Homeಮುಖಪುಟವಲಸಿಗರ ಬಗ್ಗೆ ನಾವು ಯಾಕೆ ತೀರ್ಮಾನಿಸಬೇಕು, ರಾಜ್ಯಗಳು ತೀರ್ಮಾನಿಸಲಿ: ಸುಪ್ರೀಂ ಕೋರ್ಟ್

ವಲಸಿಗರ ಬಗ್ಗೆ ನಾವು ಯಾಕೆ ತೀರ್ಮಾನಿಸಬೇಕು, ರಾಜ್ಯಗಳು ತೀರ್ಮಾನಿಸಲಿ: ಸುಪ್ರೀಂ ಕೋರ್ಟ್

ವಕೀಲ ಅಲಖ್ ಅಲೋಕ್ ಶ್ರೀವಾಸ್ತವ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ, ರಸ್ತೆಗಳಲ್ಲಿ ನಡೆಯುತ್ತಿರುವ ವಲಸಿಗರನ್ನು ಗುರುತಿಸಿ ಅವರಿಗೆ ಆಹಾರ ಮತ್ತು ಆಶ್ರಯ ನೀಡುವಂತೆ ನ್ಯಾಯಾಲಯವು ಕೇಂದ್ರವನ್ನು ಕೇಳಬೇಕೆಂದು ಒತ್ತಾಯಿಸಿದ್ದರು.

- Advertisement -
- Advertisement -

ವಲಸಿಗರ ಆಹಾರ ಮತ್ತು ನೀರನ್ನು ಒದಗಿಸುವಂತೆ ಕೇಂದ್ರಕ್ಕೆ ಆದೇಶಿಸಬೇಕು ಎಂದು ಕೇಳಿದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಸುಪ್ರೀಂ ಕೋರ್ಟ್ “ಈ ನ್ಯಾಯಾಲಯವು ಯಾರು ನಡೆಯುತ್ತಿದ್ದಾರೆ ಯಾರು ನಡೆಯುತ್ತಿಲ್ಲ ಎಂದು ಮೇಲ್ವಿಚಾರಣೆ ಮಾಡುವುದು ಅಸಾಧ್ಯ” ಎಂದು ಹೇಳಿದೆ.

“ಇದನ್ನು ರಾಜ್ಯ ಸರ್ಕಾರ ತೀರ್ಮಾನಿಸಲಿ. ನ್ಯಾಯಾಲಯ ಏಕೆ ಕೇಳಬೇಕು ಅಥವಾ ತೀರ್ಮಾನಿಸಬೇಕು?” ಎಂದು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಾಗಿ ಹೇಳಿದೆ.

ವಕೀಲ ಅಲಖ್ ಅಲೋಕ್ ಶ್ರೀವಾಸ್ತವ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ, ರಸ್ತೆಗಳಲ್ಲಿ ನಡೆಯುತ್ತಿರುವ ವಲಸಿಗರನ್ನು ಗುರುತಿಸಿ ಅವರಿಗೆ ಆಹಾರ ಮತ್ತು ಆಶ್ರಯ ನೀಡುವಂತೆ ನ್ಯಾಯಾಲಯವು ಕೇಂದ್ರವನ್ನು ಕೇಳಬೇಕೆಂದು ಒತ್ತಾಯಿಸಿದ್ದರು.

ರೈಲ್ವೆ ಹಳಿಗಳಲ್ಲಿ ಮಲಗಿದ್ದ 16 ವಲಸಿಗರ ಮೇಲೆ ಸರಕು ರೈಲು ಓಡಿದ ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ನಡೆದ ಘಟನೆಯನ್ನೂ ವಕೀಲರು ಉಲ್ಲೇಖಿಸಿದ್ದರು.

ಇದನ್ನು ರಾಜ್ಯಗಳು ತೀರ್ಮಾನಿಸುವುದು ಎಂದ ಸುಪ್ರೀಂ ಕೋರ್ಟ್, “ಜನರು ನಡೆಯುತ್ತಿದ್ದಾರೆ ಅದನ್ನು ನಿಲ್ಲಿಸುವುದಿಲ್ಲ. ನಾವು ಅದನ್ನು ಹೇಗೆ ತಡೆಯಬಹುದು” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ರೈಲು ಅಪಘಾತದ ಬಗ್ಗೆ ಪ್ರತಿಕ್ರಿಯಿಸಿದ ನ್ಯಾಯಾಲಯವು “ಅವರು ರೈಲ್ವೆ ಹಳಿಗಳಲ್ಲಿ ಮಲಗಿದ್ದರೆ, ಅದನ್ನು ತಡೆಯಲು ಹೇಗೆ ಸಾಧ್ಯ?” ಎಂದು ಹೇಳಿದೆ.

ಅರ್ಜಿ ಸಲ್ಲಿಸಿದ ವಕೀಲರನ್ನು ಆಕ್ಷೇಪಿಸಿದ ನ್ಯಾಯಾಲಯವು, ಅರ್ಜಿಯು ವೃತ್ತಪತ್ರಿಕೆ ತುಣುಕುಗಳ ಮೇಲೆ ಸಂಪೂರ್ಣವಾಗಿ ಆಧಾರಿತವಾಗಿದೆ ಎಂದು ಹೇಳಿದೆ.

“ಪ್ರತಿಯೊಬ್ಬ ವಕೀಲರು ಪತ್ರಿಕೆಯಲ್ಲಿನ ಘಟನೆಗಳನ್ನು ಓದಿ, ಪ್ರತಿಯೊಂದು ವಿಷಯದ ಬಗ್ಗೆಯೂ ಜ್ಞಾನ ಹೊಂದುತ್ತಾರೆ. ನಿಮ್ಮ ಜ್ಞಾನವು ಸಂಪೂರ್ಣವಾಗಿ ವೃತ್ತಪತ್ರಿಕೆಯ ತುಣುಕುಗಳನ್ನು ಆಧರಿಸಿದೆ. ನಂತರ ಈ ನ್ಯಾಯಾಲಯವು ತೀರ್ಮಾನಿಸಬೇಕೆಂದು ನೀವು ಬಯಸುತ್ತೀರಿ. ಅದನ್ನು ರಾಜ್ಯವು ತೀರ್ಮಾನಿಸಲಿ. ಈ ನ್ಯಾಯಾಲಯ ಏಕೆ ತೀರ್ಮಾನಿಸಬೇಕು ಅಥವಾ ಕೇಳಬೇಕು? ನಾವು ನಿಮಗೆ ವಿಶೇಷ ಪಾಸ್ ನೀಡುತ್ತೇವೆ. ನೀವು ಹೋಗಿ ಸರ್ಕಾರದ ಆದೇಶಗಳನ್ನು ಜಾರಿಗೊಳಿಸಬಹುದೇ?” ಎಂದು ನ್ಯಾಯಾಲಯವೂ ಅರ್ಜಿಯನ್ನು ವಜಾಗೊಳಿಸಿ ಹೇಳಿದೆ.

ವಲಸಿಗರನ್ನು ಮನೆಗೆ ಕರೆದೊಯ್ಯಲು ಸರ್ಕಾರ ಈಗಾಗಲೇ ಸಾರಿಗೆ ವ್ಯವಸ್ಥೆ ಆರಂಭಿಸಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೇಂದ್ರ ಸರ್ಕಾರದ ಪರವಾಗಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.

ಇನ್ನೂ ಹೆದ್ದಾರಿಯಲ್ಲಿ ನಡೆಯುತ್ತಿರುವವರನ್ನು ಉಲ್ಲೇಖಿಸಿ “ರಾಜ್ಯಗಳ ನಡುವಿನ ಒಪ್ಪಂದಕ್ಕೆ ಒಳಪಟ್ಟು, ಪ್ರತಿಯೊಬ್ಬರಿಗೂ ಪ್ರಯಾಣಿಸಲು ಅವಕಾಶ ಸಿಗುತ್ತದೆ. ಅವರ ಮೇಲೆ ಬಲ ಪ್ರಯೋಗ ಮಾಡುವುದರಿಂದ ಪ್ರತಿಕೋಲ ಪರಿಣಾಮ ಉಂಟಾಗಬಹುದು” ಎಂದು ಕೇಂದ್ರ ಸರ್ಕಾರದ ಪರವಾಗಿ ವಕೀಲರು ಹೇಳಿದರು.

ರಾಷ್ಟ್ರವ್ಯಾಪಿ ಲಾಕ್ ಡೌನ್ ಆಗಿರುವುದರಿಂದ ಉದ್ಯೋಗ ಮತ್ತು ಆಶ್ರಯವಿಲ್ಲದೆ ಲಕ್ಷಾಂತರ ವಲಸಿಗರು ಸಾವಿರಾರು ಕಿ.ಮೀ ದೂರದಲ್ಲಿರುವ ತಮ್ಮ ಗ್ರಾಮಗಳಿಗೆ ಮಹಾವಲಸೆ ಹೊರಟಿದ್ದರು. ಈ ಸಮಯದಲ್ಲಿ ಹಲವಾರು ಜನರು ಅಫಘಾತ ಹಾಗೂ ಬಳಲಿಕೆಯಿಂದ ಸಾವಿಗೀಡಾಗಿದ್ದಾರೆ.

ಪ್ರತಿ ರಾಜ್ಯವು ವಲಸಿಗರು ರಸ್ತೆಗಳಲ್ಲಿ ಅಥವಾ ರೈಲು ಹಳಿಗಳಲ್ಲಿ ನಡೆಯದಂತೆ ನೋಡಿಕೊಳ್ಳಬೇಕು ಎಂದು ಗೃಹ ಸಚಿವಾಲಯ ಇತ್ತೀಚೆಗೆ ಮಾರ್ಗಸೂಚಿಗಳನ್ನು ಹೊರಡಿಸಿದೆ.


ಓದಿ: ಹೋಗುವುದಾದರೆ ಎಲ್ಲಿಗೆ? ಇರುವುದಾದರೆ ಹೇಗೆ? ; ತುಮಕೂರಿನಲ್ಲಿ ಸಿಕ್ಕಿಕೊಂಡ ವಲಸೆ ಕಾರ್ಮಿಕರ ಗೋಳು


ನಮ್ಮ ಯೂಟ್ಯೂಬ್ ಚಾನೆಲ್ ಗೆ ಭೇಡಿ ನೀಡಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....