Homeಕರ್ನಾಟಕಅರಸು ಪ್ರಶಸ್ತಿ ನಿಲ್ಲಿಸಿದ್ದೇಕೆ? ಬಿ.ಚಂದ್ರೇಗೌಡರ ಪ್ರಶ್ನೆ..

ಅರಸು ಪ್ರಶಸ್ತಿ ನಿಲ್ಲಿಸಿದ್ದೇಕೆ? ಬಿ.ಚಂದ್ರೇಗೌಡರ ಪ್ರಶ್ನೆ..

- Advertisement -
- Advertisement -

ಪ್ರತಿ ವರ್ಷ ರಾಜ್ಯ ಸರ್ಕಾರ ದೇವರಾಜ ಅರಸು ಹೆಸರಿನಲ್ಲಿ ಕೊಡುತ್ತಿದ್ದ ಪ್ರಶಸ್ತಿಯನ್ನು ಈ ಬಾರಿಯಿಂದ ರಾಜ್ಯ ಬಿಜೆಪಿ ಸರಕಾರ ನಿಲ್ಲಿಸಿಬಿಟ್ಟಿದೆ. ಇದಕ್ಕಾಗಿ ಅದು ಕೊಡುತ್ತಿರುವ ಕಾರಣ, ರಾಜ್ಯದಲ್ಲಿ ನೆರೆಹಾವಳಿಯಿಂದಾಗಿ ಪ್ರಶಸ್ತಿ ಕೊಡಲು ಸರ್ಕಾರದ ಬಳಿ ಹಣವಿಲ್ಲವಂತೆ. ಅದು ಎಷ್ಟು? ಕೇವಲ ಐದು ಲಕ್ಷ…!

ಆದರೆ ನಿಜವಾಗಿ ಇದು ಅಪ್ಪಟ ಸುಳ್ಳು. ಏಕೆಂದರೆ ಈ ಸರಕಾರದ ಕೆಲವು ನಿರ್ಧಾರಗಳು ಅದೆಲ್ಲಿಂದಲೋ ಬರುತ್ತವೆ. ಅವು ಅಧಿಕಾರಿಗಳ ಮುಖಾಂತರ ಜಾರಿಯಾಗುತ್ತವೆ. ಅರಸು ಪ್ರಶಸ್ತಿ ವಿಷಯದಲ್ಲೂ ಕೂಡ ಜನಪ್ರತಿನಿಧಿಗಳ ಬದಲು ಅಧಿಕಾರಿಗಳೇ ಪ್ರಶಸ್ತಿ ನೀಡಬಾರದೆಂದು ನಮಗೆ ಮೌಖಿಕ ಸಂದೇಶವಿದೆ ಎನ್ನುತ್ತಾರೆ. ಯಾರಿಂದ ಎಂದರೆ ಬಾಯಿಬಿಡುವುದಿಲ್ಲ. ನಿಜಕ್ಕೂ ಸಾಮಾಜಿಕ ಕಳಕಳಿ ಇದ್ದ ಅಧಿಕಾರಿಗಳು ಕೂಡ ಅಸಹಾಯಕರಾಗಿ ವರ್ತಿಸುತ್ತಿದ್ದಾರೆ.

ಇದನ್ನೂ ಓದಿ: ವರ್ಷ ಕಳೆದರೂ ದೇವರಾಜ ಅರಸು ಪ್ರಶಸ್ತಿ ಪ್ರಕಟಿಸದ ಬಿಜೆಪಿ ಸರ್ಕಾರ : ಏನಿರಬಹುದು ಹುನ್ನಾರ?

ಇದು ಹೇಳಿಕೇಳಿ ಬಿಜೆಪಿ ಸರಕಾರ. ಸಾಮಾಜಿಕ ಪರಿವರ್ತನೆಯ ವಿರೋಧಿ ಆದ್ದರಿಂದ ಸ್ಥಗಿತಗೊಂಡ ಸಮಾಜವನ್ನ ಸಾಮಾಜಿಕ ನ್ಯಾಯದಿಂದ ಮುಂದೆ ನೂಕಿದ ಅರಸು ಕಂಡರೆ ಬಿಜೆಪಿಗಳಿಗಾಗುವುದಿಲ್ಲ. ಆದ್ದರಿಂದ ಒಂದು ವ್ಯವಸ್ಥಿತ ಸಂಚಿನಿಂದ ಅರಸು ಪ್ರಶಸ್ತಿಯನ್ನು ಆಯ್ಕೆಮಾಡಲು ನೇಮಕವಾಗುವ ಸಮಿತಿಯನ್ನೇ ರಚಿಸಿಲ್ಲ. ಜೊತೆಗೆ ಆ ಪ್ರಸ್ತಾಪವೇ ನಡೆಯದಂತೆ ನೋಡಿಕೊಂಡಿದೆ.

ಹಾಗೆ ನೋಡಿದರೆ ಈ ಸರಕಾರದ ಅಜೆಂಡಾಗಳು ನಿಗೂಢವಾಗಿದೆ. ಅದನ್ನ ಜಾರಿ ಮಾಡುವುದರಲ್ಲಿ ಅದು ಸದ್ದುಗದ್ದಲವಿಲ್ಲದೆ ನಡೆದುಕೊಳ್ಳುತ್ತದೆ. ಅದಕ್ಕೊಂದು ಉದಾಹರಣೆ ಎಂದರೆ ಈ ಅರಸು ಪ್ರಶಸ್ತಿ. ಅದಕ್ಕಾಗಿ ಕೊಡಲು ಸರಕಾರದಲ್ಲಿ ಐದು ಲಕ್ಷ ಹಣವಿಲ್ಲ ಎನ್ನುವುದಾದರೆ, ರಾಜ್ಯೋತ್ಸವ ಪ್ರಶಸ್ತಿಯಂತೆ ಈ ಪ್ರಶಸ್ತಿಯ ಮೊತ್ತವನ್ನ ಸಹ ಒಂದು ಲಕ್ಷಕ್ಕೆ ಇಳಿಸಬಹುದಿತ್ತಲ್ಲವೇ? ಲಕ್ಷ ಕೋಟಿ ಬಜೆಟ್‌ ಮಂಡಿಸುವ ಸರ್ಕಾರದ ಬಳಿ ಒಂದು ಲಕ್ಷ ಹಣವಿಲ್ಲವೆಂದರೆ ಜನ ನಂಬುತ್ತಾರೆಯೇ? ದರಿದ್ರ ಸರಕಾರಕ್ಕೆ ಇವು ಅವಮಾನದ ಸಂಗತಿಗಳಾಗುವುದಿಲ್ಲ.

ಈ ಮೊದಲು ಎರಡು ಲಕ್ಷವಿದ್ದ ಪ್ರಶಸ್ತಿಯ ಬೆಲೆಯನ್ನ ಸಿದ್ದರಾಮಯ್ಯನವರ ಸರಕಾರ ಐದು ಲಕ್ಷಕ್ಕೆ ಏರಿಸಿತ್ತು. ಒಂದು ಸರಕಾರ ಪ್ರಶಸ್ತಿ ಮೊತ್ತ ಏರಿಸಿದರೆ ಮತ್ತೊಂದು ಸರಕಾರ ಆ ಮೊತ್ತವನ್ನ ಇಳಿಸಿದರೆ ಯಾರಿಗೂ ಅವಮಾನವಾಗುವುದಿಲ್ಲ. ನಮ್ಮ ನಡುವಿನ ಸಮಾಜ ಸುಧಾರಕರು ಹಣಕ್ಕಾಗಿ ಸೇವೆ ಮಾಡುವವರಲ್ಲ. ಆದರೆ ಬಿಜೆಪಿಯ ಉದ್ದೇಶವೇ ಅರಸುರವರನ್ನ ಜನಮನದಿಂದ ಮರೆಯಾಗಿಸುವುದು. ಅದಕ್ಕಾಗಿ ಈ ಸೇಡಿನ ಕ್ರಮ ಕೈಗೊಂಡಿದ್ದಾರೆ.

ಬಿಜೆಪಿಗಳು ಅರಸು ಪ್ರಶಸ್ತಿಯಂತಹ ವಿಷಯಗಳನ್ನ ತಣ್ಣಗೆ ಜಾರಿ ಮಾಡಿ ಪರಿಣಾಮ ನೋಡುತ್ತವೆ. ಪ್ರತಿಕ್ರಿಯೆ ಇಲ್ಲದಿದ್ದರೆ ಅದು ಮುಂದಿನ ವರ್ಷದಿಂದ ಮೂಲೆಗೆ ಬೀಳುವುದು ಗ್ಯಾರಂಟಿ. ಈಗಾಗಲೇ ಅಂಬೇಡ್ಕರ್ ಸಂವಿಧಾನ ರೂಪಿಸಿರಲಿಲ್ಲ, ಕ್ರೂಡೀಕರಿಸಿದರು ಎಂಬ ಸುದ್ದಿ ಮಾಡಿ ಅದರ ಪರಿಣಾಮ ಗ್ರಹಿಸತೊಡಗಿದ್ದಾರೆ. ಅಂಬೇಡ್ಕರ್ ವಿಷಯ ದಲಿತರಿಗೆ ಸಂಬಂಧಿಸಿದ್ದೆಂದು ಹಲವರು ಸುಮ್ಮನಿದ್ದಾರೆ. ಇದೇ ಬಿಜೆಪಿಗಳಿಗೆ ಸಂತಸದ ಸುದ್ದಿ.

ಇದನ್ನೂ ಓದಿ: ಸಂವಿಧಾನ ದಿನ: ಅಂಬೇಡ್ಕರ್‌ ಬದಲಿಗೆ ಶ್ಯಾಂ ಪ್ರಸಾದ್‌ ಮುಖರ್ಜಿ ಫೋಟೋ ಹಾಕಿದ್ದಕ್ಕೆ ಛೀಮಾರಿ, ನಂತರ ಬದಲಾವಣೆ.

ಆದರೆ ಅಂಬೇಡ್ಕರ್ ಕೆಣಕಿದ ಕಾರಣಕ್ಕೆ ನಾಡಿನ ಪ್ರಜ್ಞಾವಂತ ಸಮಾಜ ಕ್ರೋಧಗೊಂಡಿದೆ. ಪ್ರತಿಭಟನೆ ಮಾಡಿದವರು ಮಾತ್ರ ತಳಸಮುದಾಯದವರು. ಆದ್ದರಿಂದ ಅವರ ಹೆಸರಲ್ಲಿ ಕೊಡಮಾಡುವ ಪ್ರಶಸ್ತಿ ನಿಲ್ಲಿಸಿದ್ದರ ಬಗ್ಗೆ ಎಲ್ಲೂ ಸೊಲ್ಲೆತ್ತಿಲ್ಲ. ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅರಸು ತರದ ಸಾಮಾಜಿಕ ಪರಿವರ್ತನೆಯ ಹರಿಕಾರ ಹಿಂದೆ ಬಂದಿಲ್ಲ. ಮುಂದೆ ಬರುವುದೂ ಅಸಂಭವ. ಆದ್ದರಿಂದ ಸತ್ತಂತಿರುವ ಫಲಾನುಭವಿಗಳು ಎಚ್ಚೆತ್ತು ತಮ್ಮ ದನಿ ಗುರುತಿಸಿಕೊಳ್ಳದಿದ್ದರೆ ಇಲ್ಲಿ ಗೋಳ್ವಾರ್ಕರ್ ಪ್ರಶಸ್ತಿ ಜಾರಿಗೆ ಬರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಹಿಂದ ವರ್ಗದ ನಾಯಕರಾಗಿದ್ದ ಅರಸುರವರ ಹೆಸರು ಚಾಲ್ತಿಯಲ್ಲಿರದಂತೆ ಮಾಡುವುದೇ ಮನುವಾದಿಗಳ ಹುನ್ನಾರ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...