Homeಕರ್ನಾಟಕಅರಸು ಪ್ರಶಸ್ತಿ ನಿಲ್ಲಿಸಿದ್ದೇಕೆ? ಬಿ.ಚಂದ್ರೇಗೌಡರ ಪ್ರಶ್ನೆ..

ಅರಸು ಪ್ರಶಸ್ತಿ ನಿಲ್ಲಿಸಿದ್ದೇಕೆ? ಬಿ.ಚಂದ್ರೇಗೌಡರ ಪ್ರಶ್ನೆ..

- Advertisement -
- Advertisement -

ಪ್ರತಿ ವರ್ಷ ರಾಜ್ಯ ಸರ್ಕಾರ ದೇವರಾಜ ಅರಸು ಹೆಸರಿನಲ್ಲಿ ಕೊಡುತ್ತಿದ್ದ ಪ್ರಶಸ್ತಿಯನ್ನು ಈ ಬಾರಿಯಿಂದ ರಾಜ್ಯ ಬಿಜೆಪಿ ಸರಕಾರ ನಿಲ್ಲಿಸಿಬಿಟ್ಟಿದೆ. ಇದಕ್ಕಾಗಿ ಅದು ಕೊಡುತ್ತಿರುವ ಕಾರಣ, ರಾಜ್ಯದಲ್ಲಿ ನೆರೆಹಾವಳಿಯಿಂದಾಗಿ ಪ್ರಶಸ್ತಿ ಕೊಡಲು ಸರ್ಕಾರದ ಬಳಿ ಹಣವಿಲ್ಲವಂತೆ. ಅದು ಎಷ್ಟು? ಕೇವಲ ಐದು ಲಕ್ಷ…!

ಆದರೆ ನಿಜವಾಗಿ ಇದು ಅಪ್ಪಟ ಸುಳ್ಳು. ಏಕೆಂದರೆ ಈ ಸರಕಾರದ ಕೆಲವು ನಿರ್ಧಾರಗಳು ಅದೆಲ್ಲಿಂದಲೋ ಬರುತ್ತವೆ. ಅವು ಅಧಿಕಾರಿಗಳ ಮುಖಾಂತರ ಜಾರಿಯಾಗುತ್ತವೆ. ಅರಸು ಪ್ರಶಸ್ತಿ ವಿಷಯದಲ್ಲೂ ಕೂಡ ಜನಪ್ರತಿನಿಧಿಗಳ ಬದಲು ಅಧಿಕಾರಿಗಳೇ ಪ್ರಶಸ್ತಿ ನೀಡಬಾರದೆಂದು ನಮಗೆ ಮೌಖಿಕ ಸಂದೇಶವಿದೆ ಎನ್ನುತ್ತಾರೆ. ಯಾರಿಂದ ಎಂದರೆ ಬಾಯಿಬಿಡುವುದಿಲ್ಲ. ನಿಜಕ್ಕೂ ಸಾಮಾಜಿಕ ಕಳಕಳಿ ಇದ್ದ ಅಧಿಕಾರಿಗಳು ಕೂಡ ಅಸಹಾಯಕರಾಗಿ ವರ್ತಿಸುತ್ತಿದ್ದಾರೆ.

ಇದನ್ನೂ ಓದಿ: ವರ್ಷ ಕಳೆದರೂ ದೇವರಾಜ ಅರಸು ಪ್ರಶಸ್ತಿ ಪ್ರಕಟಿಸದ ಬಿಜೆಪಿ ಸರ್ಕಾರ : ಏನಿರಬಹುದು ಹುನ್ನಾರ?

ಇದು ಹೇಳಿಕೇಳಿ ಬಿಜೆಪಿ ಸರಕಾರ. ಸಾಮಾಜಿಕ ಪರಿವರ್ತನೆಯ ವಿರೋಧಿ ಆದ್ದರಿಂದ ಸ್ಥಗಿತಗೊಂಡ ಸಮಾಜವನ್ನ ಸಾಮಾಜಿಕ ನ್ಯಾಯದಿಂದ ಮುಂದೆ ನೂಕಿದ ಅರಸು ಕಂಡರೆ ಬಿಜೆಪಿಗಳಿಗಾಗುವುದಿಲ್ಲ. ಆದ್ದರಿಂದ ಒಂದು ವ್ಯವಸ್ಥಿತ ಸಂಚಿನಿಂದ ಅರಸು ಪ್ರಶಸ್ತಿಯನ್ನು ಆಯ್ಕೆಮಾಡಲು ನೇಮಕವಾಗುವ ಸಮಿತಿಯನ್ನೇ ರಚಿಸಿಲ್ಲ. ಜೊತೆಗೆ ಆ ಪ್ರಸ್ತಾಪವೇ ನಡೆಯದಂತೆ ನೋಡಿಕೊಂಡಿದೆ.

ಹಾಗೆ ನೋಡಿದರೆ ಈ ಸರಕಾರದ ಅಜೆಂಡಾಗಳು ನಿಗೂಢವಾಗಿದೆ. ಅದನ್ನ ಜಾರಿ ಮಾಡುವುದರಲ್ಲಿ ಅದು ಸದ್ದುಗದ್ದಲವಿಲ್ಲದೆ ನಡೆದುಕೊಳ್ಳುತ್ತದೆ. ಅದಕ್ಕೊಂದು ಉದಾಹರಣೆ ಎಂದರೆ ಈ ಅರಸು ಪ್ರಶಸ್ತಿ. ಅದಕ್ಕಾಗಿ ಕೊಡಲು ಸರಕಾರದಲ್ಲಿ ಐದು ಲಕ್ಷ ಹಣವಿಲ್ಲ ಎನ್ನುವುದಾದರೆ, ರಾಜ್ಯೋತ್ಸವ ಪ್ರಶಸ್ತಿಯಂತೆ ಈ ಪ್ರಶಸ್ತಿಯ ಮೊತ್ತವನ್ನ ಸಹ ಒಂದು ಲಕ್ಷಕ್ಕೆ ಇಳಿಸಬಹುದಿತ್ತಲ್ಲವೇ? ಲಕ್ಷ ಕೋಟಿ ಬಜೆಟ್‌ ಮಂಡಿಸುವ ಸರ್ಕಾರದ ಬಳಿ ಒಂದು ಲಕ್ಷ ಹಣವಿಲ್ಲವೆಂದರೆ ಜನ ನಂಬುತ್ತಾರೆಯೇ? ದರಿದ್ರ ಸರಕಾರಕ್ಕೆ ಇವು ಅವಮಾನದ ಸಂಗತಿಗಳಾಗುವುದಿಲ್ಲ.

ಈ ಮೊದಲು ಎರಡು ಲಕ್ಷವಿದ್ದ ಪ್ರಶಸ್ತಿಯ ಬೆಲೆಯನ್ನ ಸಿದ್ದರಾಮಯ್ಯನವರ ಸರಕಾರ ಐದು ಲಕ್ಷಕ್ಕೆ ಏರಿಸಿತ್ತು. ಒಂದು ಸರಕಾರ ಪ್ರಶಸ್ತಿ ಮೊತ್ತ ಏರಿಸಿದರೆ ಮತ್ತೊಂದು ಸರಕಾರ ಆ ಮೊತ್ತವನ್ನ ಇಳಿಸಿದರೆ ಯಾರಿಗೂ ಅವಮಾನವಾಗುವುದಿಲ್ಲ. ನಮ್ಮ ನಡುವಿನ ಸಮಾಜ ಸುಧಾರಕರು ಹಣಕ್ಕಾಗಿ ಸೇವೆ ಮಾಡುವವರಲ್ಲ. ಆದರೆ ಬಿಜೆಪಿಯ ಉದ್ದೇಶವೇ ಅರಸುರವರನ್ನ ಜನಮನದಿಂದ ಮರೆಯಾಗಿಸುವುದು. ಅದಕ್ಕಾಗಿ ಈ ಸೇಡಿನ ಕ್ರಮ ಕೈಗೊಂಡಿದ್ದಾರೆ.

ಬಿಜೆಪಿಗಳು ಅರಸು ಪ್ರಶಸ್ತಿಯಂತಹ ವಿಷಯಗಳನ್ನ ತಣ್ಣಗೆ ಜಾರಿ ಮಾಡಿ ಪರಿಣಾಮ ನೋಡುತ್ತವೆ. ಪ್ರತಿಕ್ರಿಯೆ ಇಲ್ಲದಿದ್ದರೆ ಅದು ಮುಂದಿನ ವರ್ಷದಿಂದ ಮೂಲೆಗೆ ಬೀಳುವುದು ಗ್ಯಾರಂಟಿ. ಈಗಾಗಲೇ ಅಂಬೇಡ್ಕರ್ ಸಂವಿಧಾನ ರೂಪಿಸಿರಲಿಲ್ಲ, ಕ್ರೂಡೀಕರಿಸಿದರು ಎಂಬ ಸುದ್ದಿ ಮಾಡಿ ಅದರ ಪರಿಣಾಮ ಗ್ರಹಿಸತೊಡಗಿದ್ದಾರೆ. ಅಂಬೇಡ್ಕರ್ ವಿಷಯ ದಲಿತರಿಗೆ ಸಂಬಂಧಿಸಿದ್ದೆಂದು ಹಲವರು ಸುಮ್ಮನಿದ್ದಾರೆ. ಇದೇ ಬಿಜೆಪಿಗಳಿಗೆ ಸಂತಸದ ಸುದ್ದಿ.

ಇದನ್ನೂ ಓದಿ: ಸಂವಿಧಾನ ದಿನ: ಅಂಬೇಡ್ಕರ್‌ ಬದಲಿಗೆ ಶ್ಯಾಂ ಪ್ರಸಾದ್‌ ಮುಖರ್ಜಿ ಫೋಟೋ ಹಾಕಿದ್ದಕ್ಕೆ ಛೀಮಾರಿ, ನಂತರ ಬದಲಾವಣೆ.

ಆದರೆ ಅಂಬೇಡ್ಕರ್ ಕೆಣಕಿದ ಕಾರಣಕ್ಕೆ ನಾಡಿನ ಪ್ರಜ್ಞಾವಂತ ಸಮಾಜ ಕ್ರೋಧಗೊಂಡಿದೆ. ಪ್ರತಿಭಟನೆ ಮಾಡಿದವರು ಮಾತ್ರ ತಳಸಮುದಾಯದವರು. ಆದ್ದರಿಂದ ಅವರ ಹೆಸರಲ್ಲಿ ಕೊಡಮಾಡುವ ಪ್ರಶಸ್ತಿ ನಿಲ್ಲಿಸಿದ್ದರ ಬಗ್ಗೆ ಎಲ್ಲೂ ಸೊಲ್ಲೆತ್ತಿಲ್ಲ. ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅರಸು ತರದ ಸಾಮಾಜಿಕ ಪರಿವರ್ತನೆಯ ಹರಿಕಾರ ಹಿಂದೆ ಬಂದಿಲ್ಲ. ಮುಂದೆ ಬರುವುದೂ ಅಸಂಭವ. ಆದ್ದರಿಂದ ಸತ್ತಂತಿರುವ ಫಲಾನುಭವಿಗಳು ಎಚ್ಚೆತ್ತು ತಮ್ಮ ದನಿ ಗುರುತಿಸಿಕೊಳ್ಳದಿದ್ದರೆ ಇಲ್ಲಿ ಗೋಳ್ವಾರ್ಕರ್ ಪ್ರಶಸ್ತಿ ಜಾರಿಗೆ ಬರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಹಿಂದ ವರ್ಗದ ನಾಯಕರಾಗಿದ್ದ ಅರಸುರವರ ಹೆಸರು ಚಾಲ್ತಿಯಲ್ಲಿರದಂತೆ ಮಾಡುವುದೇ ಮನುವಾದಿಗಳ ಹುನ್ನಾರ.

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...