Homeಕರ್ನಾಟಕಅರಸು ಪ್ರಶಸ್ತಿ ನಿಲ್ಲಿಸಿದ್ದೇಕೆ? ಬಿ.ಚಂದ್ರೇಗೌಡರ ಪ್ರಶ್ನೆ..

ಅರಸು ಪ್ರಶಸ್ತಿ ನಿಲ್ಲಿಸಿದ್ದೇಕೆ? ಬಿ.ಚಂದ್ರೇಗೌಡರ ಪ್ರಶ್ನೆ..

- Advertisement -
- Advertisement -

ಪ್ರತಿ ವರ್ಷ ರಾಜ್ಯ ಸರ್ಕಾರ ದೇವರಾಜ ಅರಸು ಹೆಸರಿನಲ್ಲಿ ಕೊಡುತ್ತಿದ್ದ ಪ್ರಶಸ್ತಿಯನ್ನು ಈ ಬಾರಿಯಿಂದ ರಾಜ್ಯ ಬಿಜೆಪಿ ಸರಕಾರ ನಿಲ್ಲಿಸಿಬಿಟ್ಟಿದೆ. ಇದಕ್ಕಾಗಿ ಅದು ಕೊಡುತ್ತಿರುವ ಕಾರಣ, ರಾಜ್ಯದಲ್ಲಿ ನೆರೆಹಾವಳಿಯಿಂದಾಗಿ ಪ್ರಶಸ್ತಿ ಕೊಡಲು ಸರ್ಕಾರದ ಬಳಿ ಹಣವಿಲ್ಲವಂತೆ. ಅದು ಎಷ್ಟು? ಕೇವಲ ಐದು ಲಕ್ಷ…!

ಆದರೆ ನಿಜವಾಗಿ ಇದು ಅಪ್ಪಟ ಸುಳ್ಳು. ಏಕೆಂದರೆ ಈ ಸರಕಾರದ ಕೆಲವು ನಿರ್ಧಾರಗಳು ಅದೆಲ್ಲಿಂದಲೋ ಬರುತ್ತವೆ. ಅವು ಅಧಿಕಾರಿಗಳ ಮುಖಾಂತರ ಜಾರಿಯಾಗುತ್ತವೆ. ಅರಸು ಪ್ರಶಸ್ತಿ ವಿಷಯದಲ್ಲೂ ಕೂಡ ಜನಪ್ರತಿನಿಧಿಗಳ ಬದಲು ಅಧಿಕಾರಿಗಳೇ ಪ್ರಶಸ್ತಿ ನೀಡಬಾರದೆಂದು ನಮಗೆ ಮೌಖಿಕ ಸಂದೇಶವಿದೆ ಎನ್ನುತ್ತಾರೆ. ಯಾರಿಂದ ಎಂದರೆ ಬಾಯಿಬಿಡುವುದಿಲ್ಲ. ನಿಜಕ್ಕೂ ಸಾಮಾಜಿಕ ಕಳಕಳಿ ಇದ್ದ ಅಧಿಕಾರಿಗಳು ಕೂಡ ಅಸಹಾಯಕರಾಗಿ ವರ್ತಿಸುತ್ತಿದ್ದಾರೆ.

ಇದನ್ನೂ ಓದಿ: ವರ್ಷ ಕಳೆದರೂ ದೇವರಾಜ ಅರಸು ಪ್ರಶಸ್ತಿ ಪ್ರಕಟಿಸದ ಬಿಜೆಪಿ ಸರ್ಕಾರ : ಏನಿರಬಹುದು ಹುನ್ನಾರ?

ಇದು ಹೇಳಿಕೇಳಿ ಬಿಜೆಪಿ ಸರಕಾರ. ಸಾಮಾಜಿಕ ಪರಿವರ್ತನೆಯ ವಿರೋಧಿ ಆದ್ದರಿಂದ ಸ್ಥಗಿತಗೊಂಡ ಸಮಾಜವನ್ನ ಸಾಮಾಜಿಕ ನ್ಯಾಯದಿಂದ ಮುಂದೆ ನೂಕಿದ ಅರಸು ಕಂಡರೆ ಬಿಜೆಪಿಗಳಿಗಾಗುವುದಿಲ್ಲ. ಆದ್ದರಿಂದ ಒಂದು ವ್ಯವಸ್ಥಿತ ಸಂಚಿನಿಂದ ಅರಸು ಪ್ರಶಸ್ತಿಯನ್ನು ಆಯ್ಕೆಮಾಡಲು ನೇಮಕವಾಗುವ ಸಮಿತಿಯನ್ನೇ ರಚಿಸಿಲ್ಲ. ಜೊತೆಗೆ ಆ ಪ್ರಸ್ತಾಪವೇ ನಡೆಯದಂತೆ ನೋಡಿಕೊಂಡಿದೆ.

ಹಾಗೆ ನೋಡಿದರೆ ಈ ಸರಕಾರದ ಅಜೆಂಡಾಗಳು ನಿಗೂಢವಾಗಿದೆ. ಅದನ್ನ ಜಾರಿ ಮಾಡುವುದರಲ್ಲಿ ಅದು ಸದ್ದುಗದ್ದಲವಿಲ್ಲದೆ ನಡೆದುಕೊಳ್ಳುತ್ತದೆ. ಅದಕ್ಕೊಂದು ಉದಾಹರಣೆ ಎಂದರೆ ಈ ಅರಸು ಪ್ರಶಸ್ತಿ. ಅದಕ್ಕಾಗಿ ಕೊಡಲು ಸರಕಾರದಲ್ಲಿ ಐದು ಲಕ್ಷ ಹಣವಿಲ್ಲ ಎನ್ನುವುದಾದರೆ, ರಾಜ್ಯೋತ್ಸವ ಪ್ರಶಸ್ತಿಯಂತೆ ಈ ಪ್ರಶಸ್ತಿಯ ಮೊತ್ತವನ್ನ ಸಹ ಒಂದು ಲಕ್ಷಕ್ಕೆ ಇಳಿಸಬಹುದಿತ್ತಲ್ಲವೇ? ಲಕ್ಷ ಕೋಟಿ ಬಜೆಟ್‌ ಮಂಡಿಸುವ ಸರ್ಕಾರದ ಬಳಿ ಒಂದು ಲಕ್ಷ ಹಣವಿಲ್ಲವೆಂದರೆ ಜನ ನಂಬುತ್ತಾರೆಯೇ? ದರಿದ್ರ ಸರಕಾರಕ್ಕೆ ಇವು ಅವಮಾನದ ಸಂಗತಿಗಳಾಗುವುದಿಲ್ಲ.

ಈ ಮೊದಲು ಎರಡು ಲಕ್ಷವಿದ್ದ ಪ್ರಶಸ್ತಿಯ ಬೆಲೆಯನ್ನ ಸಿದ್ದರಾಮಯ್ಯನವರ ಸರಕಾರ ಐದು ಲಕ್ಷಕ್ಕೆ ಏರಿಸಿತ್ತು. ಒಂದು ಸರಕಾರ ಪ್ರಶಸ್ತಿ ಮೊತ್ತ ಏರಿಸಿದರೆ ಮತ್ತೊಂದು ಸರಕಾರ ಆ ಮೊತ್ತವನ್ನ ಇಳಿಸಿದರೆ ಯಾರಿಗೂ ಅವಮಾನವಾಗುವುದಿಲ್ಲ. ನಮ್ಮ ನಡುವಿನ ಸಮಾಜ ಸುಧಾರಕರು ಹಣಕ್ಕಾಗಿ ಸೇವೆ ಮಾಡುವವರಲ್ಲ. ಆದರೆ ಬಿಜೆಪಿಯ ಉದ್ದೇಶವೇ ಅರಸುರವರನ್ನ ಜನಮನದಿಂದ ಮರೆಯಾಗಿಸುವುದು. ಅದಕ್ಕಾಗಿ ಈ ಸೇಡಿನ ಕ್ರಮ ಕೈಗೊಂಡಿದ್ದಾರೆ.

ಬಿಜೆಪಿಗಳು ಅರಸು ಪ್ರಶಸ್ತಿಯಂತಹ ವಿಷಯಗಳನ್ನ ತಣ್ಣಗೆ ಜಾರಿ ಮಾಡಿ ಪರಿಣಾಮ ನೋಡುತ್ತವೆ. ಪ್ರತಿಕ್ರಿಯೆ ಇಲ್ಲದಿದ್ದರೆ ಅದು ಮುಂದಿನ ವರ್ಷದಿಂದ ಮೂಲೆಗೆ ಬೀಳುವುದು ಗ್ಯಾರಂಟಿ. ಈಗಾಗಲೇ ಅಂಬೇಡ್ಕರ್ ಸಂವಿಧಾನ ರೂಪಿಸಿರಲಿಲ್ಲ, ಕ್ರೂಡೀಕರಿಸಿದರು ಎಂಬ ಸುದ್ದಿ ಮಾಡಿ ಅದರ ಪರಿಣಾಮ ಗ್ರಹಿಸತೊಡಗಿದ್ದಾರೆ. ಅಂಬೇಡ್ಕರ್ ವಿಷಯ ದಲಿತರಿಗೆ ಸಂಬಂಧಿಸಿದ್ದೆಂದು ಹಲವರು ಸುಮ್ಮನಿದ್ದಾರೆ. ಇದೇ ಬಿಜೆಪಿಗಳಿಗೆ ಸಂತಸದ ಸುದ್ದಿ.

ಇದನ್ನೂ ಓದಿ: ಸಂವಿಧಾನ ದಿನ: ಅಂಬೇಡ್ಕರ್‌ ಬದಲಿಗೆ ಶ್ಯಾಂ ಪ್ರಸಾದ್‌ ಮುಖರ್ಜಿ ಫೋಟೋ ಹಾಕಿದ್ದಕ್ಕೆ ಛೀಮಾರಿ, ನಂತರ ಬದಲಾವಣೆ.

ಆದರೆ ಅಂಬೇಡ್ಕರ್ ಕೆಣಕಿದ ಕಾರಣಕ್ಕೆ ನಾಡಿನ ಪ್ರಜ್ಞಾವಂತ ಸಮಾಜ ಕ್ರೋಧಗೊಂಡಿದೆ. ಪ್ರತಿಭಟನೆ ಮಾಡಿದವರು ಮಾತ್ರ ತಳಸಮುದಾಯದವರು. ಆದ್ದರಿಂದ ಅವರ ಹೆಸರಲ್ಲಿ ಕೊಡಮಾಡುವ ಪ್ರಶಸ್ತಿ ನಿಲ್ಲಿಸಿದ್ದರ ಬಗ್ಗೆ ಎಲ್ಲೂ ಸೊಲ್ಲೆತ್ತಿಲ್ಲ. ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅರಸು ತರದ ಸಾಮಾಜಿಕ ಪರಿವರ್ತನೆಯ ಹರಿಕಾರ ಹಿಂದೆ ಬಂದಿಲ್ಲ. ಮುಂದೆ ಬರುವುದೂ ಅಸಂಭವ. ಆದ್ದರಿಂದ ಸತ್ತಂತಿರುವ ಫಲಾನುಭವಿಗಳು ಎಚ್ಚೆತ್ತು ತಮ್ಮ ದನಿ ಗುರುತಿಸಿಕೊಳ್ಳದಿದ್ದರೆ ಇಲ್ಲಿ ಗೋಳ್ವಾರ್ಕರ್ ಪ್ರಶಸ್ತಿ ಜಾರಿಗೆ ಬರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಹಿಂದ ವರ್ಗದ ನಾಯಕರಾಗಿದ್ದ ಅರಸುರವರ ಹೆಸರು ಚಾಲ್ತಿಯಲ್ಲಿರದಂತೆ ಮಾಡುವುದೇ ಮನುವಾದಿಗಳ ಹುನ್ನಾರ.

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...