Homeಮುಖಪುಟಒಂದೇ ಕುಟುಂಬದ ಇಬ್ಬಿಬ್ಬರು ನಾಮಪತ್ರ ಸಲ್ಲಿಸುವುದೇಕೆ? ಎ, ಬಿ, ಸಿ ಫಾರಂ ಎಂದರೇನು?

ಒಂದೇ ಕುಟುಂಬದ ಇಬ್ಬಿಬ್ಬರು ನಾಮಪತ್ರ ಸಲ್ಲಿಸುವುದೇಕೆ? ಎ, ಬಿ, ಸಿ ಫಾರಂ ಎಂದರೇನು?

- Advertisement -
- Advertisement -

2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಕಾರಣ ನೂರಾರು ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಕೆಲವೊಂದು ಕ್ಷೇತ್ರಗಳಲ್ಲಿ ಒಂದೇ ಕುಟಂಬದಿಂದ ಇಬ್ಬಿಬ್ಬರು ನಾಮಪತ್ರ ಸಲ್ಲಿಸಿದ್ದಾರೆ. ಕನಕಪುರ ಕ್ಷೇತ್ರಕ್ಕೆ ಡಿ.ಕೆ ಶಿವಕುಮಾರ್ ಮತ್ತು ಅವರ ಸಹೋದರ ಡಿ.ಕೆ ಸುರೇಶ್, ಸರ್ವಜ್ಞ ನಗರದಿಂದ ಕೆ.ಜೆ.ಜಾರ್ಜ್‌ ಮತ್ತು ಅವರ ಪುತ್ರ ರಾಣಾ ಜಾರ್ಜ್‌, ಮೇಲುಕೋಟೆಯಲ್ಲಿ ದರ್ಶನ್ ಪುಟ್ಟಣ್ಣಯ್ಯ ಮತ್ತು ಅವರ ತಾಯಿ ಸುನೀತಾ ಪುಟ್ಟಣ್ಣಯ್ಯನವರು ಸೇರಿದಂತೆ ಒಂದೇ ಕುಟುಂಬದ ಹಲವರು ನಾಮಪತ್ರ ಸಲ್ಲಿಸಿದ್ದಾರೆ.

ಇಲ್ಲಿ ಏಕೆ ಇಬ್ಬಿಬ್ಬರು ನಾಮಪತ್ರ ಸಲ್ಲಿಸುವುದು ಎಂಬ ಪ್ರಶ್ನೆ ಉದ್ಭವವಾಗುತ್ತದೆ. ಉತ್ತರ ಸರಳವಾಗಿದ್ದು, ಕಾರಣಾಂತರಗಳಿಂದ ಒಬ್ಬರ ನಾಮಪತ್ರ ತಿರಸ್ಕೃತಗೊಂಡುಬಿಟ್ಟರೆ ಅವರ ಪರವಾಗಿ ಇನ್ನೊಬ್ಬರು ಅಭ್ಯರ್ಥಿಯಾಗಿ ಕಣದಲ್ಲಿಳಿಯಬಹುದು ಎಂದು ಮುಂದಾಲೋಚನೆಯಿಂದ ಈ ರೀತಿಯಾಗಿ ಒಂದೇ ಕುಟುಂಬದ ಇಬ್ಬಿಬ್ಬರು ನಾಮಪತ್ರ ಸಲ್ಲಿಸುವ ರೂಢಿ ಬೆಳೆದು ಬಂದಿದೆ.

ನಾಮಪತ್ರ ತಿರಸ್ಕೃತಗೊಳ್ಳಲು ಕಾರಣವೇನು?

ಯಾವುದೇ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ಅವರ ಪೌರತ್ವ ದಾಖಲೆ, ವಯಸ್ಸು ಮತ್ತು ಜಾತಿ ಪ್ರಮಾಣ ಪತ್ರ (ಅವರು ಮೀಸಲು ಸ್ಥಾನದಿಂದ ಸ್ಪರ್ಧಿಸಿದ್ದರೆ), ಹಾಗೆಯೇ ಯಾವುದಾದರೂ ಕ್ರಿಮಿನಲ್ ಪ್ರಕರಣಗಳಿದ್ದರೆ ಅವುಗಳ ಅಫಿಡವಿಟ್ ಮತ್ತು ಅಭ್ಯರ್ಥಿಗಳ ಮತ್ತು ಅವರ ಹತ್ತಿರದ ಸಂಬಂಧಿಯ ಆಸ್ತಿ ಮಾಲೀಕತ್ವ ಮತ್ತು ನಗದು, ಚಿನ್ನಾಭರಣಗಳ ದಾಖಲೆಗಳನ್ನು ಸಲ್ಲಿಸಬೇಕು. ಅಲ್ಲದೆ ಪಕ್ಷದ ವತಿಯಿಂದ ಸ್ಪರ್ಧಿಸುವಾಗ ಆ ಪಕ್ಷದ ಬಿ ಫಾರಂನಲ್ಲಿ ಎಲ್ಲಾ ಕಾಲಂಗಳನ್ನು ತುಂಬಬೇಕು. ಜೊತೆಗೆ 10 ಜನ ಸೂಚಕರ ವಿವರ ಮತ್ತು ದಾಖಲೆಗಳನ್ನು ಸಲ್ಲಿಸಬೇಕು. ಇವುಗಳಲ್ಲಿ ಯಾವುದಾದರೂ ಒಂದು ತಪ್ಪಾದರೆ, ಬಿಟ್ಟು ಹೋದರೆ ಅಂತಹ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಳ್ಳುತ್ತದೆ.

ಎ ಫಾರ್ಮ್ ಎಂದರೇನು?

ಇದು ‘ಮಾನ್ಯತೆ ಪಡೆದ ರಾಷ್ಟ್ರೀಯ ಅಥವಾ ರಾಜ್ಯ ರಾಜಕೀಯ ಪಕ್ಷ’ ಅಥವಾ ‘ನೋಂದಾಯಿತ ಆದರೆ ಗುರುತಿಸದ ರಾಜಕೀಯ ಪಕ್ಷ’ದಿಂದ ಕ್ಷೇತ್ರದ ಚುನಾವಣಾಧಿಕಾರಿ ಅಥವಾ ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳಿಗೆ ಪಕ್ಷದ ಪದಾಧಿಕಾರಿಗಳ ಹೆಸರುಗಳನ್ನು ತಿಳಿಸಲು ಸಲ್ಲಿಸುವ ಅರ್ಜಿಯಾಗಿದೆ. ಇಲ್ಲಿ ಇರುವ ಹೆಸರು ಮತ್ತು ಸಹಿಯು ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದಿಂದ ಆಯ್ಕೆಯಾದ ಅಭ್ಯರ್ಥಿಗಳ ಹೆಸರನ್ನು ಸೂಚಿಸಲು ಅಧಿಕಾರ ಪಡೆದಿದ್ದಾರೆ. ಇದು ಸಾಮಾನ್ಯವಾಗಿ ರಾಜಕೀಯ ಪಕ್ಷವೊಂದರ ಅಧ್ಯಕ್ಷ ಅಥವಾ ಕಾರ್ಯದರ್ಶಿಗಳ ಹೆಸರು, ಸಹಿ ಮತ್ತು ಪಕ್ಷದ ಮುದ್ರೆಯನ್ನು ಹೊಂದಿರಬೇಕು. ಟಿಕೆಟ್‌ಗಳನ್ನು ವಿತರಿಸಲು ಪಕ್ಷದಿಂದ ಅಧಿಕಾರ ಪಡೆದ ಪದಾಧಿಕಾರಿಗಳ ಮಾದರಿ ಸಹಿಯನ್ನು ಸಹ ಈ ಫಾರ್ಮ್ ಒಳಗೊಂಡಿದೆ.

ಬಿ ಫಾರಂ ಎಂದರೇನು?

ಈ ಕ್ಷೇತ್ರದಲ್ಲಿ ನಮ್ಮ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸುವ ಅಧಿಕೃತ ಅಭ್ಯರ್ಥಿ ಇವರೇ ಎಂದು ರಾಜಕೀಯ ಪಕ್ಷವೊಂದರ ಅಧ್ಯಕ್ಷರು, ಕಾರ್ಯದರ್ಶಿ ಅಥವಾ ವಿಶೇಷ ಅಧಿಕಾರಿಯು ತನ್ನ ಸಹಿ ಮತ್ತು ಮುದ್ರೆಯೊಂದಿಗೆ ನೀಡಲ್ಪಟ್ಟ ಫಾರಂ ಅನ್ನು ಬಿ ಫಾರಂ ಎನ್ನಲಾಗುತ್ತದೆ. ಇದನ್ನು ತುಂಬಿ ತಮ್ಮ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿಗಳಿಗೆ ಅಭ್ಯರ್ಥಿಗಳು ಸಲ್ಲಿಸುತ್ತಾರೆ. ಇದು ಪಕ್ಷದ ಚಿಹ್ನೆಯನ್ನು ಒಳಗೊಂಡಿದ್ದು ಕೆಲವೊಮ್ಮೆ ಇಬ್ಬರ ಹೆಸರುಗಳನ್ನು ಬರೆದಿರಲಾಗುತ್ತದೆ. ಅದರಲ್ಲಿ ಮೊದಲನೇಯದು ಅಧಿಕೃತ ಅಭ್ಯರ್ಥಿಯಾಗಿದ್ದರೆ ಮತ್ತೊಂದು ಎರಡನೇ ಅಭ್ಯರ್ಥಿಯಾಗಿರುತ್ತದೆ. ಒಂದು ವೇಳೆ ಮೊದಲನೇ ವ್ಯಕ್ತಿಯ ನಾಮಪತ್ರ ತಿರಸ್ಕೃತಗೊಂಡಲ್ಲಿ ಎರಡನೇ ವ್ಯಕ್ತಿ ಸ್ಪರ್ಧಿಸಬಹುದಾಗಿರುತ್ತದೆ.

ಸಿ ಫಾರಂ ಎಂದರೇನು?

ಕೆಲವೊಂದು ಪಕ್ಷಗಳು ಸಿ ಫಾರಂ ಕೊಡುವುದನ್ನು ಅಭ್ಯಾಸ ಮಾಡಿಕೊಂಡಿವೆ. ಅಂದರೆ ಇಬ್ಬರು ವ್ಯಕ್ತಿಗಳಿಗೆ ಬಿ ಫಾರಂ ನೀಡಿ, ಅಂತಿಮ ಕ್ಷಣದಲ್ಲಿ ಅವರಲ್ಲಿ ಒಬ್ಬರಿಗೆ ಮಾತ್ರ ಸಿ ಫಾರಂ ನೀಡಿ ಅವರನ್ನು ಪಕ್ಷದ ಅಧಿಕೃತ ಅಭ್ಯರ್ಥಿಯನ್ನಾಗಿ ಮಾಡಿಕೊಳ್ಳುತ್ತವೆ.

ನಾಮಪತ್ರ ತಿರಸ್ಕೃತಗೊಳ್ಳಲು ಕಾರಣಗಳೇನು?

ಕೆಲವೊಮ್ಮೆ ಅಭ್ಯರ್ಥಿಗಳು ಬಿ ಫಾರಂ ನಲ್ಲಿನ ಎಲ್ಲಾ ಕಾಲಂಗಳನ್ನು ತುಂಬಿರುವುದಿಲ್ಲ. ದಾಖಲೆಗಳನ್ನು ಸಲ್ಲಿಸಿರುವುದಿಲ್ಲ. ಜೊತೆಗೆ 10 ಜನ ಸೂಚಕರು ಅದೇ ವಿಧಾನಸಭಾ ಕ್ಷೇತ್ರದವರಾಗಿರಬೇಕು. ಸುಳ್ಳು ದಾಖಲೆ ಪತ್ರಗಳನ್ನು ಸಲ್ಲಿಸುವಂತಿಲ್ಲ. ಕಡೆಯ ದಿನದ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಸಲ್ಲಿಸಬೇಕು. ಇವುಗಳಲ್ಲಿ ಲೋಪದೋಷವಾದಲ್ಲಿ ಅಂತಹ ನಾಮಪತ್ರವನ್ನು ತಿರಸ್ಕೃತಗೊಳಿಸಲಾಗುತ್ತದೆ.

ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ; 224 ಕ್ಷೇತ್ರಗಳ ಅಭ್ಯರ್ಥಿಗಳ ಮಾಹಿತಿ ಇಲ್ಲಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...