Homeಕರ್ನಾಟಕಗಣಿ ಲೂಟಿಯಾದಾಗ ಮೌನವಿದ್ದ ಮಾಧುಸ್ವಾಮಿ, ಸಾಮಾನ್ಯರ ವಿರುದ್ಧ ತಿರುಗಿಬೀಳುವುದೇಕೆ?

ಗಣಿ ಲೂಟಿಯಾದಾಗ ಮೌನವಿದ್ದ ಮಾಧುಸ್ವಾಮಿ, ಸಾಮಾನ್ಯರ ವಿರುದ್ಧ ತಿರುಗಿಬೀಳುವುದೇಕೆ?

ಗಣಿ ಲೂಟಿಯಾದಾಗ ಮೌನವಿದ್ದ ಮಾಧುಸ್ವಾಮಿ ಜನರನ್ನು ಪ್ರೀತಿಯಿಂದ ಮಾತನಾಡಿಸಿದ್ದು ನೋಡೇ ಇಲ್ಲ.

- Advertisement -
- Advertisement -

ಜೆ.ಸಿ. ಮಾಧುಸ್ವಾಮಿ ಅವರದ್ದು ಅಹಂ ಸ್ವಭಾವ. ಸೊಕ್ಕಿನ ಮಾತುಗಳಿಂದಲೇ ಜನರ ವಿರೋಧ ಕಟ್ಟಿಕೊಂಡು ಬಂದವರು. ಜನರನ್ನು ಪ್ರೀತಿಯಿಂದ ಕಂಡದ್ದೇ ಇಲ್ಲ.. ದರ್ಪದ ಮಾತುಗಳಿಂದಲೇ ಜನಜನಿತ. ಇಂಗ್ಲೀಷ್ ಮತ್ತು ಕನ್ನಡ ಸಾಹಿತ್ಯವನ್ನು ಸಾಕಷ್ಟು ಓದಿಕೊಂಡಿರುವ ಅವರು ಸೌಜನ್ಯದಿಂದ ವರ್ತಿಸುವುದಿಲ್ಲ ಎಂಬುದು ಅವರನ್ನು ಹತ್ತಿರದಿಂದ ಬಲ್ಲವರು ಹೇಳುವ ಮಾತುಗಳು.

1989ರಲ್ಲಿ ಜನತಾದಳದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಮಾಧುಸ್ವಾಮಿ ವಿಧಾನಸಭೆಯಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ಸಾಕಷ್ಟು ಚರ್ಚೆ ಮಾಡಿದರು. ಪ್ರಸಿದ್ದಿಯೂ ಆದರು. ಎರಡನೇ ಬಾರಿಗೆ 2004ರಲ್ಲಿ ಜೆಡಿಯುನಿಂದ ಶಾಸಕರಾದರು. ಮೂರನೇ ಬಾರಿಗೆ ಬಿಜೆಪಿಯಿಂದ ಶಾಸಕರಾಗಿ ಗೆದ್ದು ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮೊದಲ ಬಾರಿಗೆ ಆಯ್ಕೆಯಾದಾಗಿನ ಹುಮ್ಮಸ್ಸು ಈಗ ಇಲ್ಲ. ಆದರೆ ಅವರಲ್ಲಿನ ದರ್ಪ ಮಾತ್ರ ಹೋಗಿಲ್ಲದಿರುವುದು ಕಾಣುತ್ತದೆ.

2004ರಲ್ಲಿ ತುಮಕೂರು ಜಿಲ್ಲೆಯಲ್ಲಿ ಗಣಿಗಾರಿಕೆ ವಿರುದ್ದದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಗಣಿಗಾರಿಕೆ ನಿಲ್ಲಿಸಬೇಕೆಂದು ಪರಿಸರ ಹೋರಾಟಗಾರರು ಚಳವಳಿ ನಡೆಸಿದ್ದರು. ಸಾಮಾಜಿಕ ಕಾರ್ಯಕರ್ತರು ಪರಿಸರವಾದಿಗಳು ಚಿಕ್ಕನಾಯಕನಹಳ್ಳಿಯಲ್ಲೇ ಪೆಂಡಾಲ್ ಹಾಕಿ ಅಂದಿನ ಸ್ಥಳೀಯ ಶಾಸಕರಾಗಿದ್ದ ಮಾಧುಸ್ವಾಮಿ ಅವರ ಗಮನ ಸೆಳೆಯುವ ಉದ್ದೇಶದಿಂದ ನಿರಂತರವಾಗಿ ಒಂದು ತಿಂಗಳು ಪ್ರತಿಭಟನಾ ಧರಣಿ ನಡೆಸಿದರು. ಗಣಿಗಾರಿಕೆ ನಿಲ್ಲಿಸಬೇಕು. ಪರಿಸರ ಉಳಿಸಬೇಕು. ಶಾಸಕರು ಇತ್ತ ಗಮನಹರಿಸಬೇಕು ಎಂದು ಹಗರಲಿರುಳು ಹೋರಾಟ ಮಾಡಿದರೂ ಒಂದೇ ಒಂದು ದಿನ ಹೋರಾಟದ ಸ್ಥಳಕ್ಕೆ ಮಾಧುಸ್ವಾಮಿ ಬರೆಲೇ ಇಲ್ಲ.

ಸ್ಥಳೀಯ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲು ಯತ್ನಿಸಿದ ರೈತ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ ಸಚಿವ ಮಾಧುಸ್ವಾಮಿ‌ ವಿಡಿಯೋ ವೈರಲ್ ಆಗಿದ್ದು ನಾಗರೀಕರು ಛೀಮಾರಿ ಹಾಕುತ್ತಿದ್ದಾರೆ#NaanuGauri #madhuswamy #kolara #muniraju

Posted by Naanu Gauri on Wednesday, May 20, 2020

ಮಹಿಳೆಯೊಂದಿಗೆ ದರ್ಪ ತೋರಿಸುತ್ತಿರುವ ಸಚಿವ ಮಾಧುಸ್ವಾಮಿ

ಚಿಕ್ಕನಾಯಕನಹಳ್ಳಿ ಹೊನ್ನೇಬಾಗಿ ಪ್ರದೇಶ ವ್ಯಾಪ್ತಿಯಲ್ಲಿ ವ್ಯಾಪಕ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೂ ಸದನದಲ್ಲಿ ಈ ವಿಷಯವನ್ನು ಪ್ರಸ್ತಾಪ ಮಾಡಲೇ ಇಲ್ಲ. ಗಣಿಗಾರಿಕೆಯಿಂದ ಪರಿಸರಕ್ಕೆ ಹಾನಿಯಾಗುತ್ತಿದ್ದರೂ ಮಾಧುಸ್ವಾಮಿ ಮೌನವಹಿಸಿಕೊಂಡೇ ಬಂದಿದ್ದಾರೆ. ಸಾಮಾಜಿಕ ಕಾರ್ಯಕರ್ತ ಎಸ್.ಆರ್. ಹಿರೇಮಠ್ ನೇತೃತ್ವದಲ್ಲಿ ಮುನ್ನಡೆಯುತ್ತದ್ದ ಗಣಿ ವಿರುದ್ದದ ಚಳವಳಿಯಲ್ಲಿ ಶಿವನಂಜಯ್ಯ ಬಾಳೆಕಾಯಿ, ಸಾಹಿತಿ ಎಸ್.ಜಿ. ಸಿದ್ದರಾಮಯ್ಯ ಬಂದು ಒತ್ತಾಯ ಹೇರಿದರು. ಪರಿಸರವಾದಿ ಯಲ್ಲಪ್ಪರೆಡ್ಡಿ ಬಂದು ಅಕ್ರಮ ಗಣಿಗಾರಿಕೆ ವಿರುದ್ದ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮೇಲೆ ಒತ್ತಡ ತರಬೇಕೆಂದು ಮಾಧುಸ್ವಾಮಿ ಅವರಿಗೆ ಮನವಿ ಮಾಡಿದರು. ಮಾಧುಸ್ವಾಮಿ ಇದ್ಯಾವುದಕ್ಕೂ ಕ್ಯಾರೇ ಅನ್ನಲಿಲ್ಲ. ತುಟಿಬಿಚ್ಚಿ ಮಾತನಾಡಲೇ ಇಲ್ಲ.

ಕಳೆದ ವಿಧಾನಸಭಾ ಚುನಾವಣೆಯ ಪ್ರಚಾರದ ಸಂದರ್ಭ ಗೊಲ್ಲ ಸಮುದಾಯದ ಯುವಕನಿಗೆ ಕಪಾಳಮೋಕ್ಷೆ ಮಾಡಿ ಜನರ ವಿರೋಧ ಕಟ್ಟಿಕೊಂಡರು. ಆನಂತರ ಚುನಾವಣೆಯಲ್ಲಿ ಗೆದ್ದು ಸಚಿವರಾದರು. ನಂತರ ಕುರುಬ ಸಮುದಾಯದ ಸ್ವಾಮೀಜಿ ಬಗ್ಗೆ ಅವಹೇಳಕಾರಿಯಾಗಿ ಮಾತನಾಡಿ ಆ ಸಮುದಾಯದ ಕೋಪಕ್ಕೂ ಗುರಿ ಆದರು. ಇದೀಗ ಕೋಲಾರದಲ್ಲಿ ಕೆರೆ ಒತ್ತುವರಿಯಾಗಿರುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಮಹಿಳೆಯೊಬ್ಬರು ಮನವಿ ಮಾಡಿದರು. ಆ ಮಹಿಳೆ ಸ್ವಂತಕ್ಕಾಗಿ ಏನನ್ನೂ ಕೇಳಲಿಲ್ಲ. ಆದರೂ ಕಾನೂನು ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಆ ಮಹಿಳೆ ರಾಸ್ಕಲ್ ಬಾಯಿಮುಚ್ಚು ಎಂದು ಹೇಳಿ ವಿವಾದವನ್ನು ಬೆನ್ನಮೇಲೆ ಎಳೆದುಕೊಂಡಿದ್ದಾರೆ.

ಕೊರೊನ ಕಾಲದಲ್ಲಿ ಜನರ ಸಮಸ್ಯೆಗಳೇನು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಾದ ಸಚಿವರು ಅಧಿಕಾರ ಅಮಲು ಏರಿಸಿಕೊಂಡು ಸಮಸ್ಯೆ ಹೇಳಿಕೊಳ್ಳುವ ಮಹಿಳೆಯ ಮೇಲೆಯೇ ತಿರುಗಿ ಬೀಳುವುದು ಎಷ್ಟು ಸರಿ ಎಂದು ಮಹಿಳಾ ಹೋರಾಟಗಾರರು ಪ್ರಶ್ನಿಸಿದ್ದಾರೆ. ಪದೇ ಪದೇ ವಿವಾದಕ್ಕೆ ಗುರಿಯಾಗುತ್ತಿರುವ ಮಾಧುಸ್ವಾಮಿ ಅವರಿಗೆ ಖಾತೆಯನ್ನು ನಿಭಾಯಿಸುವುದು ಕಷ್ಟವಾಗಿದೆಯೇ? ಆ ಸೇಡನ್ನು ಜನರ ಮೇಲೆ ತೀರಿಸಿಕೊಳ್ಳುತ್ತಿದ್ದಾರೆಯೇ ಎಂಬ ಪ್ರಶ್ನೆಗಳು ಉದ್ಭವಿಸಿವೆ.


ಓದಿ: ಸಚಿವ ಮಾಧುಸ್ವಾಮಿ ವರ್ತನೆ ತಪ್ಪು, ಸಹಿಸಲು ಸಾಧ್ಯವಿಲ್ಲ: ಸಿಎಂ ಯಡಿಯೂರಪ್ಪ


(ಲೇಖಕರು ಹಿರಿಯ ಪತ್ರಕರ್ತರು. ಅಭಿಪ್ರಾಯಗಳು ವೈಯಕ್ತಿಕವಾದವು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...