Homeಕರ್ನಾಟಕನೆರೆಯ ಕೇರಳ ಮಾದರಿ ಅನುಸರಿಸಲು ಸರ್ಕಾರ ಸಿದ್ದವಿಲ್ಲವೇಕೆ? : ಕುಮಾರಸ್ವಾಮಿ ಪ್ರಶ್ನೆ

ನೆರೆಯ ಕೇರಳ ಮಾದರಿ ಅನುಸರಿಸಲು ಸರ್ಕಾರ ಸಿದ್ದವಿಲ್ಲವೇಕೆ? : ಕುಮಾರಸ್ವಾಮಿ ಪ್ರಶ್ನೆ

ಸರ್ಕಾರ ಕೇವಲ ಸರ್ವಪಕ್ಷಗಳ ಸಭೆ ಕರೆದರೆ ಸಾಲದು. ಆ ಸಭೆಯಲ್ಲಿ ನೀಡುವ ಸಲಹೆಗಳನ್ನು, ತೆಗೆದುಕೊಂಡ ನಿರ್ಣಯಗಳನ್ನು ಕಾರ್ಯರೂಪಕ್ಕೆ ತರಬೇಕು. ಕಳೆದ 3 ತಿಂಗಳಿನಿಂದ ನಾವು ನೀಡಿರುವ ಒಂದು ಸಲಹೆಯನ್ನೂ ಕಾರ್ಯರೂಪಕ್ಕೆ ತಂದಿಲ್ಲ.

- Advertisement -
- Advertisement -

ನೆರೆಯ ಕೇರಳ ಸರ್ಕಾರ ಕೊರೋನ ತಡೆಗೆ ಕೈಗೊಂಡ ಕ್ರಮಗಳ ‘ಸಿದ್ದ’ ಮಾದರಿ ಕಣ್ಣೆದುರಿಗಿದೆ. ಆದರೆ, ರಾಜ್ಯದ ಸಚಿವರಲ್ಲಿ ಸಮನ್ವಯವಿಲ್ಲ, ಒಬ್ಬೊಬ್ಬರದು ಒಂದೊಂದು ನಿಲುವು. ಇವರ ತಿಕ್ಕಾಟದಲ್ಲಿ ರಾಜ್ಯದ ಜನತೆ ಹೈರಾಣಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.

ಕೊರೋನಾ ಸೋಂಕು ಪೀಡಿತರು ಬೆಡ್ ಗಳಿಲ್ಲದೆ, ಚಿಕಿತ್ಸೆ ಇಲ್ಲದೆ ಮನೆಯಲ್ಲೇ ನರಳಿ ಸಾಯುತ್ತಿದ್ದಾರೆ. ಸರ್ಕಾರ ಈಗ ಇಂಗು ತಿಂದ ಮಂಗನಂತಾಗಿದ್ದು, ಸೋಂಕಿತರ ಸಂಖ್ಯೆಯ ಗಣನೀಯ ಏರಿಕೆಯನ್ನು ತಡೆಯಲು ಪೇಚಾಡುತ್ತಿದೆ. ಆರಂಭಿಕ ಹಂತದಲ್ಲೇ ಕೋವಿಡ್-19 ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕಳೆದ ಮೂರು ತಿಂಗಳಿಂದ ಮುಖ್ಯಮಂತ್ರಿ ಸೇರಿದಂತೆ ಸಚಿವರುಗಳು ಮಾತಿನ ಮಂಟಪ ಕಟ್ಟುವುದರಲ್ಲಿ ಕಾಲ ಕಳೆದರು ಎಂದು ಅವರು ಆರೋಪಿಸಿದ್ದಾರೆ.

ಕೊರೋನಾ ಸೋಂಕು ಶರವೇಗದಲ್ಲಿ ಎಲ್ಲೆಡೆ ವ್ಯಾಪಿಸುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ರಾಜ್ಯದಾದ್ಯಂತ ಸೋಂಕಿತರು ಚಿಕಿತ್ಸೆಯಿಲ್ಲದೆ ಸಾಯುತ್ತಿರುವ ಘಟನೆಗಳು ಕರುಳು ಹಿಂಡುತ್ತಿವೆ. ಸರ್ಕಾರ ಇನ್ನೂ ಮೈಮರೆತರೆ ಸೋಂಕಿತರು ಬೀದಿ ಬೀದಿಯಲ್ಲಿ ಸಾಯುವ ಸ್ಥಿತಿ ನಿರ್ಮಾಣವಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಸರ್ಕಾರ ಇನ್ನಾದರೂ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಲಿ. ಕೊರೋನಾ ಸಮರ್ಪಕ ನಿರ್ವಹಣೆಗೆ ನಾನು ಕೊಟ್ಟ ಹತ್ತಾರು ಸಲಹೆಗಳನ್ನು ಲಘುವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಇನ್ನಾದರೂ ಎಚ್ಚೆತ್ತುಕೊಳ್ಳಲಿ ಎಂದು ಸಲಹೆ ನೀಡಿದ್ದಾರೆ.

ಸರ್ಕಾರ ಕೇವಲ ಸರ್ವಪಕ್ಷಗಳ ಸಭೆ ಕರೆದರೆ ಸಾಲದು. ಆ ಸಭೆಯಲ್ಲಿ ನೀಡುವ ಸಲಹೆಗಳನ್ನು, ತೆಗೆದುಕೊಂಡ ನಿರ್ಣಯಗಳನ್ನು ಕಾರ್ಯರೂಪಕ್ಕೆ ತರಬೇಕು. ಕಳೆದ 3 ತಿಂಗಳಿನಿಂದ ನಾವು ನೀಡಿರುವ ಒಂದು ಸಲಹೆಯನ್ನೂ ಕಾರ್ಯರೂಪಕ್ಕೆ ತಂದಿಲ್ಲ. ಸರ್ಕಾರದ ಅವ್ಯವಸ್ಥೆಗೆ ಬಡ, ಮಧ್ಯಮ ವರ್ಗದ ಜನರು ಈಗ ಜೀವ ತೆರಬೇಕಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಹಿರಿಯ ರೈತ ಹೋರಾಟಗಾರರನ್ನು ಅವಮಾನಿಸಿದ ಸಚಿವ ಮಾಧುಸ್ವಾಮಿ ನಡೆಗೆ ತೀವ್ರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Corona vaccine ಬರ್ತಾಇದೇ, ಅದು ಯಾಕೆ ಬರ್ತಾಯಿಲ್ಲ ನನಗೆ ಗೊತ್ತಾಗುತ್ತ ಇಲ್ಲ. ನೂರಾರು ದೇಶಗಳು, ಸಾವಿರಾರು scientists, ಆದರೂ corona virus ಗೆ ಇಲ್ಲಾ vaccine.
    ಇದರಲ್ಲಿ ಏನೋ ಗುಟ್ಟು ಅಡಗಿದೆ, ಜನರ ಪ್ರಾಣ ಜೊತೆ ಆಟ ಆಡುವವರನ್ನ ಬೆತ್ತಲೆ ಮಾಡುವ ಯಾವ TV, ಪತ್ರಿಕೆ ಇಲ್ಲವಾ??

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...