Homeಮುಖಪುಟವಲಸಿಗರ ಬಗ್ಗೆ ನಾವು ಯಾಕೆ ತೀರ್ಮಾನಿಸಬೇಕು, ರಾಜ್ಯಗಳು ತೀರ್ಮಾನಿಸಲಿ: ಸುಪ್ರೀಂ ಕೋರ್ಟ್

ವಲಸಿಗರ ಬಗ್ಗೆ ನಾವು ಯಾಕೆ ತೀರ್ಮಾನಿಸಬೇಕು, ರಾಜ್ಯಗಳು ತೀರ್ಮಾನಿಸಲಿ: ಸುಪ್ರೀಂ ಕೋರ್ಟ್

ವಕೀಲ ಅಲಖ್ ಅಲೋಕ್ ಶ್ರೀವಾಸ್ತವ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ, ರಸ್ತೆಗಳಲ್ಲಿ ನಡೆಯುತ್ತಿರುವ ವಲಸಿಗರನ್ನು ಗುರುತಿಸಿ ಅವರಿಗೆ ಆಹಾರ ಮತ್ತು ಆಶ್ರಯ ನೀಡುವಂತೆ ನ್ಯಾಯಾಲಯವು ಕೇಂದ್ರವನ್ನು ಕೇಳಬೇಕೆಂದು ಒತ್ತಾಯಿಸಿದ್ದರು.

- Advertisement -
- Advertisement -

ವಲಸಿಗರ ಆಹಾರ ಮತ್ತು ನೀರನ್ನು ಒದಗಿಸುವಂತೆ ಕೇಂದ್ರಕ್ಕೆ ಆದೇಶಿಸಬೇಕು ಎಂದು ಕೇಳಿದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಸುಪ್ರೀಂ ಕೋರ್ಟ್ “ಈ ನ್ಯಾಯಾಲಯವು ಯಾರು ನಡೆಯುತ್ತಿದ್ದಾರೆ ಯಾರು ನಡೆಯುತ್ತಿಲ್ಲ ಎಂದು ಮೇಲ್ವಿಚಾರಣೆ ಮಾಡುವುದು ಅಸಾಧ್ಯ” ಎಂದು ಹೇಳಿದೆ.

“ಇದನ್ನು ರಾಜ್ಯ ಸರ್ಕಾರ ತೀರ್ಮಾನಿಸಲಿ. ನ್ಯಾಯಾಲಯ ಏಕೆ ಕೇಳಬೇಕು ಅಥವಾ ತೀರ್ಮಾನಿಸಬೇಕು?” ಎಂದು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಾಗಿ ಹೇಳಿದೆ.

ವಕೀಲ ಅಲಖ್ ಅಲೋಕ್ ಶ್ರೀವಾಸ್ತವ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ, ರಸ್ತೆಗಳಲ್ಲಿ ನಡೆಯುತ್ತಿರುವ ವಲಸಿಗರನ್ನು ಗುರುತಿಸಿ ಅವರಿಗೆ ಆಹಾರ ಮತ್ತು ಆಶ್ರಯ ನೀಡುವಂತೆ ನ್ಯಾಯಾಲಯವು ಕೇಂದ್ರವನ್ನು ಕೇಳಬೇಕೆಂದು ಒತ್ತಾಯಿಸಿದ್ದರು.

ರೈಲ್ವೆ ಹಳಿಗಳಲ್ಲಿ ಮಲಗಿದ್ದ 16 ವಲಸಿಗರ ಮೇಲೆ ಸರಕು ರೈಲು ಓಡಿದ ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ನಡೆದ ಘಟನೆಯನ್ನೂ ವಕೀಲರು ಉಲ್ಲೇಖಿಸಿದ್ದರು.

ಇದನ್ನು ರಾಜ್ಯಗಳು ತೀರ್ಮಾನಿಸುವುದು ಎಂದ ಸುಪ್ರೀಂ ಕೋರ್ಟ್, “ಜನರು ನಡೆಯುತ್ತಿದ್ದಾರೆ ಅದನ್ನು ನಿಲ್ಲಿಸುವುದಿಲ್ಲ. ನಾವು ಅದನ್ನು ಹೇಗೆ ತಡೆಯಬಹುದು” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ರೈಲು ಅಪಘಾತದ ಬಗ್ಗೆ ಪ್ರತಿಕ್ರಿಯಿಸಿದ ನ್ಯಾಯಾಲಯವು “ಅವರು ರೈಲ್ವೆ ಹಳಿಗಳಲ್ಲಿ ಮಲಗಿದ್ದರೆ, ಅದನ್ನು ತಡೆಯಲು ಹೇಗೆ ಸಾಧ್ಯ?” ಎಂದು ಹೇಳಿದೆ.

ಅರ್ಜಿ ಸಲ್ಲಿಸಿದ ವಕೀಲರನ್ನು ಆಕ್ಷೇಪಿಸಿದ ನ್ಯಾಯಾಲಯವು, ಅರ್ಜಿಯು ವೃತ್ತಪತ್ರಿಕೆ ತುಣುಕುಗಳ ಮೇಲೆ ಸಂಪೂರ್ಣವಾಗಿ ಆಧಾರಿತವಾಗಿದೆ ಎಂದು ಹೇಳಿದೆ.

“ಪ್ರತಿಯೊಬ್ಬ ವಕೀಲರು ಪತ್ರಿಕೆಯಲ್ಲಿನ ಘಟನೆಗಳನ್ನು ಓದಿ, ಪ್ರತಿಯೊಂದು ವಿಷಯದ ಬಗ್ಗೆಯೂ ಜ್ಞಾನ ಹೊಂದುತ್ತಾರೆ. ನಿಮ್ಮ ಜ್ಞಾನವು ಸಂಪೂರ್ಣವಾಗಿ ವೃತ್ತಪತ್ರಿಕೆಯ ತುಣುಕುಗಳನ್ನು ಆಧರಿಸಿದೆ. ನಂತರ ಈ ನ್ಯಾಯಾಲಯವು ತೀರ್ಮಾನಿಸಬೇಕೆಂದು ನೀವು ಬಯಸುತ್ತೀರಿ. ಅದನ್ನು ರಾಜ್ಯವು ತೀರ್ಮಾನಿಸಲಿ. ಈ ನ್ಯಾಯಾಲಯ ಏಕೆ ತೀರ್ಮಾನಿಸಬೇಕು ಅಥವಾ ಕೇಳಬೇಕು? ನಾವು ನಿಮಗೆ ವಿಶೇಷ ಪಾಸ್ ನೀಡುತ್ತೇವೆ. ನೀವು ಹೋಗಿ ಸರ್ಕಾರದ ಆದೇಶಗಳನ್ನು ಜಾರಿಗೊಳಿಸಬಹುದೇ?” ಎಂದು ನ್ಯಾಯಾಲಯವೂ ಅರ್ಜಿಯನ್ನು ವಜಾಗೊಳಿಸಿ ಹೇಳಿದೆ.

ವಲಸಿಗರನ್ನು ಮನೆಗೆ ಕರೆದೊಯ್ಯಲು ಸರ್ಕಾರ ಈಗಾಗಲೇ ಸಾರಿಗೆ ವ್ಯವಸ್ಥೆ ಆರಂಭಿಸಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೇಂದ್ರ ಸರ್ಕಾರದ ಪರವಾಗಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.

ಇನ್ನೂ ಹೆದ್ದಾರಿಯಲ್ಲಿ ನಡೆಯುತ್ತಿರುವವರನ್ನು ಉಲ್ಲೇಖಿಸಿ “ರಾಜ್ಯಗಳ ನಡುವಿನ ಒಪ್ಪಂದಕ್ಕೆ ಒಳಪಟ್ಟು, ಪ್ರತಿಯೊಬ್ಬರಿಗೂ ಪ್ರಯಾಣಿಸಲು ಅವಕಾಶ ಸಿಗುತ್ತದೆ. ಅವರ ಮೇಲೆ ಬಲ ಪ್ರಯೋಗ ಮಾಡುವುದರಿಂದ ಪ್ರತಿಕೋಲ ಪರಿಣಾಮ ಉಂಟಾಗಬಹುದು” ಎಂದು ಕೇಂದ್ರ ಸರ್ಕಾರದ ಪರವಾಗಿ ವಕೀಲರು ಹೇಳಿದರು.

ರಾಷ್ಟ್ರವ್ಯಾಪಿ ಲಾಕ್ ಡೌನ್ ಆಗಿರುವುದರಿಂದ ಉದ್ಯೋಗ ಮತ್ತು ಆಶ್ರಯವಿಲ್ಲದೆ ಲಕ್ಷಾಂತರ ವಲಸಿಗರು ಸಾವಿರಾರು ಕಿ.ಮೀ ದೂರದಲ್ಲಿರುವ ತಮ್ಮ ಗ್ರಾಮಗಳಿಗೆ ಮಹಾವಲಸೆ ಹೊರಟಿದ್ದರು. ಈ ಸಮಯದಲ್ಲಿ ಹಲವಾರು ಜನರು ಅಫಘಾತ ಹಾಗೂ ಬಳಲಿಕೆಯಿಂದ ಸಾವಿಗೀಡಾಗಿದ್ದಾರೆ.

ಪ್ರತಿ ರಾಜ್ಯವು ವಲಸಿಗರು ರಸ್ತೆಗಳಲ್ಲಿ ಅಥವಾ ರೈಲು ಹಳಿಗಳಲ್ಲಿ ನಡೆಯದಂತೆ ನೋಡಿಕೊಳ್ಳಬೇಕು ಎಂದು ಗೃಹ ಸಚಿವಾಲಯ ಇತ್ತೀಚೆಗೆ ಮಾರ್ಗಸೂಚಿಗಳನ್ನು ಹೊರಡಿಸಿದೆ.


ಓದಿ: ಹೋಗುವುದಾದರೆ ಎಲ್ಲಿಗೆ? ಇರುವುದಾದರೆ ಹೇಗೆ? ; ತುಮಕೂರಿನಲ್ಲಿ ಸಿಕ್ಕಿಕೊಂಡ ವಲಸೆ ಕಾರ್ಮಿಕರ ಗೋಳು


ನಮ್ಮ ಯೂಟ್ಯೂಬ್ ಚಾನೆಲ್ ಗೆ ಭೇಡಿ ನೀಡಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...