Homeಮುಖಪುಟವಲಸಿಗರ ಬಗ್ಗೆ ನಾವು ಯಾಕೆ ತೀರ್ಮಾನಿಸಬೇಕು, ರಾಜ್ಯಗಳು ತೀರ್ಮಾನಿಸಲಿ: ಸುಪ್ರೀಂ ಕೋರ್ಟ್

ವಲಸಿಗರ ಬಗ್ಗೆ ನಾವು ಯಾಕೆ ತೀರ್ಮಾನಿಸಬೇಕು, ರಾಜ್ಯಗಳು ತೀರ್ಮಾನಿಸಲಿ: ಸುಪ್ರೀಂ ಕೋರ್ಟ್

ವಕೀಲ ಅಲಖ್ ಅಲೋಕ್ ಶ್ರೀವಾಸ್ತವ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ, ರಸ್ತೆಗಳಲ್ಲಿ ನಡೆಯುತ್ತಿರುವ ವಲಸಿಗರನ್ನು ಗುರುತಿಸಿ ಅವರಿಗೆ ಆಹಾರ ಮತ್ತು ಆಶ್ರಯ ನೀಡುವಂತೆ ನ್ಯಾಯಾಲಯವು ಕೇಂದ್ರವನ್ನು ಕೇಳಬೇಕೆಂದು ಒತ್ತಾಯಿಸಿದ್ದರು.

- Advertisement -
- Advertisement -

ವಲಸಿಗರ ಆಹಾರ ಮತ್ತು ನೀರನ್ನು ಒದಗಿಸುವಂತೆ ಕೇಂದ್ರಕ್ಕೆ ಆದೇಶಿಸಬೇಕು ಎಂದು ಕೇಳಿದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಸುಪ್ರೀಂ ಕೋರ್ಟ್ “ಈ ನ್ಯಾಯಾಲಯವು ಯಾರು ನಡೆಯುತ್ತಿದ್ದಾರೆ ಯಾರು ನಡೆಯುತ್ತಿಲ್ಲ ಎಂದು ಮೇಲ್ವಿಚಾರಣೆ ಮಾಡುವುದು ಅಸಾಧ್ಯ” ಎಂದು ಹೇಳಿದೆ.

“ಇದನ್ನು ರಾಜ್ಯ ಸರ್ಕಾರ ತೀರ್ಮಾನಿಸಲಿ. ನ್ಯಾಯಾಲಯ ಏಕೆ ಕೇಳಬೇಕು ಅಥವಾ ತೀರ್ಮಾನಿಸಬೇಕು?” ಎಂದು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಾಗಿ ಹೇಳಿದೆ.

ವಕೀಲ ಅಲಖ್ ಅಲೋಕ್ ಶ್ರೀವಾಸ್ತವ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ, ರಸ್ತೆಗಳಲ್ಲಿ ನಡೆಯುತ್ತಿರುವ ವಲಸಿಗರನ್ನು ಗುರುತಿಸಿ ಅವರಿಗೆ ಆಹಾರ ಮತ್ತು ಆಶ್ರಯ ನೀಡುವಂತೆ ನ್ಯಾಯಾಲಯವು ಕೇಂದ್ರವನ್ನು ಕೇಳಬೇಕೆಂದು ಒತ್ತಾಯಿಸಿದ್ದರು.

ರೈಲ್ವೆ ಹಳಿಗಳಲ್ಲಿ ಮಲಗಿದ್ದ 16 ವಲಸಿಗರ ಮೇಲೆ ಸರಕು ರೈಲು ಓಡಿದ ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ನಡೆದ ಘಟನೆಯನ್ನೂ ವಕೀಲರು ಉಲ್ಲೇಖಿಸಿದ್ದರು.

ಇದನ್ನು ರಾಜ್ಯಗಳು ತೀರ್ಮಾನಿಸುವುದು ಎಂದ ಸುಪ್ರೀಂ ಕೋರ್ಟ್, “ಜನರು ನಡೆಯುತ್ತಿದ್ದಾರೆ ಅದನ್ನು ನಿಲ್ಲಿಸುವುದಿಲ್ಲ. ನಾವು ಅದನ್ನು ಹೇಗೆ ತಡೆಯಬಹುದು” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ರೈಲು ಅಪಘಾತದ ಬಗ್ಗೆ ಪ್ರತಿಕ್ರಿಯಿಸಿದ ನ್ಯಾಯಾಲಯವು “ಅವರು ರೈಲ್ವೆ ಹಳಿಗಳಲ್ಲಿ ಮಲಗಿದ್ದರೆ, ಅದನ್ನು ತಡೆಯಲು ಹೇಗೆ ಸಾಧ್ಯ?” ಎಂದು ಹೇಳಿದೆ.

ಅರ್ಜಿ ಸಲ್ಲಿಸಿದ ವಕೀಲರನ್ನು ಆಕ್ಷೇಪಿಸಿದ ನ್ಯಾಯಾಲಯವು, ಅರ್ಜಿಯು ವೃತ್ತಪತ್ರಿಕೆ ತುಣುಕುಗಳ ಮೇಲೆ ಸಂಪೂರ್ಣವಾಗಿ ಆಧಾರಿತವಾಗಿದೆ ಎಂದು ಹೇಳಿದೆ.

“ಪ್ರತಿಯೊಬ್ಬ ವಕೀಲರು ಪತ್ರಿಕೆಯಲ್ಲಿನ ಘಟನೆಗಳನ್ನು ಓದಿ, ಪ್ರತಿಯೊಂದು ವಿಷಯದ ಬಗ್ಗೆಯೂ ಜ್ಞಾನ ಹೊಂದುತ್ತಾರೆ. ನಿಮ್ಮ ಜ್ಞಾನವು ಸಂಪೂರ್ಣವಾಗಿ ವೃತ್ತಪತ್ರಿಕೆಯ ತುಣುಕುಗಳನ್ನು ಆಧರಿಸಿದೆ. ನಂತರ ಈ ನ್ಯಾಯಾಲಯವು ತೀರ್ಮಾನಿಸಬೇಕೆಂದು ನೀವು ಬಯಸುತ್ತೀರಿ. ಅದನ್ನು ರಾಜ್ಯವು ತೀರ್ಮಾನಿಸಲಿ. ಈ ನ್ಯಾಯಾಲಯ ಏಕೆ ತೀರ್ಮಾನಿಸಬೇಕು ಅಥವಾ ಕೇಳಬೇಕು? ನಾವು ನಿಮಗೆ ವಿಶೇಷ ಪಾಸ್ ನೀಡುತ್ತೇವೆ. ನೀವು ಹೋಗಿ ಸರ್ಕಾರದ ಆದೇಶಗಳನ್ನು ಜಾರಿಗೊಳಿಸಬಹುದೇ?” ಎಂದು ನ್ಯಾಯಾಲಯವೂ ಅರ್ಜಿಯನ್ನು ವಜಾಗೊಳಿಸಿ ಹೇಳಿದೆ.

ವಲಸಿಗರನ್ನು ಮನೆಗೆ ಕರೆದೊಯ್ಯಲು ಸರ್ಕಾರ ಈಗಾಗಲೇ ಸಾರಿಗೆ ವ್ಯವಸ್ಥೆ ಆರಂಭಿಸಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೇಂದ್ರ ಸರ್ಕಾರದ ಪರವಾಗಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.

ಇನ್ನೂ ಹೆದ್ದಾರಿಯಲ್ಲಿ ನಡೆಯುತ್ತಿರುವವರನ್ನು ಉಲ್ಲೇಖಿಸಿ “ರಾಜ್ಯಗಳ ನಡುವಿನ ಒಪ್ಪಂದಕ್ಕೆ ಒಳಪಟ್ಟು, ಪ್ರತಿಯೊಬ್ಬರಿಗೂ ಪ್ರಯಾಣಿಸಲು ಅವಕಾಶ ಸಿಗುತ್ತದೆ. ಅವರ ಮೇಲೆ ಬಲ ಪ್ರಯೋಗ ಮಾಡುವುದರಿಂದ ಪ್ರತಿಕೋಲ ಪರಿಣಾಮ ಉಂಟಾಗಬಹುದು” ಎಂದು ಕೇಂದ್ರ ಸರ್ಕಾರದ ಪರವಾಗಿ ವಕೀಲರು ಹೇಳಿದರು.

ರಾಷ್ಟ್ರವ್ಯಾಪಿ ಲಾಕ್ ಡೌನ್ ಆಗಿರುವುದರಿಂದ ಉದ್ಯೋಗ ಮತ್ತು ಆಶ್ರಯವಿಲ್ಲದೆ ಲಕ್ಷಾಂತರ ವಲಸಿಗರು ಸಾವಿರಾರು ಕಿ.ಮೀ ದೂರದಲ್ಲಿರುವ ತಮ್ಮ ಗ್ರಾಮಗಳಿಗೆ ಮಹಾವಲಸೆ ಹೊರಟಿದ್ದರು. ಈ ಸಮಯದಲ್ಲಿ ಹಲವಾರು ಜನರು ಅಫಘಾತ ಹಾಗೂ ಬಳಲಿಕೆಯಿಂದ ಸಾವಿಗೀಡಾಗಿದ್ದಾರೆ.

ಪ್ರತಿ ರಾಜ್ಯವು ವಲಸಿಗರು ರಸ್ತೆಗಳಲ್ಲಿ ಅಥವಾ ರೈಲು ಹಳಿಗಳಲ್ಲಿ ನಡೆಯದಂತೆ ನೋಡಿಕೊಳ್ಳಬೇಕು ಎಂದು ಗೃಹ ಸಚಿವಾಲಯ ಇತ್ತೀಚೆಗೆ ಮಾರ್ಗಸೂಚಿಗಳನ್ನು ಹೊರಡಿಸಿದೆ.


ಓದಿ: ಹೋಗುವುದಾದರೆ ಎಲ್ಲಿಗೆ? ಇರುವುದಾದರೆ ಹೇಗೆ? ; ತುಮಕೂರಿನಲ್ಲಿ ಸಿಕ್ಕಿಕೊಂಡ ವಲಸೆ ಕಾರ್ಮಿಕರ ಗೋಳು


ನಮ್ಮ ಯೂಟ್ಯೂಬ್ ಚಾನೆಲ್ ಗೆ ಭೇಡಿ ನೀಡಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...