Homeಕರ್ನಾಟಕಅರಸು ಪ್ರಶಸ್ತಿ ನಿಲ್ಲಿಸಿದ್ದೇಕೆ? ಬಿ.ಚಂದ್ರೇಗೌಡರ ಪ್ರಶ್ನೆ..

ಅರಸು ಪ್ರಶಸ್ತಿ ನಿಲ್ಲಿಸಿದ್ದೇಕೆ? ಬಿ.ಚಂದ್ರೇಗೌಡರ ಪ್ರಶ್ನೆ..

- Advertisement -
- Advertisement -

ಪ್ರತಿ ವರ್ಷ ರಾಜ್ಯ ಸರ್ಕಾರ ದೇವರಾಜ ಅರಸು ಹೆಸರಿನಲ್ಲಿ ಕೊಡುತ್ತಿದ್ದ ಪ್ರಶಸ್ತಿಯನ್ನು ಈ ಬಾರಿಯಿಂದ ರಾಜ್ಯ ಬಿಜೆಪಿ ಸರಕಾರ ನಿಲ್ಲಿಸಿಬಿಟ್ಟಿದೆ. ಇದಕ್ಕಾಗಿ ಅದು ಕೊಡುತ್ತಿರುವ ಕಾರಣ, ರಾಜ್ಯದಲ್ಲಿ ನೆರೆಹಾವಳಿಯಿಂದಾಗಿ ಪ್ರಶಸ್ತಿ ಕೊಡಲು ಸರ್ಕಾರದ ಬಳಿ ಹಣವಿಲ್ಲವಂತೆ. ಅದು ಎಷ್ಟು? ಕೇವಲ ಐದು ಲಕ್ಷ…!

ಆದರೆ ನಿಜವಾಗಿ ಇದು ಅಪ್ಪಟ ಸುಳ್ಳು. ಏಕೆಂದರೆ ಈ ಸರಕಾರದ ಕೆಲವು ನಿರ್ಧಾರಗಳು ಅದೆಲ್ಲಿಂದಲೋ ಬರುತ್ತವೆ. ಅವು ಅಧಿಕಾರಿಗಳ ಮುಖಾಂತರ ಜಾರಿಯಾಗುತ್ತವೆ. ಅರಸು ಪ್ರಶಸ್ತಿ ವಿಷಯದಲ್ಲೂ ಕೂಡ ಜನಪ್ರತಿನಿಧಿಗಳ ಬದಲು ಅಧಿಕಾರಿಗಳೇ ಪ್ರಶಸ್ತಿ ನೀಡಬಾರದೆಂದು ನಮಗೆ ಮೌಖಿಕ ಸಂದೇಶವಿದೆ ಎನ್ನುತ್ತಾರೆ. ಯಾರಿಂದ ಎಂದರೆ ಬಾಯಿಬಿಡುವುದಿಲ್ಲ. ನಿಜಕ್ಕೂ ಸಾಮಾಜಿಕ ಕಳಕಳಿ ಇದ್ದ ಅಧಿಕಾರಿಗಳು ಕೂಡ ಅಸಹಾಯಕರಾಗಿ ವರ್ತಿಸುತ್ತಿದ್ದಾರೆ.

ಇದನ್ನೂ ಓದಿ: ವರ್ಷ ಕಳೆದರೂ ದೇವರಾಜ ಅರಸು ಪ್ರಶಸ್ತಿ ಪ್ರಕಟಿಸದ ಬಿಜೆಪಿ ಸರ್ಕಾರ : ಏನಿರಬಹುದು ಹುನ್ನಾರ?

ಇದು ಹೇಳಿಕೇಳಿ ಬಿಜೆಪಿ ಸರಕಾರ. ಸಾಮಾಜಿಕ ಪರಿವರ್ತನೆಯ ವಿರೋಧಿ ಆದ್ದರಿಂದ ಸ್ಥಗಿತಗೊಂಡ ಸಮಾಜವನ್ನ ಸಾಮಾಜಿಕ ನ್ಯಾಯದಿಂದ ಮುಂದೆ ನೂಕಿದ ಅರಸು ಕಂಡರೆ ಬಿಜೆಪಿಗಳಿಗಾಗುವುದಿಲ್ಲ. ಆದ್ದರಿಂದ ಒಂದು ವ್ಯವಸ್ಥಿತ ಸಂಚಿನಿಂದ ಅರಸು ಪ್ರಶಸ್ತಿಯನ್ನು ಆಯ್ಕೆಮಾಡಲು ನೇಮಕವಾಗುವ ಸಮಿತಿಯನ್ನೇ ರಚಿಸಿಲ್ಲ. ಜೊತೆಗೆ ಆ ಪ್ರಸ್ತಾಪವೇ ನಡೆಯದಂತೆ ನೋಡಿಕೊಂಡಿದೆ.

ಹಾಗೆ ನೋಡಿದರೆ ಈ ಸರಕಾರದ ಅಜೆಂಡಾಗಳು ನಿಗೂಢವಾಗಿದೆ. ಅದನ್ನ ಜಾರಿ ಮಾಡುವುದರಲ್ಲಿ ಅದು ಸದ್ದುಗದ್ದಲವಿಲ್ಲದೆ ನಡೆದುಕೊಳ್ಳುತ್ತದೆ. ಅದಕ್ಕೊಂದು ಉದಾಹರಣೆ ಎಂದರೆ ಈ ಅರಸು ಪ್ರಶಸ್ತಿ. ಅದಕ್ಕಾಗಿ ಕೊಡಲು ಸರಕಾರದಲ್ಲಿ ಐದು ಲಕ್ಷ ಹಣವಿಲ್ಲ ಎನ್ನುವುದಾದರೆ, ರಾಜ್ಯೋತ್ಸವ ಪ್ರಶಸ್ತಿಯಂತೆ ಈ ಪ್ರಶಸ್ತಿಯ ಮೊತ್ತವನ್ನ ಸಹ ಒಂದು ಲಕ್ಷಕ್ಕೆ ಇಳಿಸಬಹುದಿತ್ತಲ್ಲವೇ? ಲಕ್ಷ ಕೋಟಿ ಬಜೆಟ್‌ ಮಂಡಿಸುವ ಸರ್ಕಾರದ ಬಳಿ ಒಂದು ಲಕ್ಷ ಹಣವಿಲ್ಲವೆಂದರೆ ಜನ ನಂಬುತ್ತಾರೆಯೇ? ದರಿದ್ರ ಸರಕಾರಕ್ಕೆ ಇವು ಅವಮಾನದ ಸಂಗತಿಗಳಾಗುವುದಿಲ್ಲ.

ಈ ಮೊದಲು ಎರಡು ಲಕ್ಷವಿದ್ದ ಪ್ರಶಸ್ತಿಯ ಬೆಲೆಯನ್ನ ಸಿದ್ದರಾಮಯ್ಯನವರ ಸರಕಾರ ಐದು ಲಕ್ಷಕ್ಕೆ ಏರಿಸಿತ್ತು. ಒಂದು ಸರಕಾರ ಪ್ರಶಸ್ತಿ ಮೊತ್ತ ಏರಿಸಿದರೆ ಮತ್ತೊಂದು ಸರಕಾರ ಆ ಮೊತ್ತವನ್ನ ಇಳಿಸಿದರೆ ಯಾರಿಗೂ ಅವಮಾನವಾಗುವುದಿಲ್ಲ. ನಮ್ಮ ನಡುವಿನ ಸಮಾಜ ಸುಧಾರಕರು ಹಣಕ್ಕಾಗಿ ಸೇವೆ ಮಾಡುವವರಲ್ಲ. ಆದರೆ ಬಿಜೆಪಿಯ ಉದ್ದೇಶವೇ ಅರಸುರವರನ್ನ ಜನಮನದಿಂದ ಮರೆಯಾಗಿಸುವುದು. ಅದಕ್ಕಾಗಿ ಈ ಸೇಡಿನ ಕ್ರಮ ಕೈಗೊಂಡಿದ್ದಾರೆ.

ಬಿಜೆಪಿಗಳು ಅರಸು ಪ್ರಶಸ್ತಿಯಂತಹ ವಿಷಯಗಳನ್ನ ತಣ್ಣಗೆ ಜಾರಿ ಮಾಡಿ ಪರಿಣಾಮ ನೋಡುತ್ತವೆ. ಪ್ರತಿಕ್ರಿಯೆ ಇಲ್ಲದಿದ್ದರೆ ಅದು ಮುಂದಿನ ವರ್ಷದಿಂದ ಮೂಲೆಗೆ ಬೀಳುವುದು ಗ್ಯಾರಂಟಿ. ಈಗಾಗಲೇ ಅಂಬೇಡ್ಕರ್ ಸಂವಿಧಾನ ರೂಪಿಸಿರಲಿಲ್ಲ, ಕ್ರೂಡೀಕರಿಸಿದರು ಎಂಬ ಸುದ್ದಿ ಮಾಡಿ ಅದರ ಪರಿಣಾಮ ಗ್ರಹಿಸತೊಡಗಿದ್ದಾರೆ. ಅಂಬೇಡ್ಕರ್ ವಿಷಯ ದಲಿತರಿಗೆ ಸಂಬಂಧಿಸಿದ್ದೆಂದು ಹಲವರು ಸುಮ್ಮನಿದ್ದಾರೆ. ಇದೇ ಬಿಜೆಪಿಗಳಿಗೆ ಸಂತಸದ ಸುದ್ದಿ.

ಇದನ್ನೂ ಓದಿ: ಸಂವಿಧಾನ ದಿನ: ಅಂಬೇಡ್ಕರ್‌ ಬದಲಿಗೆ ಶ್ಯಾಂ ಪ್ರಸಾದ್‌ ಮುಖರ್ಜಿ ಫೋಟೋ ಹಾಕಿದ್ದಕ್ಕೆ ಛೀಮಾರಿ, ನಂತರ ಬದಲಾವಣೆ.

ಆದರೆ ಅಂಬೇಡ್ಕರ್ ಕೆಣಕಿದ ಕಾರಣಕ್ಕೆ ನಾಡಿನ ಪ್ರಜ್ಞಾವಂತ ಸಮಾಜ ಕ್ರೋಧಗೊಂಡಿದೆ. ಪ್ರತಿಭಟನೆ ಮಾಡಿದವರು ಮಾತ್ರ ತಳಸಮುದಾಯದವರು. ಆದ್ದರಿಂದ ಅವರ ಹೆಸರಲ್ಲಿ ಕೊಡಮಾಡುವ ಪ್ರಶಸ್ತಿ ನಿಲ್ಲಿಸಿದ್ದರ ಬಗ್ಗೆ ಎಲ್ಲೂ ಸೊಲ್ಲೆತ್ತಿಲ್ಲ. ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅರಸು ತರದ ಸಾಮಾಜಿಕ ಪರಿವರ್ತನೆಯ ಹರಿಕಾರ ಹಿಂದೆ ಬಂದಿಲ್ಲ. ಮುಂದೆ ಬರುವುದೂ ಅಸಂಭವ. ಆದ್ದರಿಂದ ಸತ್ತಂತಿರುವ ಫಲಾನುಭವಿಗಳು ಎಚ್ಚೆತ್ತು ತಮ್ಮ ದನಿ ಗುರುತಿಸಿಕೊಳ್ಳದಿದ್ದರೆ ಇಲ್ಲಿ ಗೋಳ್ವಾರ್ಕರ್ ಪ್ರಶಸ್ತಿ ಜಾರಿಗೆ ಬರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಹಿಂದ ವರ್ಗದ ನಾಯಕರಾಗಿದ್ದ ಅರಸುರವರ ಹೆಸರು ಚಾಲ್ತಿಯಲ್ಲಿರದಂತೆ ಮಾಡುವುದೇ ಮನುವಾದಿಗಳ ಹುನ್ನಾರ.

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...