Homeಮುಖಪುಟಒಂದೇ ಕುಟುಂಬದ ಇಬ್ಬಿಬ್ಬರು ನಾಮಪತ್ರ ಸಲ್ಲಿಸುವುದೇಕೆ? ಎ, ಬಿ, ಸಿ ಫಾರಂ ಎಂದರೇನು?

ಒಂದೇ ಕುಟುಂಬದ ಇಬ್ಬಿಬ್ಬರು ನಾಮಪತ್ರ ಸಲ್ಲಿಸುವುದೇಕೆ? ಎ, ಬಿ, ಸಿ ಫಾರಂ ಎಂದರೇನು?

- Advertisement -
- Advertisement -

2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಕಾರಣ ನೂರಾರು ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಕೆಲವೊಂದು ಕ್ಷೇತ್ರಗಳಲ್ಲಿ ಒಂದೇ ಕುಟಂಬದಿಂದ ಇಬ್ಬಿಬ್ಬರು ನಾಮಪತ್ರ ಸಲ್ಲಿಸಿದ್ದಾರೆ. ಕನಕಪುರ ಕ್ಷೇತ್ರಕ್ಕೆ ಡಿ.ಕೆ ಶಿವಕುಮಾರ್ ಮತ್ತು ಅವರ ಸಹೋದರ ಡಿ.ಕೆ ಸುರೇಶ್, ಸರ್ವಜ್ಞ ನಗರದಿಂದ ಕೆ.ಜೆ.ಜಾರ್ಜ್‌ ಮತ್ತು ಅವರ ಪುತ್ರ ರಾಣಾ ಜಾರ್ಜ್‌, ಮೇಲುಕೋಟೆಯಲ್ಲಿ ದರ್ಶನ್ ಪುಟ್ಟಣ್ಣಯ್ಯ ಮತ್ತು ಅವರ ತಾಯಿ ಸುನೀತಾ ಪುಟ್ಟಣ್ಣಯ್ಯನವರು ಸೇರಿದಂತೆ ಒಂದೇ ಕುಟುಂಬದ ಹಲವರು ನಾಮಪತ್ರ ಸಲ್ಲಿಸಿದ್ದಾರೆ.

ಇಲ್ಲಿ ಏಕೆ ಇಬ್ಬಿಬ್ಬರು ನಾಮಪತ್ರ ಸಲ್ಲಿಸುವುದು ಎಂಬ ಪ್ರಶ್ನೆ ಉದ್ಭವವಾಗುತ್ತದೆ. ಉತ್ತರ ಸರಳವಾಗಿದ್ದು, ಕಾರಣಾಂತರಗಳಿಂದ ಒಬ್ಬರ ನಾಮಪತ್ರ ತಿರಸ್ಕೃತಗೊಂಡುಬಿಟ್ಟರೆ ಅವರ ಪರವಾಗಿ ಇನ್ನೊಬ್ಬರು ಅಭ್ಯರ್ಥಿಯಾಗಿ ಕಣದಲ್ಲಿಳಿಯಬಹುದು ಎಂದು ಮುಂದಾಲೋಚನೆಯಿಂದ ಈ ರೀತಿಯಾಗಿ ಒಂದೇ ಕುಟುಂಬದ ಇಬ್ಬಿಬ್ಬರು ನಾಮಪತ್ರ ಸಲ್ಲಿಸುವ ರೂಢಿ ಬೆಳೆದು ಬಂದಿದೆ.

ನಾಮಪತ್ರ ತಿರಸ್ಕೃತಗೊಳ್ಳಲು ಕಾರಣವೇನು?

ಯಾವುದೇ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ಅವರ ಪೌರತ್ವ ದಾಖಲೆ, ವಯಸ್ಸು ಮತ್ತು ಜಾತಿ ಪ್ರಮಾಣ ಪತ್ರ (ಅವರು ಮೀಸಲು ಸ್ಥಾನದಿಂದ ಸ್ಪರ್ಧಿಸಿದ್ದರೆ), ಹಾಗೆಯೇ ಯಾವುದಾದರೂ ಕ್ರಿಮಿನಲ್ ಪ್ರಕರಣಗಳಿದ್ದರೆ ಅವುಗಳ ಅಫಿಡವಿಟ್ ಮತ್ತು ಅಭ್ಯರ್ಥಿಗಳ ಮತ್ತು ಅವರ ಹತ್ತಿರದ ಸಂಬಂಧಿಯ ಆಸ್ತಿ ಮಾಲೀಕತ್ವ ಮತ್ತು ನಗದು, ಚಿನ್ನಾಭರಣಗಳ ದಾಖಲೆಗಳನ್ನು ಸಲ್ಲಿಸಬೇಕು. ಅಲ್ಲದೆ ಪಕ್ಷದ ವತಿಯಿಂದ ಸ್ಪರ್ಧಿಸುವಾಗ ಆ ಪಕ್ಷದ ಬಿ ಫಾರಂನಲ್ಲಿ ಎಲ್ಲಾ ಕಾಲಂಗಳನ್ನು ತುಂಬಬೇಕು. ಜೊತೆಗೆ 10 ಜನ ಸೂಚಕರ ವಿವರ ಮತ್ತು ದಾಖಲೆಗಳನ್ನು ಸಲ್ಲಿಸಬೇಕು. ಇವುಗಳಲ್ಲಿ ಯಾವುದಾದರೂ ಒಂದು ತಪ್ಪಾದರೆ, ಬಿಟ್ಟು ಹೋದರೆ ಅಂತಹ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಳ್ಳುತ್ತದೆ.

ಎ ಫಾರ್ಮ್ ಎಂದರೇನು?

ಇದು ‘ಮಾನ್ಯತೆ ಪಡೆದ ರಾಷ್ಟ್ರೀಯ ಅಥವಾ ರಾಜ್ಯ ರಾಜಕೀಯ ಪಕ್ಷ’ ಅಥವಾ ‘ನೋಂದಾಯಿತ ಆದರೆ ಗುರುತಿಸದ ರಾಜಕೀಯ ಪಕ್ಷ’ದಿಂದ ಕ್ಷೇತ್ರದ ಚುನಾವಣಾಧಿಕಾರಿ ಅಥವಾ ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳಿಗೆ ಪಕ್ಷದ ಪದಾಧಿಕಾರಿಗಳ ಹೆಸರುಗಳನ್ನು ತಿಳಿಸಲು ಸಲ್ಲಿಸುವ ಅರ್ಜಿಯಾಗಿದೆ. ಇಲ್ಲಿ ಇರುವ ಹೆಸರು ಮತ್ತು ಸಹಿಯು ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದಿಂದ ಆಯ್ಕೆಯಾದ ಅಭ್ಯರ್ಥಿಗಳ ಹೆಸರನ್ನು ಸೂಚಿಸಲು ಅಧಿಕಾರ ಪಡೆದಿದ್ದಾರೆ. ಇದು ಸಾಮಾನ್ಯವಾಗಿ ರಾಜಕೀಯ ಪಕ್ಷವೊಂದರ ಅಧ್ಯಕ್ಷ ಅಥವಾ ಕಾರ್ಯದರ್ಶಿಗಳ ಹೆಸರು, ಸಹಿ ಮತ್ತು ಪಕ್ಷದ ಮುದ್ರೆಯನ್ನು ಹೊಂದಿರಬೇಕು. ಟಿಕೆಟ್‌ಗಳನ್ನು ವಿತರಿಸಲು ಪಕ್ಷದಿಂದ ಅಧಿಕಾರ ಪಡೆದ ಪದಾಧಿಕಾರಿಗಳ ಮಾದರಿ ಸಹಿಯನ್ನು ಸಹ ಈ ಫಾರ್ಮ್ ಒಳಗೊಂಡಿದೆ.

ಬಿ ಫಾರಂ ಎಂದರೇನು?

ಈ ಕ್ಷೇತ್ರದಲ್ಲಿ ನಮ್ಮ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸುವ ಅಧಿಕೃತ ಅಭ್ಯರ್ಥಿ ಇವರೇ ಎಂದು ರಾಜಕೀಯ ಪಕ್ಷವೊಂದರ ಅಧ್ಯಕ್ಷರು, ಕಾರ್ಯದರ್ಶಿ ಅಥವಾ ವಿಶೇಷ ಅಧಿಕಾರಿಯು ತನ್ನ ಸಹಿ ಮತ್ತು ಮುದ್ರೆಯೊಂದಿಗೆ ನೀಡಲ್ಪಟ್ಟ ಫಾರಂ ಅನ್ನು ಬಿ ಫಾರಂ ಎನ್ನಲಾಗುತ್ತದೆ. ಇದನ್ನು ತುಂಬಿ ತಮ್ಮ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿಗಳಿಗೆ ಅಭ್ಯರ್ಥಿಗಳು ಸಲ್ಲಿಸುತ್ತಾರೆ. ಇದು ಪಕ್ಷದ ಚಿಹ್ನೆಯನ್ನು ಒಳಗೊಂಡಿದ್ದು ಕೆಲವೊಮ್ಮೆ ಇಬ್ಬರ ಹೆಸರುಗಳನ್ನು ಬರೆದಿರಲಾಗುತ್ತದೆ. ಅದರಲ್ಲಿ ಮೊದಲನೇಯದು ಅಧಿಕೃತ ಅಭ್ಯರ್ಥಿಯಾಗಿದ್ದರೆ ಮತ್ತೊಂದು ಎರಡನೇ ಅಭ್ಯರ್ಥಿಯಾಗಿರುತ್ತದೆ. ಒಂದು ವೇಳೆ ಮೊದಲನೇ ವ್ಯಕ್ತಿಯ ನಾಮಪತ್ರ ತಿರಸ್ಕೃತಗೊಂಡಲ್ಲಿ ಎರಡನೇ ವ್ಯಕ್ತಿ ಸ್ಪರ್ಧಿಸಬಹುದಾಗಿರುತ್ತದೆ.

ಸಿ ಫಾರಂ ಎಂದರೇನು?

ಕೆಲವೊಂದು ಪಕ್ಷಗಳು ಸಿ ಫಾರಂ ಕೊಡುವುದನ್ನು ಅಭ್ಯಾಸ ಮಾಡಿಕೊಂಡಿವೆ. ಅಂದರೆ ಇಬ್ಬರು ವ್ಯಕ್ತಿಗಳಿಗೆ ಬಿ ಫಾರಂ ನೀಡಿ, ಅಂತಿಮ ಕ್ಷಣದಲ್ಲಿ ಅವರಲ್ಲಿ ಒಬ್ಬರಿಗೆ ಮಾತ್ರ ಸಿ ಫಾರಂ ನೀಡಿ ಅವರನ್ನು ಪಕ್ಷದ ಅಧಿಕೃತ ಅಭ್ಯರ್ಥಿಯನ್ನಾಗಿ ಮಾಡಿಕೊಳ್ಳುತ್ತವೆ.

ನಾಮಪತ್ರ ತಿರಸ್ಕೃತಗೊಳ್ಳಲು ಕಾರಣಗಳೇನು?

ಕೆಲವೊಮ್ಮೆ ಅಭ್ಯರ್ಥಿಗಳು ಬಿ ಫಾರಂ ನಲ್ಲಿನ ಎಲ್ಲಾ ಕಾಲಂಗಳನ್ನು ತುಂಬಿರುವುದಿಲ್ಲ. ದಾಖಲೆಗಳನ್ನು ಸಲ್ಲಿಸಿರುವುದಿಲ್ಲ. ಜೊತೆಗೆ 10 ಜನ ಸೂಚಕರು ಅದೇ ವಿಧಾನಸಭಾ ಕ್ಷೇತ್ರದವರಾಗಿರಬೇಕು. ಸುಳ್ಳು ದಾಖಲೆ ಪತ್ರಗಳನ್ನು ಸಲ್ಲಿಸುವಂತಿಲ್ಲ. ಕಡೆಯ ದಿನದ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಸಲ್ಲಿಸಬೇಕು. ಇವುಗಳಲ್ಲಿ ಲೋಪದೋಷವಾದಲ್ಲಿ ಅಂತಹ ನಾಮಪತ್ರವನ್ನು ತಿರಸ್ಕೃತಗೊಳಿಸಲಾಗುತ್ತದೆ.

ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ; 224 ಕ್ಷೇತ್ರಗಳ ಅಭ್ಯರ್ಥಿಗಳ ಮಾಹಿತಿ ಇಲ್ಲಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...