Homeಕರ್ನಾಟಕಅರಸು ಪ್ರಶಸ್ತಿ ನಿಲ್ಲಿಸಿದ್ದೇಕೆ? ಬಿ.ಚಂದ್ರೇಗೌಡರ ಪ್ರಶ್ನೆ..

ಅರಸು ಪ್ರಶಸ್ತಿ ನಿಲ್ಲಿಸಿದ್ದೇಕೆ? ಬಿ.ಚಂದ್ರೇಗೌಡರ ಪ್ರಶ್ನೆ..

- Advertisement -
- Advertisement -

ಪ್ರತಿ ವರ್ಷ ರಾಜ್ಯ ಸರ್ಕಾರ ದೇವರಾಜ ಅರಸು ಹೆಸರಿನಲ್ಲಿ ಕೊಡುತ್ತಿದ್ದ ಪ್ರಶಸ್ತಿಯನ್ನು ಈ ಬಾರಿಯಿಂದ ರಾಜ್ಯ ಬಿಜೆಪಿ ಸರಕಾರ ನಿಲ್ಲಿಸಿಬಿಟ್ಟಿದೆ. ಇದಕ್ಕಾಗಿ ಅದು ಕೊಡುತ್ತಿರುವ ಕಾರಣ, ರಾಜ್ಯದಲ್ಲಿ ನೆರೆಹಾವಳಿಯಿಂದಾಗಿ ಪ್ರಶಸ್ತಿ ಕೊಡಲು ಸರ್ಕಾರದ ಬಳಿ ಹಣವಿಲ್ಲವಂತೆ. ಅದು ಎಷ್ಟು? ಕೇವಲ ಐದು ಲಕ್ಷ…!

ಆದರೆ ನಿಜವಾಗಿ ಇದು ಅಪ್ಪಟ ಸುಳ್ಳು. ಏಕೆಂದರೆ ಈ ಸರಕಾರದ ಕೆಲವು ನಿರ್ಧಾರಗಳು ಅದೆಲ್ಲಿಂದಲೋ ಬರುತ್ತವೆ. ಅವು ಅಧಿಕಾರಿಗಳ ಮುಖಾಂತರ ಜಾರಿಯಾಗುತ್ತವೆ. ಅರಸು ಪ್ರಶಸ್ತಿ ವಿಷಯದಲ್ಲೂ ಕೂಡ ಜನಪ್ರತಿನಿಧಿಗಳ ಬದಲು ಅಧಿಕಾರಿಗಳೇ ಪ್ರಶಸ್ತಿ ನೀಡಬಾರದೆಂದು ನಮಗೆ ಮೌಖಿಕ ಸಂದೇಶವಿದೆ ಎನ್ನುತ್ತಾರೆ. ಯಾರಿಂದ ಎಂದರೆ ಬಾಯಿಬಿಡುವುದಿಲ್ಲ. ನಿಜಕ್ಕೂ ಸಾಮಾಜಿಕ ಕಳಕಳಿ ಇದ್ದ ಅಧಿಕಾರಿಗಳು ಕೂಡ ಅಸಹಾಯಕರಾಗಿ ವರ್ತಿಸುತ್ತಿದ್ದಾರೆ.

ಇದನ್ನೂ ಓದಿ: ವರ್ಷ ಕಳೆದರೂ ದೇವರಾಜ ಅರಸು ಪ್ರಶಸ್ತಿ ಪ್ರಕಟಿಸದ ಬಿಜೆಪಿ ಸರ್ಕಾರ : ಏನಿರಬಹುದು ಹುನ್ನಾರ?

ಇದು ಹೇಳಿಕೇಳಿ ಬಿಜೆಪಿ ಸರಕಾರ. ಸಾಮಾಜಿಕ ಪರಿವರ್ತನೆಯ ವಿರೋಧಿ ಆದ್ದರಿಂದ ಸ್ಥಗಿತಗೊಂಡ ಸಮಾಜವನ್ನ ಸಾಮಾಜಿಕ ನ್ಯಾಯದಿಂದ ಮುಂದೆ ನೂಕಿದ ಅರಸು ಕಂಡರೆ ಬಿಜೆಪಿಗಳಿಗಾಗುವುದಿಲ್ಲ. ಆದ್ದರಿಂದ ಒಂದು ವ್ಯವಸ್ಥಿತ ಸಂಚಿನಿಂದ ಅರಸು ಪ್ರಶಸ್ತಿಯನ್ನು ಆಯ್ಕೆಮಾಡಲು ನೇಮಕವಾಗುವ ಸಮಿತಿಯನ್ನೇ ರಚಿಸಿಲ್ಲ. ಜೊತೆಗೆ ಆ ಪ್ರಸ್ತಾಪವೇ ನಡೆಯದಂತೆ ನೋಡಿಕೊಂಡಿದೆ.

ಹಾಗೆ ನೋಡಿದರೆ ಈ ಸರಕಾರದ ಅಜೆಂಡಾಗಳು ನಿಗೂಢವಾಗಿದೆ. ಅದನ್ನ ಜಾರಿ ಮಾಡುವುದರಲ್ಲಿ ಅದು ಸದ್ದುಗದ್ದಲವಿಲ್ಲದೆ ನಡೆದುಕೊಳ್ಳುತ್ತದೆ. ಅದಕ್ಕೊಂದು ಉದಾಹರಣೆ ಎಂದರೆ ಈ ಅರಸು ಪ್ರಶಸ್ತಿ. ಅದಕ್ಕಾಗಿ ಕೊಡಲು ಸರಕಾರದಲ್ಲಿ ಐದು ಲಕ್ಷ ಹಣವಿಲ್ಲ ಎನ್ನುವುದಾದರೆ, ರಾಜ್ಯೋತ್ಸವ ಪ್ರಶಸ್ತಿಯಂತೆ ಈ ಪ್ರಶಸ್ತಿಯ ಮೊತ್ತವನ್ನ ಸಹ ಒಂದು ಲಕ್ಷಕ್ಕೆ ಇಳಿಸಬಹುದಿತ್ತಲ್ಲವೇ? ಲಕ್ಷ ಕೋಟಿ ಬಜೆಟ್‌ ಮಂಡಿಸುವ ಸರ್ಕಾರದ ಬಳಿ ಒಂದು ಲಕ್ಷ ಹಣವಿಲ್ಲವೆಂದರೆ ಜನ ನಂಬುತ್ತಾರೆಯೇ? ದರಿದ್ರ ಸರಕಾರಕ್ಕೆ ಇವು ಅವಮಾನದ ಸಂಗತಿಗಳಾಗುವುದಿಲ್ಲ.

ಈ ಮೊದಲು ಎರಡು ಲಕ್ಷವಿದ್ದ ಪ್ರಶಸ್ತಿಯ ಬೆಲೆಯನ್ನ ಸಿದ್ದರಾಮಯ್ಯನವರ ಸರಕಾರ ಐದು ಲಕ್ಷಕ್ಕೆ ಏರಿಸಿತ್ತು. ಒಂದು ಸರಕಾರ ಪ್ರಶಸ್ತಿ ಮೊತ್ತ ಏರಿಸಿದರೆ ಮತ್ತೊಂದು ಸರಕಾರ ಆ ಮೊತ್ತವನ್ನ ಇಳಿಸಿದರೆ ಯಾರಿಗೂ ಅವಮಾನವಾಗುವುದಿಲ್ಲ. ನಮ್ಮ ನಡುವಿನ ಸಮಾಜ ಸುಧಾರಕರು ಹಣಕ್ಕಾಗಿ ಸೇವೆ ಮಾಡುವವರಲ್ಲ. ಆದರೆ ಬಿಜೆಪಿಯ ಉದ್ದೇಶವೇ ಅರಸುರವರನ್ನ ಜನಮನದಿಂದ ಮರೆಯಾಗಿಸುವುದು. ಅದಕ್ಕಾಗಿ ಈ ಸೇಡಿನ ಕ್ರಮ ಕೈಗೊಂಡಿದ್ದಾರೆ.

ಬಿಜೆಪಿಗಳು ಅರಸು ಪ್ರಶಸ್ತಿಯಂತಹ ವಿಷಯಗಳನ್ನ ತಣ್ಣಗೆ ಜಾರಿ ಮಾಡಿ ಪರಿಣಾಮ ನೋಡುತ್ತವೆ. ಪ್ರತಿಕ್ರಿಯೆ ಇಲ್ಲದಿದ್ದರೆ ಅದು ಮುಂದಿನ ವರ್ಷದಿಂದ ಮೂಲೆಗೆ ಬೀಳುವುದು ಗ್ಯಾರಂಟಿ. ಈಗಾಗಲೇ ಅಂಬೇಡ್ಕರ್ ಸಂವಿಧಾನ ರೂಪಿಸಿರಲಿಲ್ಲ, ಕ್ರೂಡೀಕರಿಸಿದರು ಎಂಬ ಸುದ್ದಿ ಮಾಡಿ ಅದರ ಪರಿಣಾಮ ಗ್ರಹಿಸತೊಡಗಿದ್ದಾರೆ. ಅಂಬೇಡ್ಕರ್ ವಿಷಯ ದಲಿತರಿಗೆ ಸಂಬಂಧಿಸಿದ್ದೆಂದು ಹಲವರು ಸುಮ್ಮನಿದ್ದಾರೆ. ಇದೇ ಬಿಜೆಪಿಗಳಿಗೆ ಸಂತಸದ ಸುದ್ದಿ.

ಇದನ್ನೂ ಓದಿ: ಸಂವಿಧಾನ ದಿನ: ಅಂಬೇಡ್ಕರ್‌ ಬದಲಿಗೆ ಶ್ಯಾಂ ಪ್ರಸಾದ್‌ ಮುಖರ್ಜಿ ಫೋಟೋ ಹಾಕಿದ್ದಕ್ಕೆ ಛೀಮಾರಿ, ನಂತರ ಬದಲಾವಣೆ.

ಆದರೆ ಅಂಬೇಡ್ಕರ್ ಕೆಣಕಿದ ಕಾರಣಕ್ಕೆ ನಾಡಿನ ಪ್ರಜ್ಞಾವಂತ ಸಮಾಜ ಕ್ರೋಧಗೊಂಡಿದೆ. ಪ್ರತಿಭಟನೆ ಮಾಡಿದವರು ಮಾತ್ರ ತಳಸಮುದಾಯದವರು. ಆದ್ದರಿಂದ ಅವರ ಹೆಸರಲ್ಲಿ ಕೊಡಮಾಡುವ ಪ್ರಶಸ್ತಿ ನಿಲ್ಲಿಸಿದ್ದರ ಬಗ್ಗೆ ಎಲ್ಲೂ ಸೊಲ್ಲೆತ್ತಿಲ್ಲ. ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅರಸು ತರದ ಸಾಮಾಜಿಕ ಪರಿವರ್ತನೆಯ ಹರಿಕಾರ ಹಿಂದೆ ಬಂದಿಲ್ಲ. ಮುಂದೆ ಬರುವುದೂ ಅಸಂಭವ. ಆದ್ದರಿಂದ ಸತ್ತಂತಿರುವ ಫಲಾನುಭವಿಗಳು ಎಚ್ಚೆತ್ತು ತಮ್ಮ ದನಿ ಗುರುತಿಸಿಕೊಳ್ಳದಿದ್ದರೆ ಇಲ್ಲಿ ಗೋಳ್ವಾರ್ಕರ್ ಪ್ರಶಸ್ತಿ ಜಾರಿಗೆ ಬರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಹಿಂದ ವರ್ಗದ ನಾಯಕರಾಗಿದ್ದ ಅರಸುರವರ ಹೆಸರು ಚಾಲ್ತಿಯಲ್ಲಿರದಂತೆ ಮಾಡುವುದೇ ಮನುವಾದಿಗಳ ಹುನ್ನಾರ.

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...