Homeಮುಖಪುಟಒಂದೇ ಕುಟುಂಬದ ಇಬ್ಬಿಬ್ಬರು ನಾಮಪತ್ರ ಸಲ್ಲಿಸುವುದೇಕೆ? ಎ, ಬಿ, ಸಿ ಫಾರಂ ಎಂದರೇನು?

ಒಂದೇ ಕುಟುಂಬದ ಇಬ್ಬಿಬ್ಬರು ನಾಮಪತ್ರ ಸಲ್ಲಿಸುವುದೇಕೆ? ಎ, ಬಿ, ಸಿ ಫಾರಂ ಎಂದರೇನು?

- Advertisement -
- Advertisement -

2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಕಾರಣ ನೂರಾರು ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಕೆಲವೊಂದು ಕ್ಷೇತ್ರಗಳಲ್ಲಿ ಒಂದೇ ಕುಟಂಬದಿಂದ ಇಬ್ಬಿಬ್ಬರು ನಾಮಪತ್ರ ಸಲ್ಲಿಸಿದ್ದಾರೆ. ಕನಕಪುರ ಕ್ಷೇತ್ರಕ್ಕೆ ಡಿ.ಕೆ ಶಿವಕುಮಾರ್ ಮತ್ತು ಅವರ ಸಹೋದರ ಡಿ.ಕೆ ಸುರೇಶ್, ಸರ್ವಜ್ಞ ನಗರದಿಂದ ಕೆ.ಜೆ.ಜಾರ್ಜ್‌ ಮತ್ತು ಅವರ ಪುತ್ರ ರಾಣಾ ಜಾರ್ಜ್‌, ಮೇಲುಕೋಟೆಯಲ್ಲಿ ದರ್ಶನ್ ಪುಟ್ಟಣ್ಣಯ್ಯ ಮತ್ತು ಅವರ ತಾಯಿ ಸುನೀತಾ ಪುಟ್ಟಣ್ಣಯ್ಯನವರು ಸೇರಿದಂತೆ ಒಂದೇ ಕುಟುಂಬದ ಹಲವರು ನಾಮಪತ್ರ ಸಲ್ಲಿಸಿದ್ದಾರೆ.

ಇಲ್ಲಿ ಏಕೆ ಇಬ್ಬಿಬ್ಬರು ನಾಮಪತ್ರ ಸಲ್ಲಿಸುವುದು ಎಂಬ ಪ್ರಶ್ನೆ ಉದ್ಭವವಾಗುತ್ತದೆ. ಉತ್ತರ ಸರಳವಾಗಿದ್ದು, ಕಾರಣಾಂತರಗಳಿಂದ ಒಬ್ಬರ ನಾಮಪತ್ರ ತಿರಸ್ಕೃತಗೊಂಡುಬಿಟ್ಟರೆ ಅವರ ಪರವಾಗಿ ಇನ್ನೊಬ್ಬರು ಅಭ್ಯರ್ಥಿಯಾಗಿ ಕಣದಲ್ಲಿಳಿಯಬಹುದು ಎಂದು ಮುಂದಾಲೋಚನೆಯಿಂದ ಈ ರೀತಿಯಾಗಿ ಒಂದೇ ಕುಟುಂಬದ ಇಬ್ಬಿಬ್ಬರು ನಾಮಪತ್ರ ಸಲ್ಲಿಸುವ ರೂಢಿ ಬೆಳೆದು ಬಂದಿದೆ.

ನಾಮಪತ್ರ ತಿರಸ್ಕೃತಗೊಳ್ಳಲು ಕಾರಣವೇನು?

ಯಾವುದೇ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ಅವರ ಪೌರತ್ವ ದಾಖಲೆ, ವಯಸ್ಸು ಮತ್ತು ಜಾತಿ ಪ್ರಮಾಣ ಪತ್ರ (ಅವರು ಮೀಸಲು ಸ್ಥಾನದಿಂದ ಸ್ಪರ್ಧಿಸಿದ್ದರೆ), ಹಾಗೆಯೇ ಯಾವುದಾದರೂ ಕ್ರಿಮಿನಲ್ ಪ್ರಕರಣಗಳಿದ್ದರೆ ಅವುಗಳ ಅಫಿಡವಿಟ್ ಮತ್ತು ಅಭ್ಯರ್ಥಿಗಳ ಮತ್ತು ಅವರ ಹತ್ತಿರದ ಸಂಬಂಧಿಯ ಆಸ್ತಿ ಮಾಲೀಕತ್ವ ಮತ್ತು ನಗದು, ಚಿನ್ನಾಭರಣಗಳ ದಾಖಲೆಗಳನ್ನು ಸಲ್ಲಿಸಬೇಕು. ಅಲ್ಲದೆ ಪಕ್ಷದ ವತಿಯಿಂದ ಸ್ಪರ್ಧಿಸುವಾಗ ಆ ಪಕ್ಷದ ಬಿ ಫಾರಂನಲ್ಲಿ ಎಲ್ಲಾ ಕಾಲಂಗಳನ್ನು ತುಂಬಬೇಕು. ಜೊತೆಗೆ 10 ಜನ ಸೂಚಕರ ವಿವರ ಮತ್ತು ದಾಖಲೆಗಳನ್ನು ಸಲ್ಲಿಸಬೇಕು. ಇವುಗಳಲ್ಲಿ ಯಾವುದಾದರೂ ಒಂದು ತಪ್ಪಾದರೆ, ಬಿಟ್ಟು ಹೋದರೆ ಅಂತಹ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಳ್ಳುತ್ತದೆ.

ಎ ಫಾರ್ಮ್ ಎಂದರೇನು?

ಇದು ‘ಮಾನ್ಯತೆ ಪಡೆದ ರಾಷ್ಟ್ರೀಯ ಅಥವಾ ರಾಜ್ಯ ರಾಜಕೀಯ ಪಕ್ಷ’ ಅಥವಾ ‘ನೋಂದಾಯಿತ ಆದರೆ ಗುರುತಿಸದ ರಾಜಕೀಯ ಪಕ್ಷ’ದಿಂದ ಕ್ಷೇತ್ರದ ಚುನಾವಣಾಧಿಕಾರಿ ಅಥವಾ ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳಿಗೆ ಪಕ್ಷದ ಪದಾಧಿಕಾರಿಗಳ ಹೆಸರುಗಳನ್ನು ತಿಳಿಸಲು ಸಲ್ಲಿಸುವ ಅರ್ಜಿಯಾಗಿದೆ. ಇಲ್ಲಿ ಇರುವ ಹೆಸರು ಮತ್ತು ಸಹಿಯು ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದಿಂದ ಆಯ್ಕೆಯಾದ ಅಭ್ಯರ್ಥಿಗಳ ಹೆಸರನ್ನು ಸೂಚಿಸಲು ಅಧಿಕಾರ ಪಡೆದಿದ್ದಾರೆ. ಇದು ಸಾಮಾನ್ಯವಾಗಿ ರಾಜಕೀಯ ಪಕ್ಷವೊಂದರ ಅಧ್ಯಕ್ಷ ಅಥವಾ ಕಾರ್ಯದರ್ಶಿಗಳ ಹೆಸರು, ಸಹಿ ಮತ್ತು ಪಕ್ಷದ ಮುದ್ರೆಯನ್ನು ಹೊಂದಿರಬೇಕು. ಟಿಕೆಟ್‌ಗಳನ್ನು ವಿತರಿಸಲು ಪಕ್ಷದಿಂದ ಅಧಿಕಾರ ಪಡೆದ ಪದಾಧಿಕಾರಿಗಳ ಮಾದರಿ ಸಹಿಯನ್ನು ಸಹ ಈ ಫಾರ್ಮ್ ಒಳಗೊಂಡಿದೆ.

ಬಿ ಫಾರಂ ಎಂದರೇನು?

ಈ ಕ್ಷೇತ್ರದಲ್ಲಿ ನಮ್ಮ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸುವ ಅಧಿಕೃತ ಅಭ್ಯರ್ಥಿ ಇವರೇ ಎಂದು ರಾಜಕೀಯ ಪಕ್ಷವೊಂದರ ಅಧ್ಯಕ್ಷರು, ಕಾರ್ಯದರ್ಶಿ ಅಥವಾ ವಿಶೇಷ ಅಧಿಕಾರಿಯು ತನ್ನ ಸಹಿ ಮತ್ತು ಮುದ್ರೆಯೊಂದಿಗೆ ನೀಡಲ್ಪಟ್ಟ ಫಾರಂ ಅನ್ನು ಬಿ ಫಾರಂ ಎನ್ನಲಾಗುತ್ತದೆ. ಇದನ್ನು ತುಂಬಿ ತಮ್ಮ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿಗಳಿಗೆ ಅಭ್ಯರ್ಥಿಗಳು ಸಲ್ಲಿಸುತ್ತಾರೆ. ಇದು ಪಕ್ಷದ ಚಿಹ್ನೆಯನ್ನು ಒಳಗೊಂಡಿದ್ದು ಕೆಲವೊಮ್ಮೆ ಇಬ್ಬರ ಹೆಸರುಗಳನ್ನು ಬರೆದಿರಲಾಗುತ್ತದೆ. ಅದರಲ್ಲಿ ಮೊದಲನೇಯದು ಅಧಿಕೃತ ಅಭ್ಯರ್ಥಿಯಾಗಿದ್ದರೆ ಮತ್ತೊಂದು ಎರಡನೇ ಅಭ್ಯರ್ಥಿಯಾಗಿರುತ್ತದೆ. ಒಂದು ವೇಳೆ ಮೊದಲನೇ ವ್ಯಕ್ತಿಯ ನಾಮಪತ್ರ ತಿರಸ್ಕೃತಗೊಂಡಲ್ಲಿ ಎರಡನೇ ವ್ಯಕ್ತಿ ಸ್ಪರ್ಧಿಸಬಹುದಾಗಿರುತ್ತದೆ.

ಸಿ ಫಾರಂ ಎಂದರೇನು?

ಕೆಲವೊಂದು ಪಕ್ಷಗಳು ಸಿ ಫಾರಂ ಕೊಡುವುದನ್ನು ಅಭ್ಯಾಸ ಮಾಡಿಕೊಂಡಿವೆ. ಅಂದರೆ ಇಬ್ಬರು ವ್ಯಕ್ತಿಗಳಿಗೆ ಬಿ ಫಾರಂ ನೀಡಿ, ಅಂತಿಮ ಕ್ಷಣದಲ್ಲಿ ಅವರಲ್ಲಿ ಒಬ್ಬರಿಗೆ ಮಾತ್ರ ಸಿ ಫಾರಂ ನೀಡಿ ಅವರನ್ನು ಪಕ್ಷದ ಅಧಿಕೃತ ಅಭ್ಯರ್ಥಿಯನ್ನಾಗಿ ಮಾಡಿಕೊಳ್ಳುತ್ತವೆ.

ನಾಮಪತ್ರ ತಿರಸ್ಕೃತಗೊಳ್ಳಲು ಕಾರಣಗಳೇನು?

ಕೆಲವೊಮ್ಮೆ ಅಭ್ಯರ್ಥಿಗಳು ಬಿ ಫಾರಂ ನಲ್ಲಿನ ಎಲ್ಲಾ ಕಾಲಂಗಳನ್ನು ತುಂಬಿರುವುದಿಲ್ಲ. ದಾಖಲೆಗಳನ್ನು ಸಲ್ಲಿಸಿರುವುದಿಲ್ಲ. ಜೊತೆಗೆ 10 ಜನ ಸೂಚಕರು ಅದೇ ವಿಧಾನಸಭಾ ಕ್ಷೇತ್ರದವರಾಗಿರಬೇಕು. ಸುಳ್ಳು ದಾಖಲೆ ಪತ್ರಗಳನ್ನು ಸಲ್ಲಿಸುವಂತಿಲ್ಲ. ಕಡೆಯ ದಿನದ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಸಲ್ಲಿಸಬೇಕು. ಇವುಗಳಲ್ಲಿ ಲೋಪದೋಷವಾದಲ್ಲಿ ಅಂತಹ ನಾಮಪತ್ರವನ್ನು ತಿರಸ್ಕೃತಗೊಳಿಸಲಾಗುತ್ತದೆ.

ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ; 224 ಕ್ಷೇತ್ರಗಳ ಅಭ್ಯರ್ಥಿಗಳ ಮಾಹಿತಿ ಇಲ್ಲಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...