Homeಮುಖಪುಟವಲಸಿಗರ ಬಗ್ಗೆ ನಾವು ಯಾಕೆ ತೀರ್ಮಾನಿಸಬೇಕು, ರಾಜ್ಯಗಳು ತೀರ್ಮಾನಿಸಲಿ: ಸುಪ್ರೀಂ ಕೋರ್ಟ್

ವಲಸಿಗರ ಬಗ್ಗೆ ನಾವು ಯಾಕೆ ತೀರ್ಮಾನಿಸಬೇಕು, ರಾಜ್ಯಗಳು ತೀರ್ಮಾನಿಸಲಿ: ಸುಪ್ರೀಂ ಕೋರ್ಟ್

ವಕೀಲ ಅಲಖ್ ಅಲೋಕ್ ಶ್ರೀವಾಸ್ತವ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ, ರಸ್ತೆಗಳಲ್ಲಿ ನಡೆಯುತ್ತಿರುವ ವಲಸಿಗರನ್ನು ಗುರುತಿಸಿ ಅವರಿಗೆ ಆಹಾರ ಮತ್ತು ಆಶ್ರಯ ನೀಡುವಂತೆ ನ್ಯಾಯಾಲಯವು ಕೇಂದ್ರವನ್ನು ಕೇಳಬೇಕೆಂದು ಒತ್ತಾಯಿಸಿದ್ದರು.

- Advertisement -
- Advertisement -

ವಲಸಿಗರ ಆಹಾರ ಮತ್ತು ನೀರನ್ನು ಒದಗಿಸುವಂತೆ ಕೇಂದ್ರಕ್ಕೆ ಆದೇಶಿಸಬೇಕು ಎಂದು ಕೇಳಿದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಸುಪ್ರೀಂ ಕೋರ್ಟ್ “ಈ ನ್ಯಾಯಾಲಯವು ಯಾರು ನಡೆಯುತ್ತಿದ್ದಾರೆ ಯಾರು ನಡೆಯುತ್ತಿಲ್ಲ ಎಂದು ಮೇಲ್ವಿಚಾರಣೆ ಮಾಡುವುದು ಅಸಾಧ್ಯ” ಎಂದು ಹೇಳಿದೆ.

“ಇದನ್ನು ರಾಜ್ಯ ಸರ್ಕಾರ ತೀರ್ಮಾನಿಸಲಿ. ನ್ಯಾಯಾಲಯ ಏಕೆ ಕೇಳಬೇಕು ಅಥವಾ ತೀರ್ಮಾನಿಸಬೇಕು?” ಎಂದು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಾಗಿ ಹೇಳಿದೆ.

ವಕೀಲ ಅಲಖ್ ಅಲೋಕ್ ಶ್ರೀವಾಸ್ತವ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ, ರಸ್ತೆಗಳಲ್ಲಿ ನಡೆಯುತ್ತಿರುವ ವಲಸಿಗರನ್ನು ಗುರುತಿಸಿ ಅವರಿಗೆ ಆಹಾರ ಮತ್ತು ಆಶ್ರಯ ನೀಡುವಂತೆ ನ್ಯಾಯಾಲಯವು ಕೇಂದ್ರವನ್ನು ಕೇಳಬೇಕೆಂದು ಒತ್ತಾಯಿಸಿದ್ದರು.

ರೈಲ್ವೆ ಹಳಿಗಳಲ್ಲಿ ಮಲಗಿದ್ದ 16 ವಲಸಿಗರ ಮೇಲೆ ಸರಕು ರೈಲು ಓಡಿದ ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ನಡೆದ ಘಟನೆಯನ್ನೂ ವಕೀಲರು ಉಲ್ಲೇಖಿಸಿದ್ದರು.

ಇದನ್ನು ರಾಜ್ಯಗಳು ತೀರ್ಮಾನಿಸುವುದು ಎಂದ ಸುಪ್ರೀಂ ಕೋರ್ಟ್, “ಜನರು ನಡೆಯುತ್ತಿದ್ದಾರೆ ಅದನ್ನು ನಿಲ್ಲಿಸುವುದಿಲ್ಲ. ನಾವು ಅದನ್ನು ಹೇಗೆ ತಡೆಯಬಹುದು” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ರೈಲು ಅಪಘಾತದ ಬಗ್ಗೆ ಪ್ರತಿಕ್ರಿಯಿಸಿದ ನ್ಯಾಯಾಲಯವು “ಅವರು ರೈಲ್ವೆ ಹಳಿಗಳಲ್ಲಿ ಮಲಗಿದ್ದರೆ, ಅದನ್ನು ತಡೆಯಲು ಹೇಗೆ ಸಾಧ್ಯ?” ಎಂದು ಹೇಳಿದೆ.

ಅರ್ಜಿ ಸಲ್ಲಿಸಿದ ವಕೀಲರನ್ನು ಆಕ್ಷೇಪಿಸಿದ ನ್ಯಾಯಾಲಯವು, ಅರ್ಜಿಯು ವೃತ್ತಪತ್ರಿಕೆ ತುಣುಕುಗಳ ಮೇಲೆ ಸಂಪೂರ್ಣವಾಗಿ ಆಧಾರಿತವಾಗಿದೆ ಎಂದು ಹೇಳಿದೆ.

“ಪ್ರತಿಯೊಬ್ಬ ವಕೀಲರು ಪತ್ರಿಕೆಯಲ್ಲಿನ ಘಟನೆಗಳನ್ನು ಓದಿ, ಪ್ರತಿಯೊಂದು ವಿಷಯದ ಬಗ್ಗೆಯೂ ಜ್ಞಾನ ಹೊಂದುತ್ತಾರೆ. ನಿಮ್ಮ ಜ್ಞಾನವು ಸಂಪೂರ್ಣವಾಗಿ ವೃತ್ತಪತ್ರಿಕೆಯ ತುಣುಕುಗಳನ್ನು ಆಧರಿಸಿದೆ. ನಂತರ ಈ ನ್ಯಾಯಾಲಯವು ತೀರ್ಮಾನಿಸಬೇಕೆಂದು ನೀವು ಬಯಸುತ್ತೀರಿ. ಅದನ್ನು ರಾಜ್ಯವು ತೀರ್ಮಾನಿಸಲಿ. ಈ ನ್ಯಾಯಾಲಯ ಏಕೆ ತೀರ್ಮಾನಿಸಬೇಕು ಅಥವಾ ಕೇಳಬೇಕು? ನಾವು ನಿಮಗೆ ವಿಶೇಷ ಪಾಸ್ ನೀಡುತ್ತೇವೆ. ನೀವು ಹೋಗಿ ಸರ್ಕಾರದ ಆದೇಶಗಳನ್ನು ಜಾರಿಗೊಳಿಸಬಹುದೇ?” ಎಂದು ನ್ಯಾಯಾಲಯವೂ ಅರ್ಜಿಯನ್ನು ವಜಾಗೊಳಿಸಿ ಹೇಳಿದೆ.

ವಲಸಿಗರನ್ನು ಮನೆಗೆ ಕರೆದೊಯ್ಯಲು ಸರ್ಕಾರ ಈಗಾಗಲೇ ಸಾರಿಗೆ ವ್ಯವಸ್ಥೆ ಆರಂಭಿಸಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೇಂದ್ರ ಸರ್ಕಾರದ ಪರವಾಗಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.

ಇನ್ನೂ ಹೆದ್ದಾರಿಯಲ್ಲಿ ನಡೆಯುತ್ತಿರುವವರನ್ನು ಉಲ್ಲೇಖಿಸಿ “ರಾಜ್ಯಗಳ ನಡುವಿನ ಒಪ್ಪಂದಕ್ಕೆ ಒಳಪಟ್ಟು, ಪ್ರತಿಯೊಬ್ಬರಿಗೂ ಪ್ರಯಾಣಿಸಲು ಅವಕಾಶ ಸಿಗುತ್ತದೆ. ಅವರ ಮೇಲೆ ಬಲ ಪ್ರಯೋಗ ಮಾಡುವುದರಿಂದ ಪ್ರತಿಕೋಲ ಪರಿಣಾಮ ಉಂಟಾಗಬಹುದು” ಎಂದು ಕೇಂದ್ರ ಸರ್ಕಾರದ ಪರವಾಗಿ ವಕೀಲರು ಹೇಳಿದರು.

ರಾಷ್ಟ್ರವ್ಯಾಪಿ ಲಾಕ್ ಡೌನ್ ಆಗಿರುವುದರಿಂದ ಉದ್ಯೋಗ ಮತ್ತು ಆಶ್ರಯವಿಲ್ಲದೆ ಲಕ್ಷಾಂತರ ವಲಸಿಗರು ಸಾವಿರಾರು ಕಿ.ಮೀ ದೂರದಲ್ಲಿರುವ ತಮ್ಮ ಗ್ರಾಮಗಳಿಗೆ ಮಹಾವಲಸೆ ಹೊರಟಿದ್ದರು. ಈ ಸಮಯದಲ್ಲಿ ಹಲವಾರು ಜನರು ಅಫಘಾತ ಹಾಗೂ ಬಳಲಿಕೆಯಿಂದ ಸಾವಿಗೀಡಾಗಿದ್ದಾರೆ.

ಪ್ರತಿ ರಾಜ್ಯವು ವಲಸಿಗರು ರಸ್ತೆಗಳಲ್ಲಿ ಅಥವಾ ರೈಲು ಹಳಿಗಳಲ್ಲಿ ನಡೆಯದಂತೆ ನೋಡಿಕೊಳ್ಳಬೇಕು ಎಂದು ಗೃಹ ಸಚಿವಾಲಯ ಇತ್ತೀಚೆಗೆ ಮಾರ್ಗಸೂಚಿಗಳನ್ನು ಹೊರಡಿಸಿದೆ.


ಓದಿ: ಹೋಗುವುದಾದರೆ ಎಲ್ಲಿಗೆ? ಇರುವುದಾದರೆ ಹೇಗೆ? ; ತುಮಕೂರಿನಲ್ಲಿ ಸಿಕ್ಕಿಕೊಂಡ ವಲಸೆ ಕಾರ್ಮಿಕರ ಗೋಳು


ನಮ್ಮ ಯೂಟ್ಯೂಬ್ ಚಾನೆಲ್ ಗೆ ಭೇಡಿ ನೀಡಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...