Homeಮುಖಪುಟಕೇರಳ ಸಂಪುಟದಿಂದ ಶೈಲಜಾ ಟೀಚರ್ ಕೈಬಿಟ್ಟಿದ್ದು ಏಕೆ? ಅವರೇ ಸಿಎಂ ಆಗಬೇಕಿತ್ತಲ್ಲವೆ?: ಜಾಲತಾಣದಲ್ಲಿ ಭಾರೀ ಚರ್ಚೆ

ಕೇರಳ ಸಂಪುಟದಿಂದ ಶೈಲಜಾ ಟೀಚರ್ ಕೈಬಿಟ್ಟಿದ್ದು ಏಕೆ? ಅವರೇ ಸಿಎಂ ಆಗಬೇಕಿತ್ತಲ್ಲವೆ?: ಜಾಲತಾಣದಲ್ಲಿ ಭಾರೀ ಚರ್ಚೆ

ಹೊಸಬರಿಗೆ ಅವಕಾಶ ನೀಡುತ್ತಿದ್ದೇವೆ. ಇದು ನಮ್ಮ ಪಕ್ಷದ ನೀತಿ ನಿರ್ಧಾರ. ಇದರಿಂದ ನನಗ್ಯಾವ ಬೇಸರವಿಲ್ಲ ಎಂದು ಕೆ.ಕೆ ಶೈಲಜಾರವರು ಪ್ರತಿಕ್ರಿಯಿಸಿದ್ದಾರೆ.

- Advertisement -
- Advertisement -

ಕೇರಳದಲ್ಲಿ ಭರ್ಜರಿ ಜಯ ಸಾಧಿಸಿದ ಎಲ್‌ಡಿಎಫ್ ಮೈತ್ರಿ ಕೂಟದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಮ್ಮ ಸಂಪುಟವನ್ನು 11 ಹೊಸ ಮುಖಗಳೊಂದಿಗೆ ಪರಿಷ್ಕರಿಸಿದ್ದಾರೆ. ವಿಜಯನ್ ಬಿಟ್ಟರೆ ಎಲ್ಲರೂ ಹೊಸಬರೇ. ಆದರೆ ಕೋವಿಡ್ ನಿರ್ವಹಣೆಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ ಶೈಲಜಾ ಟೀಚರ್ ಅವರನ್ನೂ ಕೈಬಿಟ್ಟಿದ್ದು ಈಗ ಟೀಕೆಗೆ ಕಾರಣವಾಗಿದೆ.

‘ಇದು ಪಾರ್ಟಿಯ ನಿರ್ಧಾರ’ ಎಂದು ಹೇಳುವ ಗುಂಪುಗಳು, ‘ಅವರಿಗೆ ಚೀಫ್ ವಿಪ್ ಸ್ಥಾನ ನೀಡಲಾಗಿದೆ. ಹೊಸಬರಿಗೆ ಸಚಿವ ಸ್ಥಾನ ನೀಡಲಾಗಿದೆ ಎನ್ನುತ್ತಿದ್ದರೆ, ಇದನ್ನು ವಿರೋಧಿಸುವವರು, ಇದು ಎಲ್ಲ ಪಕ್ಷಗಳಂತೆ ಸಿಪಿಎಂನಲ್ಲಿ ಅಂತರ್ಗತವಾಗಿರುವ ಪುರುಷಾಧಿಪತ್ಯದ ಲಕ್ಷಣ. ಎಲ್ಲ ಬದಲು ಮಾಡುವುದಿದ್ದರೆ ಪಿಣರಾಯಿ ವಿಜಯನ್ ಅವರನ್ನೂ ಬದಲಿಸಬೇಕಿತ್ತು’ ಎಂದು ಕೆಲವರು ಹೇಳಿದರೆ, ಇನ್ನೂ ಹಲವರು ಶೈಲಜಾ ಟೀಚರ್ ಅವರಿಗೇ ಮುಖ್ಯಮಂತ್ರಿ ಸ್ಥಾನ ನೀಡಬೇಕಾಗಿತ್ತು ಎನ್ನುತ್ತಿದ್ದಾರೆ.

ಈ ಕುರಿತು ಎನ್‌ಡಿಟಿವಿ ಜೊತೆ ಮಾತನಾಡಿ ಕೆ.ಕೆ ಶೈಲಜಾರವರು “ಇದು ನಮ್ಮ ಪಕ್ಷದ ನೀತಿ ನಿರ್ಧಾರ. ಆದ್ದರಿಂದ ಆ ನಿರ್ಧಾರದ ಪ್ರಕಾರ, ನಾನು ಸಹ ತ್ಯಜಿಸಲು ನಿರ್ಧರಿಸಿದ್ದೇನೆ. ಇದರಿಂದ ನನಗ್ಯಾವ ಬೇಸರವಿಲ್ಲ. ಹೊಸಬರಿಗೆ ಅವಕಾಶ ನೀಡುತ್ತಿದ್ದೇವೆ” ಎಂದಿದ್ದಾರೆ.

ಲೇಖಕರಾದ ಕೆ.ಪಿ. ಸುರೇಶ್, ಪೀರ್ ಭಾಷಾ, ಆದಿತ್ಯ ಭಾರದ್ವಾಜ್ ಮುಂತಾದವರು ಸಿಪಿಎಂ ನಡೆಯನ್ನು ಟೀಕಿಸಿದ್ದರೆ, ಮುರಳಿ ಕೃಷ್ಣ ಮುಂತಾದವರು, ಅದು ಪಕ್ಷದ ಆಂತರಿಕ ತೀರ್ಮಾನ ಎಂದು ಸಮರ್ಥಿಸಿಕೊಂಡಿದ್ದಾರೆ.

‘ಎಲ್ಲವನ್ನೂ ಬದಲು ಮಾಡುವುದಿದ್ದರೆ ಮುಖ್ಯಮಂತ್ರಿಯನ್ನೂ ಬದಲಿಸಬೇಕಿತ್ತು’ ಎಂದು ಕೆ.ಪಿ ಸುರೇಶ್ ಫೇಸ್‌ಬುಕ್‌ನಲ್ಲಿ ಬರೆದಿದ್ದು ಈ ಕುರಿತಾಗಿ ಅವರ ವಾಲ್‌ನಲ್ಲಿ ಜೋರಾದ ಚರ್ಚೆ ನಡೆದಿದೆ.

ಪತ್ರಕರ್ತ ಆದಿತ್ಯ ಭಾರದ್ವಾಜ್ ಕೂಡ ಶೈಲಜಾರನ್ನು ಕೈ ಬಿಟ್ಟ ಕ್ರಮವನ್ನು ವಿರೋಧಿಸುತ್ತ, ಎಲ್ಲ ಪಕ್ಷಗಳಲ್ಲೂ ಇರುವ ಇಂತಹ ಸ್ವಹಿತಾಸಕ್ತಿ ನಿಲುವುಗಳನ್ನು ನಾವು ವಿರೋಧಿಸಬೇಕು. ಕೇವಲ ಮೋದಿ-ಶಾಗಳನ್ನಷ್ಟೇ ಅಲ್ಲ, ಸ್ಟಾಲಿನ್, ಮಮತಾ ಮತ್ತು ಪಿಣರಾಯಿ ಅಂತಹ ಎಲ್ಲರ ಏಕಸ್ವಾಮ್ಯವನ್ನು ವಿರೋಧಿಸಬೇಕು’ ಎಂಬ ನಿಲುವನ್ನು ವ್ಯಕ್ತಪಡಿಸಿದ್ದಾರೆ.

“ಕೇರಳದಲ್ಲಿ ಪಕ್ಷರಾಜಕಾರಣ, ವ್ಯಕ್ತಿ ರಾಜಕಾರಣವಲ್ಲ. #ಕೇರಳ_ರಾಜಕೀಯ_ಮಾದರಿ” ಎಂದು ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ಕೆ.ವಾಸುದೇವರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.

ಎಡಪಂಥಿಯ ಹಿನ್ನೆಲೆಯ ಚಳುವಳಿಗಳಿಂದಲೇ ಬಂದ ಬರಹಗಾರ ಬಿ. ಪೀರ್‌ಬಾಷಾ, ‘ಶೈಲಜಾ ಟೀಚರ್ ಮುಖ್ಯಮಂತ್ರಿಯಾಗಿದ್ದರೆ ಈ ಸ್ಥಾನಕ್ಕೂ ಒಬ್ಬ ಹೊಸಬರು ಬಂದಂತಾಗುತ್ತಿತ್ತು. ಅವರಿಗೂ ರಾಜ್ಯ ಪರ್ಯಾಯ/ ಹೊಸ ತಲೆಮಾರಿನ ನಾಯಕತ್ವ ಬೆಳೆಸಲು ಅವಕಾಶ ನೀಡಿದಂತಾಗುತ್ತಿತ್ತು. ಪಿಣರಾಯ್ ವಿಜಯನ್ ಅವರು ರಾಜ್ಯ ಸರಕಾರದ ಪ್ರಧಾನ ಉಸ್ತುವಾರಿ/ ಮಾರ್ಗದರ್ಶಕರಾಗಿದ್ದು ರಾಷ್ಟ್ರೀ ಯ ಮಟ್ಟದಲ್ಲಿ ಅಥವಾ ದಕ್ಷಿಣ ಭಾರತ ಮಟ್ಟಕ್ಕಾದರೂ ಅಧಿಕಾರ ರಾಜಕಾರಣದ ನೆಲೆಯಲ್ಲಿ ಪಕ್ಷವನ್ನು ಸಂಘಟಿಸಲು ಜವಾಬ್ದಾರಿ ವಹಿಸಿಕೊಂಡಿದ್ದರೆ ನಿರಾಶೆ ಕವಿಯುತ್ತಿರುವ ರಾಷ್ಟ್ರೀಯ ಸಂದರ್ಭದಲ್ಲಿ ಹೊಸ ಸಾಧ್ಯತೆಯೊಂದು ತೆರೆದುಕೊಳ್ಳುವ ಅವಕಾಶವಿತ್ತು’ ಎಂದಿದ್ದಾರೆ.

ಮುಂದುವರಿದು “ಜನ ಎಂದರೆ ಪಕ್ಷದ ಸದಸ್ಯರು ಮಾತ್ರ ಎಂದೇ ಪರಿಗಣಿಸಿದಲ್ಲಿ ‘ಜನತಾ ಪ್ರಜಾಪ್ರಭುತ್ವ’ ವೆಂಬುದು ದ್ವೀಪ‌ ಅಥವಾ ನಡುಗಡ್ಡೆ ಮಾತ್ರವಷ್ಟೆ.
ಪಿಣರಾಯರ ಮರು ಆಯ್ಕೆ, ಶೈಲಜಾರನ್ನು ಬಿಟ್ಟಿದ್ದಕ್ಕೆ ಅವರದೇ ಆದ ಕಾರಣ ವಿಶ್ಲೇಷಣೆಗಳಿರಬಹುದು. ಆದರೆ “ಬೇರೆಯವರ ಉಸಾಬರಿಯೇ ಬೇಡ, ಪ್ರತಿಕ್ರಿಯಿಸುವವರ ಅನಗತ್ಯ ಆಸಕ್ತಿ, ಧಾವಂತ, ಇವುಗಳನ್ನು ನಾವು ಲೆಕ್ಕಕ್ಕೇ ತಗಳ್ಳಲ್ಲ, ಒಟ್ಟಿನಲ್ಲಿ “ಇವರ್ಯಾರು ಹೇಳೋಕೆ” ಎಂಬ ದನಿ ಇವರ ಬರೆಹದಲ್ಲಿದೆ. ಇದು ದಾರ್ಷ್ಟ್ಯದ ಮಾತಾಯಿತು.
ವ್ಯಕ್ತಿಯೊಬ್ಬರ ನಿಲುವಾಗಿದ್ದರೆ “ಆತ್ಮಹತ್ಯೆ ಮಾಡಿಕೊಳ್ಳುವುದಿದ್ದರೆ ನಿಮ್ಮಿಷ್ಟ” ಎನ್ನಬಹುದಿತ್ತು. ಆದರೆ ಜನ ಚಳುವಳಿಯ ನಾಯಕತ್ವ ಹೀಗೆ ಮಾತಾಡುವುದನ್ನು ಕಠಿಣ ಶಬ್ದಗಳಿಂದಲೇ ಇದಿರುಗೊಳ್ಳುವುದು ಅನಿವಾರ್ಯವೇನೋ. ಇಂತಹ ಸಂದರ್ಭ ಮುಂದುವರಿಯದಿರಲಿ.
ಬೇಸರದಿಂದ ಇಷ್ಟನ್ನು ಬರೆಯುತ್ತಿದ್ದೇನೆ, ವಿಷಾದಗಳೊಂದಿಗೆ… ಎಂದು ಪೀರ್‌ಭಾಷಾ ಅಭಿಪ್ರಾಯಪಟ್ಟಿದ್ದಾರೆ.

ಆದಿತ್ಯ ಅವರ ಅಭಿಪ್ರಾಯಕ್ಕೆ ಪ್ರತಿಕ್ರಿಯೆ ನೀಡಿರುವ ಮುರುಳಿ ಕೃಷ್ಣ ಅವರು, ‘ಎಲ್ಲ ಹೊಸಬರಿಗೂ ಅವಕಾಶ ನೀಡಿದ್ದರಿಂದ ಶೈಲಜಾ ಅವರನ್ನು ಸಹಜವಾಗಿ ಕೈ ಬಿಡಲಾಗಿದೆ. ಆದರೆ ಅವರಿಗೆ ಚೀಫ್ ವಿಪ್ ಸ್ಥಾನ ನೀಡಲಾಗಿದೆ’ ಎಂದಿದ್ದಾರೆ.

“ಶೈಲಜಾ ಟೀಚರ್ ರಾಷ್ಟ್ರ ರಾಜಕಾರಣಕ್ಕೆ ಬರಲಿ. ನಮಗೆಲ್ಲರಿಗೆ ಪ್ರಯೋಜನವಾಗಲಿ” ಎಂದು ವೈದ್ಯರಾದ ಸಂದೀಪ ಸಮತಡ್ಕ ನಾಯಕ್ ಅಭಿಪ್ರಾಯಪಟ್ಟಿದ್ದಾರೆ.

ಕೇರಳವಲ್ಲದೇ ದೇಶದ ಎಲ್ಲ ರಾಜ್ಯಗಳ ಜನರೂ ಶೈಲಜಾ ಅವರು ಆರೋಗ್ಯ ಸಚಿವರಾಗಿ ಮಾಡಿದ ಕೆಲಸವನ್ನು ಮೆಚ್ಚಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯೂ ಅದನ್ನು ಮೆಚ್ಚಿದೆ. ಅವರು ಈ ಸಂದರ್ಭದಲ್ಲಿ ಆರೋಗ್ಯ ಸಚಿವರಾಗಿ ಮುಂದುವರೆಯಬೇಕಿತ್ತು ಅಥವಾ ಅವರೇ ಸಿಎಂ ಆಗಬೇಕಿತ್ತು ಎಂಬ ಸಮರ್ಥನೆಗಳು ಕೇಳಿ ಬರುತ್ತಿವೆ.

ವಿಚಿತ್ರವೆಂದರೆ, ಕೆಲವು ಬಿಜೆಪಿ ಬೆಂಬಲಿಗರು ಈ ವಿಷಯವನ್ನು ತಮ್ಮ ಲಾಭಕ್ಕೆ ಬಳಸಿಕೊಳ್ಳಲು ಶೈಲಜಾ ಟೀಚರ್ ಪರ ಪೋಸ್ಟ್‌ಗಳನ್ನು ಹಾಕುತ್ತಿರುವುದು.


ಇದನ್ನೂ ಓದಿ:  ಪಿಣರಾಯಿ 2.0 – ಸಿಪಿಐ(ಎಂ)ನಿಂದ ಹೊಸ ಮುಖಗಳಿಗೆ ಮಂತ್ರಿ ಸ್ಥಾನ; ಕೆ.ಕೆ. ಶೈಲಜಾ ಔಟ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸೈಲಜ ಟೀಚರನ್ನು ಕೈ ಬಿಟ್ಟಿರೋದು ತುಂಬಾನೆ ಬೇಸರದ ವಿಷಯ ಪಕ್ಷದಲ್ಲಿ ನಾನು ೨೦ವರ್ಷ ದುಡಿದಿದ್ದೇನೆ. ಪಕ್ಷದ ತೀರ್ಮಾನವೇ ಅಂತಿಮ.
    ಟೀಚರ್ ರವರ ಮತ್ತಷ್ಟು ಗಟ್ಟಿಯಾಗಿ ಕೆಲಸ ಮಾಡುವುದನ್ನ ಪಕ್ಷ ಬೇಕೊ ಬೇಡವೋ ಮತ್ತೊಮ್ಮೆ ಚೆರ್ಚಿಸಿದರೆ ಒಳಿತು ಎಂದು ನನ್ನ ಅಭಿಪ್ರಾಯ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...