Homeಕರ್ನಾಟಕಅರಸು ಪ್ರಶಸ್ತಿ ನಿಲ್ಲಿಸಿದ್ದೇಕೆ? ಬಿ.ಚಂದ್ರೇಗೌಡರ ಪ್ರಶ್ನೆ..

ಅರಸು ಪ್ರಶಸ್ತಿ ನಿಲ್ಲಿಸಿದ್ದೇಕೆ? ಬಿ.ಚಂದ್ರೇಗೌಡರ ಪ್ರಶ್ನೆ..

- Advertisement -
- Advertisement -

ಪ್ರತಿ ವರ್ಷ ರಾಜ್ಯ ಸರ್ಕಾರ ದೇವರಾಜ ಅರಸು ಹೆಸರಿನಲ್ಲಿ ಕೊಡುತ್ತಿದ್ದ ಪ್ರಶಸ್ತಿಯನ್ನು ಈ ಬಾರಿಯಿಂದ ರಾಜ್ಯ ಬಿಜೆಪಿ ಸರಕಾರ ನಿಲ್ಲಿಸಿಬಿಟ್ಟಿದೆ. ಇದಕ್ಕಾಗಿ ಅದು ಕೊಡುತ್ತಿರುವ ಕಾರಣ, ರಾಜ್ಯದಲ್ಲಿ ನೆರೆಹಾವಳಿಯಿಂದಾಗಿ ಪ್ರಶಸ್ತಿ ಕೊಡಲು ಸರ್ಕಾರದ ಬಳಿ ಹಣವಿಲ್ಲವಂತೆ. ಅದು ಎಷ್ಟು? ಕೇವಲ ಐದು ಲಕ್ಷ…!

ಆದರೆ ನಿಜವಾಗಿ ಇದು ಅಪ್ಪಟ ಸುಳ್ಳು. ಏಕೆಂದರೆ ಈ ಸರಕಾರದ ಕೆಲವು ನಿರ್ಧಾರಗಳು ಅದೆಲ್ಲಿಂದಲೋ ಬರುತ್ತವೆ. ಅವು ಅಧಿಕಾರಿಗಳ ಮುಖಾಂತರ ಜಾರಿಯಾಗುತ್ತವೆ. ಅರಸು ಪ್ರಶಸ್ತಿ ವಿಷಯದಲ್ಲೂ ಕೂಡ ಜನಪ್ರತಿನಿಧಿಗಳ ಬದಲು ಅಧಿಕಾರಿಗಳೇ ಪ್ರಶಸ್ತಿ ನೀಡಬಾರದೆಂದು ನಮಗೆ ಮೌಖಿಕ ಸಂದೇಶವಿದೆ ಎನ್ನುತ್ತಾರೆ. ಯಾರಿಂದ ಎಂದರೆ ಬಾಯಿಬಿಡುವುದಿಲ್ಲ. ನಿಜಕ್ಕೂ ಸಾಮಾಜಿಕ ಕಳಕಳಿ ಇದ್ದ ಅಧಿಕಾರಿಗಳು ಕೂಡ ಅಸಹಾಯಕರಾಗಿ ವರ್ತಿಸುತ್ತಿದ್ದಾರೆ.

ಇದನ್ನೂ ಓದಿ: ವರ್ಷ ಕಳೆದರೂ ದೇವರಾಜ ಅರಸು ಪ್ರಶಸ್ತಿ ಪ್ರಕಟಿಸದ ಬಿಜೆಪಿ ಸರ್ಕಾರ : ಏನಿರಬಹುದು ಹುನ್ನಾರ?

ಇದು ಹೇಳಿಕೇಳಿ ಬಿಜೆಪಿ ಸರಕಾರ. ಸಾಮಾಜಿಕ ಪರಿವರ್ತನೆಯ ವಿರೋಧಿ ಆದ್ದರಿಂದ ಸ್ಥಗಿತಗೊಂಡ ಸಮಾಜವನ್ನ ಸಾಮಾಜಿಕ ನ್ಯಾಯದಿಂದ ಮುಂದೆ ನೂಕಿದ ಅರಸು ಕಂಡರೆ ಬಿಜೆಪಿಗಳಿಗಾಗುವುದಿಲ್ಲ. ಆದ್ದರಿಂದ ಒಂದು ವ್ಯವಸ್ಥಿತ ಸಂಚಿನಿಂದ ಅರಸು ಪ್ರಶಸ್ತಿಯನ್ನು ಆಯ್ಕೆಮಾಡಲು ನೇಮಕವಾಗುವ ಸಮಿತಿಯನ್ನೇ ರಚಿಸಿಲ್ಲ. ಜೊತೆಗೆ ಆ ಪ್ರಸ್ತಾಪವೇ ನಡೆಯದಂತೆ ನೋಡಿಕೊಂಡಿದೆ.

ಹಾಗೆ ನೋಡಿದರೆ ಈ ಸರಕಾರದ ಅಜೆಂಡಾಗಳು ನಿಗೂಢವಾಗಿದೆ. ಅದನ್ನ ಜಾರಿ ಮಾಡುವುದರಲ್ಲಿ ಅದು ಸದ್ದುಗದ್ದಲವಿಲ್ಲದೆ ನಡೆದುಕೊಳ್ಳುತ್ತದೆ. ಅದಕ್ಕೊಂದು ಉದಾಹರಣೆ ಎಂದರೆ ಈ ಅರಸು ಪ್ರಶಸ್ತಿ. ಅದಕ್ಕಾಗಿ ಕೊಡಲು ಸರಕಾರದಲ್ಲಿ ಐದು ಲಕ್ಷ ಹಣವಿಲ್ಲ ಎನ್ನುವುದಾದರೆ, ರಾಜ್ಯೋತ್ಸವ ಪ್ರಶಸ್ತಿಯಂತೆ ಈ ಪ್ರಶಸ್ತಿಯ ಮೊತ್ತವನ್ನ ಸಹ ಒಂದು ಲಕ್ಷಕ್ಕೆ ಇಳಿಸಬಹುದಿತ್ತಲ್ಲವೇ? ಲಕ್ಷ ಕೋಟಿ ಬಜೆಟ್‌ ಮಂಡಿಸುವ ಸರ್ಕಾರದ ಬಳಿ ಒಂದು ಲಕ್ಷ ಹಣವಿಲ್ಲವೆಂದರೆ ಜನ ನಂಬುತ್ತಾರೆಯೇ? ದರಿದ್ರ ಸರಕಾರಕ್ಕೆ ಇವು ಅವಮಾನದ ಸಂಗತಿಗಳಾಗುವುದಿಲ್ಲ.

ಈ ಮೊದಲು ಎರಡು ಲಕ್ಷವಿದ್ದ ಪ್ರಶಸ್ತಿಯ ಬೆಲೆಯನ್ನ ಸಿದ್ದರಾಮಯ್ಯನವರ ಸರಕಾರ ಐದು ಲಕ್ಷಕ್ಕೆ ಏರಿಸಿತ್ತು. ಒಂದು ಸರಕಾರ ಪ್ರಶಸ್ತಿ ಮೊತ್ತ ಏರಿಸಿದರೆ ಮತ್ತೊಂದು ಸರಕಾರ ಆ ಮೊತ್ತವನ್ನ ಇಳಿಸಿದರೆ ಯಾರಿಗೂ ಅವಮಾನವಾಗುವುದಿಲ್ಲ. ನಮ್ಮ ನಡುವಿನ ಸಮಾಜ ಸುಧಾರಕರು ಹಣಕ್ಕಾಗಿ ಸೇವೆ ಮಾಡುವವರಲ್ಲ. ಆದರೆ ಬಿಜೆಪಿಯ ಉದ್ದೇಶವೇ ಅರಸುರವರನ್ನ ಜನಮನದಿಂದ ಮರೆಯಾಗಿಸುವುದು. ಅದಕ್ಕಾಗಿ ಈ ಸೇಡಿನ ಕ್ರಮ ಕೈಗೊಂಡಿದ್ದಾರೆ.

ಬಿಜೆಪಿಗಳು ಅರಸು ಪ್ರಶಸ್ತಿಯಂತಹ ವಿಷಯಗಳನ್ನ ತಣ್ಣಗೆ ಜಾರಿ ಮಾಡಿ ಪರಿಣಾಮ ನೋಡುತ್ತವೆ. ಪ್ರತಿಕ್ರಿಯೆ ಇಲ್ಲದಿದ್ದರೆ ಅದು ಮುಂದಿನ ವರ್ಷದಿಂದ ಮೂಲೆಗೆ ಬೀಳುವುದು ಗ್ಯಾರಂಟಿ. ಈಗಾಗಲೇ ಅಂಬೇಡ್ಕರ್ ಸಂವಿಧಾನ ರೂಪಿಸಿರಲಿಲ್ಲ, ಕ್ರೂಡೀಕರಿಸಿದರು ಎಂಬ ಸುದ್ದಿ ಮಾಡಿ ಅದರ ಪರಿಣಾಮ ಗ್ರಹಿಸತೊಡಗಿದ್ದಾರೆ. ಅಂಬೇಡ್ಕರ್ ವಿಷಯ ದಲಿತರಿಗೆ ಸಂಬಂಧಿಸಿದ್ದೆಂದು ಹಲವರು ಸುಮ್ಮನಿದ್ದಾರೆ. ಇದೇ ಬಿಜೆಪಿಗಳಿಗೆ ಸಂತಸದ ಸುದ್ದಿ.

ಇದನ್ನೂ ಓದಿ: ಸಂವಿಧಾನ ದಿನ: ಅಂಬೇಡ್ಕರ್‌ ಬದಲಿಗೆ ಶ್ಯಾಂ ಪ್ರಸಾದ್‌ ಮುಖರ್ಜಿ ಫೋಟೋ ಹಾಕಿದ್ದಕ್ಕೆ ಛೀಮಾರಿ, ನಂತರ ಬದಲಾವಣೆ.

ಆದರೆ ಅಂಬೇಡ್ಕರ್ ಕೆಣಕಿದ ಕಾರಣಕ್ಕೆ ನಾಡಿನ ಪ್ರಜ್ಞಾವಂತ ಸಮಾಜ ಕ್ರೋಧಗೊಂಡಿದೆ. ಪ್ರತಿಭಟನೆ ಮಾಡಿದವರು ಮಾತ್ರ ತಳಸಮುದಾಯದವರು. ಆದ್ದರಿಂದ ಅವರ ಹೆಸರಲ್ಲಿ ಕೊಡಮಾಡುವ ಪ್ರಶಸ್ತಿ ನಿಲ್ಲಿಸಿದ್ದರ ಬಗ್ಗೆ ಎಲ್ಲೂ ಸೊಲ್ಲೆತ್ತಿಲ್ಲ. ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅರಸು ತರದ ಸಾಮಾಜಿಕ ಪರಿವರ್ತನೆಯ ಹರಿಕಾರ ಹಿಂದೆ ಬಂದಿಲ್ಲ. ಮುಂದೆ ಬರುವುದೂ ಅಸಂಭವ. ಆದ್ದರಿಂದ ಸತ್ತಂತಿರುವ ಫಲಾನುಭವಿಗಳು ಎಚ್ಚೆತ್ತು ತಮ್ಮ ದನಿ ಗುರುತಿಸಿಕೊಳ್ಳದಿದ್ದರೆ ಇಲ್ಲಿ ಗೋಳ್ವಾರ್ಕರ್ ಪ್ರಶಸ್ತಿ ಜಾರಿಗೆ ಬರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಹಿಂದ ವರ್ಗದ ನಾಯಕರಾಗಿದ್ದ ಅರಸುರವರ ಹೆಸರು ಚಾಲ್ತಿಯಲ್ಲಿರದಂತೆ ಮಾಡುವುದೇ ಮನುವಾದಿಗಳ ಹುನ್ನಾರ.

LEAVE A REPLY

Please enter your comment!
Please enter your name here

- Advertisment -

‘ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯ ಸಾರ ಮತ್ತು ಶೈಲಿ ಎರಡಕ್ಕೂ ರಾಷ್ಟ್ರವು ಭಾರಿ ಬೆಲೆ ತೆರುತ್ತಿದೆ’: ಕಾಂಗ್ರೆಸ್

ನವದೆಹಲಿ: ಇರಾನ್ ಮೇಲೆ ನಡೆದ ಯುದ್ಧಕ್ಕೆ ಸರ್ಕಾರದ ಪ್ರತಿಕ್ರಿಯೆಯು ಭಾರತದ ಮೌಲ್ಯಗಳು, ತತ್ವಗಳು ಮತ್ತು ಹಿತಾಸಕ್ತಿಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ, ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯ ಸಾರ...

ಬಂಗಾಳ ಎಸ್‌ಐಆರ್| ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್-ಮಾಲ್ಡಾದಲ್ಲಿ ಅತ್ಯಧಿಕ ಮತದಾರರ ಪರಿಶೀಲನೆ ಬಾಕಿ

ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಚುನಾವಣಾ ಆಯೋಗ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ದಾಖಲೆಗಳ ಪರಿಶೀಲನೆಗೆ...

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...

ದುಬೈ-ಅಬುಧಾಬಿ ಮೇಲೆ ದಾಳಿ; ಇರಾನ್‌ಗೆ ಯುಎಇ ಎಚ್ಚರಿಕೆ

ಇರಾನ್ ತನ್ನ ನೆರೆಹೊರೆಯವರನ್ನು ಗುರಿಯಾಗಿಸಿಕೊಳ್ಳಬಾರದು ಎಂದು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಅನ್ವರ್ ಗರ್ಗಶ್ ಎಚ್ಚರಿಕೆ ನೀಡಿದ್ದಾರೆ. "ಗಲ್ಫ್ ರಾಷ್ಟ್ರಗಳ ವಿರುದ್ಧ ಇರಾನ್ ಆಕ್ರಮಣವು ತಪ್ಪು ಲೆಕ್ಕಾಚಾರವಾಗಿದೆ. ಇದೇ ಬೆಳವಣಿಗೆ ನಿರ್ಣಾಯಕ ಹಂತದಲ್ಲಿ ಇರಾನ್...

ಇರಾನ್‌ ಹಂಗಾಮಿ ಸರ್ವೋಚ್ಚ ನಾಯಕರಾಗಿ ಅಯಾತೊಲ್ಲ ಅಲಿರೆಝಾ ಅರಾಫಿ ನೇಮಕ

ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಹಿನ್ನೆಲೆ, ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಝಾ ಅರಾಫಿ ಅವರು ಇರಾನ್‌ನ ಹಂಗಾಮಿ ಸರ್ವೋಚ್ಚ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸರ್ಕಾರಿ-ಸಂಯೋಜಿತ...

ಖಮೇನಿ ಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನೆ; ಶ್ರೀನಗರದಲ್ಲಿ ಇಂಟರ್‌ನೆಟ್ ಸ್ತಬ್ಧ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದಲ್ಲಿರುವ ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕರ ಗುಂಪು (UNMOGIP) ಪ್ರಧಾನ ಕಚೇರಿಯ ಮುಂದೆ ದೊಡ್ಡ ಜನಸಮೂಹ ಜಮಾಯಿಸಿತ್ತು....

ಅಮೆರಿಕಾ-ಇಸ್ರೇಲ್ ‘ಪುಂಡ ರಾಷ್ಟ್ರಗಳು’; ಇರಾನ್ ಮೇಲಿನ ದಾಳಿ ಖಂಡಿಸಿದ ಕೇರಳ ಸಿಎಂ; ಅನಿವಾಸಿ ಭಾರತೀಯರ ಆತಂಕ ಪರಿಹರಿಸಲು ಕೇಂದ್ರಕ್ಕೆ ಮನವಿ

ತಿರುವನಂತಪುರಂ: ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಹಲವಾರು ಅನಿವಾಸಿ ಭಾರತೀಯರ ಆತಂಕವನ್ನು ಪರಿಹರಿಸಲು ಕೇಂದ್ರವು ತಕ್ಷಣ...

ಅಮೆರಿಕ-ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ‘ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಹತ್ಯೆ; ಇರಾನ್ ಮಾಧ್ಯಮಗಳ ವರದಿ 

ಟೆಹ್ರಾನ್: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸ್ವಾಮ್ಯದ ಐಆರ್‌ಐಬಿ ಟಿವಿ ಭಾನುವಾರ ವರದಿ ಮಾಡಿದೆ. ಟೆಹ್ರಾನ್ ಮೇಲಿನ ದಾಳಿಯಲ್ಲಿ...

ಕರಾಚಿ| ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ ಘರ್ಷಣೆ : ಕನಿಷ್ಠ 9 ಸಾವು

ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ದೂತಾವಾಸದ ಬಳಿ ಭಾನುವಾರ (ಮಾ.1) ಇರಾನ್ ಪರ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಘರ್ಷಣೆ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. "ನಾವು ಕನಿಷ್ಠ ಎಂಟು...

ಇರಾನ್-ಇಸ್ರೇಲ್ ಯುದ್ಧ: ಭಾರತ ತಕ್ಷಣದ ಆರ್ಥಿಕ ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ; ವರದಿ

ಫೆಬ್ರವರಿ 28, 2026 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಮುಷ್ಕರದ ನಂತರ ಇರಾನ್-ಇಸ್ರೇಲ್ ಸಂಘರ್ಷದಲ್ಲಿ ತೀವ್ರ ಏರಿಕೆಯು ಪಶ್ಚಿಮ ಏಷ್ಯಾದಲ್ಲಿ ಭೌಗೋಳಿಕ ರಾಜಕೀಯ ಅಪಾಯಗಳನ್ನು ತೀವ್ರಗೊಳಿಸಿದೆ ಮತ್ತು ಜಾಗತಿಕ ಇಂಧನ ಮಾರುಕಟ್ಟೆಗಳಿಗೆ ತಕ್ಷಣದ...