Homeಕರ್ನಾಟಕದೇವಿಪ್ರಸಾದ್ ಚಟ್ಟೋಪಾಧ್ಯಾಯರ ’ಲೋಕಾಯತ’ವನ್ನು ಏಕೆ ಓದಬೇಕೆಂದರೆ.. : ಯೋಗೇಶ್ ಮಾಸ್ಟರ್‌

ದೇವಿಪ್ರಸಾದ್ ಚಟ್ಟೋಪಾಧ್ಯಾಯರ ’ಲೋಕಾಯತ’ವನ್ನು ಏಕೆ ಓದಬೇಕೆಂದರೆ.. : ಯೋಗೇಶ್ ಮಾಸ್ಟರ್‌

- Advertisement -
- Advertisement -

ಪುಟಕಿಟ್ಟ ಪುಟಗಳು : ಯೋಗೇಶ್ ಮಾಸ್ಟರ್‌

ಇಂದಿನ ರಾಜ್ಯಾಡಳಿತದ ಸಾಂಸ್ಥಿಕತೆಯು ರೂಪುಗೊಂಡಿರುವುದು ಅಂದಿನ ಬುಡಕಟ್ಟು ಸಮುದಾಯಗಳ ಸಮಾಧಿಗಳ ಮೇಲೆ. ಈ ಸ್ಪಷ್ಟತೆಯ ಅರಿವಿನ ಮೇಲೆಯೇ ದೇವಿಪ್ರಸಾದ್ ಚಟ್ಟೋಪಾಧ್ಯಾಯ ಭಾರತದಲ್ಲಿ ಬುಡಕಟ್ಟುಗಳ ಸಂಸ್ಕೃತಿ ಮತ್ತು ಸಮಾಜದ ಆಳ, ಎತ್ತರಗಳನ್ನು ಶೋಧಿಸುತ್ತಾ ಹೋಗುತ್ತಾರೆ.

ಬಹಳ ಮುಖ್ಯವಾಗಿ ವೈದಿಕ ಸಮುದಾಯದಿಂದ ಇಂದು ಅತ್ಯಂತ ಅಪವ್ಯಾಖ್ಯಾನಕ್ಕೊಳಗಾಗಿರುವ ಅನೇಕ ಪರಿಕಲ್ಪನೆಗಳ ಸಾಮಾಜಿಕ ಹಿನ್ನೆಲೆ ಮತ್ತು ಸಾಂಸ್ಕೃತಿಕ ಚರಿತ್ರೆಯನ್ನು ನಿಖರ ಮಾಹಿತಿಗಳ ಮೂಲಕ ಅರಿವಿಗೆ ಗ್ರಾಸ ಒದಗಿಸುತ್ತಾರೆ.

ಲೋಕಾಯತ, ಹೆಸರೇ ಧ್ವನಿಸುವಂತೆ, ಕೃತಿಯು ಬರೀ ಭೌತವಾದಕ್ಕೆ ಸೀಮಿತವಾಗುವುದಿಲ್ಲ. ಇಂದಿನ ಭಾರತದಲ್ಲಿ ಪ್ರಚಲಿತದಲ್ಲಿರುವ ಅನೇಕಾನೇಕ ಪರಿಕಲ್ಪನೆಗಳ ಉಗಮ, ಬೆಳವಣಿಗೆ ಮತ್ತು ರೂಪಾಂತರಗೊಂಡಿರುವುದರ ಬಗ್ಗೆ ಯಾವುದೇ ಸೃಜನಶೀಲ ಕಾದಂಬರಿಗಿಂತ ರೋಚಕತೆಯನ್ನು ನೀಡುತ್ತದೆ. ನಾವು ಯಾವುದನ್ನೋ ತಲೆತಲಾಂತರಗಳಿಂದ ಶ್ರೇಷ್ಠವೆಂದೋ, ಪವಿತ್ರವೆಂದೋ ಶ್ರದ್ಧೆಯಿಂದ ನಂಬಿಕೊಂಡು ಬಂದಿರುವುದು, ಅದೇ ನಾವು ಯಾವುದನ್ನು ಕನಿಷ್ಟ ಅಥವಾ ನೀಚ ಎಂದು ಅಂದುಕೊಂಡಿದ್ದೇವೋ, ಅದೇ ಆ ಪಾವಿತ್ರ‍್ಯತೆಯ ಉಗಮವೆಂದು ತಿಳಿದಾಗ ಅಚ್ಚರಿಯಾಗುತ್ತದೆ.

ಅತಿ ಮುಖ್ಯವಾಗಿ ಯಾವ ರಾಕ್ಷಸರನ್ನು ಕ್ರೂರಿಗಳೆಂದು, ದುಷ್ಟರೆಂದು ಪೌರಾಣಿಕ ಕಥನಗಳು ವಿವರಿಸಿಕೊಂಡು ಮತ್ತು ನಂಬಿಸಿಕೊಂಡು ಬಂದಿದ್ದವೋ ಅದಕ್ಕೆ ವ್ಯತಿರಿಕ್ತವಾಗಿ ಅವರು ಅರಣ್ಯಕರೆಂದು, ಬುಡಕಟ್ಟಿನವರೆಂದು ತಿಳಿದುಬರುತ್ತದೆ. ಜೊತೆಗೆ ಅವರ ಅಸ್ತಿತ್ವಕ್ಕಾಗಿ ಮತ್ತು ಉಳಿವಿಗಾಗಿ ಮಾಡಿದಂತಹ ಅನಿವಾರ್ಯದ ಕದನಗಳು, ಪ್ರತಿಭಟನೆಗಳೆಲ್ಲಾ ಇಂದು ಪೀಡೆಗಳನ್ನಾಗಿ ಬಿಂಬಿಸಿರುವ ಕಾರಣಗಳು ಸ್ಪಷ್ಟವಾಗುತ್ತದೆ.

ಇನ್ನು ಧಾರ್ಮಿಕವಾಗಿ ಗುರುತಿಸಲ್ಪಡುವ ಗೋತ್ರಗಳು ಟೋಟಮ್ ಅಥವಾ ಪ್ರಾಣಿ ಲಾಂಛನದ ಬುಡಕಟ್ಟು ಅಧ್ಯಯನಗಳ ಕಡೆಗೆ ಹೊರಳುತ್ತವೆ. ಅಲ್ಲೇ ಸ್ವಾರಸ್ಯವೂ ಇರುವುದು. ಕಶ್ಯಪ, ಗೌತಮ, ಭಾರಧ್ವಜ ಇತ್ಯಾದಿ ಬ್ರಾಹ್ಮಣ ಗೋತ್ರದವರ ಮೂಲ ಆಮೆ, ಗೂಬೆ ಮತ್ತು ಇತರ ಕಾಡಿನ ಪ್ರಾಣಿ, ಪಕ್ಷಿ ಮತ್ತು ಮರಗಿಡಗಳ ಗುರುತುಗಳನ್ನು ಹೊಂದಿರುವ ಬುಡಕಟ್ಟು ಪಂಗಡಗಳು.

ಹಾಗೆಯೇ ತಾಯಾಳಿಕೆಯ ಜಾಡು ಹಿಡಿದು ಗೌರಿಯ ಸ್ತ್ರೀ ತತ್ವದ ಎಳೆಗಳಿಂದ ವ್ರತ ಮತ್ತು ವ್ರಾತ್ಯ ಇತ್ಯಾದಿಗಳ ತಿಳಿವಳಿಕೆ ನೀಡುತ್ತಾ ಕೃಷಿಯನ್ನು ಆರಂಭ ಮಾಡಿದ್ದು ಹೆಂಗಸು ಎಂಬ ಅಂಶವನ್ನು ಹೊರಗೆಡವುತ್ತಾರೆ.

ಆದಿಪೂಜಿತ ಗಣಪತಿಯ ಗಾಣಪತ್ಯದ ರಹಸ್ಯವನ್ನು ಹೊರಗೆಡವುತ್ತಾರೆ. ವಿನಾಯಕನ ಬಗ್ಗೆ ಏನೆಲ್ಲಾ ಭಯಭಕ್ತಿಗಳನ್ನು ಇಟ್ಟುಕೊಂಡಿರುವ ಜನರಿಗೆ ಇದೇ ವಿನಾಯಕ ದುಃಸ್ವಪ್ನದ ಕುರುಹಾಗಿದ್ದರ ಬಗ್ಗೆ ಬೆಚ್ಚಿಬೀಳಿಸದೇ ಇರದು. ಇಂದು ಗಣಪತಿಯ ಬಗ್ಗೆ ಏನೇನೆಲ್ಲಾ ಶುಭ ಎಂದು ಕಾಣುತ್ತೇವೋ ಅದೆಲ್ಲವೂ ಅರಣ್ಯಕಗಳಲ್ಲಿ, ಯಾಜ್ಞವಲ್ಯ ಸ್ಮೃತಿಯಲ್ಲಿ, ಬ್ರಾಹ್ಮಣಗಳಲ್ಲಿ ಅಷ್ಟೇ ಅಶುಭವಾಗಿ, ಕೀಳಾಗಿ ಕಾಣುತ್ತಿದ್ದ ಉಲ್ಲೇಖಗಳನ್ನು ಕಾಣಿಸುತ್ತಾರೆ.

ಮಾನವಶಾಸ್ತ್ರೀಯ ಅಧ್ಯಯನಕ್ಕೆ ನೆರವಾಗುತ್ತಲೇ ಭಾರತದ ಧಾರ್ಮಿಕ, ಆಧ್ಯಾತ್ಮಿಕ, ತಾತ್ವಿಕ, ಸಾಂಸ್ಕೃತಿಕ ಚರಿತ್ರೆಗಳನ್ನು ಇಂದು ಯಾವ ಪ್ರತಿಕೃತಿಗಳಲ್ಲಿ ಕಾಣುತ್ತಿದ್ದೇವೆ ಎಂಬ ಅರಿವು ಮೂಡಿಸುವ ಮಹಾನ್ ವಿದ್ವಾಂಸ ದೇವಿಪ್ರಸಾದ್ ಚಟ್ಟೋಪಾಧ್ಯಾಯ.

ದೇವಿಪ್ರಸಾದ್ ಚಟ್ಟೋಪಾಧ್ಯಾಯ.

ಬರಿಯ ಪೌರಾಣಿಕತೆಯ ಆಯಾಮದಿಂದಷ್ಟೇ ಧಾರ್ಮಿಕತೆಯ ಶ್ರದ್ಧೆಯನ್ನು ಕಟ್ಟಿಕೊಂಡವರಿಗೆ ಲೋಕಾಯತ ಗಾಬರಿ ಬೀಳಿಸದೇ ಇರದು. ಆದರೆ ಯಾವುದೇ ಸಂಪ್ರದಾಯ, ಆಚರಣೆ ಮತ್ತು ಧಾರ್ಮಿಕ ವಿಧಿವಿಧಾನಗಳ ಜಾಡು ಹಿಡಿದು ಹೊರಟರೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಚರಿತ್ರೆಗಳು ಒಂದಷ್ಟು ಧೂಳೊದರಿಕೊಂಡು ಬೆಳಕಿಗೆ ಬರುತ್ತವೆ. ಅದು ಅದೇ ಪರಿಕಲ್ಪನೆಗಳ ಆಧಾರದಲ್ಲಿ ಇಂದು ನಡೆಯುತ್ತಿರುವ ಶೋಷಣೆಗಳೂ ಅರಿವಿಗೆ ನಿಲುಕುತ್ತವೆ. ಪೌರಾಣಿಕ ಕಥನಗಳ ರೂಪಕಗಳನ್ನು ತಿಳಿಯಲು, ಒಗಟುಗಳನ್ನು ಬಿಡಿಸಲು ನೆರವಾಗುತ್ತವೆ.

ಲೋಕಾಯತದ ಪುಟಪುಟವೂ ಸಾಂಸ್ಕೃತಿಕ ಚರಿತ್ರೆ ಮತ್ತು ಒಳನೋಟಗಳ ಬಳುವಳಿಗಳೇ.

ನವಕರ್ನಾಟಕ ಪ್ರಕಾಶನದಲ್ಲಿ ಈ ಕೃತಿ ಕನ್ನಡದಲ್ಲಿಯೂ ಲಭ್ಯವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...