿಟ್ಟ ಪುಟಗಳು : ಯೋಗೇಶ್ ಮಾಸ್ಟರ್‌

ಇಂದಿನ ರಾಜ್ಯಾಡಳಿತದ ಸಾಂಸ್ಥಿಕತೆಯು ರೂಪುಗೊಂಡಿರುವುದು ಅಂದಿನ ಬುಡಕಟ್ಟು ಸಮುದಾಯಗಳ ಸಮಾಧಿಗಳ ಮೇಲೆ. ಈ ಸ್ಪಷ್ಟತೆಯ ಅರಿವಿನ ಮೇಲೆಯೇ ದೇವಿಪ್ರಸಾದ್ ಚಟ್ಟೋಪಾಧ್ಯಾಯ ಭಾರತದಲ್ಲಿ ಬುಡಕಟ್ಟುಗಳ ಸಂಸ್ಕೃತಿ ಮತ್ತು ಸಮಾಜದ ಆಳ, ಎತ್ತರಗಳನ್ನು ಶೋಧಿಸುತ್ತಾ ಹೋಗುತ್ತಾರೆ.

ಬಹಳ ಮುಖ್ಯವಾಗಿ ವೈದಿಕ ಸಮುದಾಯದಿಂದ ಇಂದು ಅತ್ಯಂತ ಅಪವ್ಯಾಖ್ಯಾನಕ್ಕೊಳಗಾಗಿರುವ ಅನೇಕ ಪರಿಕಲ್ಪನೆಗಳ ಸಾಮಾಜಿಕ ಹಿನ್ನೆಲೆ ಮತ್ತು ಸಾಂಸ್ಕೃತಿಕ ಚರಿತ್ರೆಯನ್ನು ನಿಖರ ಮಾಹಿತಿಗಳ ಮೂಲಕ ಅರಿವಿಗೆ ಗ್ರಾಸ ಒದಗಿಸುತ್ತಾರೆ.

ಲೋಕಾಯತ, ಹೆಸರೇ ಧ್ವನಿಸುವಂತೆ, ಕೃತಿಯು ಬರೀ ಭೌತವಾದಕ್ಕೆ ಸೀಮಿತವಾಗುವುದಿಲ್ಲ. ಇಂದಿನ ಭಾರತದಲ್ಲಿ ಪ್ರಚಲಿತದಲ್ಲಿರುವ ಅನೇಕಾನೇಕ ಪರಿಕಲ್ಪನೆಗಳ ಉಗಮ, ಬೆಳವಣಿಗೆ ಮತ್ತು ರೂಪಾಂತರಗೊಂಡಿರುವುದರ ಬಗ್ಗೆ ಯಾವುದೇ ಸೃಜನಶೀಲ ಕಾದಂಬರಿಗಿಂತ ರೋಚಕತೆಯನ್ನು ನೀಡುತ್ತದೆ. ನಾವು ಯಾವುದನ್ನೋ ತಲೆತಲಾಂತರಗಳಿಂದ ಶ್ರೇಷ್ಠವೆಂದೋ, ಪವಿತ್ರವೆಂದೋ ಶ್ರದ್ಧೆಯಿಂದ ನಂಬಿಕೊಂಡು ಬಂದಿರುವುದು, ಅದೇ ನಾವು ಯಾವುದನ್ನು ಕನಿಷ್ಟ ಅಥವಾ ನೀಚ ಎಂದು ಅಂದುಕೊಂಡಿದ್ದೇವೋ, ಅದೇ ಆ ಪಾವಿತ್ರ‍್ಯತೆಯ ಉಗಮವೆಂದು ತಿಳಿದಾಗ ಅಚ್ಚರಿಯಾಗುತ್ತದೆ.

ಅತಿ ಮುಖ್ಯವಾಗಿ ಯಾವ ರಾಕ್ಷಸರನ್ನು ಕ್ರೂರಿಗಳೆಂದು, ದುಷ್ಟರೆಂದು ಪೌರಾಣಿಕ ಕಥನಗಳು ವಿವರಿಸಿಕೊಂಡು ಮತ್ತು ನಂಬಿಸಿಕೊಂಡು ಬಂದಿದ್ದವೋ ಅದಕ್ಕೆ ವ್ಯತಿರಿಕ್ತವಾಗಿ ಅವರು ಅರಣ್ಯಕರೆಂದು, ಬುಡಕಟ್ಟಿನವರೆಂದು ತಿಳಿದುಬರುತ್ತದೆ. ಜೊತೆಗೆ ಅವರ ಅಸ್ತಿತ್ವಕ್ಕಾಗಿ ಮತ್ತು ಉಳಿವಿಗಾಗಿ ಮಾಡಿದಂತಹ ಅನಿವಾರ್ಯದ ಕದನಗಳು, ಪ್ರತಿಭಟನೆಗಳೆಲ್ಲಾ ಇಂದು ಪೀಡೆಗಳನ್ನಾಗಿ ಬಿಂಬಿಸಿರುವ ಕಾರಣಗಳು ಸ್ಪಷ್ಟವಾಗುತ್ತದೆ.

ಇನ್ನು ಧಾರ್ಮಿಕವಾಗಿ ಗುರುತಿಸಲ್ಪಡುವ ಗೋತ್ರಗಳು ಟೋಟಮ್ ಅಥವಾ ಪ್ರಾಣಿ ಲಾಂಛನದ ಬುಡಕಟ್ಟು ಅಧ್ಯಯನಗಳ ಕಡೆಗೆ ಹೊರಳುತ್ತವೆ. ಅಲ್ಲೇ ಸ್ವಾರಸ್ಯವೂ ಇರುವುದು. ಕಶ್ಯಪ, ಗೌತಮ, ಭಾರಧ್ವಜ ಇತ್ಯಾದಿ ಬ್ರಾಹ್ಮಣ ಗೋತ್ರದವರ ಮೂಲ ಆಮೆ, ಗೂಬೆ ಮತ್ತು ಇತರ ಕಾಡಿನ ಪ್ರಾಣಿ, ಪಕ್ಷಿ ಮತ್ತು ಮರಗಿಡಗಳ ಗುರುತುಗಳನ್ನು ಹೊಂದಿರುವ ಬುಡಕಟ್ಟು ಪಂಗಡಗಳು.

ಹಾಗೆಯೇ ತಾಯಾಳಿಕೆಯ ಜಾಡು ಹಿಡಿದು ಗೌರಿಯ ಸ್ತ್ರೀ ತತ್ವದ ಎಳೆಗಳಿಂದ ವ್ರತ ಮತ್ತು ವ್ರಾತ್ಯ ಇತ್ಯಾದಿಗಳ ತಿಳಿವಳಿಕೆ ನೀಡುತ್ತಾ ಕೃಷಿಯನ್ನು ಆರಂಭ ಮಾಡಿದ್ದು ಹೆಂಗಸು ಎಂಬ ಅಂಶವನ್ನು ಹೊರಗೆಡವುತ್ತಾರೆ.

ಆದಿಪೂಜಿತ ಗಣಪತಿಯ ಗಾಣಪತ್ಯದ ರಹಸ್ಯವನ್ನು ಹೊರಗೆಡವುತ್ತಾರೆ. ವಿನಾಯಕನ ಬಗ್ಗೆ ಏನೆಲ್ಲಾ ಭಯಭಕ್ತಿಗಳನ್ನು ಇಟ್ಟುಕೊಂಡಿರುವ ಜನರಿಗೆ ಇದೇ ವಿನಾಯಕ ದುಃಸ್ವಪ್ನದ ಕುರುಹಾಗಿದ್ದರ ಬಗ್ಗೆ ಬೆಚ್ಚಿಬೀಳಿಸದೇ ಇರದು. ಇಂದು ಗಣಪತಿಯ ಬಗ್ಗೆ ಏನೇನೆಲ್ಲಾ ಶುಭ ಎಂದು ಕಾಣುತ್ತೇವೋ ಅದೆಲ್ಲವೂ ಅರಣ್ಯಕಗಳಲ್ಲಿ, ಯಾಜ್ಞವಲ್ಯ ಸ್ಮೃತಿಯಲ್ಲಿ, ಬ್ರಾಹ್ಮಣಗಳಲ್ಲಿ ಅಷ್ಟೇ ಅಶುಭವಾಗಿ, ಕೀಳಾಗಿ ಕಾಣುತ್ತಿದ್ದ ಉಲ್ಲೇಖಗಳನ್ನು ಕಾಣಿಸುತ್ತಾರೆ.

ಮಾನವಶಾಸ್ತ್ರೀಯ ಅಧ್ಯಯನಕ್ಕೆ ನೆರವಾಗುತ್ತಲೇ ಭಾರತದ ಧಾರ್ಮಿಕ, ಆಧ್ಯಾತ್ಮಿಕ, ತಾತ್ವಿಕ, ಸಾಂಸ್ಕೃತಿಕ ಚರಿತ್ರೆಗಳನ್ನು ಇಂದು ಯಾವ ಪ್ರತಿಕೃತಿಗಳಲ್ಲಿ ಕಾಣುತ್ತಿದ್ದೇವೆ ಎಂಬ ಅರಿವು ಮೂಡಿಸುವ ಮಹಾನ್ ವಿದ್ವಾಂಸ ದೇವಿಪ್ರಸಾದ್ ಚಟ್ಟೋಪಾಧ್ಯಾಯ.

ದೇವಿಪ್ರಸಾದ್ ಚಟ್ಟೋಪಾಧ್ಯಾಯ.

ಬರಿಯ ಪೌರಾಣಿಕತೆಯ ಆಯಾಮದಿಂದಷ್ಟೇ ಧಾರ್ಮಿಕತೆಯ ಶ್ರದ್ಧೆಯನ್ನು ಕಟ್ಟಿಕೊಂಡವರಿಗೆ ಲೋಕಾಯತ ಗಾಬರಿ ಬೀಳಿಸದೇ ಇರದು. ಆದರೆ ಯಾವುದೇ ಸಂಪ್ರದಾಯ, ಆಚರಣೆ ಮತ್ತು ಧಾರ್ಮಿಕ ವಿಧಿವಿಧಾನಗಳ ಜಾಡು ಹಿಡಿದು ಹೊರಟರೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಚರಿತ್ರೆಗಳು ಒಂದಷ್ಟು ಧೂಳೊದರಿಕೊಂಡು ಬೆಳಕಿಗೆ ಬರುತ್ತವೆ. ಅದು ಅದೇ ಪರಿಕಲ್ಪನೆಗಳ ಆಧಾರದಲ್ಲಿ ಇಂದು ನಡೆಯುತ್ತಿರುವ ಶೋಷಣೆಗಳೂ ಅರಿವಿಗೆ ನಿಲುಕುತ್ತವೆ. ಪೌರಾಣಿಕ ಕಥನಗಳ ರೂಪಕಗಳನ್ನು ತಿಳಿಯಲು, ಒಗಟುಗಳನ್ನು ಬಿಡಿಸಲು ನೆರವಾಗುತ್ತವೆ.

ಲೋಕಾಯತದ ಪುಟಪುಟವೂ ಸಾಂಸ್ಕೃತಿಕ ಚರಿತ್ರೆ ಮತ್ತು ಒಳನೋಟಗಳ ಬಳುವಳಿಗಳೇ.

ನವಕರ್ನಾಟಕ ಪ್ರಕಾಶನದಲ್ಲಿ ಈ ಕೃತಿ ಕನ್ನಡದಲ್ಲಿಯೂ ಲಭ್ಯವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...