Homeಕರ್ನಾಟಕದೇವಿಪ್ರಸಾದ್ ಚಟ್ಟೋಪಾಧ್ಯಾಯರ ’ಲೋಕಾಯತ’ವನ್ನು ಏಕೆ ಓದಬೇಕೆಂದರೆ.. : ಯೋಗೇಶ್ ಮಾಸ್ಟರ್‌

ದೇವಿಪ್ರಸಾದ್ ಚಟ್ಟೋಪಾಧ್ಯಾಯರ ’ಲೋಕಾಯತ’ವನ್ನು ಏಕೆ ಓದಬೇಕೆಂದರೆ.. : ಯೋಗೇಶ್ ಮಾಸ್ಟರ್‌

- Advertisement -
- Advertisement -

ಪುಟಕಿಟ್ಟ ಪುಟಗಳು : ಯೋಗೇಶ್ ಮಾಸ್ಟರ್‌

ಇಂದಿನ ರಾಜ್ಯಾಡಳಿತದ ಸಾಂಸ್ಥಿಕತೆಯು ರೂಪುಗೊಂಡಿರುವುದು ಅಂದಿನ ಬುಡಕಟ್ಟು ಸಮುದಾಯಗಳ ಸಮಾಧಿಗಳ ಮೇಲೆ. ಈ ಸ್ಪಷ್ಟತೆಯ ಅರಿವಿನ ಮೇಲೆಯೇ ದೇವಿಪ್ರಸಾದ್ ಚಟ್ಟೋಪಾಧ್ಯಾಯ ಭಾರತದಲ್ಲಿ ಬುಡಕಟ್ಟುಗಳ ಸಂಸ್ಕೃತಿ ಮತ್ತು ಸಮಾಜದ ಆಳ, ಎತ್ತರಗಳನ್ನು ಶೋಧಿಸುತ್ತಾ ಹೋಗುತ್ತಾರೆ.

ಬಹಳ ಮುಖ್ಯವಾಗಿ ವೈದಿಕ ಸಮುದಾಯದಿಂದ ಇಂದು ಅತ್ಯಂತ ಅಪವ್ಯಾಖ್ಯಾನಕ್ಕೊಳಗಾಗಿರುವ ಅನೇಕ ಪರಿಕಲ್ಪನೆಗಳ ಸಾಮಾಜಿಕ ಹಿನ್ನೆಲೆ ಮತ್ತು ಸಾಂಸ್ಕೃತಿಕ ಚರಿತ್ರೆಯನ್ನು ನಿಖರ ಮಾಹಿತಿಗಳ ಮೂಲಕ ಅರಿವಿಗೆ ಗ್ರಾಸ ಒದಗಿಸುತ್ತಾರೆ.

ಲೋಕಾಯತ, ಹೆಸರೇ ಧ್ವನಿಸುವಂತೆ, ಕೃತಿಯು ಬರೀ ಭೌತವಾದಕ್ಕೆ ಸೀಮಿತವಾಗುವುದಿಲ್ಲ. ಇಂದಿನ ಭಾರತದಲ್ಲಿ ಪ್ರಚಲಿತದಲ್ಲಿರುವ ಅನೇಕಾನೇಕ ಪರಿಕಲ್ಪನೆಗಳ ಉಗಮ, ಬೆಳವಣಿಗೆ ಮತ್ತು ರೂಪಾಂತರಗೊಂಡಿರುವುದರ ಬಗ್ಗೆ ಯಾವುದೇ ಸೃಜನಶೀಲ ಕಾದಂಬರಿಗಿಂತ ರೋಚಕತೆಯನ್ನು ನೀಡುತ್ತದೆ. ನಾವು ಯಾವುದನ್ನೋ ತಲೆತಲಾಂತರಗಳಿಂದ ಶ್ರೇಷ್ಠವೆಂದೋ, ಪವಿತ್ರವೆಂದೋ ಶ್ರದ್ಧೆಯಿಂದ ನಂಬಿಕೊಂಡು ಬಂದಿರುವುದು, ಅದೇ ನಾವು ಯಾವುದನ್ನು ಕನಿಷ್ಟ ಅಥವಾ ನೀಚ ಎಂದು ಅಂದುಕೊಂಡಿದ್ದೇವೋ, ಅದೇ ಆ ಪಾವಿತ್ರ‍್ಯತೆಯ ಉಗಮವೆಂದು ತಿಳಿದಾಗ ಅಚ್ಚರಿಯಾಗುತ್ತದೆ.

ಅತಿ ಮುಖ್ಯವಾಗಿ ಯಾವ ರಾಕ್ಷಸರನ್ನು ಕ್ರೂರಿಗಳೆಂದು, ದುಷ್ಟರೆಂದು ಪೌರಾಣಿಕ ಕಥನಗಳು ವಿವರಿಸಿಕೊಂಡು ಮತ್ತು ನಂಬಿಸಿಕೊಂಡು ಬಂದಿದ್ದವೋ ಅದಕ್ಕೆ ವ್ಯತಿರಿಕ್ತವಾಗಿ ಅವರು ಅರಣ್ಯಕರೆಂದು, ಬುಡಕಟ್ಟಿನವರೆಂದು ತಿಳಿದುಬರುತ್ತದೆ. ಜೊತೆಗೆ ಅವರ ಅಸ್ತಿತ್ವಕ್ಕಾಗಿ ಮತ್ತು ಉಳಿವಿಗಾಗಿ ಮಾಡಿದಂತಹ ಅನಿವಾರ್ಯದ ಕದನಗಳು, ಪ್ರತಿಭಟನೆಗಳೆಲ್ಲಾ ಇಂದು ಪೀಡೆಗಳನ್ನಾಗಿ ಬಿಂಬಿಸಿರುವ ಕಾರಣಗಳು ಸ್ಪಷ್ಟವಾಗುತ್ತದೆ.

ಇನ್ನು ಧಾರ್ಮಿಕವಾಗಿ ಗುರುತಿಸಲ್ಪಡುವ ಗೋತ್ರಗಳು ಟೋಟಮ್ ಅಥವಾ ಪ್ರಾಣಿ ಲಾಂಛನದ ಬುಡಕಟ್ಟು ಅಧ್ಯಯನಗಳ ಕಡೆಗೆ ಹೊರಳುತ್ತವೆ. ಅಲ್ಲೇ ಸ್ವಾರಸ್ಯವೂ ಇರುವುದು. ಕಶ್ಯಪ, ಗೌತಮ, ಭಾರಧ್ವಜ ಇತ್ಯಾದಿ ಬ್ರಾಹ್ಮಣ ಗೋತ್ರದವರ ಮೂಲ ಆಮೆ, ಗೂಬೆ ಮತ್ತು ಇತರ ಕಾಡಿನ ಪ್ರಾಣಿ, ಪಕ್ಷಿ ಮತ್ತು ಮರಗಿಡಗಳ ಗುರುತುಗಳನ್ನು ಹೊಂದಿರುವ ಬುಡಕಟ್ಟು ಪಂಗಡಗಳು.

ಹಾಗೆಯೇ ತಾಯಾಳಿಕೆಯ ಜಾಡು ಹಿಡಿದು ಗೌರಿಯ ಸ್ತ್ರೀ ತತ್ವದ ಎಳೆಗಳಿಂದ ವ್ರತ ಮತ್ತು ವ್ರಾತ್ಯ ಇತ್ಯಾದಿಗಳ ತಿಳಿವಳಿಕೆ ನೀಡುತ್ತಾ ಕೃಷಿಯನ್ನು ಆರಂಭ ಮಾಡಿದ್ದು ಹೆಂಗಸು ಎಂಬ ಅಂಶವನ್ನು ಹೊರಗೆಡವುತ್ತಾರೆ.

ಆದಿಪೂಜಿತ ಗಣಪತಿಯ ಗಾಣಪತ್ಯದ ರಹಸ್ಯವನ್ನು ಹೊರಗೆಡವುತ್ತಾರೆ. ವಿನಾಯಕನ ಬಗ್ಗೆ ಏನೆಲ್ಲಾ ಭಯಭಕ್ತಿಗಳನ್ನು ಇಟ್ಟುಕೊಂಡಿರುವ ಜನರಿಗೆ ಇದೇ ವಿನಾಯಕ ದುಃಸ್ವಪ್ನದ ಕುರುಹಾಗಿದ್ದರ ಬಗ್ಗೆ ಬೆಚ್ಚಿಬೀಳಿಸದೇ ಇರದು. ಇಂದು ಗಣಪತಿಯ ಬಗ್ಗೆ ಏನೇನೆಲ್ಲಾ ಶುಭ ಎಂದು ಕಾಣುತ್ತೇವೋ ಅದೆಲ್ಲವೂ ಅರಣ್ಯಕಗಳಲ್ಲಿ, ಯಾಜ್ಞವಲ್ಯ ಸ್ಮೃತಿಯಲ್ಲಿ, ಬ್ರಾಹ್ಮಣಗಳಲ್ಲಿ ಅಷ್ಟೇ ಅಶುಭವಾಗಿ, ಕೀಳಾಗಿ ಕಾಣುತ್ತಿದ್ದ ಉಲ್ಲೇಖಗಳನ್ನು ಕಾಣಿಸುತ್ತಾರೆ.

ಮಾನವಶಾಸ್ತ್ರೀಯ ಅಧ್ಯಯನಕ್ಕೆ ನೆರವಾಗುತ್ತಲೇ ಭಾರತದ ಧಾರ್ಮಿಕ, ಆಧ್ಯಾತ್ಮಿಕ, ತಾತ್ವಿಕ, ಸಾಂಸ್ಕೃತಿಕ ಚರಿತ್ರೆಗಳನ್ನು ಇಂದು ಯಾವ ಪ್ರತಿಕೃತಿಗಳಲ್ಲಿ ಕಾಣುತ್ತಿದ್ದೇವೆ ಎಂಬ ಅರಿವು ಮೂಡಿಸುವ ಮಹಾನ್ ವಿದ್ವಾಂಸ ದೇವಿಪ್ರಸಾದ್ ಚಟ್ಟೋಪಾಧ್ಯಾಯ.

ದೇವಿಪ್ರಸಾದ್ ಚಟ್ಟೋಪಾಧ್ಯಾಯ.

ಬರಿಯ ಪೌರಾಣಿಕತೆಯ ಆಯಾಮದಿಂದಷ್ಟೇ ಧಾರ್ಮಿಕತೆಯ ಶ್ರದ್ಧೆಯನ್ನು ಕಟ್ಟಿಕೊಂಡವರಿಗೆ ಲೋಕಾಯತ ಗಾಬರಿ ಬೀಳಿಸದೇ ಇರದು. ಆದರೆ ಯಾವುದೇ ಸಂಪ್ರದಾಯ, ಆಚರಣೆ ಮತ್ತು ಧಾರ್ಮಿಕ ವಿಧಿವಿಧಾನಗಳ ಜಾಡು ಹಿಡಿದು ಹೊರಟರೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಚರಿತ್ರೆಗಳು ಒಂದಷ್ಟು ಧೂಳೊದರಿಕೊಂಡು ಬೆಳಕಿಗೆ ಬರುತ್ತವೆ. ಅದು ಅದೇ ಪರಿಕಲ್ಪನೆಗಳ ಆಧಾರದಲ್ಲಿ ಇಂದು ನಡೆಯುತ್ತಿರುವ ಶೋಷಣೆಗಳೂ ಅರಿವಿಗೆ ನಿಲುಕುತ್ತವೆ. ಪೌರಾಣಿಕ ಕಥನಗಳ ರೂಪಕಗಳನ್ನು ತಿಳಿಯಲು, ಒಗಟುಗಳನ್ನು ಬಿಡಿಸಲು ನೆರವಾಗುತ್ತವೆ.

ಲೋಕಾಯತದ ಪುಟಪುಟವೂ ಸಾಂಸ್ಕೃತಿಕ ಚರಿತ್ರೆ ಮತ್ತು ಒಳನೋಟಗಳ ಬಳುವಳಿಗಳೇ.

ನವಕರ್ನಾಟಕ ಪ್ರಕಾಶನದಲ್ಲಿ ಈ ಕೃತಿ ಕನ್ನಡದಲ್ಲಿಯೂ ಲಭ್ಯವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...