Homeಕರ್ನಾಟಕಸ್ಪೀಕರ್ ಕೇವಲ ಮೂರು ಜನರನ್ನು ಮಾತ್ರ ಅನರ್ಹ ಮಾಡಿದ್ದೇಕೆ? ಯಡ್ಡಿ ಸಿಎಂ ಹಾದಿಗೆ ಅಡ್ಡಿ ಯಾರು...

ಸ್ಪೀಕರ್ ಕೇವಲ ಮೂರು ಜನರನ್ನು ಮಾತ್ರ ಅನರ್ಹ ಮಾಡಿದ್ದೇಕೆ? ಯಡ್ಡಿ ಸಿಎಂ ಹಾದಿಗೆ ಅಡ್ಡಿ ಯಾರು ಗೊತ್ತಾ?

- Advertisement -
- Advertisement -

ಸ್ಪೀಕರ್ ಕೇವಲ ಮೂರು ಜನರನ್ನು ಮಾತ್ರ ಅನರ್ಹ ಮಾಡಿದ್ದೇಕೆ? ಯಡ್ಡಿ ಸಿಎಂ ಹಾದಿಗೆ ಅಡ್ಡಿ ಯಾರು? ಇಂದು ಸಂಜೆ ಸ್ಪೀಕರ್ ರಮೇಶ್ ಕುಮಾರ್ ರವರು ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಮತ್ತು ಆರ್.ಶಂಕರ್ ರವರನ್ನು ಮಾತ್ರ 15ನೇ ವಿಧಾನಸಭಾ ಅವಧಿ ಮುಗಿಯುವ 2023ರವರೆಗೂ ಅವರ ಶಾಸಕ ಸ್ಥಾನಕ್ಕೆ ಅನರ್ಹ ಮಾಡಿದ ನಂತರ ಈ ಮೇಲಿನ ಪ್ರಶ್ನೆ ನಿಮಗೂ ಬಂದಿರಬಹುದು.

ಹೌದು ಒಮ್ಮೆಗೆ ರಾಜೀನಾಮೆ ಕೊಟ್ಟಿರುವ ಎಲ್ಲಾ ಅತೃಪ್ತ ಶಾಸಕರನ್ನು ಅನರ್ಹ ಮಾಡಿದ್ದರೆ ಯಾವುದಾದರೂ ಕ್ರಮಕ್ಕೆ ದಾರಿ ಸುಗಮವಿತ್ತು. ಆದರೆ ಈಗಹಾಗಾಗುತ್ತಿಲ್ಲ. ಸ್ಪೀಕರ್ ಕ್ರಮ ತೆಗೆದುಕೊಳ್ಳುವವರೆಗೆ ಹೊಸ ಸರ್ಕಾರ ಮಾಡುವುದು ಬೇಡ ಎಂದು ಸ್ಪಷ್ಟ ಸಂದೇಶ ನೀಡಿದ್ದ ಬಿಜೆಪಿ ಹೈಕಮಾಂಡ್ ಗೆ ಇನ್ನೂಗೊಂದಲ ಮುಂದುವರೆಯುತ್ತಿದೆ. ಅಷ್ಟರ ಮಟ್ಟಿಗೆ ಸ್ಪೀಕರ್ ರಮೇಶ್ ಕುಮಾರ್ ಚಾಣಾಕ್ಷ ನಡೆ ಇಟ್ಟಿದ್ದಾರೆ.

ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಉಸ್ತುವಾರಿ ಸಿಎಂ ಕುಮಾರಸ್ವಾಮಿ ಒಂದು ಮಾತು ಹೇಳಿದ್ದರು. ಅದೇನೆಂದರೆ ಮುಂದೆ ಬರುವ ಸರ್ಕಾರವೂ ಕೂಡ ಅಸ್ಥಿರ ಸರ್ಕಾರವೇ ಆಗಲಿದ್ದು ಎಷ್ಟು ದಿನ ಉಳಿಯುತ್ತೆ ಅಂತ ಖಚಿತವಾಗಿ ಹೇಳಲ್ಲಿಕ್ಕೆ ಬರುವುದಿಲ್ಲ, ಏನು ಬೇಕಾದರೂ ಆಗಬಹುದು ಎಂದಿದ್ದರು. ಆ ಮಾತನ್ನು ನಿಜ ಮಾಡುವಂತೆ ಇಂದು ಸ್ಪೀಕರ್ ರವರ ತೀರ್ಮಾನ ಹೊರಬಿದ್ದಿದೆ.

ಸ್ಪೀಕರ್ ಇಂದು ಕೇವಲ 3 ಶಾಸಕರನ್ನು ಅನರ್ಹತೆ ಮಾಡಿದ್ದರಿಂದ, ಉಳಿದ ಅತೃಪ್ತರ ನಡೆಯ ಬಗ್ಗೆ ಕುತೂಹಲ ಉಳಿಯುವಂತೆ ಆಗಿದೆ. ಈ ಮೂವರು ಸುಪ್ರೀಂಕೋರ್ಟ್ ಗೆ ಹೋಗುವ ಅವಕಾಶವಿದ್ದರೂ ಸಹ ಸ್ಪೀಕರ್ ತಮ್ಮ ಆದೇಶ ಕೋರ್ಟಿನಲ್ಲಿ ಅಷ್ಟು ಸುಲಭಕ್ಕೆ ಬಿದ್ದು ಹೋಗದಂತೆ ಬಹಳ ಎಚ್ಚರಿಕೆ ವಹಿಸಿದ್ದಾರೆ. ಇದರಿಂದಉಳಿದ ಶಾಸಕರು ಭಯಗೊಂಡು ವಾಪಸ್ ಬರಬಹುದು ಅಥವಾ ಬಿಜೆಪಿಗೆ ಬೆಂಬಲ ಕೊಡಲು ಹಿಂದೇಟು ಹಾಕಬಹುದು ಎಂಬುದು ಮೈತ್ರಿ ಪಕ್ಷಗಳ ಮೊದಲನೇ ಲೆಕ್ಕಾಚಾರ.

ಎರಡನೆಯದಾಗಿ ಈ ರೀತಿಯ ವಿಳಂಬದಿಂದ ಕುದ್ದು ಹೋಗುತ್ತಿರುವ, ಇದರಿಂದ ಹೆಚ್ಚು ನೊಂದುಕೊಂಡಿರುವ ವ್ಯಕ್ತಿಯೆಂದರೆ ಅದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ. ಸಿಎಂ ಆಗಿಯೇ ತೀರಬೇಕೆಂಬ ಧಾವಂತದಲ್ಲಿದ್ದ ಯಡಿಯೂರಪ್ಪನವರ ತಾಳ್ಮೆ ಹೆಚ್ಚು ಕಾಲ ಉಳಿಯುತ್ತದಾ ಹೇಳಲು ಬಾರದು. ಅತ್ತ ಹೈಕಮಾಂಡ್ ಕೂಡ ಯಡಿಯೂರಪ್ಪನವರೇ ಮುಖ್ಯಮಂತ್ರಿ ಎಂದು ಘೋಷಿಸಿಲ್ಲ, ಇತ್ತ ಎಲ್ಲಾ ಶಾಸಕರ ಅನರ್ಹತೆ ದೂರು ಬೇಗ ಬಗೆಹರಿಯುತ್ತಿಲ್ಲವಾದ್ದರಿಂದ ಬಿಜೆಪಿಯೊಳಗೆಯೇ ಭಿನ್ನಮತ ಸ್ಫೋಟಗೊಳ್ಳಬಹುದೆಂಬುದು ಕಾಂಗ್ರೆಸ್ ಜೆಡಿಎಸ್ ಮೈತ್ರಿಯ ಲೆಕ್ಕಾಚಾರವಾಗಿದೆ.

ಹೌದು. ಬಿಜೆಪಿಯೊಳಗೆ ಎಲ್ಲವೂ ಸರಿಯಿಲ್ಲವೆಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಅದರಲ್ಲೂ 76 ವರ್ಷದ ಯಡಿಯೂರಪ್ಪನವರಿಗೆ ಅಧಿಕಾರ ಕೊಡುವುದು ಮೋದಿ-ಶಾರು ಜಾರಿಗೆ ತಂದಿರುವ ಬಿಜೆಪಿಯ ಹೊಸ ನೀತಿಗೆ ವಿರುದ್ಧವಾದುದು. ಆದರೆ ಯಡಿಯೂರಪ್ಪನವರಿಗೆ ಅಧಿಕಾರ ಕೊಡದಿದ್ದರೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಕನಸಿನ ಮಾತು. ಇದಕ್ಕೆ ಸ್ಪಷ್ಟ ಪುರಾವೆಯೂ ಈಗಾಗಲೇ ಸಿಕ್ಕಿದೆ. 2013ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ನೋಡಿ ಬಿಜೆಪಿ ಅನುಭವಿಸಿದ್ದಾಗಿದೆ.

ಇಂತಹ ದ್ವಂದ್ವ ವೈರುಧ್ಯಗಳ ಪರಿಸ್ಥಿತಿ ಈಗ ಬಿಜೆಪಿಯದ್ದಾಗಿದೆ. ಇದನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಎಂಜಾಯ್ ಮಾಡುತ್ತಾ ನೋಡುತ್ತಿದೆ. ನಾವು ಸರ್ಕಾರ ರಚಿಸದಿದ್ದರೂ ಪರವಾಗಿಲ್ಲ, ನಮ್ಮ ಸರ್ಕಾರ ಬೀಳಿಸಿ ತೊಂದರೆ ಕೊಟ್ಟ ಬಿಜೆಪಿಯವರಿಗೆ ತೊಂದರೆ ಕೊಡಬೇಕೆನ್ನುವ ತಂತ್ರವನ್ನು ಆ ಎರಡುಪಕ್ಷಗಳು ಹೂಡಿದ್ದಂತಿದೆ.

ಇನ್ನು ಬಿಜೆಪಿ 105+ಒಬ್ಬರು ಪಕ್ಷೇತರ ಶಾಸಕರನ್ನು ನಂಬಿಕೊಂಡು ಸರಳ ಬಹುಮತವನ್ನಿಟ್ಟುಕೊಂಡು ಸರ್ಕಾರ ರಚನೆ ಮಾಡುವುದು ಅಪಾಯಕಾರಿ. ಅಂತಹ ಸನ್ನಿವೇಶದಲ್ಲಿ ಏನಾಗಬಹುದೆಂಬ ಪಾಠವನ್ನು ಈಗಾಗಲೇ ಜೆಡಿಎಸ್ ಕಾಂಗ್ರೆಸ್ ಗೆ ಸ್ವತಃ ಬಿಜೆಪಿಯೇ ಕಲಿಸಿದೆ. ಅದೇ ಪರಿಸ್ಥಿತಿ ತಮಗೆ ಬರುವುದಿಲ್ಲವೆನ್ನುವುದಕ್ಕೆ ಯಾವ ಗ್ಯಾರಂಟಿ. ಆಗಲಿ ಡಿಸಿಎಂ ಹುದ್ದೆಯ ವಿಚಾರದಲ್ಲಿ ಬಿಜೆಪಿಯೊಳಗೆ ದೊಡ್ಡ ಚರ್ಚೆಗಳು ಶುರುವಾಗಿ ಮುಂದೆ ಅಧಿಕಾರಕ್ಕಾಗಿ ಎಂತಹ ಪೈಪೋಟಿ ಇರುತ್ತದೆಎಂಬುದರ ಟ್ರೇಲರ್ ತೋರಿಸುತ್ತಿದ್ದಾರೆ. ಪಿಕ್ಚರ್ ಇನ್ನು ಹಾರಿಬಲ್ ಆಗಿರುವುದರಲ್ಲಿ ಸಂಶಯವಿಲ್ಲ.

ಇದೆಲ್ಲಾ ಕಷ್ಟ ಇರುವುದರಿಂದ ‘ರಾಷ್ಟ್ರಪತಿ ಆಡಳಿತ ತರೋಣ, ನೇರವಾಗಿ ಚುನಾವಣೆಗೆ ಹೋಗೋಣ’ ಎಂದರೆ ಅದಕ್ಕೆ ಯಡಿಯೂರಪ್ಪ ಸುತರಾಂ ಒಪ್ಪುವುದಿಲ್ಲ. ಇನ್ನು ಆರು ತಿಂಗಳು ಅಲ್ಲ ಇನ್ನು ದಿನ ಕಾಯುವುದು ಸಹ ಅವರಿಂದ ಸಾಧ್ಯವಿಲ್ಲ. ಎಷ್ಟೆಲ್ಲಾ ಕಷ್ಟಪಟ್ಟು ಪಕ್ಷ ಕಟ್ಟಿ, ಒಮ್ಮೆ ಅಧಿಕಾರಕ್ಕೆ ತಂದು ಎರಡೇ ವರ್ಷದಲ್ಲಿ ಅಧಿಕಾರದಿಂದ ಕೆಳಗಿಳಿದಿದ್ದರು. ಅಲ್ಲಿಂದ ಮತ್ತೆ ಮುಖ್ಯಮಂತ್ರಿ ಆಗಬೇಕೆಂದು ಕನಸು ಕಾಣುತ್ತಿರುವ ಯಡಿಯೂರಪ್ಪ ಕಳೆದ ವರ್ಷ ಮುಖ್ಯಮಂತ್ರಿಯೂ ಆಗಿ ಕೇವಲ 3 ದಿನಕ್ಕೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗಿ ಬಂದ ಅವಮಾನವನ್ನು ಇನ್ನು ಮರೆತಿಲ್ಲ.

ಇನ್ನು ಚುನಾವಣೆಯಲ್ಲಿ ಬಿಜೆಪಿ ಬರುತ್ತದೆ ಎಂಬುದಕ್ಕೆ ಗ್ಯಾರಂಟಿಯೇನು? ರಾಜ್ಯದ ಚುನಾವಣೆಗಳು ನಡೆಯುವುದು ರಾಜ್ಯದ ಇಶ್ಯೂಗಳ ಮೇಲೆ. ಹಾಗೆ ನೋಡಿದರೆ ರಾಜ್ಯಕ್ಕೆ ಬಿಜೆಪಿ ಮಾಡಿದ್ದು ಅಷ್ಟರಲ್ಲೇ ಇದೆ. ಇನ್ನು ಈ ವರ್ಷ ಆಪರೇಷನ್ ಕಮಲ ಮಾಡುವ ಮೂಲಕ ರಾಜ್ಯ ಸರ್ಕಾರ ಕೆಡವಿರುವ ಅಪವಾದವೂ  ಬಿಜೆಪಿಯ ಮೇಲಿದೆ. ಜನ ಅತೃಪ್ತ ಶಾಸಕರ ಬಗ್ಗೆ ವಿಶೇಷ ಒಲವು ತೋರುತ್ತಾರೆ ಎಂಬುದಕ್ಕೆ ಯಾವ ಪುರಾವೆಯೂ ಇಲ್ಲ. ಈ ಮುಖವನ್ನಿಟ್ಟುಕೊಂಡು ಚುನಾವಣೆಗೆ ಹೋದರೆ ಗೆಲುವು ಸುಲಭವಿಲ್ಲ. ಮುಖ್ಯವಾಗಿ ಒಕ್ಕಲಿಗ ಸಮುದಾಯದವರು ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಕೋಪದಿಂದ ಕುದಿಯುತ್ತಿದ್ದಾರೆ. ಜೆಡಿಎಸ್ ಕಾಂಗ್ರೆಸ್ ಗೆ ಅನುಕಂಪದ ವಾತವಾರಣವಿದೆ ಎಂಬುದು ಬಿಜೆಪಿಗೂ ಗೊತ್ತು.

ಸರಿ ಅಂತೂ ಚುನಾವಣೆಗೆ ಹೋಗಿ ಗೆದ್ದರೂ ಯಡಿಯೂರಪ್ಪನವರೆ ಮುಖ್ಯಮಂತ್ರಿ ಎಂಬುದಕ್ಕೆ ಗ್ಯಾರಂಟಿಯೇನು? ಬಿಜೆಪಿಯಲ್ಲಿ ಸಂಘಪರಿವಾರದ ಹಿನ್ನೆಲೆಯ, ಆದರೆ ಭ್ರಷ್ಟಾಚಾರದ ಹಿನ್ನೆಲೆಯಿರದ ವ್ಯಕ್ತಿ ಸಿಎಂ ಆದರೆ ಒಳ್ಳೆಯದು ಎಂಬುದು ಹೈಕಮಾಂಡ್ ಆಸೆ. ಹಾಗಾದಾಗ ಮಾತ್ರ ಇಡೀ ದಕ್ಷಿಣ ಭಾರತದಲ್ಲಿ ಪ್ರವೇಶ ಪಡೆಯಲುಸಾಧ್ಯ ಎಂಬ ನಿಲುವು ಅವರದು. ಅದಕ್ಕೆ ಯಡಿಯೂರಪ್ಪ ಬಿಜೆಪಿ ಹೈಕಮಾಂಡ್ ಪಾಲಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದ್ದಾರೆ. ಯಡಿಯೂರಪ್ಪನವರನ್ನೇ ಸಿಎಂ ಮಾಡಿ ಏನಾದರೂ ಅವಾಂತರವಾಗಿ ಮತ್ತೆ ಚುನಾವಣೆಗೆ ಹೋದರೆ ಗೆಲ್ಲುವುದು ಸಾಧ್ಯವಿಲ್ಲ. ಇನ್ನು ಯಡಿಯೂರಪ್ಪನವರನ್ನು ಸಿಎಂ ಮಾಡದಿದ್ದರೆ ಪಾರ್ಟಿ ಹೋಳಾಗುವುದರಲ್ಲಿ ಎರಡು ಮಾತಿಲ್ಲ. ತ್ರಿಶಂಕು ಸ್ಥಿತಿಯಲ್ಲಿ ಬಿಜೆಪಿ ಹೈಕಮಾಂಡ್ ಒದ್ದಾಡುತ್ತಿದೆ.

ಕೊನೆಯದಾಗಿ ರಾಜೀನಾಮೆ ಕೊಟ್ಟು, ಸರ್ಕಾರ ಬೀಳಲು ಕಾರಣವಾಗಿರುವ ಈ ಅತೃಪ್ತ ಶಾಸಕರೆನಿಸಿಕೊಂಡವರ ಬಗ್ಗೆ ಈಗ ಬಿಜೆಪಿಯ ಅಭಿಪ್ರಾಯವೇನು? 15 ಜನಇದ್ದಾರೆ. ಅವರು ಅನರ್ಹವಾಗದೇ ಬಿಜೆಪಿ ಸೇರಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದರೆ ಹೆಚ್ಚು ಕಮ್ಮಿ ಒಟ್ಟು ಸಚಿವ ಸ್ಥಾನಗಳಲ್ಲಿ ಅರ್ಧದಷ್ಟನ್ನು ಇವರಿಗೆ ಕೊಡಬೇಕು. ಇದರಿಂದ ಪಕ್ಷದಲ್ಲಿ ಬಂಡಾಯವೇಳುವುದು ಸಾಧ್ಯ. ಅದರ ಬದಲು ಇವರಿಗೆ ಬೇರೆ ರೀತಿಯಲ್ಲಿ ಸಮಾಧಾನಪಡಿಸಿ ಕೈತೊಳೆದುಕೊಳ್ಳಬೇಕೆಂಬುದು ಬಿಜೆಪಿಯ ಇನ್ನೊಂದು ಬಣದ ಹುನ್ನಾರವಿದ್ದಂತೆ ತೋರುತ್ತಿದೆ. ಹಾಗಾಗಿ ಅವರೆಲ್ಲರೂ ಅನರ್ಹರಾದರೆ ಸಾಕು ಎಂದು ಪ್ರಾರ್ಥಿಸುತ್ತಿದ್ದಾರೆ. ಇನ್ನು ಜೆಡಿಎಸ್ ಕಾಂಗ್ರೆಸ್ ಬೆನ್ನಿಗೆಚೂರಿ ಹಾಕಿ ಪಕ್ಷಕ್ಕೆ ದ್ರೋಹ ಬಗೆದ ಇವರನ್ನು ಪಕ್ಷಕ್ಕೆ ವಾಪಸ್ ಸೇರಿಸಿಕೊಳ್ಳುವ ಮಾತೇ ಇಲ್ಲ ಎಂದು ಆಯಾ ಪಕ್ಷದ ನಾಯಕರುಗಳು ಖಡಕ್ ಆಗಿ ಹೇಳಿದ್ದಾರೆ.

ಹಾಗಾಗಿಯೇ ಸ್ಪೀಕರ್ ರಮೇಶ್ ಕುಮಾರ್ ರವರು ಭಾರೀ ಪ್ಲಾನ್ ಮಾಡಿ ಎಲ್ಲರನ್ನು ಅನರ್ಹ ಮಾಡುವ ಬದಲು ಕೆಲವರನ್ನೇ ಮಾಡುವ ಮೂಲಕ ಅತ್ತ ಶಾಸಕರನ್ನು, ಇತ್ತ ಬಿಜೆಪಿಯನ್ನು ಆಡಿಸುತ್ತಿದ್ದಾರೆ. ಹೇಗೂ ಅಧಿಕಾರ ಹೋಗಿದೆ. ಬಿಜೆಪಿಗೆ ಸಾಕಷ್ಟು ತೊಂದರೆ ಕೊಡೋಣ ಎಂದು ನಿರ್ಧರಿಸಿದಂತಿದೆ.ಆಗ ಬಿಜೆಪಿ ಆಟ ಮೈತ್ರಿಗೆ ಸಂಕಟ: ಈಗ ಸ್ಪೀಕರ್ ಆಟ ಬಿಜೆಪಿಗೆ ಮಹಾಸಂಕಟವಾಗಿದೆ.

ಅಸ್ಥಿರ ಸರ್ಕಾರ ಹೀಗೇ ಮುಂದುವರೆದು, ಜುಲೈ 31ರೊಳಗೆ ಫೈನಾನ್ಸ್ ಬಿಲ್ ಸಹಾ ಅಂಗೀಕಾರ ಪಡೆದುಕೊಳ್ಳದೇ ಇದ್ದರೆ ರಾಜ್ಯದಲ್ಲಿ ತಲೆದೋರುವ ಬಿಕ್ಕಟ್ಟಿಗೆ ಯಾರನ್ನು ಹೊಣೆ ಮಾಡುವುದು? ಬಹುಶಃ ಮಾರಾಟ ಮಾಡಿಕೊಳ್ಳಲು ಸಿದ್ಧವಿರುವ ಜನಪ್ರತಿನಿಧಿಗಳನ್ನು ಆರಿಸಿದ ಜನರನ್ನೇ ಹೊಣೆ ಮಾಡಬೇಕೇನೋ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...