Homeಮುಖಪುಟಕೇರಳ ಸಂಪುಟದಿಂದ ಶೈಲಜಾ ಟೀಚರ್ ಕೈಬಿಟ್ಟಿದ್ದು ಏಕೆ? ಅವರೇ ಸಿಎಂ ಆಗಬೇಕಿತ್ತಲ್ಲವೆ?: ಜಾಲತಾಣದಲ್ಲಿ ಭಾರೀ ಚರ್ಚೆ

ಕೇರಳ ಸಂಪುಟದಿಂದ ಶೈಲಜಾ ಟೀಚರ್ ಕೈಬಿಟ್ಟಿದ್ದು ಏಕೆ? ಅವರೇ ಸಿಎಂ ಆಗಬೇಕಿತ್ತಲ್ಲವೆ?: ಜಾಲತಾಣದಲ್ಲಿ ಭಾರೀ ಚರ್ಚೆ

ಹೊಸಬರಿಗೆ ಅವಕಾಶ ನೀಡುತ್ತಿದ್ದೇವೆ. ಇದು ನಮ್ಮ ಪಕ್ಷದ ನೀತಿ ನಿರ್ಧಾರ. ಇದರಿಂದ ನನಗ್ಯಾವ ಬೇಸರವಿಲ್ಲ ಎಂದು ಕೆ.ಕೆ ಶೈಲಜಾರವರು ಪ್ರತಿಕ್ರಿಯಿಸಿದ್ದಾರೆ.

- Advertisement -
- Advertisement -

ಕೇರಳದಲ್ಲಿ ಭರ್ಜರಿ ಜಯ ಸಾಧಿಸಿದ ಎಲ್‌ಡಿಎಫ್ ಮೈತ್ರಿ ಕೂಟದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಮ್ಮ ಸಂಪುಟವನ್ನು 11 ಹೊಸ ಮುಖಗಳೊಂದಿಗೆ ಪರಿಷ್ಕರಿಸಿದ್ದಾರೆ. ವಿಜಯನ್ ಬಿಟ್ಟರೆ ಎಲ್ಲರೂ ಹೊಸಬರೇ. ಆದರೆ ಕೋವಿಡ್ ನಿರ್ವಹಣೆಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ ಶೈಲಜಾ ಟೀಚರ್ ಅವರನ್ನೂ ಕೈಬಿಟ್ಟಿದ್ದು ಈಗ ಟೀಕೆಗೆ ಕಾರಣವಾಗಿದೆ.

‘ಇದು ಪಾರ್ಟಿಯ ನಿರ್ಧಾರ’ ಎಂದು ಹೇಳುವ ಗುಂಪುಗಳು, ‘ಅವರಿಗೆ ಚೀಫ್ ವಿಪ್ ಸ್ಥಾನ ನೀಡಲಾಗಿದೆ. ಹೊಸಬರಿಗೆ ಸಚಿವ ಸ್ಥಾನ ನೀಡಲಾಗಿದೆ ಎನ್ನುತ್ತಿದ್ದರೆ, ಇದನ್ನು ವಿರೋಧಿಸುವವರು, ಇದು ಎಲ್ಲ ಪಕ್ಷಗಳಂತೆ ಸಿಪಿಎಂನಲ್ಲಿ ಅಂತರ್ಗತವಾಗಿರುವ ಪುರುಷಾಧಿಪತ್ಯದ ಲಕ್ಷಣ. ಎಲ್ಲ ಬದಲು ಮಾಡುವುದಿದ್ದರೆ ಪಿಣರಾಯಿ ವಿಜಯನ್ ಅವರನ್ನೂ ಬದಲಿಸಬೇಕಿತ್ತು’ ಎಂದು ಕೆಲವರು ಹೇಳಿದರೆ, ಇನ್ನೂ ಹಲವರು ಶೈಲಜಾ ಟೀಚರ್ ಅವರಿಗೇ ಮುಖ್ಯಮಂತ್ರಿ ಸ್ಥಾನ ನೀಡಬೇಕಾಗಿತ್ತು ಎನ್ನುತ್ತಿದ್ದಾರೆ.

ಈ ಕುರಿತು ಎನ್‌ಡಿಟಿವಿ ಜೊತೆ ಮಾತನಾಡಿ ಕೆ.ಕೆ ಶೈಲಜಾರವರು “ಇದು ನಮ್ಮ ಪಕ್ಷದ ನೀತಿ ನಿರ್ಧಾರ. ಆದ್ದರಿಂದ ಆ ನಿರ್ಧಾರದ ಪ್ರಕಾರ, ನಾನು ಸಹ ತ್ಯಜಿಸಲು ನಿರ್ಧರಿಸಿದ್ದೇನೆ. ಇದರಿಂದ ನನಗ್ಯಾವ ಬೇಸರವಿಲ್ಲ. ಹೊಸಬರಿಗೆ ಅವಕಾಶ ನೀಡುತ್ತಿದ್ದೇವೆ” ಎಂದಿದ್ದಾರೆ.

ಲೇಖಕರಾದ ಕೆ.ಪಿ. ಸುರೇಶ್, ಪೀರ್ ಭಾಷಾ, ಆದಿತ್ಯ ಭಾರದ್ವಾಜ್ ಮುಂತಾದವರು ಸಿಪಿಎಂ ನಡೆಯನ್ನು ಟೀಕಿಸಿದ್ದರೆ, ಮುರಳಿ ಕೃಷ್ಣ ಮುಂತಾದವರು, ಅದು ಪಕ್ಷದ ಆಂತರಿಕ ತೀರ್ಮಾನ ಎಂದು ಸಮರ್ಥಿಸಿಕೊಂಡಿದ್ದಾರೆ.

‘ಎಲ್ಲವನ್ನೂ ಬದಲು ಮಾಡುವುದಿದ್ದರೆ ಮುಖ್ಯಮಂತ್ರಿಯನ್ನೂ ಬದಲಿಸಬೇಕಿತ್ತು’ ಎಂದು ಕೆ.ಪಿ ಸುರೇಶ್ ಫೇಸ್‌ಬುಕ್‌ನಲ್ಲಿ ಬರೆದಿದ್ದು ಈ ಕುರಿತಾಗಿ ಅವರ ವಾಲ್‌ನಲ್ಲಿ ಜೋರಾದ ಚರ್ಚೆ ನಡೆದಿದೆ.

ಪತ್ರಕರ್ತ ಆದಿತ್ಯ ಭಾರದ್ವಾಜ್ ಕೂಡ ಶೈಲಜಾರನ್ನು ಕೈ ಬಿಟ್ಟ ಕ್ರಮವನ್ನು ವಿರೋಧಿಸುತ್ತ, ಎಲ್ಲ ಪಕ್ಷಗಳಲ್ಲೂ ಇರುವ ಇಂತಹ ಸ್ವಹಿತಾಸಕ್ತಿ ನಿಲುವುಗಳನ್ನು ನಾವು ವಿರೋಧಿಸಬೇಕು. ಕೇವಲ ಮೋದಿ-ಶಾಗಳನ್ನಷ್ಟೇ ಅಲ್ಲ, ಸ್ಟಾಲಿನ್, ಮಮತಾ ಮತ್ತು ಪಿಣರಾಯಿ ಅಂತಹ ಎಲ್ಲರ ಏಕಸ್ವಾಮ್ಯವನ್ನು ವಿರೋಧಿಸಬೇಕು’ ಎಂಬ ನಿಲುವನ್ನು ವ್ಯಕ್ತಪಡಿಸಿದ್ದಾರೆ.

“ಕೇರಳದಲ್ಲಿ ಪಕ್ಷರಾಜಕಾರಣ, ವ್ಯಕ್ತಿ ರಾಜಕಾರಣವಲ್ಲ. #ಕೇರಳ_ರಾಜಕೀಯ_ಮಾದರಿ” ಎಂದು ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ಕೆ.ವಾಸುದೇವರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.

ಎಡಪಂಥಿಯ ಹಿನ್ನೆಲೆಯ ಚಳುವಳಿಗಳಿಂದಲೇ ಬಂದ ಬರಹಗಾರ ಬಿ. ಪೀರ್‌ಬಾಷಾ, ‘ಶೈಲಜಾ ಟೀಚರ್ ಮುಖ್ಯಮಂತ್ರಿಯಾಗಿದ್ದರೆ ಈ ಸ್ಥಾನಕ್ಕೂ ಒಬ್ಬ ಹೊಸಬರು ಬಂದಂತಾಗುತ್ತಿತ್ತು. ಅವರಿಗೂ ರಾಜ್ಯ ಪರ್ಯಾಯ/ ಹೊಸ ತಲೆಮಾರಿನ ನಾಯಕತ್ವ ಬೆಳೆಸಲು ಅವಕಾಶ ನೀಡಿದಂತಾಗುತ್ತಿತ್ತು. ಪಿಣರಾಯ್ ವಿಜಯನ್ ಅವರು ರಾಜ್ಯ ಸರಕಾರದ ಪ್ರಧಾನ ಉಸ್ತುವಾರಿ/ ಮಾರ್ಗದರ್ಶಕರಾಗಿದ್ದು ರಾಷ್ಟ್ರೀ ಯ ಮಟ್ಟದಲ್ಲಿ ಅಥವಾ ದಕ್ಷಿಣ ಭಾರತ ಮಟ್ಟಕ್ಕಾದರೂ ಅಧಿಕಾರ ರಾಜಕಾರಣದ ನೆಲೆಯಲ್ಲಿ ಪಕ್ಷವನ್ನು ಸಂಘಟಿಸಲು ಜವಾಬ್ದಾರಿ ವಹಿಸಿಕೊಂಡಿದ್ದರೆ ನಿರಾಶೆ ಕವಿಯುತ್ತಿರುವ ರಾಷ್ಟ್ರೀಯ ಸಂದರ್ಭದಲ್ಲಿ ಹೊಸ ಸಾಧ್ಯತೆಯೊಂದು ತೆರೆದುಕೊಳ್ಳುವ ಅವಕಾಶವಿತ್ತು’ ಎಂದಿದ್ದಾರೆ.

ಮುಂದುವರಿದು “ಜನ ಎಂದರೆ ಪಕ್ಷದ ಸದಸ್ಯರು ಮಾತ್ರ ಎಂದೇ ಪರಿಗಣಿಸಿದಲ್ಲಿ ‘ಜನತಾ ಪ್ರಜಾಪ್ರಭುತ್ವ’ ವೆಂಬುದು ದ್ವೀಪ‌ ಅಥವಾ ನಡುಗಡ್ಡೆ ಮಾತ್ರವಷ್ಟೆ.
ಪಿಣರಾಯರ ಮರು ಆಯ್ಕೆ, ಶೈಲಜಾರನ್ನು ಬಿಟ್ಟಿದ್ದಕ್ಕೆ ಅವರದೇ ಆದ ಕಾರಣ ವಿಶ್ಲೇಷಣೆಗಳಿರಬಹುದು. ಆದರೆ “ಬೇರೆಯವರ ಉಸಾಬರಿಯೇ ಬೇಡ, ಪ್ರತಿಕ್ರಿಯಿಸುವವರ ಅನಗತ್ಯ ಆಸಕ್ತಿ, ಧಾವಂತ, ಇವುಗಳನ್ನು ನಾವು ಲೆಕ್ಕಕ್ಕೇ ತಗಳ್ಳಲ್ಲ, ಒಟ್ಟಿನಲ್ಲಿ “ಇವರ್ಯಾರು ಹೇಳೋಕೆ” ಎಂಬ ದನಿ ಇವರ ಬರೆಹದಲ್ಲಿದೆ. ಇದು ದಾರ್ಷ್ಟ್ಯದ ಮಾತಾಯಿತು.
ವ್ಯಕ್ತಿಯೊಬ್ಬರ ನಿಲುವಾಗಿದ್ದರೆ “ಆತ್ಮಹತ್ಯೆ ಮಾಡಿಕೊಳ್ಳುವುದಿದ್ದರೆ ನಿಮ್ಮಿಷ್ಟ” ಎನ್ನಬಹುದಿತ್ತು. ಆದರೆ ಜನ ಚಳುವಳಿಯ ನಾಯಕತ್ವ ಹೀಗೆ ಮಾತಾಡುವುದನ್ನು ಕಠಿಣ ಶಬ್ದಗಳಿಂದಲೇ ಇದಿರುಗೊಳ್ಳುವುದು ಅನಿವಾರ್ಯವೇನೋ. ಇಂತಹ ಸಂದರ್ಭ ಮುಂದುವರಿಯದಿರಲಿ.
ಬೇಸರದಿಂದ ಇಷ್ಟನ್ನು ಬರೆಯುತ್ತಿದ್ದೇನೆ, ವಿಷಾದಗಳೊಂದಿಗೆ… ಎಂದು ಪೀರ್‌ಭಾಷಾ ಅಭಿಪ್ರಾಯಪಟ್ಟಿದ್ದಾರೆ.

ಆದಿತ್ಯ ಅವರ ಅಭಿಪ್ರಾಯಕ್ಕೆ ಪ್ರತಿಕ್ರಿಯೆ ನೀಡಿರುವ ಮುರುಳಿ ಕೃಷ್ಣ ಅವರು, ‘ಎಲ್ಲ ಹೊಸಬರಿಗೂ ಅವಕಾಶ ನೀಡಿದ್ದರಿಂದ ಶೈಲಜಾ ಅವರನ್ನು ಸಹಜವಾಗಿ ಕೈ ಬಿಡಲಾಗಿದೆ. ಆದರೆ ಅವರಿಗೆ ಚೀಫ್ ವಿಪ್ ಸ್ಥಾನ ನೀಡಲಾಗಿದೆ’ ಎಂದಿದ್ದಾರೆ.

“ಶೈಲಜಾ ಟೀಚರ್ ರಾಷ್ಟ್ರ ರಾಜಕಾರಣಕ್ಕೆ ಬರಲಿ. ನಮಗೆಲ್ಲರಿಗೆ ಪ್ರಯೋಜನವಾಗಲಿ” ಎಂದು ವೈದ್ಯರಾದ ಸಂದೀಪ ಸಮತಡ್ಕ ನಾಯಕ್ ಅಭಿಪ್ರಾಯಪಟ್ಟಿದ್ದಾರೆ.

ಕೇರಳವಲ್ಲದೇ ದೇಶದ ಎಲ್ಲ ರಾಜ್ಯಗಳ ಜನರೂ ಶೈಲಜಾ ಅವರು ಆರೋಗ್ಯ ಸಚಿವರಾಗಿ ಮಾಡಿದ ಕೆಲಸವನ್ನು ಮೆಚ್ಚಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯೂ ಅದನ್ನು ಮೆಚ್ಚಿದೆ. ಅವರು ಈ ಸಂದರ್ಭದಲ್ಲಿ ಆರೋಗ್ಯ ಸಚಿವರಾಗಿ ಮುಂದುವರೆಯಬೇಕಿತ್ತು ಅಥವಾ ಅವರೇ ಸಿಎಂ ಆಗಬೇಕಿತ್ತು ಎಂಬ ಸಮರ್ಥನೆಗಳು ಕೇಳಿ ಬರುತ್ತಿವೆ.

ವಿಚಿತ್ರವೆಂದರೆ, ಕೆಲವು ಬಿಜೆಪಿ ಬೆಂಬಲಿಗರು ಈ ವಿಷಯವನ್ನು ತಮ್ಮ ಲಾಭಕ್ಕೆ ಬಳಸಿಕೊಳ್ಳಲು ಶೈಲಜಾ ಟೀಚರ್ ಪರ ಪೋಸ್ಟ್‌ಗಳನ್ನು ಹಾಕುತ್ತಿರುವುದು.


ಇದನ್ನೂ ಓದಿ:  ಪಿಣರಾಯಿ 2.0 – ಸಿಪಿಐ(ಎಂ)ನಿಂದ ಹೊಸ ಮುಖಗಳಿಗೆ ಮಂತ್ರಿ ಸ್ಥಾನ; ಕೆ.ಕೆ. ಶೈಲಜಾ ಔಟ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸೈಲಜ ಟೀಚರನ್ನು ಕೈ ಬಿಟ್ಟಿರೋದು ತುಂಬಾನೆ ಬೇಸರದ ವಿಷಯ ಪಕ್ಷದಲ್ಲಿ ನಾನು ೨೦ವರ್ಷ ದುಡಿದಿದ್ದೇನೆ. ಪಕ್ಷದ ತೀರ್ಮಾನವೇ ಅಂತಿಮ.
    ಟೀಚರ್ ರವರ ಮತ್ತಷ್ಟು ಗಟ್ಟಿಯಾಗಿ ಕೆಲಸ ಮಾಡುವುದನ್ನ ಪಕ್ಷ ಬೇಕೊ ಬೇಡವೋ ಮತ್ತೊಮ್ಮೆ ಚೆರ್ಚಿಸಿದರೆ ಒಳಿತು ಎಂದು ನನ್ನ ಅಭಿಪ್ರಾಯ.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...