Homeಕರ್ನಾಟಕದೇವಿಪ್ರಸಾದ್ ಚಟ್ಟೋಪಾಧ್ಯಾಯರ ’ಲೋಕಾಯತ’ವನ್ನು ಏಕೆ ಓದಬೇಕೆಂದರೆ.. : ಯೋಗೇಶ್ ಮಾಸ್ಟರ್‌

ದೇವಿಪ್ರಸಾದ್ ಚಟ್ಟೋಪಾಧ್ಯಾಯರ ’ಲೋಕಾಯತ’ವನ್ನು ಏಕೆ ಓದಬೇಕೆಂದರೆ.. : ಯೋಗೇಶ್ ಮಾಸ್ಟರ್‌

- Advertisement -
- Advertisement -

ಪುಟಕಿಟ್ಟ ಪುಟಗಳು : ಯೋಗೇಶ್ ಮಾಸ್ಟರ್‌

ಇಂದಿನ ರಾಜ್ಯಾಡಳಿತದ ಸಾಂಸ್ಥಿಕತೆಯು ರೂಪುಗೊಂಡಿರುವುದು ಅಂದಿನ ಬುಡಕಟ್ಟು ಸಮುದಾಯಗಳ ಸಮಾಧಿಗಳ ಮೇಲೆ. ಈ ಸ್ಪಷ್ಟತೆಯ ಅರಿವಿನ ಮೇಲೆಯೇ ದೇವಿಪ್ರಸಾದ್ ಚಟ್ಟೋಪಾಧ್ಯಾಯ ಭಾರತದಲ್ಲಿ ಬುಡಕಟ್ಟುಗಳ ಸಂಸ್ಕೃತಿ ಮತ್ತು ಸಮಾಜದ ಆಳ, ಎತ್ತರಗಳನ್ನು ಶೋಧಿಸುತ್ತಾ ಹೋಗುತ್ತಾರೆ.

ಬಹಳ ಮುಖ್ಯವಾಗಿ ವೈದಿಕ ಸಮುದಾಯದಿಂದ ಇಂದು ಅತ್ಯಂತ ಅಪವ್ಯಾಖ್ಯಾನಕ್ಕೊಳಗಾಗಿರುವ ಅನೇಕ ಪರಿಕಲ್ಪನೆಗಳ ಸಾಮಾಜಿಕ ಹಿನ್ನೆಲೆ ಮತ್ತು ಸಾಂಸ್ಕೃತಿಕ ಚರಿತ್ರೆಯನ್ನು ನಿಖರ ಮಾಹಿತಿಗಳ ಮೂಲಕ ಅರಿವಿಗೆ ಗ್ರಾಸ ಒದಗಿಸುತ್ತಾರೆ.

ಲೋಕಾಯತ, ಹೆಸರೇ ಧ್ವನಿಸುವಂತೆ, ಕೃತಿಯು ಬರೀ ಭೌತವಾದಕ್ಕೆ ಸೀಮಿತವಾಗುವುದಿಲ್ಲ. ಇಂದಿನ ಭಾರತದಲ್ಲಿ ಪ್ರಚಲಿತದಲ್ಲಿರುವ ಅನೇಕಾನೇಕ ಪರಿಕಲ್ಪನೆಗಳ ಉಗಮ, ಬೆಳವಣಿಗೆ ಮತ್ತು ರೂಪಾಂತರಗೊಂಡಿರುವುದರ ಬಗ್ಗೆ ಯಾವುದೇ ಸೃಜನಶೀಲ ಕಾದಂಬರಿಗಿಂತ ರೋಚಕತೆಯನ್ನು ನೀಡುತ್ತದೆ. ನಾವು ಯಾವುದನ್ನೋ ತಲೆತಲಾಂತರಗಳಿಂದ ಶ್ರೇಷ್ಠವೆಂದೋ, ಪವಿತ್ರವೆಂದೋ ಶ್ರದ್ಧೆಯಿಂದ ನಂಬಿಕೊಂಡು ಬಂದಿರುವುದು, ಅದೇ ನಾವು ಯಾವುದನ್ನು ಕನಿಷ್ಟ ಅಥವಾ ನೀಚ ಎಂದು ಅಂದುಕೊಂಡಿದ್ದೇವೋ, ಅದೇ ಆ ಪಾವಿತ್ರ‍್ಯತೆಯ ಉಗಮವೆಂದು ತಿಳಿದಾಗ ಅಚ್ಚರಿಯಾಗುತ್ತದೆ.

ಅತಿ ಮುಖ್ಯವಾಗಿ ಯಾವ ರಾಕ್ಷಸರನ್ನು ಕ್ರೂರಿಗಳೆಂದು, ದುಷ್ಟರೆಂದು ಪೌರಾಣಿಕ ಕಥನಗಳು ವಿವರಿಸಿಕೊಂಡು ಮತ್ತು ನಂಬಿಸಿಕೊಂಡು ಬಂದಿದ್ದವೋ ಅದಕ್ಕೆ ವ್ಯತಿರಿಕ್ತವಾಗಿ ಅವರು ಅರಣ್ಯಕರೆಂದು, ಬುಡಕಟ್ಟಿನವರೆಂದು ತಿಳಿದುಬರುತ್ತದೆ. ಜೊತೆಗೆ ಅವರ ಅಸ್ತಿತ್ವಕ್ಕಾಗಿ ಮತ್ತು ಉಳಿವಿಗಾಗಿ ಮಾಡಿದಂತಹ ಅನಿವಾರ್ಯದ ಕದನಗಳು, ಪ್ರತಿಭಟನೆಗಳೆಲ್ಲಾ ಇಂದು ಪೀಡೆಗಳನ್ನಾಗಿ ಬಿಂಬಿಸಿರುವ ಕಾರಣಗಳು ಸ್ಪಷ್ಟವಾಗುತ್ತದೆ.

ಇನ್ನು ಧಾರ್ಮಿಕವಾಗಿ ಗುರುತಿಸಲ್ಪಡುವ ಗೋತ್ರಗಳು ಟೋಟಮ್ ಅಥವಾ ಪ್ರಾಣಿ ಲಾಂಛನದ ಬುಡಕಟ್ಟು ಅಧ್ಯಯನಗಳ ಕಡೆಗೆ ಹೊರಳುತ್ತವೆ. ಅಲ್ಲೇ ಸ್ವಾರಸ್ಯವೂ ಇರುವುದು. ಕಶ್ಯಪ, ಗೌತಮ, ಭಾರಧ್ವಜ ಇತ್ಯಾದಿ ಬ್ರಾಹ್ಮಣ ಗೋತ್ರದವರ ಮೂಲ ಆಮೆ, ಗೂಬೆ ಮತ್ತು ಇತರ ಕಾಡಿನ ಪ್ರಾಣಿ, ಪಕ್ಷಿ ಮತ್ತು ಮರಗಿಡಗಳ ಗುರುತುಗಳನ್ನು ಹೊಂದಿರುವ ಬುಡಕಟ್ಟು ಪಂಗಡಗಳು.

ಹಾಗೆಯೇ ತಾಯಾಳಿಕೆಯ ಜಾಡು ಹಿಡಿದು ಗೌರಿಯ ಸ್ತ್ರೀ ತತ್ವದ ಎಳೆಗಳಿಂದ ವ್ರತ ಮತ್ತು ವ್ರಾತ್ಯ ಇತ್ಯಾದಿಗಳ ತಿಳಿವಳಿಕೆ ನೀಡುತ್ತಾ ಕೃಷಿಯನ್ನು ಆರಂಭ ಮಾಡಿದ್ದು ಹೆಂಗಸು ಎಂಬ ಅಂಶವನ್ನು ಹೊರಗೆಡವುತ್ತಾರೆ.

ಆದಿಪೂಜಿತ ಗಣಪತಿಯ ಗಾಣಪತ್ಯದ ರಹಸ್ಯವನ್ನು ಹೊರಗೆಡವುತ್ತಾರೆ. ವಿನಾಯಕನ ಬಗ್ಗೆ ಏನೆಲ್ಲಾ ಭಯಭಕ್ತಿಗಳನ್ನು ಇಟ್ಟುಕೊಂಡಿರುವ ಜನರಿಗೆ ಇದೇ ವಿನಾಯಕ ದುಃಸ್ವಪ್ನದ ಕುರುಹಾಗಿದ್ದರ ಬಗ್ಗೆ ಬೆಚ್ಚಿಬೀಳಿಸದೇ ಇರದು. ಇಂದು ಗಣಪತಿಯ ಬಗ್ಗೆ ಏನೇನೆಲ್ಲಾ ಶುಭ ಎಂದು ಕಾಣುತ್ತೇವೋ ಅದೆಲ್ಲವೂ ಅರಣ್ಯಕಗಳಲ್ಲಿ, ಯಾಜ್ಞವಲ್ಯ ಸ್ಮೃತಿಯಲ್ಲಿ, ಬ್ರಾಹ್ಮಣಗಳಲ್ಲಿ ಅಷ್ಟೇ ಅಶುಭವಾಗಿ, ಕೀಳಾಗಿ ಕಾಣುತ್ತಿದ್ದ ಉಲ್ಲೇಖಗಳನ್ನು ಕಾಣಿಸುತ್ತಾರೆ.

ಮಾನವಶಾಸ್ತ್ರೀಯ ಅಧ್ಯಯನಕ್ಕೆ ನೆರವಾಗುತ್ತಲೇ ಭಾರತದ ಧಾರ್ಮಿಕ, ಆಧ್ಯಾತ್ಮಿಕ, ತಾತ್ವಿಕ, ಸಾಂಸ್ಕೃತಿಕ ಚರಿತ್ರೆಗಳನ್ನು ಇಂದು ಯಾವ ಪ್ರತಿಕೃತಿಗಳಲ್ಲಿ ಕಾಣುತ್ತಿದ್ದೇವೆ ಎಂಬ ಅರಿವು ಮೂಡಿಸುವ ಮಹಾನ್ ವಿದ್ವಾಂಸ ದೇವಿಪ್ರಸಾದ್ ಚಟ್ಟೋಪಾಧ್ಯಾಯ.

ದೇವಿಪ್ರಸಾದ್ ಚಟ್ಟೋಪಾಧ್ಯಾಯ.

ಬರಿಯ ಪೌರಾಣಿಕತೆಯ ಆಯಾಮದಿಂದಷ್ಟೇ ಧಾರ್ಮಿಕತೆಯ ಶ್ರದ್ಧೆಯನ್ನು ಕಟ್ಟಿಕೊಂಡವರಿಗೆ ಲೋಕಾಯತ ಗಾಬರಿ ಬೀಳಿಸದೇ ಇರದು. ಆದರೆ ಯಾವುದೇ ಸಂಪ್ರದಾಯ, ಆಚರಣೆ ಮತ್ತು ಧಾರ್ಮಿಕ ವಿಧಿವಿಧಾನಗಳ ಜಾಡು ಹಿಡಿದು ಹೊರಟರೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಚರಿತ್ರೆಗಳು ಒಂದಷ್ಟು ಧೂಳೊದರಿಕೊಂಡು ಬೆಳಕಿಗೆ ಬರುತ್ತವೆ. ಅದು ಅದೇ ಪರಿಕಲ್ಪನೆಗಳ ಆಧಾರದಲ್ಲಿ ಇಂದು ನಡೆಯುತ್ತಿರುವ ಶೋಷಣೆಗಳೂ ಅರಿವಿಗೆ ನಿಲುಕುತ್ತವೆ. ಪೌರಾಣಿಕ ಕಥನಗಳ ರೂಪಕಗಳನ್ನು ತಿಳಿಯಲು, ಒಗಟುಗಳನ್ನು ಬಿಡಿಸಲು ನೆರವಾಗುತ್ತವೆ.

ಲೋಕಾಯತದ ಪುಟಪುಟವೂ ಸಾಂಸ್ಕೃತಿಕ ಚರಿತ್ರೆ ಮತ್ತು ಒಳನೋಟಗಳ ಬಳುವಳಿಗಳೇ.

ನವಕರ್ನಾಟಕ ಪ್ರಕಾಶನದಲ್ಲಿ ಈ ಕೃತಿ ಕನ್ನಡದಲ್ಲಿಯೂ ಲಭ್ಯವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...