Homeಕರ್ನಾಟಕಅರಸು ಪ್ರಶಸ್ತಿ ನಿಲ್ಲಿಸಿದ್ದೇಕೆ? ಬಿ.ಚಂದ್ರೇಗೌಡರ ಪ್ರಶ್ನೆ..

ಅರಸು ಪ್ರಶಸ್ತಿ ನಿಲ್ಲಿಸಿದ್ದೇಕೆ? ಬಿ.ಚಂದ್ರೇಗೌಡರ ಪ್ರಶ್ನೆ..

- Advertisement -
- Advertisement -

ಪ್ರತಿ ವರ್ಷ ರಾಜ್ಯ ಸರ್ಕಾರ ದೇವರಾಜ ಅರಸು ಹೆಸರಿನಲ್ಲಿ ಕೊಡುತ್ತಿದ್ದ ಪ್ರಶಸ್ತಿಯನ್ನು ಈ ಬಾರಿಯಿಂದ ರಾಜ್ಯ ಬಿಜೆಪಿ ಸರಕಾರ ನಿಲ್ಲಿಸಿಬಿಟ್ಟಿದೆ. ಇದಕ್ಕಾಗಿ ಅದು ಕೊಡುತ್ತಿರುವ ಕಾರಣ, ರಾಜ್ಯದಲ್ಲಿ ನೆರೆಹಾವಳಿಯಿಂದಾಗಿ ಪ್ರಶಸ್ತಿ ಕೊಡಲು ಸರ್ಕಾರದ ಬಳಿ ಹಣವಿಲ್ಲವಂತೆ. ಅದು ಎಷ್ಟು? ಕೇವಲ ಐದು ಲಕ್ಷ…!

ಆದರೆ ನಿಜವಾಗಿ ಇದು ಅಪ್ಪಟ ಸುಳ್ಳು. ಏಕೆಂದರೆ ಈ ಸರಕಾರದ ಕೆಲವು ನಿರ್ಧಾರಗಳು ಅದೆಲ್ಲಿಂದಲೋ ಬರುತ್ತವೆ. ಅವು ಅಧಿಕಾರಿಗಳ ಮುಖಾಂತರ ಜಾರಿಯಾಗುತ್ತವೆ. ಅರಸು ಪ್ರಶಸ್ತಿ ವಿಷಯದಲ್ಲೂ ಕೂಡ ಜನಪ್ರತಿನಿಧಿಗಳ ಬದಲು ಅಧಿಕಾರಿಗಳೇ ಪ್ರಶಸ್ತಿ ನೀಡಬಾರದೆಂದು ನಮಗೆ ಮೌಖಿಕ ಸಂದೇಶವಿದೆ ಎನ್ನುತ್ತಾರೆ. ಯಾರಿಂದ ಎಂದರೆ ಬಾಯಿಬಿಡುವುದಿಲ್ಲ. ನಿಜಕ್ಕೂ ಸಾಮಾಜಿಕ ಕಳಕಳಿ ಇದ್ದ ಅಧಿಕಾರಿಗಳು ಕೂಡ ಅಸಹಾಯಕರಾಗಿ ವರ್ತಿಸುತ್ತಿದ್ದಾರೆ.

ಇದನ್ನೂ ಓದಿ: ವರ್ಷ ಕಳೆದರೂ ದೇವರಾಜ ಅರಸು ಪ್ರಶಸ್ತಿ ಪ್ರಕಟಿಸದ ಬಿಜೆಪಿ ಸರ್ಕಾರ : ಏನಿರಬಹುದು ಹುನ್ನಾರ?

ಇದು ಹೇಳಿಕೇಳಿ ಬಿಜೆಪಿ ಸರಕಾರ. ಸಾಮಾಜಿಕ ಪರಿವರ್ತನೆಯ ವಿರೋಧಿ ಆದ್ದರಿಂದ ಸ್ಥಗಿತಗೊಂಡ ಸಮಾಜವನ್ನ ಸಾಮಾಜಿಕ ನ್ಯಾಯದಿಂದ ಮುಂದೆ ನೂಕಿದ ಅರಸು ಕಂಡರೆ ಬಿಜೆಪಿಗಳಿಗಾಗುವುದಿಲ್ಲ. ಆದ್ದರಿಂದ ಒಂದು ವ್ಯವಸ್ಥಿತ ಸಂಚಿನಿಂದ ಅರಸು ಪ್ರಶಸ್ತಿಯನ್ನು ಆಯ್ಕೆಮಾಡಲು ನೇಮಕವಾಗುವ ಸಮಿತಿಯನ್ನೇ ರಚಿಸಿಲ್ಲ. ಜೊತೆಗೆ ಆ ಪ್ರಸ್ತಾಪವೇ ನಡೆಯದಂತೆ ನೋಡಿಕೊಂಡಿದೆ.

ಹಾಗೆ ನೋಡಿದರೆ ಈ ಸರಕಾರದ ಅಜೆಂಡಾಗಳು ನಿಗೂಢವಾಗಿದೆ. ಅದನ್ನ ಜಾರಿ ಮಾಡುವುದರಲ್ಲಿ ಅದು ಸದ್ದುಗದ್ದಲವಿಲ್ಲದೆ ನಡೆದುಕೊಳ್ಳುತ್ತದೆ. ಅದಕ್ಕೊಂದು ಉದಾಹರಣೆ ಎಂದರೆ ಈ ಅರಸು ಪ್ರಶಸ್ತಿ. ಅದಕ್ಕಾಗಿ ಕೊಡಲು ಸರಕಾರದಲ್ಲಿ ಐದು ಲಕ್ಷ ಹಣವಿಲ್ಲ ಎನ್ನುವುದಾದರೆ, ರಾಜ್ಯೋತ್ಸವ ಪ್ರಶಸ್ತಿಯಂತೆ ಈ ಪ್ರಶಸ್ತಿಯ ಮೊತ್ತವನ್ನ ಸಹ ಒಂದು ಲಕ್ಷಕ್ಕೆ ಇಳಿಸಬಹುದಿತ್ತಲ್ಲವೇ? ಲಕ್ಷ ಕೋಟಿ ಬಜೆಟ್‌ ಮಂಡಿಸುವ ಸರ್ಕಾರದ ಬಳಿ ಒಂದು ಲಕ್ಷ ಹಣವಿಲ್ಲವೆಂದರೆ ಜನ ನಂಬುತ್ತಾರೆಯೇ? ದರಿದ್ರ ಸರಕಾರಕ್ಕೆ ಇವು ಅವಮಾನದ ಸಂಗತಿಗಳಾಗುವುದಿಲ್ಲ.

ಈ ಮೊದಲು ಎರಡು ಲಕ್ಷವಿದ್ದ ಪ್ರಶಸ್ತಿಯ ಬೆಲೆಯನ್ನ ಸಿದ್ದರಾಮಯ್ಯನವರ ಸರಕಾರ ಐದು ಲಕ್ಷಕ್ಕೆ ಏರಿಸಿತ್ತು. ಒಂದು ಸರಕಾರ ಪ್ರಶಸ್ತಿ ಮೊತ್ತ ಏರಿಸಿದರೆ ಮತ್ತೊಂದು ಸರಕಾರ ಆ ಮೊತ್ತವನ್ನ ಇಳಿಸಿದರೆ ಯಾರಿಗೂ ಅವಮಾನವಾಗುವುದಿಲ್ಲ. ನಮ್ಮ ನಡುವಿನ ಸಮಾಜ ಸುಧಾರಕರು ಹಣಕ್ಕಾಗಿ ಸೇವೆ ಮಾಡುವವರಲ್ಲ. ಆದರೆ ಬಿಜೆಪಿಯ ಉದ್ದೇಶವೇ ಅರಸುರವರನ್ನ ಜನಮನದಿಂದ ಮರೆಯಾಗಿಸುವುದು. ಅದಕ್ಕಾಗಿ ಈ ಸೇಡಿನ ಕ್ರಮ ಕೈಗೊಂಡಿದ್ದಾರೆ.

ಬಿಜೆಪಿಗಳು ಅರಸು ಪ್ರಶಸ್ತಿಯಂತಹ ವಿಷಯಗಳನ್ನ ತಣ್ಣಗೆ ಜಾರಿ ಮಾಡಿ ಪರಿಣಾಮ ನೋಡುತ್ತವೆ. ಪ್ರತಿಕ್ರಿಯೆ ಇಲ್ಲದಿದ್ದರೆ ಅದು ಮುಂದಿನ ವರ್ಷದಿಂದ ಮೂಲೆಗೆ ಬೀಳುವುದು ಗ್ಯಾರಂಟಿ. ಈಗಾಗಲೇ ಅಂಬೇಡ್ಕರ್ ಸಂವಿಧಾನ ರೂಪಿಸಿರಲಿಲ್ಲ, ಕ್ರೂಡೀಕರಿಸಿದರು ಎಂಬ ಸುದ್ದಿ ಮಾಡಿ ಅದರ ಪರಿಣಾಮ ಗ್ರಹಿಸತೊಡಗಿದ್ದಾರೆ. ಅಂಬೇಡ್ಕರ್ ವಿಷಯ ದಲಿತರಿಗೆ ಸಂಬಂಧಿಸಿದ್ದೆಂದು ಹಲವರು ಸುಮ್ಮನಿದ್ದಾರೆ. ಇದೇ ಬಿಜೆಪಿಗಳಿಗೆ ಸಂತಸದ ಸುದ್ದಿ.

ಇದನ್ನೂ ಓದಿ: ಸಂವಿಧಾನ ದಿನ: ಅಂಬೇಡ್ಕರ್‌ ಬದಲಿಗೆ ಶ್ಯಾಂ ಪ್ರಸಾದ್‌ ಮುಖರ್ಜಿ ಫೋಟೋ ಹಾಕಿದ್ದಕ್ಕೆ ಛೀಮಾರಿ, ನಂತರ ಬದಲಾವಣೆ.

ಆದರೆ ಅಂಬೇಡ್ಕರ್ ಕೆಣಕಿದ ಕಾರಣಕ್ಕೆ ನಾಡಿನ ಪ್ರಜ್ಞಾವಂತ ಸಮಾಜ ಕ್ರೋಧಗೊಂಡಿದೆ. ಪ್ರತಿಭಟನೆ ಮಾಡಿದವರು ಮಾತ್ರ ತಳಸಮುದಾಯದವರು. ಆದ್ದರಿಂದ ಅವರ ಹೆಸರಲ್ಲಿ ಕೊಡಮಾಡುವ ಪ್ರಶಸ್ತಿ ನಿಲ್ಲಿಸಿದ್ದರ ಬಗ್ಗೆ ಎಲ್ಲೂ ಸೊಲ್ಲೆತ್ತಿಲ್ಲ. ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅರಸು ತರದ ಸಾಮಾಜಿಕ ಪರಿವರ್ತನೆಯ ಹರಿಕಾರ ಹಿಂದೆ ಬಂದಿಲ್ಲ. ಮುಂದೆ ಬರುವುದೂ ಅಸಂಭವ. ಆದ್ದರಿಂದ ಸತ್ತಂತಿರುವ ಫಲಾನುಭವಿಗಳು ಎಚ್ಚೆತ್ತು ತಮ್ಮ ದನಿ ಗುರುತಿಸಿಕೊಳ್ಳದಿದ್ದರೆ ಇಲ್ಲಿ ಗೋಳ್ವಾರ್ಕರ್ ಪ್ರಶಸ್ತಿ ಜಾರಿಗೆ ಬರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಹಿಂದ ವರ್ಗದ ನಾಯಕರಾಗಿದ್ದ ಅರಸುರವರ ಹೆಸರು ಚಾಲ್ತಿಯಲ್ಲಿರದಂತೆ ಮಾಡುವುದೇ ಮನುವಾದಿಗಳ ಹುನ್ನಾರ.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...