Homeಮುಖಪುಟಒಂದೇ ಕುಟುಂಬದ ಇಬ್ಬಿಬ್ಬರು ನಾಮಪತ್ರ ಸಲ್ಲಿಸುವುದೇಕೆ? ಎ, ಬಿ, ಸಿ ಫಾರಂ ಎಂದರೇನು?

ಒಂದೇ ಕುಟುಂಬದ ಇಬ್ಬಿಬ್ಬರು ನಾಮಪತ್ರ ಸಲ್ಲಿಸುವುದೇಕೆ? ಎ, ಬಿ, ಸಿ ಫಾರಂ ಎಂದರೇನು?

- Advertisement -
- Advertisement -

2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಕಾರಣ ನೂರಾರು ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಕೆಲವೊಂದು ಕ್ಷೇತ್ರಗಳಲ್ಲಿ ಒಂದೇ ಕುಟಂಬದಿಂದ ಇಬ್ಬಿಬ್ಬರು ನಾಮಪತ್ರ ಸಲ್ಲಿಸಿದ್ದಾರೆ. ಕನಕಪುರ ಕ್ಷೇತ್ರಕ್ಕೆ ಡಿ.ಕೆ ಶಿವಕುಮಾರ್ ಮತ್ತು ಅವರ ಸಹೋದರ ಡಿ.ಕೆ ಸುರೇಶ್, ಸರ್ವಜ್ಞ ನಗರದಿಂದ ಕೆ.ಜೆ.ಜಾರ್ಜ್‌ ಮತ್ತು ಅವರ ಪುತ್ರ ರಾಣಾ ಜಾರ್ಜ್‌, ಮೇಲುಕೋಟೆಯಲ್ಲಿ ದರ್ಶನ್ ಪುಟ್ಟಣ್ಣಯ್ಯ ಮತ್ತು ಅವರ ತಾಯಿ ಸುನೀತಾ ಪುಟ್ಟಣ್ಣಯ್ಯನವರು ಸೇರಿದಂತೆ ಒಂದೇ ಕುಟುಂಬದ ಹಲವರು ನಾಮಪತ್ರ ಸಲ್ಲಿಸಿದ್ದಾರೆ.

ಇಲ್ಲಿ ಏಕೆ ಇಬ್ಬಿಬ್ಬರು ನಾಮಪತ್ರ ಸಲ್ಲಿಸುವುದು ಎಂಬ ಪ್ರಶ್ನೆ ಉದ್ಭವವಾಗುತ್ತದೆ. ಉತ್ತರ ಸರಳವಾಗಿದ್ದು, ಕಾರಣಾಂತರಗಳಿಂದ ಒಬ್ಬರ ನಾಮಪತ್ರ ತಿರಸ್ಕೃತಗೊಂಡುಬಿಟ್ಟರೆ ಅವರ ಪರವಾಗಿ ಇನ್ನೊಬ್ಬರು ಅಭ್ಯರ್ಥಿಯಾಗಿ ಕಣದಲ್ಲಿಳಿಯಬಹುದು ಎಂದು ಮುಂದಾಲೋಚನೆಯಿಂದ ಈ ರೀತಿಯಾಗಿ ಒಂದೇ ಕುಟುಂಬದ ಇಬ್ಬಿಬ್ಬರು ನಾಮಪತ್ರ ಸಲ್ಲಿಸುವ ರೂಢಿ ಬೆಳೆದು ಬಂದಿದೆ.

ನಾಮಪತ್ರ ತಿರಸ್ಕೃತಗೊಳ್ಳಲು ಕಾರಣವೇನು?

ಯಾವುದೇ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ಅವರ ಪೌರತ್ವ ದಾಖಲೆ, ವಯಸ್ಸು ಮತ್ತು ಜಾತಿ ಪ್ರಮಾಣ ಪತ್ರ (ಅವರು ಮೀಸಲು ಸ್ಥಾನದಿಂದ ಸ್ಪರ್ಧಿಸಿದ್ದರೆ), ಹಾಗೆಯೇ ಯಾವುದಾದರೂ ಕ್ರಿಮಿನಲ್ ಪ್ರಕರಣಗಳಿದ್ದರೆ ಅವುಗಳ ಅಫಿಡವಿಟ್ ಮತ್ತು ಅಭ್ಯರ್ಥಿಗಳ ಮತ್ತು ಅವರ ಹತ್ತಿರದ ಸಂಬಂಧಿಯ ಆಸ್ತಿ ಮಾಲೀಕತ್ವ ಮತ್ತು ನಗದು, ಚಿನ್ನಾಭರಣಗಳ ದಾಖಲೆಗಳನ್ನು ಸಲ್ಲಿಸಬೇಕು. ಅಲ್ಲದೆ ಪಕ್ಷದ ವತಿಯಿಂದ ಸ್ಪರ್ಧಿಸುವಾಗ ಆ ಪಕ್ಷದ ಬಿ ಫಾರಂನಲ್ಲಿ ಎಲ್ಲಾ ಕಾಲಂಗಳನ್ನು ತುಂಬಬೇಕು. ಜೊತೆಗೆ 10 ಜನ ಸೂಚಕರ ವಿವರ ಮತ್ತು ದಾಖಲೆಗಳನ್ನು ಸಲ್ಲಿಸಬೇಕು. ಇವುಗಳಲ್ಲಿ ಯಾವುದಾದರೂ ಒಂದು ತಪ್ಪಾದರೆ, ಬಿಟ್ಟು ಹೋದರೆ ಅಂತಹ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಳ್ಳುತ್ತದೆ.

ಎ ಫಾರ್ಮ್ ಎಂದರೇನು?

ಇದು ‘ಮಾನ್ಯತೆ ಪಡೆದ ರಾಷ್ಟ್ರೀಯ ಅಥವಾ ರಾಜ್ಯ ರಾಜಕೀಯ ಪಕ್ಷ’ ಅಥವಾ ‘ನೋಂದಾಯಿತ ಆದರೆ ಗುರುತಿಸದ ರಾಜಕೀಯ ಪಕ್ಷ’ದಿಂದ ಕ್ಷೇತ್ರದ ಚುನಾವಣಾಧಿಕಾರಿ ಅಥವಾ ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳಿಗೆ ಪಕ್ಷದ ಪದಾಧಿಕಾರಿಗಳ ಹೆಸರುಗಳನ್ನು ತಿಳಿಸಲು ಸಲ್ಲಿಸುವ ಅರ್ಜಿಯಾಗಿದೆ. ಇಲ್ಲಿ ಇರುವ ಹೆಸರು ಮತ್ತು ಸಹಿಯು ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದಿಂದ ಆಯ್ಕೆಯಾದ ಅಭ್ಯರ್ಥಿಗಳ ಹೆಸರನ್ನು ಸೂಚಿಸಲು ಅಧಿಕಾರ ಪಡೆದಿದ್ದಾರೆ. ಇದು ಸಾಮಾನ್ಯವಾಗಿ ರಾಜಕೀಯ ಪಕ್ಷವೊಂದರ ಅಧ್ಯಕ್ಷ ಅಥವಾ ಕಾರ್ಯದರ್ಶಿಗಳ ಹೆಸರು, ಸಹಿ ಮತ್ತು ಪಕ್ಷದ ಮುದ್ರೆಯನ್ನು ಹೊಂದಿರಬೇಕು. ಟಿಕೆಟ್‌ಗಳನ್ನು ವಿತರಿಸಲು ಪಕ್ಷದಿಂದ ಅಧಿಕಾರ ಪಡೆದ ಪದಾಧಿಕಾರಿಗಳ ಮಾದರಿ ಸಹಿಯನ್ನು ಸಹ ಈ ಫಾರ್ಮ್ ಒಳಗೊಂಡಿದೆ.

ಬಿ ಫಾರಂ ಎಂದರೇನು?

ಈ ಕ್ಷೇತ್ರದಲ್ಲಿ ನಮ್ಮ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸುವ ಅಧಿಕೃತ ಅಭ್ಯರ್ಥಿ ಇವರೇ ಎಂದು ರಾಜಕೀಯ ಪಕ್ಷವೊಂದರ ಅಧ್ಯಕ್ಷರು, ಕಾರ್ಯದರ್ಶಿ ಅಥವಾ ವಿಶೇಷ ಅಧಿಕಾರಿಯು ತನ್ನ ಸಹಿ ಮತ್ತು ಮುದ್ರೆಯೊಂದಿಗೆ ನೀಡಲ್ಪಟ್ಟ ಫಾರಂ ಅನ್ನು ಬಿ ಫಾರಂ ಎನ್ನಲಾಗುತ್ತದೆ. ಇದನ್ನು ತುಂಬಿ ತಮ್ಮ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿಗಳಿಗೆ ಅಭ್ಯರ್ಥಿಗಳು ಸಲ್ಲಿಸುತ್ತಾರೆ. ಇದು ಪಕ್ಷದ ಚಿಹ್ನೆಯನ್ನು ಒಳಗೊಂಡಿದ್ದು ಕೆಲವೊಮ್ಮೆ ಇಬ್ಬರ ಹೆಸರುಗಳನ್ನು ಬರೆದಿರಲಾಗುತ್ತದೆ. ಅದರಲ್ಲಿ ಮೊದಲನೇಯದು ಅಧಿಕೃತ ಅಭ್ಯರ್ಥಿಯಾಗಿದ್ದರೆ ಮತ್ತೊಂದು ಎರಡನೇ ಅಭ್ಯರ್ಥಿಯಾಗಿರುತ್ತದೆ. ಒಂದು ವೇಳೆ ಮೊದಲನೇ ವ್ಯಕ್ತಿಯ ನಾಮಪತ್ರ ತಿರಸ್ಕೃತಗೊಂಡಲ್ಲಿ ಎರಡನೇ ವ್ಯಕ್ತಿ ಸ್ಪರ್ಧಿಸಬಹುದಾಗಿರುತ್ತದೆ.

ಸಿ ಫಾರಂ ಎಂದರೇನು?

ಕೆಲವೊಂದು ಪಕ್ಷಗಳು ಸಿ ಫಾರಂ ಕೊಡುವುದನ್ನು ಅಭ್ಯಾಸ ಮಾಡಿಕೊಂಡಿವೆ. ಅಂದರೆ ಇಬ್ಬರು ವ್ಯಕ್ತಿಗಳಿಗೆ ಬಿ ಫಾರಂ ನೀಡಿ, ಅಂತಿಮ ಕ್ಷಣದಲ್ಲಿ ಅವರಲ್ಲಿ ಒಬ್ಬರಿಗೆ ಮಾತ್ರ ಸಿ ಫಾರಂ ನೀಡಿ ಅವರನ್ನು ಪಕ್ಷದ ಅಧಿಕೃತ ಅಭ್ಯರ್ಥಿಯನ್ನಾಗಿ ಮಾಡಿಕೊಳ್ಳುತ್ತವೆ.

ನಾಮಪತ್ರ ತಿರಸ್ಕೃತಗೊಳ್ಳಲು ಕಾರಣಗಳೇನು?

ಕೆಲವೊಮ್ಮೆ ಅಭ್ಯರ್ಥಿಗಳು ಬಿ ಫಾರಂ ನಲ್ಲಿನ ಎಲ್ಲಾ ಕಾಲಂಗಳನ್ನು ತುಂಬಿರುವುದಿಲ್ಲ. ದಾಖಲೆಗಳನ್ನು ಸಲ್ಲಿಸಿರುವುದಿಲ್ಲ. ಜೊತೆಗೆ 10 ಜನ ಸೂಚಕರು ಅದೇ ವಿಧಾನಸಭಾ ಕ್ಷೇತ್ರದವರಾಗಿರಬೇಕು. ಸುಳ್ಳು ದಾಖಲೆ ಪತ್ರಗಳನ್ನು ಸಲ್ಲಿಸುವಂತಿಲ್ಲ. ಕಡೆಯ ದಿನದ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಸಲ್ಲಿಸಬೇಕು. ಇವುಗಳಲ್ಲಿ ಲೋಪದೋಷವಾದಲ್ಲಿ ಅಂತಹ ನಾಮಪತ್ರವನ್ನು ತಿರಸ್ಕೃತಗೊಳಿಸಲಾಗುತ್ತದೆ.

ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ; 224 ಕ್ಷೇತ್ರಗಳ ಅಭ್ಯರ್ಥಿಗಳ ಮಾಹಿತಿ ಇಲ್ಲಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...