Homeಕರ್ನಾಟಕಗಣಿ ಲೂಟಿಯಾದಾಗ ಮೌನವಿದ್ದ ಮಾಧುಸ್ವಾಮಿ, ಸಾಮಾನ್ಯರ ವಿರುದ್ಧ ತಿರುಗಿಬೀಳುವುದೇಕೆ?

ಗಣಿ ಲೂಟಿಯಾದಾಗ ಮೌನವಿದ್ದ ಮಾಧುಸ್ವಾಮಿ, ಸಾಮಾನ್ಯರ ವಿರುದ್ಧ ತಿರುಗಿಬೀಳುವುದೇಕೆ?

ಗಣಿ ಲೂಟಿಯಾದಾಗ ಮೌನವಿದ್ದ ಮಾಧುಸ್ವಾಮಿ ಜನರನ್ನು ಪ್ರೀತಿಯಿಂದ ಮಾತನಾಡಿಸಿದ್ದು ನೋಡೇ ಇಲ್ಲ.

- Advertisement -
- Advertisement -

ಜೆ.ಸಿ. ಮಾಧುಸ್ವಾಮಿ ಅವರದ್ದು ಅಹಂ ಸ್ವಭಾವ. ಸೊಕ್ಕಿನ ಮಾತುಗಳಿಂದಲೇ ಜನರ ವಿರೋಧ ಕಟ್ಟಿಕೊಂಡು ಬಂದವರು. ಜನರನ್ನು ಪ್ರೀತಿಯಿಂದ ಕಂಡದ್ದೇ ಇಲ್ಲ.. ದರ್ಪದ ಮಾತುಗಳಿಂದಲೇ ಜನಜನಿತ. ಇಂಗ್ಲೀಷ್ ಮತ್ತು ಕನ್ನಡ ಸಾಹಿತ್ಯವನ್ನು ಸಾಕಷ್ಟು ಓದಿಕೊಂಡಿರುವ ಅವರು ಸೌಜನ್ಯದಿಂದ ವರ್ತಿಸುವುದಿಲ್ಲ ಎಂಬುದು ಅವರನ್ನು ಹತ್ತಿರದಿಂದ ಬಲ್ಲವರು ಹೇಳುವ ಮಾತುಗಳು.

1989ರಲ್ಲಿ ಜನತಾದಳದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಮಾಧುಸ್ವಾಮಿ ವಿಧಾನಸಭೆಯಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ಸಾಕಷ್ಟು ಚರ್ಚೆ ಮಾಡಿದರು. ಪ್ರಸಿದ್ದಿಯೂ ಆದರು. ಎರಡನೇ ಬಾರಿಗೆ 2004ರಲ್ಲಿ ಜೆಡಿಯುನಿಂದ ಶಾಸಕರಾದರು. ಮೂರನೇ ಬಾರಿಗೆ ಬಿಜೆಪಿಯಿಂದ ಶಾಸಕರಾಗಿ ಗೆದ್ದು ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮೊದಲ ಬಾರಿಗೆ ಆಯ್ಕೆಯಾದಾಗಿನ ಹುಮ್ಮಸ್ಸು ಈಗ ಇಲ್ಲ. ಆದರೆ ಅವರಲ್ಲಿನ ದರ್ಪ ಮಾತ್ರ ಹೋಗಿಲ್ಲದಿರುವುದು ಕಾಣುತ್ತದೆ.

2004ರಲ್ಲಿ ತುಮಕೂರು ಜಿಲ್ಲೆಯಲ್ಲಿ ಗಣಿಗಾರಿಕೆ ವಿರುದ್ದದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಗಣಿಗಾರಿಕೆ ನಿಲ್ಲಿಸಬೇಕೆಂದು ಪರಿಸರ ಹೋರಾಟಗಾರರು ಚಳವಳಿ ನಡೆಸಿದ್ದರು. ಸಾಮಾಜಿಕ ಕಾರ್ಯಕರ್ತರು ಪರಿಸರವಾದಿಗಳು ಚಿಕ್ಕನಾಯಕನಹಳ್ಳಿಯಲ್ಲೇ ಪೆಂಡಾಲ್ ಹಾಕಿ ಅಂದಿನ ಸ್ಥಳೀಯ ಶಾಸಕರಾಗಿದ್ದ ಮಾಧುಸ್ವಾಮಿ ಅವರ ಗಮನ ಸೆಳೆಯುವ ಉದ್ದೇಶದಿಂದ ನಿರಂತರವಾಗಿ ಒಂದು ತಿಂಗಳು ಪ್ರತಿಭಟನಾ ಧರಣಿ ನಡೆಸಿದರು. ಗಣಿಗಾರಿಕೆ ನಿಲ್ಲಿಸಬೇಕು. ಪರಿಸರ ಉಳಿಸಬೇಕು. ಶಾಸಕರು ಇತ್ತ ಗಮನಹರಿಸಬೇಕು ಎಂದು ಹಗರಲಿರುಳು ಹೋರಾಟ ಮಾಡಿದರೂ ಒಂದೇ ಒಂದು ದಿನ ಹೋರಾಟದ ಸ್ಥಳಕ್ಕೆ ಮಾಧುಸ್ವಾಮಿ ಬರೆಲೇ ಇಲ್ಲ.

ಸ್ಥಳೀಯ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲು ಯತ್ನಿಸಿದ ರೈತ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ ಸಚಿವ ಮಾಧುಸ್ವಾಮಿ‌ ವಿಡಿಯೋ ವೈರಲ್ ಆಗಿದ್ದು ನಾಗರೀಕರು ಛೀಮಾರಿ ಹಾಕುತ್ತಿದ್ದಾರೆ#NaanuGauri #madhuswamy #kolara #muniraju

Posted by Naanu Gauri on Wednesday, May 20, 2020

ಮಹಿಳೆಯೊಂದಿಗೆ ದರ್ಪ ತೋರಿಸುತ್ತಿರುವ ಸಚಿವ ಮಾಧುಸ್ವಾಮಿ

ಚಿಕ್ಕನಾಯಕನಹಳ್ಳಿ ಹೊನ್ನೇಬಾಗಿ ಪ್ರದೇಶ ವ್ಯಾಪ್ತಿಯಲ್ಲಿ ವ್ಯಾಪಕ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೂ ಸದನದಲ್ಲಿ ಈ ವಿಷಯವನ್ನು ಪ್ರಸ್ತಾಪ ಮಾಡಲೇ ಇಲ್ಲ. ಗಣಿಗಾರಿಕೆಯಿಂದ ಪರಿಸರಕ್ಕೆ ಹಾನಿಯಾಗುತ್ತಿದ್ದರೂ ಮಾಧುಸ್ವಾಮಿ ಮೌನವಹಿಸಿಕೊಂಡೇ ಬಂದಿದ್ದಾರೆ. ಸಾಮಾಜಿಕ ಕಾರ್ಯಕರ್ತ ಎಸ್.ಆರ್. ಹಿರೇಮಠ್ ನೇತೃತ್ವದಲ್ಲಿ ಮುನ್ನಡೆಯುತ್ತದ್ದ ಗಣಿ ವಿರುದ್ದದ ಚಳವಳಿಯಲ್ಲಿ ಶಿವನಂಜಯ್ಯ ಬಾಳೆಕಾಯಿ, ಸಾಹಿತಿ ಎಸ್.ಜಿ. ಸಿದ್ದರಾಮಯ್ಯ ಬಂದು ಒತ್ತಾಯ ಹೇರಿದರು. ಪರಿಸರವಾದಿ ಯಲ್ಲಪ್ಪರೆಡ್ಡಿ ಬಂದು ಅಕ್ರಮ ಗಣಿಗಾರಿಕೆ ವಿರುದ್ದ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮೇಲೆ ಒತ್ತಡ ತರಬೇಕೆಂದು ಮಾಧುಸ್ವಾಮಿ ಅವರಿಗೆ ಮನವಿ ಮಾಡಿದರು. ಮಾಧುಸ್ವಾಮಿ ಇದ್ಯಾವುದಕ್ಕೂ ಕ್ಯಾರೇ ಅನ್ನಲಿಲ್ಲ. ತುಟಿಬಿಚ್ಚಿ ಮಾತನಾಡಲೇ ಇಲ್ಲ.

ಕಳೆದ ವಿಧಾನಸಭಾ ಚುನಾವಣೆಯ ಪ್ರಚಾರದ ಸಂದರ್ಭ ಗೊಲ್ಲ ಸಮುದಾಯದ ಯುವಕನಿಗೆ ಕಪಾಳಮೋಕ್ಷೆ ಮಾಡಿ ಜನರ ವಿರೋಧ ಕಟ್ಟಿಕೊಂಡರು. ಆನಂತರ ಚುನಾವಣೆಯಲ್ಲಿ ಗೆದ್ದು ಸಚಿವರಾದರು. ನಂತರ ಕುರುಬ ಸಮುದಾಯದ ಸ್ವಾಮೀಜಿ ಬಗ್ಗೆ ಅವಹೇಳಕಾರಿಯಾಗಿ ಮಾತನಾಡಿ ಆ ಸಮುದಾಯದ ಕೋಪಕ್ಕೂ ಗುರಿ ಆದರು. ಇದೀಗ ಕೋಲಾರದಲ್ಲಿ ಕೆರೆ ಒತ್ತುವರಿಯಾಗಿರುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಮಹಿಳೆಯೊಬ್ಬರು ಮನವಿ ಮಾಡಿದರು. ಆ ಮಹಿಳೆ ಸ್ವಂತಕ್ಕಾಗಿ ಏನನ್ನೂ ಕೇಳಲಿಲ್ಲ. ಆದರೂ ಕಾನೂನು ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಆ ಮಹಿಳೆ ರಾಸ್ಕಲ್ ಬಾಯಿಮುಚ್ಚು ಎಂದು ಹೇಳಿ ವಿವಾದವನ್ನು ಬೆನ್ನಮೇಲೆ ಎಳೆದುಕೊಂಡಿದ್ದಾರೆ.

ಕೊರೊನ ಕಾಲದಲ್ಲಿ ಜನರ ಸಮಸ್ಯೆಗಳೇನು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಾದ ಸಚಿವರು ಅಧಿಕಾರ ಅಮಲು ಏರಿಸಿಕೊಂಡು ಸಮಸ್ಯೆ ಹೇಳಿಕೊಳ್ಳುವ ಮಹಿಳೆಯ ಮೇಲೆಯೇ ತಿರುಗಿ ಬೀಳುವುದು ಎಷ್ಟು ಸರಿ ಎಂದು ಮಹಿಳಾ ಹೋರಾಟಗಾರರು ಪ್ರಶ್ನಿಸಿದ್ದಾರೆ. ಪದೇ ಪದೇ ವಿವಾದಕ್ಕೆ ಗುರಿಯಾಗುತ್ತಿರುವ ಮಾಧುಸ್ವಾಮಿ ಅವರಿಗೆ ಖಾತೆಯನ್ನು ನಿಭಾಯಿಸುವುದು ಕಷ್ಟವಾಗಿದೆಯೇ? ಆ ಸೇಡನ್ನು ಜನರ ಮೇಲೆ ತೀರಿಸಿಕೊಳ್ಳುತ್ತಿದ್ದಾರೆಯೇ ಎಂಬ ಪ್ರಶ್ನೆಗಳು ಉದ್ಭವಿಸಿವೆ.


ಓದಿ: ಸಚಿವ ಮಾಧುಸ್ವಾಮಿ ವರ್ತನೆ ತಪ್ಪು, ಸಹಿಸಲು ಸಾಧ್ಯವಿಲ್ಲ: ಸಿಎಂ ಯಡಿಯೂರಪ್ಪ


(ಲೇಖಕರು ಹಿರಿಯ ಪತ್ರಕರ್ತರು. ಅಭಿಪ್ರಾಯಗಳು ವೈಯಕ್ತಿಕವಾದವು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...