Homeಮುಖಪುಟವಲಸಿಗರ ಬಗ್ಗೆ ನಾವು ಯಾಕೆ ತೀರ್ಮಾನಿಸಬೇಕು, ರಾಜ್ಯಗಳು ತೀರ್ಮಾನಿಸಲಿ: ಸುಪ್ರೀಂ ಕೋರ್ಟ್

ವಲಸಿಗರ ಬಗ್ಗೆ ನಾವು ಯಾಕೆ ತೀರ್ಮಾನಿಸಬೇಕು, ರಾಜ್ಯಗಳು ತೀರ್ಮಾನಿಸಲಿ: ಸುಪ್ರೀಂ ಕೋರ್ಟ್

ವಕೀಲ ಅಲಖ್ ಅಲೋಕ್ ಶ್ರೀವಾಸ್ತವ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ, ರಸ್ತೆಗಳಲ್ಲಿ ನಡೆಯುತ್ತಿರುವ ವಲಸಿಗರನ್ನು ಗುರುತಿಸಿ ಅವರಿಗೆ ಆಹಾರ ಮತ್ತು ಆಶ್ರಯ ನೀಡುವಂತೆ ನ್ಯಾಯಾಲಯವು ಕೇಂದ್ರವನ್ನು ಕೇಳಬೇಕೆಂದು ಒತ್ತಾಯಿಸಿದ್ದರು.

- Advertisement -
- Advertisement -

ವಲಸಿಗರ ಆಹಾರ ಮತ್ತು ನೀರನ್ನು ಒದಗಿಸುವಂತೆ ಕೇಂದ್ರಕ್ಕೆ ಆದೇಶಿಸಬೇಕು ಎಂದು ಕೇಳಿದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಸುಪ್ರೀಂ ಕೋರ್ಟ್ “ಈ ನ್ಯಾಯಾಲಯವು ಯಾರು ನಡೆಯುತ್ತಿದ್ದಾರೆ ಯಾರು ನಡೆಯುತ್ತಿಲ್ಲ ಎಂದು ಮೇಲ್ವಿಚಾರಣೆ ಮಾಡುವುದು ಅಸಾಧ್ಯ” ಎಂದು ಹೇಳಿದೆ.

“ಇದನ್ನು ರಾಜ್ಯ ಸರ್ಕಾರ ತೀರ್ಮಾನಿಸಲಿ. ನ್ಯಾಯಾಲಯ ಏಕೆ ಕೇಳಬೇಕು ಅಥವಾ ತೀರ್ಮಾನಿಸಬೇಕು?” ಎಂದು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಾಗಿ ಹೇಳಿದೆ.

ವಕೀಲ ಅಲಖ್ ಅಲೋಕ್ ಶ್ರೀವಾಸ್ತವ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ, ರಸ್ತೆಗಳಲ್ಲಿ ನಡೆಯುತ್ತಿರುವ ವಲಸಿಗರನ್ನು ಗುರುತಿಸಿ ಅವರಿಗೆ ಆಹಾರ ಮತ್ತು ಆಶ್ರಯ ನೀಡುವಂತೆ ನ್ಯಾಯಾಲಯವು ಕೇಂದ್ರವನ್ನು ಕೇಳಬೇಕೆಂದು ಒತ್ತಾಯಿಸಿದ್ದರು.

ರೈಲ್ವೆ ಹಳಿಗಳಲ್ಲಿ ಮಲಗಿದ್ದ 16 ವಲಸಿಗರ ಮೇಲೆ ಸರಕು ರೈಲು ಓಡಿದ ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ನಡೆದ ಘಟನೆಯನ್ನೂ ವಕೀಲರು ಉಲ್ಲೇಖಿಸಿದ್ದರು.

ಇದನ್ನು ರಾಜ್ಯಗಳು ತೀರ್ಮಾನಿಸುವುದು ಎಂದ ಸುಪ್ರೀಂ ಕೋರ್ಟ್, “ಜನರು ನಡೆಯುತ್ತಿದ್ದಾರೆ ಅದನ್ನು ನಿಲ್ಲಿಸುವುದಿಲ್ಲ. ನಾವು ಅದನ್ನು ಹೇಗೆ ತಡೆಯಬಹುದು” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ರೈಲು ಅಪಘಾತದ ಬಗ್ಗೆ ಪ್ರತಿಕ್ರಿಯಿಸಿದ ನ್ಯಾಯಾಲಯವು “ಅವರು ರೈಲ್ವೆ ಹಳಿಗಳಲ್ಲಿ ಮಲಗಿದ್ದರೆ, ಅದನ್ನು ತಡೆಯಲು ಹೇಗೆ ಸಾಧ್ಯ?” ಎಂದು ಹೇಳಿದೆ.

ಅರ್ಜಿ ಸಲ್ಲಿಸಿದ ವಕೀಲರನ್ನು ಆಕ್ಷೇಪಿಸಿದ ನ್ಯಾಯಾಲಯವು, ಅರ್ಜಿಯು ವೃತ್ತಪತ್ರಿಕೆ ತುಣುಕುಗಳ ಮೇಲೆ ಸಂಪೂರ್ಣವಾಗಿ ಆಧಾರಿತವಾಗಿದೆ ಎಂದು ಹೇಳಿದೆ.

“ಪ್ರತಿಯೊಬ್ಬ ವಕೀಲರು ಪತ್ರಿಕೆಯಲ್ಲಿನ ಘಟನೆಗಳನ್ನು ಓದಿ, ಪ್ರತಿಯೊಂದು ವಿಷಯದ ಬಗ್ಗೆಯೂ ಜ್ಞಾನ ಹೊಂದುತ್ತಾರೆ. ನಿಮ್ಮ ಜ್ಞಾನವು ಸಂಪೂರ್ಣವಾಗಿ ವೃತ್ತಪತ್ರಿಕೆಯ ತುಣುಕುಗಳನ್ನು ಆಧರಿಸಿದೆ. ನಂತರ ಈ ನ್ಯಾಯಾಲಯವು ತೀರ್ಮಾನಿಸಬೇಕೆಂದು ನೀವು ಬಯಸುತ್ತೀರಿ. ಅದನ್ನು ರಾಜ್ಯವು ತೀರ್ಮಾನಿಸಲಿ. ಈ ನ್ಯಾಯಾಲಯ ಏಕೆ ತೀರ್ಮಾನಿಸಬೇಕು ಅಥವಾ ಕೇಳಬೇಕು? ನಾವು ನಿಮಗೆ ವಿಶೇಷ ಪಾಸ್ ನೀಡುತ್ತೇವೆ. ನೀವು ಹೋಗಿ ಸರ್ಕಾರದ ಆದೇಶಗಳನ್ನು ಜಾರಿಗೊಳಿಸಬಹುದೇ?” ಎಂದು ನ್ಯಾಯಾಲಯವೂ ಅರ್ಜಿಯನ್ನು ವಜಾಗೊಳಿಸಿ ಹೇಳಿದೆ.

ವಲಸಿಗರನ್ನು ಮನೆಗೆ ಕರೆದೊಯ್ಯಲು ಸರ್ಕಾರ ಈಗಾಗಲೇ ಸಾರಿಗೆ ವ್ಯವಸ್ಥೆ ಆರಂಭಿಸಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೇಂದ್ರ ಸರ್ಕಾರದ ಪರವಾಗಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.

ಇನ್ನೂ ಹೆದ್ದಾರಿಯಲ್ಲಿ ನಡೆಯುತ್ತಿರುವವರನ್ನು ಉಲ್ಲೇಖಿಸಿ “ರಾಜ್ಯಗಳ ನಡುವಿನ ಒಪ್ಪಂದಕ್ಕೆ ಒಳಪಟ್ಟು, ಪ್ರತಿಯೊಬ್ಬರಿಗೂ ಪ್ರಯಾಣಿಸಲು ಅವಕಾಶ ಸಿಗುತ್ತದೆ. ಅವರ ಮೇಲೆ ಬಲ ಪ್ರಯೋಗ ಮಾಡುವುದರಿಂದ ಪ್ರತಿಕೋಲ ಪರಿಣಾಮ ಉಂಟಾಗಬಹುದು” ಎಂದು ಕೇಂದ್ರ ಸರ್ಕಾರದ ಪರವಾಗಿ ವಕೀಲರು ಹೇಳಿದರು.

ರಾಷ್ಟ್ರವ್ಯಾಪಿ ಲಾಕ್ ಡೌನ್ ಆಗಿರುವುದರಿಂದ ಉದ್ಯೋಗ ಮತ್ತು ಆಶ್ರಯವಿಲ್ಲದೆ ಲಕ್ಷಾಂತರ ವಲಸಿಗರು ಸಾವಿರಾರು ಕಿ.ಮೀ ದೂರದಲ್ಲಿರುವ ತಮ್ಮ ಗ್ರಾಮಗಳಿಗೆ ಮಹಾವಲಸೆ ಹೊರಟಿದ್ದರು. ಈ ಸಮಯದಲ್ಲಿ ಹಲವಾರು ಜನರು ಅಫಘಾತ ಹಾಗೂ ಬಳಲಿಕೆಯಿಂದ ಸಾವಿಗೀಡಾಗಿದ್ದಾರೆ.

ಪ್ರತಿ ರಾಜ್ಯವು ವಲಸಿಗರು ರಸ್ತೆಗಳಲ್ಲಿ ಅಥವಾ ರೈಲು ಹಳಿಗಳಲ್ಲಿ ನಡೆಯದಂತೆ ನೋಡಿಕೊಳ್ಳಬೇಕು ಎಂದು ಗೃಹ ಸಚಿವಾಲಯ ಇತ್ತೀಚೆಗೆ ಮಾರ್ಗಸೂಚಿಗಳನ್ನು ಹೊರಡಿಸಿದೆ.


ಓದಿ: ಹೋಗುವುದಾದರೆ ಎಲ್ಲಿಗೆ? ಇರುವುದಾದರೆ ಹೇಗೆ? ; ತುಮಕೂರಿನಲ್ಲಿ ಸಿಕ್ಕಿಕೊಂಡ ವಲಸೆ ಕಾರ್ಮಿಕರ ಗೋಳು


ನಮ್ಮ ಯೂಟ್ಯೂಬ್ ಚಾನೆಲ್ ಗೆ ಭೇಡಿ ನೀಡಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...