Homeಕರ್ನಾಟಕಗಣಿ ಲೂಟಿಯಾದಾಗ ಮೌನವಿದ್ದ ಮಾಧುಸ್ವಾಮಿ, ಸಾಮಾನ್ಯರ ವಿರುದ್ಧ ತಿರುಗಿಬೀಳುವುದೇಕೆ?

ಗಣಿ ಲೂಟಿಯಾದಾಗ ಮೌನವಿದ್ದ ಮಾಧುಸ್ವಾಮಿ, ಸಾಮಾನ್ಯರ ವಿರುದ್ಧ ತಿರುಗಿಬೀಳುವುದೇಕೆ?

ಗಣಿ ಲೂಟಿಯಾದಾಗ ಮೌನವಿದ್ದ ಮಾಧುಸ್ವಾಮಿ ಜನರನ್ನು ಪ್ರೀತಿಯಿಂದ ಮಾತನಾಡಿಸಿದ್ದು ನೋಡೇ ಇಲ್ಲ.

- Advertisement -
- Advertisement -

ಜೆ.ಸಿ. ಮಾಧುಸ್ವಾಮಿ ಅವರದ್ದು ಅಹಂ ಸ್ವಭಾವ. ಸೊಕ್ಕಿನ ಮಾತುಗಳಿಂದಲೇ ಜನರ ವಿರೋಧ ಕಟ್ಟಿಕೊಂಡು ಬಂದವರು. ಜನರನ್ನು ಪ್ರೀತಿಯಿಂದ ಕಂಡದ್ದೇ ಇಲ್ಲ.. ದರ್ಪದ ಮಾತುಗಳಿಂದಲೇ ಜನಜನಿತ. ಇಂಗ್ಲೀಷ್ ಮತ್ತು ಕನ್ನಡ ಸಾಹಿತ್ಯವನ್ನು ಸಾಕಷ್ಟು ಓದಿಕೊಂಡಿರುವ ಅವರು ಸೌಜನ್ಯದಿಂದ ವರ್ತಿಸುವುದಿಲ್ಲ ಎಂಬುದು ಅವರನ್ನು ಹತ್ತಿರದಿಂದ ಬಲ್ಲವರು ಹೇಳುವ ಮಾತುಗಳು.

1989ರಲ್ಲಿ ಜನತಾದಳದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಮಾಧುಸ್ವಾಮಿ ವಿಧಾನಸಭೆಯಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ಸಾಕಷ್ಟು ಚರ್ಚೆ ಮಾಡಿದರು. ಪ್ರಸಿದ್ದಿಯೂ ಆದರು. ಎರಡನೇ ಬಾರಿಗೆ 2004ರಲ್ಲಿ ಜೆಡಿಯುನಿಂದ ಶಾಸಕರಾದರು. ಮೂರನೇ ಬಾರಿಗೆ ಬಿಜೆಪಿಯಿಂದ ಶಾಸಕರಾಗಿ ಗೆದ್ದು ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮೊದಲ ಬಾರಿಗೆ ಆಯ್ಕೆಯಾದಾಗಿನ ಹುಮ್ಮಸ್ಸು ಈಗ ಇಲ್ಲ. ಆದರೆ ಅವರಲ್ಲಿನ ದರ್ಪ ಮಾತ್ರ ಹೋಗಿಲ್ಲದಿರುವುದು ಕಾಣುತ್ತದೆ.

2004ರಲ್ಲಿ ತುಮಕೂರು ಜಿಲ್ಲೆಯಲ್ಲಿ ಗಣಿಗಾರಿಕೆ ವಿರುದ್ದದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಗಣಿಗಾರಿಕೆ ನಿಲ್ಲಿಸಬೇಕೆಂದು ಪರಿಸರ ಹೋರಾಟಗಾರರು ಚಳವಳಿ ನಡೆಸಿದ್ದರು. ಸಾಮಾಜಿಕ ಕಾರ್ಯಕರ್ತರು ಪರಿಸರವಾದಿಗಳು ಚಿಕ್ಕನಾಯಕನಹಳ್ಳಿಯಲ್ಲೇ ಪೆಂಡಾಲ್ ಹಾಕಿ ಅಂದಿನ ಸ್ಥಳೀಯ ಶಾಸಕರಾಗಿದ್ದ ಮಾಧುಸ್ವಾಮಿ ಅವರ ಗಮನ ಸೆಳೆಯುವ ಉದ್ದೇಶದಿಂದ ನಿರಂತರವಾಗಿ ಒಂದು ತಿಂಗಳು ಪ್ರತಿಭಟನಾ ಧರಣಿ ನಡೆಸಿದರು. ಗಣಿಗಾರಿಕೆ ನಿಲ್ಲಿಸಬೇಕು. ಪರಿಸರ ಉಳಿಸಬೇಕು. ಶಾಸಕರು ಇತ್ತ ಗಮನಹರಿಸಬೇಕು ಎಂದು ಹಗರಲಿರುಳು ಹೋರಾಟ ಮಾಡಿದರೂ ಒಂದೇ ಒಂದು ದಿನ ಹೋರಾಟದ ಸ್ಥಳಕ್ಕೆ ಮಾಧುಸ್ವಾಮಿ ಬರೆಲೇ ಇಲ್ಲ.

ಸ್ಥಳೀಯ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲು ಯತ್ನಿಸಿದ ರೈತ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ ಸಚಿವ ಮಾಧುಸ್ವಾಮಿ‌ ವಿಡಿಯೋ ವೈರಲ್ ಆಗಿದ್ದು ನಾಗರೀಕರು ಛೀಮಾರಿ ಹಾಕುತ್ತಿದ್ದಾರೆ#NaanuGauri #madhuswamy #kolara #muniraju

Posted by Naanu Gauri on Wednesday, May 20, 2020

ಮಹಿಳೆಯೊಂದಿಗೆ ದರ್ಪ ತೋರಿಸುತ್ತಿರುವ ಸಚಿವ ಮಾಧುಸ್ವಾಮಿ

ಚಿಕ್ಕನಾಯಕನಹಳ್ಳಿ ಹೊನ್ನೇಬಾಗಿ ಪ್ರದೇಶ ವ್ಯಾಪ್ತಿಯಲ್ಲಿ ವ್ಯಾಪಕ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೂ ಸದನದಲ್ಲಿ ಈ ವಿಷಯವನ್ನು ಪ್ರಸ್ತಾಪ ಮಾಡಲೇ ಇಲ್ಲ. ಗಣಿಗಾರಿಕೆಯಿಂದ ಪರಿಸರಕ್ಕೆ ಹಾನಿಯಾಗುತ್ತಿದ್ದರೂ ಮಾಧುಸ್ವಾಮಿ ಮೌನವಹಿಸಿಕೊಂಡೇ ಬಂದಿದ್ದಾರೆ. ಸಾಮಾಜಿಕ ಕಾರ್ಯಕರ್ತ ಎಸ್.ಆರ್. ಹಿರೇಮಠ್ ನೇತೃತ್ವದಲ್ಲಿ ಮುನ್ನಡೆಯುತ್ತದ್ದ ಗಣಿ ವಿರುದ್ದದ ಚಳವಳಿಯಲ್ಲಿ ಶಿವನಂಜಯ್ಯ ಬಾಳೆಕಾಯಿ, ಸಾಹಿತಿ ಎಸ್.ಜಿ. ಸಿದ್ದರಾಮಯ್ಯ ಬಂದು ಒತ್ತಾಯ ಹೇರಿದರು. ಪರಿಸರವಾದಿ ಯಲ್ಲಪ್ಪರೆಡ್ಡಿ ಬಂದು ಅಕ್ರಮ ಗಣಿಗಾರಿಕೆ ವಿರುದ್ದ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮೇಲೆ ಒತ್ತಡ ತರಬೇಕೆಂದು ಮಾಧುಸ್ವಾಮಿ ಅವರಿಗೆ ಮನವಿ ಮಾಡಿದರು. ಮಾಧುಸ್ವಾಮಿ ಇದ್ಯಾವುದಕ್ಕೂ ಕ್ಯಾರೇ ಅನ್ನಲಿಲ್ಲ. ತುಟಿಬಿಚ್ಚಿ ಮಾತನಾಡಲೇ ಇಲ್ಲ.

ಕಳೆದ ವಿಧಾನಸಭಾ ಚುನಾವಣೆಯ ಪ್ರಚಾರದ ಸಂದರ್ಭ ಗೊಲ್ಲ ಸಮುದಾಯದ ಯುವಕನಿಗೆ ಕಪಾಳಮೋಕ್ಷೆ ಮಾಡಿ ಜನರ ವಿರೋಧ ಕಟ್ಟಿಕೊಂಡರು. ಆನಂತರ ಚುನಾವಣೆಯಲ್ಲಿ ಗೆದ್ದು ಸಚಿವರಾದರು. ನಂತರ ಕುರುಬ ಸಮುದಾಯದ ಸ್ವಾಮೀಜಿ ಬಗ್ಗೆ ಅವಹೇಳಕಾರಿಯಾಗಿ ಮಾತನಾಡಿ ಆ ಸಮುದಾಯದ ಕೋಪಕ್ಕೂ ಗುರಿ ಆದರು. ಇದೀಗ ಕೋಲಾರದಲ್ಲಿ ಕೆರೆ ಒತ್ತುವರಿಯಾಗಿರುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಮಹಿಳೆಯೊಬ್ಬರು ಮನವಿ ಮಾಡಿದರು. ಆ ಮಹಿಳೆ ಸ್ವಂತಕ್ಕಾಗಿ ಏನನ್ನೂ ಕೇಳಲಿಲ್ಲ. ಆದರೂ ಕಾನೂನು ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಆ ಮಹಿಳೆ ರಾಸ್ಕಲ್ ಬಾಯಿಮುಚ್ಚು ಎಂದು ಹೇಳಿ ವಿವಾದವನ್ನು ಬೆನ್ನಮೇಲೆ ಎಳೆದುಕೊಂಡಿದ್ದಾರೆ.

ಕೊರೊನ ಕಾಲದಲ್ಲಿ ಜನರ ಸಮಸ್ಯೆಗಳೇನು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಾದ ಸಚಿವರು ಅಧಿಕಾರ ಅಮಲು ಏರಿಸಿಕೊಂಡು ಸಮಸ್ಯೆ ಹೇಳಿಕೊಳ್ಳುವ ಮಹಿಳೆಯ ಮೇಲೆಯೇ ತಿರುಗಿ ಬೀಳುವುದು ಎಷ್ಟು ಸರಿ ಎಂದು ಮಹಿಳಾ ಹೋರಾಟಗಾರರು ಪ್ರಶ್ನಿಸಿದ್ದಾರೆ. ಪದೇ ಪದೇ ವಿವಾದಕ್ಕೆ ಗುರಿಯಾಗುತ್ತಿರುವ ಮಾಧುಸ್ವಾಮಿ ಅವರಿಗೆ ಖಾತೆಯನ್ನು ನಿಭಾಯಿಸುವುದು ಕಷ್ಟವಾಗಿದೆಯೇ? ಆ ಸೇಡನ್ನು ಜನರ ಮೇಲೆ ತೀರಿಸಿಕೊಳ್ಳುತ್ತಿದ್ದಾರೆಯೇ ಎಂಬ ಪ್ರಶ್ನೆಗಳು ಉದ್ಭವಿಸಿವೆ.


ಓದಿ: ಸಚಿವ ಮಾಧುಸ್ವಾಮಿ ವರ್ತನೆ ತಪ್ಪು, ಸಹಿಸಲು ಸಾಧ್ಯವಿಲ್ಲ: ಸಿಎಂ ಯಡಿಯೂರಪ್ಪ


(ಲೇಖಕರು ಹಿರಿಯ ಪತ್ರಕರ್ತರು. ಅಭಿಪ್ರಾಯಗಳು ವೈಯಕ್ತಿಕವಾದವು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...