Homeಕರ್ನಾಟಕಗಣಿ ಲೂಟಿಯಾದಾಗ ಮೌನವಿದ್ದ ಮಾಧುಸ್ವಾಮಿ, ಸಾಮಾನ್ಯರ ವಿರುದ್ಧ ತಿರುಗಿಬೀಳುವುದೇಕೆ?

ಗಣಿ ಲೂಟಿಯಾದಾಗ ಮೌನವಿದ್ದ ಮಾಧುಸ್ವಾಮಿ, ಸಾಮಾನ್ಯರ ವಿರುದ್ಧ ತಿರುಗಿಬೀಳುವುದೇಕೆ?

ಗಣಿ ಲೂಟಿಯಾದಾಗ ಮೌನವಿದ್ದ ಮಾಧುಸ್ವಾಮಿ ಜನರನ್ನು ಪ್ರೀತಿಯಿಂದ ಮಾತನಾಡಿಸಿದ್ದು ನೋಡೇ ಇಲ್ಲ.

- Advertisement -
- Advertisement -

ಜೆ.ಸಿ. ಮಾಧುಸ್ವಾಮಿ ಅವರದ್ದು ಅಹಂ ಸ್ವಭಾವ. ಸೊಕ್ಕಿನ ಮಾತುಗಳಿಂದಲೇ ಜನರ ವಿರೋಧ ಕಟ್ಟಿಕೊಂಡು ಬಂದವರು. ಜನರನ್ನು ಪ್ರೀತಿಯಿಂದ ಕಂಡದ್ದೇ ಇಲ್ಲ.. ದರ್ಪದ ಮಾತುಗಳಿಂದಲೇ ಜನಜನಿತ. ಇಂಗ್ಲೀಷ್ ಮತ್ತು ಕನ್ನಡ ಸಾಹಿತ್ಯವನ್ನು ಸಾಕಷ್ಟು ಓದಿಕೊಂಡಿರುವ ಅವರು ಸೌಜನ್ಯದಿಂದ ವರ್ತಿಸುವುದಿಲ್ಲ ಎಂಬುದು ಅವರನ್ನು ಹತ್ತಿರದಿಂದ ಬಲ್ಲವರು ಹೇಳುವ ಮಾತುಗಳು.

1989ರಲ್ಲಿ ಜನತಾದಳದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಮಾಧುಸ್ವಾಮಿ ವಿಧಾನಸಭೆಯಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ಸಾಕಷ್ಟು ಚರ್ಚೆ ಮಾಡಿದರು. ಪ್ರಸಿದ್ದಿಯೂ ಆದರು. ಎರಡನೇ ಬಾರಿಗೆ 2004ರಲ್ಲಿ ಜೆಡಿಯುನಿಂದ ಶಾಸಕರಾದರು. ಮೂರನೇ ಬಾರಿಗೆ ಬಿಜೆಪಿಯಿಂದ ಶಾಸಕರಾಗಿ ಗೆದ್ದು ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮೊದಲ ಬಾರಿಗೆ ಆಯ್ಕೆಯಾದಾಗಿನ ಹುಮ್ಮಸ್ಸು ಈಗ ಇಲ್ಲ. ಆದರೆ ಅವರಲ್ಲಿನ ದರ್ಪ ಮಾತ್ರ ಹೋಗಿಲ್ಲದಿರುವುದು ಕಾಣುತ್ತದೆ.

2004ರಲ್ಲಿ ತುಮಕೂರು ಜಿಲ್ಲೆಯಲ್ಲಿ ಗಣಿಗಾರಿಕೆ ವಿರುದ್ದದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಗಣಿಗಾರಿಕೆ ನಿಲ್ಲಿಸಬೇಕೆಂದು ಪರಿಸರ ಹೋರಾಟಗಾರರು ಚಳವಳಿ ನಡೆಸಿದ್ದರು. ಸಾಮಾಜಿಕ ಕಾರ್ಯಕರ್ತರು ಪರಿಸರವಾದಿಗಳು ಚಿಕ್ಕನಾಯಕನಹಳ್ಳಿಯಲ್ಲೇ ಪೆಂಡಾಲ್ ಹಾಕಿ ಅಂದಿನ ಸ್ಥಳೀಯ ಶಾಸಕರಾಗಿದ್ದ ಮಾಧುಸ್ವಾಮಿ ಅವರ ಗಮನ ಸೆಳೆಯುವ ಉದ್ದೇಶದಿಂದ ನಿರಂತರವಾಗಿ ಒಂದು ತಿಂಗಳು ಪ್ರತಿಭಟನಾ ಧರಣಿ ನಡೆಸಿದರು. ಗಣಿಗಾರಿಕೆ ನಿಲ್ಲಿಸಬೇಕು. ಪರಿಸರ ಉಳಿಸಬೇಕು. ಶಾಸಕರು ಇತ್ತ ಗಮನಹರಿಸಬೇಕು ಎಂದು ಹಗರಲಿರುಳು ಹೋರಾಟ ಮಾಡಿದರೂ ಒಂದೇ ಒಂದು ದಿನ ಹೋರಾಟದ ಸ್ಥಳಕ್ಕೆ ಮಾಧುಸ್ವಾಮಿ ಬರೆಲೇ ಇಲ್ಲ.

ಸ್ಥಳೀಯ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲು ಯತ್ನಿಸಿದ ರೈತ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ ಸಚಿವ ಮಾಧುಸ್ವಾಮಿ‌ ವಿಡಿಯೋ ವೈರಲ್ ಆಗಿದ್ದು ನಾಗರೀಕರು ಛೀಮಾರಿ ಹಾಕುತ್ತಿದ್ದಾರೆ#NaanuGauri #madhuswamy #kolara #muniraju

Posted by Naanu Gauri on Wednesday, May 20, 2020

ಮಹಿಳೆಯೊಂದಿಗೆ ದರ್ಪ ತೋರಿಸುತ್ತಿರುವ ಸಚಿವ ಮಾಧುಸ್ವಾಮಿ

ಚಿಕ್ಕನಾಯಕನಹಳ್ಳಿ ಹೊನ್ನೇಬಾಗಿ ಪ್ರದೇಶ ವ್ಯಾಪ್ತಿಯಲ್ಲಿ ವ್ಯಾಪಕ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೂ ಸದನದಲ್ಲಿ ಈ ವಿಷಯವನ್ನು ಪ್ರಸ್ತಾಪ ಮಾಡಲೇ ಇಲ್ಲ. ಗಣಿಗಾರಿಕೆಯಿಂದ ಪರಿಸರಕ್ಕೆ ಹಾನಿಯಾಗುತ್ತಿದ್ದರೂ ಮಾಧುಸ್ವಾಮಿ ಮೌನವಹಿಸಿಕೊಂಡೇ ಬಂದಿದ್ದಾರೆ. ಸಾಮಾಜಿಕ ಕಾರ್ಯಕರ್ತ ಎಸ್.ಆರ್. ಹಿರೇಮಠ್ ನೇತೃತ್ವದಲ್ಲಿ ಮುನ್ನಡೆಯುತ್ತದ್ದ ಗಣಿ ವಿರುದ್ದದ ಚಳವಳಿಯಲ್ಲಿ ಶಿವನಂಜಯ್ಯ ಬಾಳೆಕಾಯಿ, ಸಾಹಿತಿ ಎಸ್.ಜಿ. ಸಿದ್ದರಾಮಯ್ಯ ಬಂದು ಒತ್ತಾಯ ಹೇರಿದರು. ಪರಿಸರವಾದಿ ಯಲ್ಲಪ್ಪರೆಡ್ಡಿ ಬಂದು ಅಕ್ರಮ ಗಣಿಗಾರಿಕೆ ವಿರುದ್ದ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮೇಲೆ ಒತ್ತಡ ತರಬೇಕೆಂದು ಮಾಧುಸ್ವಾಮಿ ಅವರಿಗೆ ಮನವಿ ಮಾಡಿದರು. ಮಾಧುಸ್ವಾಮಿ ಇದ್ಯಾವುದಕ್ಕೂ ಕ್ಯಾರೇ ಅನ್ನಲಿಲ್ಲ. ತುಟಿಬಿಚ್ಚಿ ಮಾತನಾಡಲೇ ಇಲ್ಲ.

ಕಳೆದ ವಿಧಾನಸಭಾ ಚುನಾವಣೆಯ ಪ್ರಚಾರದ ಸಂದರ್ಭ ಗೊಲ್ಲ ಸಮುದಾಯದ ಯುವಕನಿಗೆ ಕಪಾಳಮೋಕ್ಷೆ ಮಾಡಿ ಜನರ ವಿರೋಧ ಕಟ್ಟಿಕೊಂಡರು. ಆನಂತರ ಚುನಾವಣೆಯಲ್ಲಿ ಗೆದ್ದು ಸಚಿವರಾದರು. ನಂತರ ಕುರುಬ ಸಮುದಾಯದ ಸ್ವಾಮೀಜಿ ಬಗ್ಗೆ ಅವಹೇಳಕಾರಿಯಾಗಿ ಮಾತನಾಡಿ ಆ ಸಮುದಾಯದ ಕೋಪಕ್ಕೂ ಗುರಿ ಆದರು. ಇದೀಗ ಕೋಲಾರದಲ್ಲಿ ಕೆರೆ ಒತ್ತುವರಿಯಾಗಿರುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಮಹಿಳೆಯೊಬ್ಬರು ಮನವಿ ಮಾಡಿದರು. ಆ ಮಹಿಳೆ ಸ್ವಂತಕ್ಕಾಗಿ ಏನನ್ನೂ ಕೇಳಲಿಲ್ಲ. ಆದರೂ ಕಾನೂನು ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಆ ಮಹಿಳೆ ರಾಸ್ಕಲ್ ಬಾಯಿಮುಚ್ಚು ಎಂದು ಹೇಳಿ ವಿವಾದವನ್ನು ಬೆನ್ನಮೇಲೆ ಎಳೆದುಕೊಂಡಿದ್ದಾರೆ.

ಕೊರೊನ ಕಾಲದಲ್ಲಿ ಜನರ ಸಮಸ್ಯೆಗಳೇನು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಾದ ಸಚಿವರು ಅಧಿಕಾರ ಅಮಲು ಏರಿಸಿಕೊಂಡು ಸಮಸ್ಯೆ ಹೇಳಿಕೊಳ್ಳುವ ಮಹಿಳೆಯ ಮೇಲೆಯೇ ತಿರುಗಿ ಬೀಳುವುದು ಎಷ್ಟು ಸರಿ ಎಂದು ಮಹಿಳಾ ಹೋರಾಟಗಾರರು ಪ್ರಶ್ನಿಸಿದ್ದಾರೆ. ಪದೇ ಪದೇ ವಿವಾದಕ್ಕೆ ಗುರಿಯಾಗುತ್ತಿರುವ ಮಾಧುಸ್ವಾಮಿ ಅವರಿಗೆ ಖಾತೆಯನ್ನು ನಿಭಾಯಿಸುವುದು ಕಷ್ಟವಾಗಿದೆಯೇ? ಆ ಸೇಡನ್ನು ಜನರ ಮೇಲೆ ತೀರಿಸಿಕೊಳ್ಳುತ್ತಿದ್ದಾರೆಯೇ ಎಂಬ ಪ್ರಶ್ನೆಗಳು ಉದ್ಭವಿಸಿವೆ.


ಓದಿ: ಸಚಿವ ಮಾಧುಸ್ವಾಮಿ ವರ್ತನೆ ತಪ್ಪು, ಸಹಿಸಲು ಸಾಧ್ಯವಿಲ್ಲ: ಸಿಎಂ ಯಡಿಯೂರಪ್ಪ


(ಲೇಖಕರು ಹಿರಿಯ ಪತ್ರಕರ್ತರು. ಅಭಿಪ್ರಾಯಗಳು ವೈಯಕ್ತಿಕವಾದವು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...