Homeಕರ್ನಾಟಕಗಣಿ ಲೂಟಿಯಾದಾಗ ಮೌನವಿದ್ದ ಮಾಧುಸ್ವಾಮಿ, ಸಾಮಾನ್ಯರ ವಿರುದ್ಧ ತಿರುಗಿಬೀಳುವುದೇಕೆ?

ಗಣಿ ಲೂಟಿಯಾದಾಗ ಮೌನವಿದ್ದ ಮಾಧುಸ್ವಾಮಿ, ಸಾಮಾನ್ಯರ ವಿರುದ್ಧ ತಿರುಗಿಬೀಳುವುದೇಕೆ?

ಗಣಿ ಲೂಟಿಯಾದಾಗ ಮೌನವಿದ್ದ ಮಾಧುಸ್ವಾಮಿ ಜನರನ್ನು ಪ್ರೀತಿಯಿಂದ ಮಾತನಾಡಿಸಿದ್ದು ನೋಡೇ ಇಲ್ಲ.

- Advertisement -
- Advertisement -

ಜೆ.ಸಿ. ಮಾಧುಸ್ವಾಮಿ ಅವರದ್ದು ಅಹಂ ಸ್ವಭಾವ. ಸೊಕ್ಕಿನ ಮಾತುಗಳಿಂದಲೇ ಜನರ ವಿರೋಧ ಕಟ್ಟಿಕೊಂಡು ಬಂದವರು. ಜನರನ್ನು ಪ್ರೀತಿಯಿಂದ ಕಂಡದ್ದೇ ಇಲ್ಲ.. ದರ್ಪದ ಮಾತುಗಳಿಂದಲೇ ಜನಜನಿತ. ಇಂಗ್ಲೀಷ್ ಮತ್ತು ಕನ್ನಡ ಸಾಹಿತ್ಯವನ್ನು ಸಾಕಷ್ಟು ಓದಿಕೊಂಡಿರುವ ಅವರು ಸೌಜನ್ಯದಿಂದ ವರ್ತಿಸುವುದಿಲ್ಲ ಎಂಬುದು ಅವರನ್ನು ಹತ್ತಿರದಿಂದ ಬಲ್ಲವರು ಹೇಳುವ ಮಾತುಗಳು.

1989ರಲ್ಲಿ ಜನತಾದಳದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಮಾಧುಸ್ವಾಮಿ ವಿಧಾನಸಭೆಯಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ಸಾಕಷ್ಟು ಚರ್ಚೆ ಮಾಡಿದರು. ಪ್ರಸಿದ್ದಿಯೂ ಆದರು. ಎರಡನೇ ಬಾರಿಗೆ 2004ರಲ್ಲಿ ಜೆಡಿಯುನಿಂದ ಶಾಸಕರಾದರು. ಮೂರನೇ ಬಾರಿಗೆ ಬಿಜೆಪಿಯಿಂದ ಶಾಸಕರಾಗಿ ಗೆದ್ದು ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮೊದಲ ಬಾರಿಗೆ ಆಯ್ಕೆಯಾದಾಗಿನ ಹುಮ್ಮಸ್ಸು ಈಗ ಇಲ್ಲ. ಆದರೆ ಅವರಲ್ಲಿನ ದರ್ಪ ಮಾತ್ರ ಹೋಗಿಲ್ಲದಿರುವುದು ಕಾಣುತ್ತದೆ.

2004ರಲ್ಲಿ ತುಮಕೂರು ಜಿಲ್ಲೆಯಲ್ಲಿ ಗಣಿಗಾರಿಕೆ ವಿರುದ್ದದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಗಣಿಗಾರಿಕೆ ನಿಲ್ಲಿಸಬೇಕೆಂದು ಪರಿಸರ ಹೋರಾಟಗಾರರು ಚಳವಳಿ ನಡೆಸಿದ್ದರು. ಸಾಮಾಜಿಕ ಕಾರ್ಯಕರ್ತರು ಪರಿಸರವಾದಿಗಳು ಚಿಕ್ಕನಾಯಕನಹಳ್ಳಿಯಲ್ಲೇ ಪೆಂಡಾಲ್ ಹಾಕಿ ಅಂದಿನ ಸ್ಥಳೀಯ ಶಾಸಕರಾಗಿದ್ದ ಮಾಧುಸ್ವಾಮಿ ಅವರ ಗಮನ ಸೆಳೆಯುವ ಉದ್ದೇಶದಿಂದ ನಿರಂತರವಾಗಿ ಒಂದು ತಿಂಗಳು ಪ್ರತಿಭಟನಾ ಧರಣಿ ನಡೆಸಿದರು. ಗಣಿಗಾರಿಕೆ ನಿಲ್ಲಿಸಬೇಕು. ಪರಿಸರ ಉಳಿಸಬೇಕು. ಶಾಸಕರು ಇತ್ತ ಗಮನಹರಿಸಬೇಕು ಎಂದು ಹಗರಲಿರುಳು ಹೋರಾಟ ಮಾಡಿದರೂ ಒಂದೇ ಒಂದು ದಿನ ಹೋರಾಟದ ಸ್ಥಳಕ್ಕೆ ಮಾಧುಸ್ವಾಮಿ ಬರೆಲೇ ಇಲ್ಲ.

ಸ್ಥಳೀಯ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲು ಯತ್ನಿಸಿದ ರೈತ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ ಸಚಿವ ಮಾಧುಸ್ವಾಮಿ‌ ವಿಡಿಯೋ ವೈರಲ್ ಆಗಿದ್ದು ನಾಗರೀಕರು ಛೀಮಾರಿ ಹಾಕುತ್ತಿದ್ದಾರೆ#NaanuGauri #madhuswamy #kolara #muniraju

Posted by Naanu Gauri on Wednesday, May 20, 2020

ಮಹಿಳೆಯೊಂದಿಗೆ ದರ್ಪ ತೋರಿಸುತ್ತಿರುವ ಸಚಿವ ಮಾಧುಸ್ವಾಮಿ

ಚಿಕ್ಕನಾಯಕನಹಳ್ಳಿ ಹೊನ್ನೇಬಾಗಿ ಪ್ರದೇಶ ವ್ಯಾಪ್ತಿಯಲ್ಲಿ ವ್ಯಾಪಕ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೂ ಸದನದಲ್ಲಿ ಈ ವಿಷಯವನ್ನು ಪ್ರಸ್ತಾಪ ಮಾಡಲೇ ಇಲ್ಲ. ಗಣಿಗಾರಿಕೆಯಿಂದ ಪರಿಸರಕ್ಕೆ ಹಾನಿಯಾಗುತ್ತಿದ್ದರೂ ಮಾಧುಸ್ವಾಮಿ ಮೌನವಹಿಸಿಕೊಂಡೇ ಬಂದಿದ್ದಾರೆ. ಸಾಮಾಜಿಕ ಕಾರ್ಯಕರ್ತ ಎಸ್.ಆರ್. ಹಿರೇಮಠ್ ನೇತೃತ್ವದಲ್ಲಿ ಮುನ್ನಡೆಯುತ್ತದ್ದ ಗಣಿ ವಿರುದ್ದದ ಚಳವಳಿಯಲ್ಲಿ ಶಿವನಂಜಯ್ಯ ಬಾಳೆಕಾಯಿ, ಸಾಹಿತಿ ಎಸ್.ಜಿ. ಸಿದ್ದರಾಮಯ್ಯ ಬಂದು ಒತ್ತಾಯ ಹೇರಿದರು. ಪರಿಸರವಾದಿ ಯಲ್ಲಪ್ಪರೆಡ್ಡಿ ಬಂದು ಅಕ್ರಮ ಗಣಿಗಾರಿಕೆ ವಿರುದ್ದ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮೇಲೆ ಒತ್ತಡ ತರಬೇಕೆಂದು ಮಾಧುಸ್ವಾಮಿ ಅವರಿಗೆ ಮನವಿ ಮಾಡಿದರು. ಮಾಧುಸ್ವಾಮಿ ಇದ್ಯಾವುದಕ್ಕೂ ಕ್ಯಾರೇ ಅನ್ನಲಿಲ್ಲ. ತುಟಿಬಿಚ್ಚಿ ಮಾತನಾಡಲೇ ಇಲ್ಲ.

ಕಳೆದ ವಿಧಾನಸಭಾ ಚುನಾವಣೆಯ ಪ್ರಚಾರದ ಸಂದರ್ಭ ಗೊಲ್ಲ ಸಮುದಾಯದ ಯುವಕನಿಗೆ ಕಪಾಳಮೋಕ್ಷೆ ಮಾಡಿ ಜನರ ವಿರೋಧ ಕಟ್ಟಿಕೊಂಡರು. ಆನಂತರ ಚುನಾವಣೆಯಲ್ಲಿ ಗೆದ್ದು ಸಚಿವರಾದರು. ನಂತರ ಕುರುಬ ಸಮುದಾಯದ ಸ್ವಾಮೀಜಿ ಬಗ್ಗೆ ಅವಹೇಳಕಾರಿಯಾಗಿ ಮಾತನಾಡಿ ಆ ಸಮುದಾಯದ ಕೋಪಕ್ಕೂ ಗುರಿ ಆದರು. ಇದೀಗ ಕೋಲಾರದಲ್ಲಿ ಕೆರೆ ಒತ್ತುವರಿಯಾಗಿರುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಮಹಿಳೆಯೊಬ್ಬರು ಮನವಿ ಮಾಡಿದರು. ಆ ಮಹಿಳೆ ಸ್ವಂತಕ್ಕಾಗಿ ಏನನ್ನೂ ಕೇಳಲಿಲ್ಲ. ಆದರೂ ಕಾನೂನು ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಆ ಮಹಿಳೆ ರಾಸ್ಕಲ್ ಬಾಯಿಮುಚ್ಚು ಎಂದು ಹೇಳಿ ವಿವಾದವನ್ನು ಬೆನ್ನಮೇಲೆ ಎಳೆದುಕೊಂಡಿದ್ದಾರೆ.

ಕೊರೊನ ಕಾಲದಲ್ಲಿ ಜನರ ಸಮಸ್ಯೆಗಳೇನು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಾದ ಸಚಿವರು ಅಧಿಕಾರ ಅಮಲು ಏರಿಸಿಕೊಂಡು ಸಮಸ್ಯೆ ಹೇಳಿಕೊಳ್ಳುವ ಮಹಿಳೆಯ ಮೇಲೆಯೇ ತಿರುಗಿ ಬೀಳುವುದು ಎಷ್ಟು ಸರಿ ಎಂದು ಮಹಿಳಾ ಹೋರಾಟಗಾರರು ಪ್ರಶ್ನಿಸಿದ್ದಾರೆ. ಪದೇ ಪದೇ ವಿವಾದಕ್ಕೆ ಗುರಿಯಾಗುತ್ತಿರುವ ಮಾಧುಸ್ವಾಮಿ ಅವರಿಗೆ ಖಾತೆಯನ್ನು ನಿಭಾಯಿಸುವುದು ಕಷ್ಟವಾಗಿದೆಯೇ? ಆ ಸೇಡನ್ನು ಜನರ ಮೇಲೆ ತೀರಿಸಿಕೊಳ್ಳುತ್ತಿದ್ದಾರೆಯೇ ಎಂಬ ಪ್ರಶ್ನೆಗಳು ಉದ್ಭವಿಸಿವೆ.


ಓದಿ: ಸಚಿವ ಮಾಧುಸ್ವಾಮಿ ವರ್ತನೆ ತಪ್ಪು, ಸಹಿಸಲು ಸಾಧ್ಯವಿಲ್ಲ: ಸಿಎಂ ಯಡಿಯೂರಪ್ಪ


(ಲೇಖಕರು ಹಿರಿಯ ಪತ್ರಕರ್ತರು. ಅಭಿಪ್ರಾಯಗಳು ವೈಯಕ್ತಿಕವಾದವು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...