Homeಮುಖಪುಟಒಂದೇ ಕುಟುಂಬದ ಇಬ್ಬಿಬ್ಬರು ನಾಮಪತ್ರ ಸಲ್ಲಿಸುವುದೇಕೆ? ಎ, ಬಿ, ಸಿ ಫಾರಂ ಎಂದರೇನು?

ಒಂದೇ ಕುಟುಂಬದ ಇಬ್ಬಿಬ್ಬರು ನಾಮಪತ್ರ ಸಲ್ಲಿಸುವುದೇಕೆ? ಎ, ಬಿ, ಸಿ ಫಾರಂ ಎಂದರೇನು?

- Advertisement -
- Advertisement -

2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಕಾರಣ ನೂರಾರು ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಕೆಲವೊಂದು ಕ್ಷೇತ್ರಗಳಲ್ಲಿ ಒಂದೇ ಕುಟಂಬದಿಂದ ಇಬ್ಬಿಬ್ಬರು ನಾಮಪತ್ರ ಸಲ್ಲಿಸಿದ್ದಾರೆ. ಕನಕಪುರ ಕ್ಷೇತ್ರಕ್ಕೆ ಡಿ.ಕೆ ಶಿವಕುಮಾರ್ ಮತ್ತು ಅವರ ಸಹೋದರ ಡಿ.ಕೆ ಸುರೇಶ್, ಸರ್ವಜ್ಞ ನಗರದಿಂದ ಕೆ.ಜೆ.ಜಾರ್ಜ್‌ ಮತ್ತು ಅವರ ಪುತ್ರ ರಾಣಾ ಜಾರ್ಜ್‌, ಮೇಲುಕೋಟೆಯಲ್ಲಿ ದರ್ಶನ್ ಪುಟ್ಟಣ್ಣಯ್ಯ ಮತ್ತು ಅವರ ತಾಯಿ ಸುನೀತಾ ಪುಟ್ಟಣ್ಣಯ್ಯನವರು ಸೇರಿದಂತೆ ಒಂದೇ ಕುಟುಂಬದ ಹಲವರು ನಾಮಪತ್ರ ಸಲ್ಲಿಸಿದ್ದಾರೆ.

ಇಲ್ಲಿ ಏಕೆ ಇಬ್ಬಿಬ್ಬರು ನಾಮಪತ್ರ ಸಲ್ಲಿಸುವುದು ಎಂಬ ಪ್ರಶ್ನೆ ಉದ್ಭವವಾಗುತ್ತದೆ. ಉತ್ತರ ಸರಳವಾಗಿದ್ದು, ಕಾರಣಾಂತರಗಳಿಂದ ಒಬ್ಬರ ನಾಮಪತ್ರ ತಿರಸ್ಕೃತಗೊಂಡುಬಿಟ್ಟರೆ ಅವರ ಪರವಾಗಿ ಇನ್ನೊಬ್ಬರು ಅಭ್ಯರ್ಥಿಯಾಗಿ ಕಣದಲ್ಲಿಳಿಯಬಹುದು ಎಂದು ಮುಂದಾಲೋಚನೆಯಿಂದ ಈ ರೀತಿಯಾಗಿ ಒಂದೇ ಕುಟುಂಬದ ಇಬ್ಬಿಬ್ಬರು ನಾಮಪತ್ರ ಸಲ್ಲಿಸುವ ರೂಢಿ ಬೆಳೆದು ಬಂದಿದೆ.

ನಾಮಪತ್ರ ತಿರಸ್ಕೃತಗೊಳ್ಳಲು ಕಾರಣವೇನು?

ಯಾವುದೇ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ಅವರ ಪೌರತ್ವ ದಾಖಲೆ, ವಯಸ್ಸು ಮತ್ತು ಜಾತಿ ಪ್ರಮಾಣ ಪತ್ರ (ಅವರು ಮೀಸಲು ಸ್ಥಾನದಿಂದ ಸ್ಪರ್ಧಿಸಿದ್ದರೆ), ಹಾಗೆಯೇ ಯಾವುದಾದರೂ ಕ್ರಿಮಿನಲ್ ಪ್ರಕರಣಗಳಿದ್ದರೆ ಅವುಗಳ ಅಫಿಡವಿಟ್ ಮತ್ತು ಅಭ್ಯರ್ಥಿಗಳ ಮತ್ತು ಅವರ ಹತ್ತಿರದ ಸಂಬಂಧಿಯ ಆಸ್ತಿ ಮಾಲೀಕತ್ವ ಮತ್ತು ನಗದು, ಚಿನ್ನಾಭರಣಗಳ ದಾಖಲೆಗಳನ್ನು ಸಲ್ಲಿಸಬೇಕು. ಅಲ್ಲದೆ ಪಕ್ಷದ ವತಿಯಿಂದ ಸ್ಪರ್ಧಿಸುವಾಗ ಆ ಪಕ್ಷದ ಬಿ ಫಾರಂನಲ್ಲಿ ಎಲ್ಲಾ ಕಾಲಂಗಳನ್ನು ತುಂಬಬೇಕು. ಜೊತೆಗೆ 10 ಜನ ಸೂಚಕರ ವಿವರ ಮತ್ತು ದಾಖಲೆಗಳನ್ನು ಸಲ್ಲಿಸಬೇಕು. ಇವುಗಳಲ್ಲಿ ಯಾವುದಾದರೂ ಒಂದು ತಪ್ಪಾದರೆ, ಬಿಟ್ಟು ಹೋದರೆ ಅಂತಹ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಳ್ಳುತ್ತದೆ.

ಎ ಫಾರ್ಮ್ ಎಂದರೇನು?

ಇದು ‘ಮಾನ್ಯತೆ ಪಡೆದ ರಾಷ್ಟ್ರೀಯ ಅಥವಾ ರಾಜ್ಯ ರಾಜಕೀಯ ಪಕ್ಷ’ ಅಥವಾ ‘ನೋಂದಾಯಿತ ಆದರೆ ಗುರುತಿಸದ ರಾಜಕೀಯ ಪಕ್ಷ’ದಿಂದ ಕ್ಷೇತ್ರದ ಚುನಾವಣಾಧಿಕಾರಿ ಅಥವಾ ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳಿಗೆ ಪಕ್ಷದ ಪದಾಧಿಕಾರಿಗಳ ಹೆಸರುಗಳನ್ನು ತಿಳಿಸಲು ಸಲ್ಲಿಸುವ ಅರ್ಜಿಯಾಗಿದೆ. ಇಲ್ಲಿ ಇರುವ ಹೆಸರು ಮತ್ತು ಸಹಿಯು ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದಿಂದ ಆಯ್ಕೆಯಾದ ಅಭ್ಯರ್ಥಿಗಳ ಹೆಸರನ್ನು ಸೂಚಿಸಲು ಅಧಿಕಾರ ಪಡೆದಿದ್ದಾರೆ. ಇದು ಸಾಮಾನ್ಯವಾಗಿ ರಾಜಕೀಯ ಪಕ್ಷವೊಂದರ ಅಧ್ಯಕ್ಷ ಅಥವಾ ಕಾರ್ಯದರ್ಶಿಗಳ ಹೆಸರು, ಸಹಿ ಮತ್ತು ಪಕ್ಷದ ಮುದ್ರೆಯನ್ನು ಹೊಂದಿರಬೇಕು. ಟಿಕೆಟ್‌ಗಳನ್ನು ವಿತರಿಸಲು ಪಕ್ಷದಿಂದ ಅಧಿಕಾರ ಪಡೆದ ಪದಾಧಿಕಾರಿಗಳ ಮಾದರಿ ಸಹಿಯನ್ನು ಸಹ ಈ ಫಾರ್ಮ್ ಒಳಗೊಂಡಿದೆ.

ಬಿ ಫಾರಂ ಎಂದರೇನು?

ಈ ಕ್ಷೇತ್ರದಲ್ಲಿ ನಮ್ಮ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸುವ ಅಧಿಕೃತ ಅಭ್ಯರ್ಥಿ ಇವರೇ ಎಂದು ರಾಜಕೀಯ ಪಕ್ಷವೊಂದರ ಅಧ್ಯಕ್ಷರು, ಕಾರ್ಯದರ್ಶಿ ಅಥವಾ ವಿಶೇಷ ಅಧಿಕಾರಿಯು ತನ್ನ ಸಹಿ ಮತ್ತು ಮುದ್ರೆಯೊಂದಿಗೆ ನೀಡಲ್ಪಟ್ಟ ಫಾರಂ ಅನ್ನು ಬಿ ಫಾರಂ ಎನ್ನಲಾಗುತ್ತದೆ. ಇದನ್ನು ತುಂಬಿ ತಮ್ಮ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿಗಳಿಗೆ ಅಭ್ಯರ್ಥಿಗಳು ಸಲ್ಲಿಸುತ್ತಾರೆ. ಇದು ಪಕ್ಷದ ಚಿಹ್ನೆಯನ್ನು ಒಳಗೊಂಡಿದ್ದು ಕೆಲವೊಮ್ಮೆ ಇಬ್ಬರ ಹೆಸರುಗಳನ್ನು ಬರೆದಿರಲಾಗುತ್ತದೆ. ಅದರಲ್ಲಿ ಮೊದಲನೇಯದು ಅಧಿಕೃತ ಅಭ್ಯರ್ಥಿಯಾಗಿದ್ದರೆ ಮತ್ತೊಂದು ಎರಡನೇ ಅಭ್ಯರ್ಥಿಯಾಗಿರುತ್ತದೆ. ಒಂದು ವೇಳೆ ಮೊದಲನೇ ವ್ಯಕ್ತಿಯ ನಾಮಪತ್ರ ತಿರಸ್ಕೃತಗೊಂಡಲ್ಲಿ ಎರಡನೇ ವ್ಯಕ್ತಿ ಸ್ಪರ್ಧಿಸಬಹುದಾಗಿರುತ್ತದೆ.

ಸಿ ಫಾರಂ ಎಂದರೇನು?

ಕೆಲವೊಂದು ಪಕ್ಷಗಳು ಸಿ ಫಾರಂ ಕೊಡುವುದನ್ನು ಅಭ್ಯಾಸ ಮಾಡಿಕೊಂಡಿವೆ. ಅಂದರೆ ಇಬ್ಬರು ವ್ಯಕ್ತಿಗಳಿಗೆ ಬಿ ಫಾರಂ ನೀಡಿ, ಅಂತಿಮ ಕ್ಷಣದಲ್ಲಿ ಅವರಲ್ಲಿ ಒಬ್ಬರಿಗೆ ಮಾತ್ರ ಸಿ ಫಾರಂ ನೀಡಿ ಅವರನ್ನು ಪಕ್ಷದ ಅಧಿಕೃತ ಅಭ್ಯರ್ಥಿಯನ್ನಾಗಿ ಮಾಡಿಕೊಳ್ಳುತ್ತವೆ.

ನಾಮಪತ್ರ ತಿರಸ್ಕೃತಗೊಳ್ಳಲು ಕಾರಣಗಳೇನು?

ಕೆಲವೊಮ್ಮೆ ಅಭ್ಯರ್ಥಿಗಳು ಬಿ ಫಾರಂ ನಲ್ಲಿನ ಎಲ್ಲಾ ಕಾಲಂಗಳನ್ನು ತುಂಬಿರುವುದಿಲ್ಲ. ದಾಖಲೆಗಳನ್ನು ಸಲ್ಲಿಸಿರುವುದಿಲ್ಲ. ಜೊತೆಗೆ 10 ಜನ ಸೂಚಕರು ಅದೇ ವಿಧಾನಸಭಾ ಕ್ಷೇತ್ರದವರಾಗಿರಬೇಕು. ಸುಳ್ಳು ದಾಖಲೆ ಪತ್ರಗಳನ್ನು ಸಲ್ಲಿಸುವಂತಿಲ್ಲ. ಕಡೆಯ ದಿನದ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಸಲ್ಲಿಸಬೇಕು. ಇವುಗಳಲ್ಲಿ ಲೋಪದೋಷವಾದಲ್ಲಿ ಅಂತಹ ನಾಮಪತ್ರವನ್ನು ತಿರಸ್ಕೃತಗೊಳಿಸಲಾಗುತ್ತದೆ.

ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ; 224 ಕ್ಷೇತ್ರಗಳ ಅಭ್ಯರ್ಥಿಗಳ ಮಾಹಿತಿ ಇಲ್ಲಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...