Homeಮುಖಪುಟವಲಸಿಗರ ಬಗ್ಗೆ ನಾವು ಯಾಕೆ ತೀರ್ಮಾನಿಸಬೇಕು, ರಾಜ್ಯಗಳು ತೀರ್ಮಾನಿಸಲಿ: ಸುಪ್ರೀಂ ಕೋರ್ಟ್

ವಲಸಿಗರ ಬಗ್ಗೆ ನಾವು ಯಾಕೆ ತೀರ್ಮಾನಿಸಬೇಕು, ರಾಜ್ಯಗಳು ತೀರ್ಮಾನಿಸಲಿ: ಸುಪ್ರೀಂ ಕೋರ್ಟ್

ವಕೀಲ ಅಲಖ್ ಅಲೋಕ್ ಶ್ರೀವಾಸ್ತವ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ, ರಸ್ತೆಗಳಲ್ಲಿ ನಡೆಯುತ್ತಿರುವ ವಲಸಿಗರನ್ನು ಗುರುತಿಸಿ ಅವರಿಗೆ ಆಹಾರ ಮತ್ತು ಆಶ್ರಯ ನೀಡುವಂತೆ ನ್ಯಾಯಾಲಯವು ಕೇಂದ್ರವನ್ನು ಕೇಳಬೇಕೆಂದು ಒತ್ತಾಯಿಸಿದ್ದರು.

- Advertisement -
- Advertisement -

ವಲಸಿಗರ ಆಹಾರ ಮತ್ತು ನೀರನ್ನು ಒದಗಿಸುವಂತೆ ಕೇಂದ್ರಕ್ಕೆ ಆದೇಶಿಸಬೇಕು ಎಂದು ಕೇಳಿದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಸುಪ್ರೀಂ ಕೋರ್ಟ್ “ಈ ನ್ಯಾಯಾಲಯವು ಯಾರು ನಡೆಯುತ್ತಿದ್ದಾರೆ ಯಾರು ನಡೆಯುತ್ತಿಲ್ಲ ಎಂದು ಮೇಲ್ವಿಚಾರಣೆ ಮಾಡುವುದು ಅಸಾಧ್ಯ” ಎಂದು ಹೇಳಿದೆ.

“ಇದನ್ನು ರಾಜ್ಯ ಸರ್ಕಾರ ತೀರ್ಮಾನಿಸಲಿ. ನ್ಯಾಯಾಲಯ ಏಕೆ ಕೇಳಬೇಕು ಅಥವಾ ತೀರ್ಮಾನಿಸಬೇಕು?” ಎಂದು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಾಗಿ ಹೇಳಿದೆ.

ವಕೀಲ ಅಲಖ್ ಅಲೋಕ್ ಶ್ರೀವಾಸ್ತವ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ, ರಸ್ತೆಗಳಲ್ಲಿ ನಡೆಯುತ್ತಿರುವ ವಲಸಿಗರನ್ನು ಗುರುತಿಸಿ ಅವರಿಗೆ ಆಹಾರ ಮತ್ತು ಆಶ್ರಯ ನೀಡುವಂತೆ ನ್ಯಾಯಾಲಯವು ಕೇಂದ್ರವನ್ನು ಕೇಳಬೇಕೆಂದು ಒತ್ತಾಯಿಸಿದ್ದರು.

ರೈಲ್ವೆ ಹಳಿಗಳಲ್ಲಿ ಮಲಗಿದ್ದ 16 ವಲಸಿಗರ ಮೇಲೆ ಸರಕು ರೈಲು ಓಡಿದ ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ನಡೆದ ಘಟನೆಯನ್ನೂ ವಕೀಲರು ಉಲ್ಲೇಖಿಸಿದ್ದರು.

ಇದನ್ನು ರಾಜ್ಯಗಳು ತೀರ್ಮಾನಿಸುವುದು ಎಂದ ಸುಪ್ರೀಂ ಕೋರ್ಟ್, “ಜನರು ನಡೆಯುತ್ತಿದ್ದಾರೆ ಅದನ್ನು ನಿಲ್ಲಿಸುವುದಿಲ್ಲ. ನಾವು ಅದನ್ನು ಹೇಗೆ ತಡೆಯಬಹುದು” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ರೈಲು ಅಪಘಾತದ ಬಗ್ಗೆ ಪ್ರತಿಕ್ರಿಯಿಸಿದ ನ್ಯಾಯಾಲಯವು “ಅವರು ರೈಲ್ವೆ ಹಳಿಗಳಲ್ಲಿ ಮಲಗಿದ್ದರೆ, ಅದನ್ನು ತಡೆಯಲು ಹೇಗೆ ಸಾಧ್ಯ?” ಎಂದು ಹೇಳಿದೆ.

ಅರ್ಜಿ ಸಲ್ಲಿಸಿದ ವಕೀಲರನ್ನು ಆಕ್ಷೇಪಿಸಿದ ನ್ಯಾಯಾಲಯವು, ಅರ್ಜಿಯು ವೃತ್ತಪತ್ರಿಕೆ ತುಣುಕುಗಳ ಮೇಲೆ ಸಂಪೂರ್ಣವಾಗಿ ಆಧಾರಿತವಾಗಿದೆ ಎಂದು ಹೇಳಿದೆ.

“ಪ್ರತಿಯೊಬ್ಬ ವಕೀಲರು ಪತ್ರಿಕೆಯಲ್ಲಿನ ಘಟನೆಗಳನ್ನು ಓದಿ, ಪ್ರತಿಯೊಂದು ವಿಷಯದ ಬಗ್ಗೆಯೂ ಜ್ಞಾನ ಹೊಂದುತ್ತಾರೆ. ನಿಮ್ಮ ಜ್ಞಾನವು ಸಂಪೂರ್ಣವಾಗಿ ವೃತ್ತಪತ್ರಿಕೆಯ ತುಣುಕುಗಳನ್ನು ಆಧರಿಸಿದೆ. ನಂತರ ಈ ನ್ಯಾಯಾಲಯವು ತೀರ್ಮಾನಿಸಬೇಕೆಂದು ನೀವು ಬಯಸುತ್ತೀರಿ. ಅದನ್ನು ರಾಜ್ಯವು ತೀರ್ಮಾನಿಸಲಿ. ಈ ನ್ಯಾಯಾಲಯ ಏಕೆ ತೀರ್ಮಾನಿಸಬೇಕು ಅಥವಾ ಕೇಳಬೇಕು? ನಾವು ನಿಮಗೆ ವಿಶೇಷ ಪಾಸ್ ನೀಡುತ್ತೇವೆ. ನೀವು ಹೋಗಿ ಸರ್ಕಾರದ ಆದೇಶಗಳನ್ನು ಜಾರಿಗೊಳಿಸಬಹುದೇ?” ಎಂದು ನ್ಯಾಯಾಲಯವೂ ಅರ್ಜಿಯನ್ನು ವಜಾಗೊಳಿಸಿ ಹೇಳಿದೆ.

ವಲಸಿಗರನ್ನು ಮನೆಗೆ ಕರೆದೊಯ್ಯಲು ಸರ್ಕಾರ ಈಗಾಗಲೇ ಸಾರಿಗೆ ವ್ಯವಸ್ಥೆ ಆರಂಭಿಸಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೇಂದ್ರ ಸರ್ಕಾರದ ಪರವಾಗಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.

ಇನ್ನೂ ಹೆದ್ದಾರಿಯಲ್ಲಿ ನಡೆಯುತ್ತಿರುವವರನ್ನು ಉಲ್ಲೇಖಿಸಿ “ರಾಜ್ಯಗಳ ನಡುವಿನ ಒಪ್ಪಂದಕ್ಕೆ ಒಳಪಟ್ಟು, ಪ್ರತಿಯೊಬ್ಬರಿಗೂ ಪ್ರಯಾಣಿಸಲು ಅವಕಾಶ ಸಿಗುತ್ತದೆ. ಅವರ ಮೇಲೆ ಬಲ ಪ್ರಯೋಗ ಮಾಡುವುದರಿಂದ ಪ್ರತಿಕೋಲ ಪರಿಣಾಮ ಉಂಟಾಗಬಹುದು” ಎಂದು ಕೇಂದ್ರ ಸರ್ಕಾರದ ಪರವಾಗಿ ವಕೀಲರು ಹೇಳಿದರು.

ರಾಷ್ಟ್ರವ್ಯಾಪಿ ಲಾಕ್ ಡೌನ್ ಆಗಿರುವುದರಿಂದ ಉದ್ಯೋಗ ಮತ್ತು ಆಶ್ರಯವಿಲ್ಲದೆ ಲಕ್ಷಾಂತರ ವಲಸಿಗರು ಸಾವಿರಾರು ಕಿ.ಮೀ ದೂರದಲ್ಲಿರುವ ತಮ್ಮ ಗ್ರಾಮಗಳಿಗೆ ಮಹಾವಲಸೆ ಹೊರಟಿದ್ದರು. ಈ ಸಮಯದಲ್ಲಿ ಹಲವಾರು ಜನರು ಅಫಘಾತ ಹಾಗೂ ಬಳಲಿಕೆಯಿಂದ ಸಾವಿಗೀಡಾಗಿದ್ದಾರೆ.

ಪ್ರತಿ ರಾಜ್ಯವು ವಲಸಿಗರು ರಸ್ತೆಗಳಲ್ಲಿ ಅಥವಾ ರೈಲು ಹಳಿಗಳಲ್ಲಿ ನಡೆಯದಂತೆ ನೋಡಿಕೊಳ್ಳಬೇಕು ಎಂದು ಗೃಹ ಸಚಿವಾಲಯ ಇತ್ತೀಚೆಗೆ ಮಾರ್ಗಸೂಚಿಗಳನ್ನು ಹೊರಡಿಸಿದೆ.


ಓದಿ: ಹೋಗುವುದಾದರೆ ಎಲ್ಲಿಗೆ? ಇರುವುದಾದರೆ ಹೇಗೆ? ; ತುಮಕೂರಿನಲ್ಲಿ ಸಿಕ್ಕಿಕೊಂಡ ವಲಸೆ ಕಾರ್ಮಿಕರ ಗೋಳು


ನಮ್ಮ ಯೂಟ್ಯೂಬ್ ಚಾನೆಲ್ ಗೆ ಭೇಡಿ ನೀಡಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...