Homeಕರ್ನಾಟಕಗಣಿ ಲೂಟಿಯಾದಾಗ ಮೌನವಿದ್ದ ಮಾಧುಸ್ವಾಮಿ, ಸಾಮಾನ್ಯರ ವಿರುದ್ಧ ತಿರುಗಿಬೀಳುವುದೇಕೆ?

ಗಣಿ ಲೂಟಿಯಾದಾಗ ಮೌನವಿದ್ದ ಮಾಧುಸ್ವಾಮಿ, ಸಾಮಾನ್ಯರ ವಿರುದ್ಧ ತಿರುಗಿಬೀಳುವುದೇಕೆ?

ಗಣಿ ಲೂಟಿಯಾದಾಗ ಮೌನವಿದ್ದ ಮಾಧುಸ್ವಾಮಿ ಜನರನ್ನು ಪ್ರೀತಿಯಿಂದ ಮಾತನಾಡಿಸಿದ್ದು ನೋಡೇ ಇಲ್ಲ.

- Advertisement -
- Advertisement -

ಜೆ.ಸಿ. ಮಾಧುಸ್ವಾಮಿ ಅವರದ್ದು ಅಹಂ ಸ್ವಭಾವ. ಸೊಕ್ಕಿನ ಮಾತುಗಳಿಂದಲೇ ಜನರ ವಿರೋಧ ಕಟ್ಟಿಕೊಂಡು ಬಂದವರು. ಜನರನ್ನು ಪ್ರೀತಿಯಿಂದ ಕಂಡದ್ದೇ ಇಲ್ಲ.. ದರ್ಪದ ಮಾತುಗಳಿಂದಲೇ ಜನಜನಿತ. ಇಂಗ್ಲೀಷ್ ಮತ್ತು ಕನ್ನಡ ಸಾಹಿತ್ಯವನ್ನು ಸಾಕಷ್ಟು ಓದಿಕೊಂಡಿರುವ ಅವರು ಸೌಜನ್ಯದಿಂದ ವರ್ತಿಸುವುದಿಲ್ಲ ಎಂಬುದು ಅವರನ್ನು ಹತ್ತಿರದಿಂದ ಬಲ್ಲವರು ಹೇಳುವ ಮಾತುಗಳು.

1989ರಲ್ಲಿ ಜನತಾದಳದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಮಾಧುಸ್ವಾಮಿ ವಿಧಾನಸಭೆಯಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ಸಾಕಷ್ಟು ಚರ್ಚೆ ಮಾಡಿದರು. ಪ್ರಸಿದ್ದಿಯೂ ಆದರು. ಎರಡನೇ ಬಾರಿಗೆ 2004ರಲ್ಲಿ ಜೆಡಿಯುನಿಂದ ಶಾಸಕರಾದರು. ಮೂರನೇ ಬಾರಿಗೆ ಬಿಜೆಪಿಯಿಂದ ಶಾಸಕರಾಗಿ ಗೆದ್ದು ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮೊದಲ ಬಾರಿಗೆ ಆಯ್ಕೆಯಾದಾಗಿನ ಹುಮ್ಮಸ್ಸು ಈಗ ಇಲ್ಲ. ಆದರೆ ಅವರಲ್ಲಿನ ದರ್ಪ ಮಾತ್ರ ಹೋಗಿಲ್ಲದಿರುವುದು ಕಾಣುತ್ತದೆ.

2004ರಲ್ಲಿ ತುಮಕೂರು ಜಿಲ್ಲೆಯಲ್ಲಿ ಗಣಿಗಾರಿಕೆ ವಿರುದ್ದದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಗಣಿಗಾರಿಕೆ ನಿಲ್ಲಿಸಬೇಕೆಂದು ಪರಿಸರ ಹೋರಾಟಗಾರರು ಚಳವಳಿ ನಡೆಸಿದ್ದರು. ಸಾಮಾಜಿಕ ಕಾರ್ಯಕರ್ತರು ಪರಿಸರವಾದಿಗಳು ಚಿಕ್ಕನಾಯಕನಹಳ್ಳಿಯಲ್ಲೇ ಪೆಂಡಾಲ್ ಹಾಕಿ ಅಂದಿನ ಸ್ಥಳೀಯ ಶಾಸಕರಾಗಿದ್ದ ಮಾಧುಸ್ವಾಮಿ ಅವರ ಗಮನ ಸೆಳೆಯುವ ಉದ್ದೇಶದಿಂದ ನಿರಂತರವಾಗಿ ಒಂದು ತಿಂಗಳು ಪ್ರತಿಭಟನಾ ಧರಣಿ ನಡೆಸಿದರು. ಗಣಿಗಾರಿಕೆ ನಿಲ್ಲಿಸಬೇಕು. ಪರಿಸರ ಉಳಿಸಬೇಕು. ಶಾಸಕರು ಇತ್ತ ಗಮನಹರಿಸಬೇಕು ಎಂದು ಹಗರಲಿರುಳು ಹೋರಾಟ ಮಾಡಿದರೂ ಒಂದೇ ಒಂದು ದಿನ ಹೋರಾಟದ ಸ್ಥಳಕ್ಕೆ ಮಾಧುಸ್ವಾಮಿ ಬರೆಲೇ ಇಲ್ಲ.

ಸ್ಥಳೀಯ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲು ಯತ್ನಿಸಿದ ರೈತ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ ಸಚಿವ ಮಾಧುಸ್ವಾಮಿ‌ ವಿಡಿಯೋ ವೈರಲ್ ಆಗಿದ್ದು ನಾಗರೀಕರು ಛೀಮಾರಿ ಹಾಕುತ್ತಿದ್ದಾರೆ#NaanuGauri #madhuswamy #kolara #muniraju

Posted by Naanu Gauri on Wednesday, May 20, 2020

ಮಹಿಳೆಯೊಂದಿಗೆ ದರ್ಪ ತೋರಿಸುತ್ತಿರುವ ಸಚಿವ ಮಾಧುಸ್ವಾಮಿ

ಚಿಕ್ಕನಾಯಕನಹಳ್ಳಿ ಹೊನ್ನೇಬಾಗಿ ಪ್ರದೇಶ ವ್ಯಾಪ್ತಿಯಲ್ಲಿ ವ್ಯಾಪಕ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೂ ಸದನದಲ್ಲಿ ಈ ವಿಷಯವನ್ನು ಪ್ರಸ್ತಾಪ ಮಾಡಲೇ ಇಲ್ಲ. ಗಣಿಗಾರಿಕೆಯಿಂದ ಪರಿಸರಕ್ಕೆ ಹಾನಿಯಾಗುತ್ತಿದ್ದರೂ ಮಾಧುಸ್ವಾಮಿ ಮೌನವಹಿಸಿಕೊಂಡೇ ಬಂದಿದ್ದಾರೆ. ಸಾಮಾಜಿಕ ಕಾರ್ಯಕರ್ತ ಎಸ್.ಆರ್. ಹಿರೇಮಠ್ ನೇತೃತ್ವದಲ್ಲಿ ಮುನ್ನಡೆಯುತ್ತದ್ದ ಗಣಿ ವಿರುದ್ದದ ಚಳವಳಿಯಲ್ಲಿ ಶಿವನಂಜಯ್ಯ ಬಾಳೆಕಾಯಿ, ಸಾಹಿತಿ ಎಸ್.ಜಿ. ಸಿದ್ದರಾಮಯ್ಯ ಬಂದು ಒತ್ತಾಯ ಹೇರಿದರು. ಪರಿಸರವಾದಿ ಯಲ್ಲಪ್ಪರೆಡ್ಡಿ ಬಂದು ಅಕ್ರಮ ಗಣಿಗಾರಿಕೆ ವಿರುದ್ದ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮೇಲೆ ಒತ್ತಡ ತರಬೇಕೆಂದು ಮಾಧುಸ್ವಾಮಿ ಅವರಿಗೆ ಮನವಿ ಮಾಡಿದರು. ಮಾಧುಸ್ವಾಮಿ ಇದ್ಯಾವುದಕ್ಕೂ ಕ್ಯಾರೇ ಅನ್ನಲಿಲ್ಲ. ತುಟಿಬಿಚ್ಚಿ ಮಾತನಾಡಲೇ ಇಲ್ಲ.

ಕಳೆದ ವಿಧಾನಸಭಾ ಚುನಾವಣೆಯ ಪ್ರಚಾರದ ಸಂದರ್ಭ ಗೊಲ್ಲ ಸಮುದಾಯದ ಯುವಕನಿಗೆ ಕಪಾಳಮೋಕ್ಷೆ ಮಾಡಿ ಜನರ ವಿರೋಧ ಕಟ್ಟಿಕೊಂಡರು. ಆನಂತರ ಚುನಾವಣೆಯಲ್ಲಿ ಗೆದ್ದು ಸಚಿವರಾದರು. ನಂತರ ಕುರುಬ ಸಮುದಾಯದ ಸ್ವಾಮೀಜಿ ಬಗ್ಗೆ ಅವಹೇಳಕಾರಿಯಾಗಿ ಮಾತನಾಡಿ ಆ ಸಮುದಾಯದ ಕೋಪಕ್ಕೂ ಗುರಿ ಆದರು. ಇದೀಗ ಕೋಲಾರದಲ್ಲಿ ಕೆರೆ ಒತ್ತುವರಿಯಾಗಿರುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಮಹಿಳೆಯೊಬ್ಬರು ಮನವಿ ಮಾಡಿದರು. ಆ ಮಹಿಳೆ ಸ್ವಂತಕ್ಕಾಗಿ ಏನನ್ನೂ ಕೇಳಲಿಲ್ಲ. ಆದರೂ ಕಾನೂನು ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಆ ಮಹಿಳೆ ರಾಸ್ಕಲ್ ಬಾಯಿಮುಚ್ಚು ಎಂದು ಹೇಳಿ ವಿವಾದವನ್ನು ಬೆನ್ನಮೇಲೆ ಎಳೆದುಕೊಂಡಿದ್ದಾರೆ.

ಕೊರೊನ ಕಾಲದಲ್ಲಿ ಜನರ ಸಮಸ್ಯೆಗಳೇನು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಾದ ಸಚಿವರು ಅಧಿಕಾರ ಅಮಲು ಏರಿಸಿಕೊಂಡು ಸಮಸ್ಯೆ ಹೇಳಿಕೊಳ್ಳುವ ಮಹಿಳೆಯ ಮೇಲೆಯೇ ತಿರುಗಿ ಬೀಳುವುದು ಎಷ್ಟು ಸರಿ ಎಂದು ಮಹಿಳಾ ಹೋರಾಟಗಾರರು ಪ್ರಶ್ನಿಸಿದ್ದಾರೆ. ಪದೇ ಪದೇ ವಿವಾದಕ್ಕೆ ಗುರಿಯಾಗುತ್ತಿರುವ ಮಾಧುಸ್ವಾಮಿ ಅವರಿಗೆ ಖಾತೆಯನ್ನು ನಿಭಾಯಿಸುವುದು ಕಷ್ಟವಾಗಿದೆಯೇ? ಆ ಸೇಡನ್ನು ಜನರ ಮೇಲೆ ತೀರಿಸಿಕೊಳ್ಳುತ್ತಿದ್ದಾರೆಯೇ ಎಂಬ ಪ್ರಶ್ನೆಗಳು ಉದ್ಭವಿಸಿವೆ.


ಓದಿ: ಸಚಿವ ಮಾಧುಸ್ವಾಮಿ ವರ್ತನೆ ತಪ್ಪು, ಸಹಿಸಲು ಸಾಧ್ಯವಿಲ್ಲ: ಸಿಎಂ ಯಡಿಯೂರಪ್ಪ


(ಲೇಖಕರು ಹಿರಿಯ ಪತ್ರಕರ್ತರು. ಅಭಿಪ್ರಾಯಗಳು ವೈಯಕ್ತಿಕವಾದವು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...