Homeಮುಖಪುಟನಟಿ ರಶ್ಮಿಕಾ ಮಂದಣ್ಣ ವಿರುದ್ಧ ಟ್ರೋಲ್ ಏಕೆ?: ಪ್ರಜ್ಞಾವಂತರ ಆಕ್ಷೇಪ

ನಟಿ ರಶ್ಮಿಕಾ ಮಂದಣ್ಣ ವಿರುದ್ಧ ಟ್ರೋಲ್ ಏಕೆ?: ಪ್ರಜ್ಞಾವಂತರ ಆಕ್ಷೇಪ

- Advertisement -
- Advertisement -

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತೆ ಸುದ್ದಿಯಲ್ಲಿದ್ದಾರೆ. ಕಳೆದ ತಿಂಗಳಷ್ಟೇ ದ್ವೇಷದ ಟ್ರೋಲ್‌ಗಳಿಂದ ಮನನೊಂದು “ನನ್ನ ಹೃದಯ ಘಾಸಿಯಾಗಿದೆ” ಎಂದು ರಶ್ಮಿಕಾ ಭಾವನಾತ್ಮಕ ಪೋಸ್ಟ್‌ ಒಂದನ್ನು ಹಾಕಿದ್ದರು. ಆದರೂ ಟ್ರೋಲಿಗರಿಗೆ ಅದು ತಟ್ಟಿಲ್ಲ. ಹಾಗಾಗಿ ಮತ್ತೆ ನಟಿ ವಿರುದ್ಧ ಮುಗಿಬಿದ್ದಿದ್ದಾರೆ. ಆದರೆ ಈ ಸಂದರ್ಭದಲ್ಲಿ ನೂರಾರು ಪ್ರಜ್ಞಾವಂತರು ನಟಿಯ ಪರ ನಿಂತಿದ್ದು, ದ್ವೇ‍ಷದ ಟ್ರೋಲ್‌ಗಳನ್ನು, ಅದರಿಂದಿರುವ ಪುರುಷಾಧಿಪತ್ಯದ ಮನೋಭಾವವನ್ನು ಖಂಡಿಸಿದ್ದಾರೆ.

ಟ್ರೋಲ್‌ಗೆ ಕಾರಣವೇನು?

ಇತ್ತೀಚಿಗೆ ಯೂಟ್ಯೂಬ್ ಚಾನೆಲ್‌ವೊಂದಕ್ಕೆ ಸಂದರ್ಶನ ನೀಡಿದ್ದ ರಶ್ಮಿಕಾ ತಾವು ಸಿನಿಮಾ ಪ್ರಪಂಚಕ್ಕೆ ಕಾಲಿಟ್ಟಿದುದರ ಬಗೆಗೆ ಮಾತನಾಡಿದ್ದರು. ಕಾಲೇಜು ಓದುತ್ತಿದ್ದಾಗಲೇ ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟಿದುದು, ತನ್ನ ಫೋಟೊ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯಲ್ಲಿ ಮುಖಪುಟದಲ್ಲಿ ಪ್ರಕಟವಾಗಿದ್ದು, ಸಿನಿಮಾದಲ್ಲಿ ನಟನೆಗೆ ಆಫರ್ ಬಂದಿದ್ದನ್ನು ನಂಬಲಾಗಲಿಲ್ಲ ಎಂದೆಲ್ಲಾ ಮಾತನಾಡಿದ್ದ ಅವರು ಆ ಸಂದರ್ಭದಲ್ಲಿ ತನ್ನ ಮೊದಲ ಚಿತ್ರದ ಹೆಸರು ಹೇಳುವ ಬದಲಿಗೆ ಎರಡೂ ಕೈಗಳಿಂದ ಕೋಟ್‌ ರೀತಿಯ ಸನ್ನೆ ಮಾಡಿದ್ದರು.

ಅಷ್ಟಕ್ಕೆ ಹಲವರು ರಶ್ಮಿಕಾ ವಿರುದ್ಧ ಮುಗಿಬಿದ್ದಿದ್ದಾರೆ. ತನ್ನ ಮೊದಲ ಚಿತ್ರ ಕಿರಿಕ್ ಪಾರ್ಟಿ ಎಂದೂ ಅದರ ನಿರ್ದೇಶಕ ರಿಷಬ್ ಶೆಟ್ಟಿ, ನಟ ರಕ್ಷಿತ್ ಶೆಟ್ಟಿ ಎಂದು ಪ್ರೊಡಕ್ಷನ್ ಹೌಸ್‌ ಅನ್ನು ರಶ್ಮಿಕಾ ಉಲ್ಲೇಖಿಸದೆ ಸನ್ನೆ ಮಾಡುವ ಮೂಲಕ ಅವಮಾನ ಮಾಡಿದ್ದಾರೆ ಎಂಬುದು ಟ್ರೋಲಿಗರ ಆರೋಪವಾಗಿದೆ. ಅದಕ್ಕಾಗಿ ಕನ್ನಡ ಚಿತ್ರರಂಗದಿಂದ ರಶ್ಮಿಕಾ ಮಂದಣ್ಣನವರನ್ನು ಬ್ಯಾನ್ ಮಾಡಬೇಕು ಎಂದು ಕೆಲವರು ಒತ್ತಾಯಿಸಿ ಪೋಸ್ಟರ್ ಮಾಡಿ ಹಂಚುತ್ತಿದ್ದಾರೆ. ಅದನ್ನೆ ಕನ್ನಡ ಮಾಧ್ಯಮಗಳು ಸಹ ಬ್ಯಾನ್ ಎಂದು ಸುದ್ದಿ ಮಾಡುತ್ತಿವೆ.

ಆದರೆ ರಶ್ಮಿಕಾ ಮಂದಣ್ಣ ಕೈ ಸನ್ನೆ ಮಾಡಿದ್ದಕ್ಕೆ ಮಾತ್ರವೇ ಅವರೆ ಮೇಲೆ ಟ್ರೋಲ್ ಗಳಾಗುತ್ತಿವೆ ಎಂಬುದು ಸುಳ್ಳು. ಬದಲಿಗೆ ಅವರು ಮಹಿಳೆ ಎಂಬ ಕಾರಣಕ್ಕೆ, ಅದರಲ್ಲಿಯೂ ಯಶಸ್ವಿ ನಟಿ ಎಂಬ ಕಾರಣಕ್ಕೆ ಅವರ ಮೇಲೆ ನಿರಂತರ ದಾಳಿ ನಡೆಯುತ್ತಿವೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ರಶ್ಮಿಕಾ ಮಂದಣ್ಣ ಬ್ಯಾನ್ ಎಂಬುದೆಲ್ಲ ಕಟ್ಟುಕತೆ: ಬಿ.ಎಂ ಗಿರಿರಾಜ್

ಕನ್ನಡ ಸಿನಿಮಾರಂಗದಿಂದ ನಟಿ ರಶ್ಮಿಕಾ ಮಂದಣ್ಣನವರನ್ನು ಬ್ಯಾನ್ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡುತ್ತಿರುವುದು ಸುಳ್ಳು. ನಿಜ ಏನೆಂದರೆ ರಶ್ಮಿಕಾ ಮಂದಣ್ಣನವರು ಕೇಳುವಷ್ಟು ಸಂಭಾವನೆ ಕೊಡಲು ಕನ್ನಡ ನಿರ್ಮಾಪಕರಿಗೆ ಸಾಧ್ಯವಾಗುತ್ತಿಲ್ಲ. ಹಾಗಾಗಿ ಅವರು ಕನ್ನಡ ಚಿತ್ರಗಳಲ್ಲಿ ನಟಿಸುತ್ತಿಲ್ಲ ಅಷ್ಟೆ ಎನ್ನುತ್ತಾರೆ ಕನ್ನಡ ನಿರ್ದೇಶಕ ಬಿ.ಎಂ ಗಿರಿರಾಜ್‌ರವರು.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ಬ್ಯಾನ್ ಎಂದು ಗಾಳಿ ಸುದ್ದಿ ಹರಡುತ್ತಿದ್ದಾರೆ. ರಶ್ಮಿಕಾ ಮಂದಣ್ಣ ತೆಲುಗು ಮತ್ತು ಹಿಂದಿ ಚಿತ್ರರಂಗಕ್ಕೆ ಕಾಲಿಟ್ಟ ಮೇಲೆ ಹೆಚ್ಚು ಸಂಭಾವನೆ ಸಿಗುತ್ತಿರುವ ಕಾರಣಕ್ಕೆ ಅಲ್ಲಿ ಹೆಚ್ಚಾಗಿ ನಟಿಸುತ್ತಿದ್ದಾರೆ. ಅಷ್ಟು ಸಂಭಾವನೆ ಕೊಟ್ಟು ಕನ್ನಡಕ್ಕೆ ಕರೆತಂದರೆ ತಮಗೆ ಗಿಟ್ಟುವುದಿಲ್ಲ ಎಂಬುದು ನಿರ್ಮಾಪಕರ ಅಭಿಪ್ರಾಯ. ಒಂದು ವೇಳೆ ಅವರು ಕಡಿಮೆ ಸಂಭಾವನೆಗೆ ಕನ್ನಡ ಚಿತ್ರಗಳಲ್ಲಿ ನಟಿಸಬೇಕು ಎಂದರೆ ಪಾತ್ರ ದೊಡ್ಡದಿರಬೇಕು ಅಥವಾ ಅವರಿಗೆ ಇಷ್ಟವಾದ ಪಾತ್ರವಿರಬೇಕು. ಅದು ಸಾಧ್ಯವಾಗದ ಕಾರಣ ಅವರು ಕನ್ನಡ ಚಿತ್ರಗಳಲ್ಲಿ ನಟಿಸುತ್ತಿಲ್ಲ. ಇಷ್ಟೆ ವಿಷಯ” ಎಂದರು.

ಕನ್ನಡ ಇಂಡಸ್ಟ್ರಿಯಿಂದ ಬ್ಯಾನ್ ಎಂಬ ಪದ ಹೋಗಬೇಕೆಂದು ಪುನೀತ್‌ ರಾಜ್‌ಕುಮಾರ್‌ರವರು ಹೇಳಿದ್ದರು. “ನಮ್ಮಲ್ಲಿ ಯಾರನ್ನು ಬ್ಯಾನ್ ಮಾಡುವ ಮಾತನ್ನಾಡಬಾರದು. ಸಂವಿಧಾನದ ಪ್ರಕಾರ ಅತಿ ದೊಡ್ಡ ಅಪರಾಧವೆನಿಸದ ಹೊರತು ಯಾರನ್ನು ಬ್ಯಾನ್ ಮಾಡುವ ಅಧಿಕಾರ ಯಾರಿಗೂ ಇಲ್ಲ” ಎಂದು ಅಪ್ಪುರವರು ಹೇಳಿದ್ದರು. ಆದರೂ ಕೆಲವು ಟ್ರೋಲ್‌ ಮಾಡುವವರು ಬ್ಯಾನ್ ಮಾಡಬೇಕೆಂದು ಹೇಳುತ್ತಾರೆ. ಆದರೆ ಅದನ್ನು ಅಧಿಕೃತ ಎಂದು ಪ್ರಸಾರ ಮಾಡುವುದು ಮಾಧ್ಯಮಗಳ ಬೇಜವಬ್ದಾರಿತನವಾಗಿದೆ. ಯಾವುದಕ್ಕೆ ಮಹತ್ವ ಕೊಡಬೇಕು, ಯಾವುದಕ್ಕೆ ಕೊಡಬಾರದು ಎನ್ನುವ ಕನಿಷ್ಟ ತಿಳಿವಳಿಕೆ ಮಾಧ್ಯಮಗಳಿಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬ್ಯಾನ್‌ ಅನ್ನುವ ಪದಕ್ಕೆ ಚಿತ್ರರಂಗದಲ್ಲಿ ಅವಕಾಶವೇ ಇಲ್ಲ- ಮಂಸೋರೆ

“ಬ್ಯಾನ್‌ ಅನ್ನುವ ಪದಕ್ಕೆ ಚಿತ್ರರಂಗದಲ್ಲಿ ಅವಕಾಶವೇ ಇಲ್ಲ. ರಶ್ಮಿಕಾ ಅವರು ವಾಣಿಜ್ಯ ಮಂಡಳಿಗೆ ಸಂಬಂಧಪಟ್ಟವರೂ ಅಲ್ಲ, ಕಲಾವಿದರ ಸಂಘದ ಸದಸ್ಯರೂ ಅಲ್ಲ. ವಾಣಿಜ್ಯ ಮಂಡಳಿಗೆ ಬ್ಯಾನ್ ಮಾಡಲು ಅಧಿಕಾರವಿಲ್ಲ. ಯಾವುದೇ ಹೆಣ್ಣುಮಗಳ ವೈಯಕ್ತಿಕ ವಿಚಾರಗಳನ್ನು ಮುಂದೆ ತಂದು ಅವಹೇಳನ ಮಾಡುವುದು ತಪ್ಪು” ಎನ್ನುತ್ತಾರೆ ಕನ್ನಡ ನಿರ್ದೇಶಕ ಮಂಸೋರೆಯವರು.

“ತೆಲುಗು, ತಮಿಳು, ಮಲಯಾಳಂ, ಹಿಂದಿ ಚಿತ್ರರಂಗದಲ್ಲಿ ಕೊಡುತ್ತಿರುವಷ್ಟು ಸಂಭಾವನೆಯನ್ನು ನಮ್ಮಲ್ಲಿ ನಟಿಯರಿಗೆ ಕೊಡುತ್ತಿಲ್ಲ. ಕನ್ನಡ ಚಿತ್ರರಂಗದಲ್ಲಿ ರಮ್ಯಾ ಅವರಷ್ಟು ಸಂಭಾವನೆ ಪಡೆದ ಮತ್ತೊಬ್ಬ ನಟಿ  ಸಿಗುವುದಿಲ್ಲ. ರಶ್ಮಿಕಾ ಅವರು ಈಗ ಬೇರೆ ಬೇರೆ ಚಿತ್ರರಂಗದಲ್ಲಿ ಒಂದು ಕೋಟಿ, ಎರಡು ಕೋಟಿಯಷ್ಟು ಸಂಭಾವನೆಯನ್ನು ಪಡೆಯುತ್ತಿದ್ದಾರೆ. ಇಷ್ಟು ಹಣವನ್ನು ಕೊಡಲು ಕನ್ನಡ ಚಿತ್ರರಂಗದವರು ಸಿದ್ಧವಿಲ್ಲ. ಇದು ವಾಸ್ತವ. ಎರಡು ವರ್ಷ ಬ್ಯುಸಿಯಾಗುವಷ್ಟು ಸಿನಿಮಾಗಳಿಗೆ ರಶ್ಮಿಕಾ ಈಗಾಗಲೇ ಸಹಿ ಹಾಕಿದ್ದಾರೆ” ಎಂದರು.

“ಬ್ಯಾನ್‌ ವಿಚಾರ ಮುನ್ನೆಲೆಗೆ ಬಂದಿರುವುದರಿಂದ ಕನ್ನಡ ಚಿತ್ರರಂಗ ರಶ್ಮಿಕಾ ಅವರನ್ನು ದೂರವಿಟ್ಟಿದೆ ಎಂಬ ಚರ್ಚೆಗಳೆಲ್ಲ ನಡೆಯುತ್ತಿರುವುದನ್ನು ನೋಡಿದೆ. ಅದ್ಯಾವುದಕ್ಕೂ ಆಧಾರವಿಲ್ಲ. ರಶ್ಮಿಕಾ ಅವರು ಕೇಳುವಷ್ಟು ಸಂಭಾವನೆಯನ್ನು ನೀಡಲು ಕನ್ನಡ ಚಿತ್ರರಂಗದವರು ಸಿದ್ಧವಿಲ್ಲ ಎಂಬುದಷ್ಟೆ ಸತ್ಯ” ಎಂದರು.

ಈ ಕುರಿತು ಲೇಖಕಿ ಪಲ್ಲವಿ ಇಡೂರುರವರು ಫೇಸ್‌ಬುಕ್‌ನಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. “ಆಕೆ ನಿಶ್ಚಿತಾರ್ಥ ಯಾವುದೇ ಕಾರಣಕ್ಕೆ ಮುರಿದುಕೊಂಡಿರಬಹುದು, ಆಕೆಯದೇ ನಿರ್ಧಾರವಾಗಿರಬಹುದು, ಅಥವಾ ಕುಟುಂಬದ್ದಾಗಿರಬಹುದು ಅಥವಾ ರಕ್ಷಿತ್ ರಶ್ಮಿಕಾ ಇಬ್ಬರದ್ದೂ ಆಗಿರಬಹುದು. ಅದು ಕೆರಿಯರ್ ಕಾರಣಕ್ಕೇ ಇರಬಹುದು ಅಥವಾ ಪರ್ಸನಲ್ ಕಾರಣಗಳಿಗೇ ಇರಬಹುದು. ಅದು ಅವರ ನಿರ್ಧಾರ. ಮದುವೆ, ಪ್ರೇಮ, ಪ್ರಣಯಗಳೆಲ್ಲ ವೈಯಕ್ತಿಕ ಆಯ್ಕೆಗಳು. ಯಾರ ನಿರ್ಧಾರಕ್ಕೂ ಯಾರ ಹೇಳಿಕೆಗೂ ಯಾರ ಒತ್ತಡಕ್ಕೂ ಸಂಬಂಧಿಸಿದ್ದಲ್ಲ. ಅಂತದ್ದರಲ್ಲಿ ನಿಶ್ಚಿತಾರ್ಥ ಮುರಿದುಕೊಂಡಿದ್ದಕ್ಕೆ ಆಕೆಯನ್ನು ಹಿಗ್ಗಾಮುಗ್ಗ ಟ್ರೋಲ್ ಮಾಡಿ, ಆಕೆಯೊಬ್ಬಳನ್ನೇ ಹೊಣೆಯಾಗಿಸಿ, ಪ್ರತೀದಿನವೆಂಬಂತೆ ಆಕೆಗೆ ಮಾನಸಿಕ ಹಿಂಸೆ ಕೊಟ್ಟಿದ್ದು ಈ ರಾಜ್ಯದ ಮಾಧ್ಯಮಗಳೆಂಬ ಕೊಳಕು ತೊಟ್ಟಿಗಳು ಮತ್ತು ದುರಭಿಮಾನಿಗಳು” ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಮುಂದುವರಿದು “ಇಷ್ಟೆಲ್ಲ ಕಣ್ಮುಂದೆ ನಡೆಯುತ್ತಿರುವಾಗ ಅವೆಲ್ಲವನ್ನೂ ನೋಡಿಕೊಂಡು ಸುಮ್ಮನಿದ್ದಿದ್ದು ತಾನೊಬ್ಬ ಭಗ್ನಪ್ರೇಮಿಯೆಂಬ ಪೋಸು ಕೊಟ್ಟ ರಕ್ಷಿತ್ ಶೆಟ್ಟಿ. ನಿಜವಾದ ಪ್ರೀತಿ ತಾನು ಪ್ರೀತಿಸಿದವರನ್ನು ಅವಮಾನಿಸೋದನ್ನ ಸಹಿಸೋದಿಲ್ಲ. ಆತ ಮಾಧ್ಯಮ ಮತ್ತು ಅಭಿಮಾನಿಗಳನ್ನು ಈ ಟ್ರೋಲ್ ನಿಲ್ಲಿಸುವಂತೆ ಕೇಳಿಕೊಳ್ಳಬಹುದಿತ್ತು. ಕೇಳದಿದ್ದರೆ ಪ್ರತಿಭಟಿಸಬಹುದಿತ್ತು. ಮಾಡಲಿಲ್ಲ. ಆಕೆ ಎಲ್ಲೂ ರಕ್ಷಿತ್ ಬಗ್ಗೆಯಾಗಲಿ, ಅವರ ಸ್ನೇಹಿತರ ಬಳಗದ ಬಗ್ಗೆಯಾಗಲಿ ಒಂದೂ ಮಾತಾಡಿಲ್ಲ. ಆದರೆ ಆಕೆಯನ್ನೂ ಇವತ್ತಿಗೂ ಟ್ರೋಲ್ ಮಾಡುವುದು ನೋಡಿದಾಗ ಕೋಪ, ಅಸಹ್ಯದ ಭಾವನೆ ಬರದಿದ್ದರೆ ಆಕೆ ಮನುಷ್ಯಳೇಗಾಗುತ್ತಾಳೆ. ಆ ಕಾರಣವೊ ಅಥವಾ ಅವರ ಮೇಲಿನ ಜಿಗುಪ್ಸೆಯ ಕಾರಣವೊ ಎಲ್ಲವೂ ಸೇರಿ ಆಕೆ ಹೆಸರು ಹೇಳದೇ ಸನ್ನೆಯಲ್ಲೇ ತನ್ನ ಮೊದಲ ಸಿನಿಮಾದ ಪ್ರೊಡಕ್ಷನ್ ಹೌಸ್ ಬಗ್ಗೆ ಮಾತಾಡಿದರೆ ಪ್ಯಾನ್ ಇಂಡಿಯಾ ಸಕ್ಸಸ್ ಸಿನಿಮಾ ಮಾಡಿದ ದೊಡ್ಡ ಮನುಷ್ಯರಿಗೆಲ್ಲ ಯಾಕೆ ಉರಿಯಬೇಕು?! ಅವರ ಅಭಿಮಾನಿಗಳಿಗೇಕೆ ಉರಿಯಬೇಕು?!
ಹೆಣ್ಣನ್ನು ಖರೀದಿ ಮಾಡಿದ್ದೀರೊ? ಆಕೆ ಹೋದ ಮೇಲೂ ಹಗೆ ಯಾಕೆ?! ಅವಳಿಲ್ಲದ ಬದುಕು ಆ ಪರಿ ಬರಗೆಟ್ಟಿದೆಯೊ!! ಅಥವಾ ಗಂಡೆನ್ನುವ ಅಹಂ ಕಾರಣವೊ?! ಸ್ವಲ್ಪವಾದರೂ ಮರ್ಯಾದೆ ಬೇಡವೇ? ಆಕೆ ತನ್ನ ಕರಿಯರ್ ಕಟ್ಟಿಕೊಳ್ಳುತ್ತಿದ್ದಾಳೆ. ಈ ದೇಶದ ನೆಲ ಯಾರಪ್ಪನ ಮನೆಯ ಸೊತ್ತು? ಎಲ್ಲೊ ಯಾರಿಲ್ಲದೆಯೂ ಬದುಕು ರೂಪುಗೊಳ್ಳುತ್ತದೆ. ಬದುಕುವ ಛಲವಿರಬೇಕಷ್ಟೆ! ಈ ರೀತಿ ಆಕೆಯನ್ನು ಟ್ರೋಲ್ ಮಾಡುತ್ತಿರುವ ಪರಿ ನೋಡಿದರೆ ಗಂಡಸರು ಅದೆಷ್ಟು insecure! ಅದೆಷ್ಟು ಪರಾವಲಂಬಿಗಳು!!” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕಳೆದ ವಾರದಲ್ಲಿ ಝೀ ಕನ್ನಡ ಚಾನೆಲ್‌ನ ಕಾಮಿಡಿ ಕಿಲಾಡಿಗಳು ಎಂಬ ಶೋನಲ್ಲಿ ರಶ್ಮಿಕಾ ಮಂದಣ್ಣನವರನ್ನು ಕೆಟ್ಟದಾಗಿ ಚಿತ್ರಿಸಲಾಗಿತ್ತು. ಪುಷ್ಪ ಸಿನಿಮಾದಲ್ಲಿ ಅವರ ಅಭಿನಯವನ್ನು ಹೀಯಾಳಿಸಲಾಗಿತ್ತು. ಆಗ ನಿರ್ದೇಶಕ ನಟ ಪ್ರೇಮ್ ಮತ್ತು ರಕ್ಷಿತಾ ಅತಿಥಗಳಾಗಿ ನಕ್ಕಿ ಅದನ್ನು ಆನಂದಿಸಿದ್ದರು. ಅದನ್ನೇಕೆ ಪ್ರಶ್ನಿಸಲಿಲ್ಲ? ಅಲ್ಲದೆ ರಶ್ಮಿಕಾ ಮಂದಣ್ಣ ಯಾವ ಸನ್ನೆ ಮಾಡಿದ್ದರೋ ಅದೇ ಸನ್ನೆಯನ್ನು ನಿರ್ದೇಶಕ, ನಟ ರಿಷಬ್ ಶೆಟ್ಟಿ ಸಹ ಮಂದಣ್ಣ ಕುರಿತಾಗಿ ಮಾಡಿದ್ದಾರೆ. ಆದರೆ ಅವರನ್ನು ಪ್ರಶ್ನಿಸುವವರಿಲ್ಲ, ಬದಲಿಗೆ ರಶ್ಮಿಕಾಗೆ ಬ್ಯಾನ್ ಮಾಡಿ ಎಂದು ಕೂಗುತ್ತಿರುವುದೇಕೆ ಎಂದು ಹಲವರು ಟ್ವಿಟರ್‌ನಲ್ಲಿ ಪ್ರಶ್ನಿಸಿದ್ದಾರೆ.

ಕಳೆದ ತಿಂಗಳು ರಶ್ಮಿಕಾ ಮಂದಣ್ಣ ಇದೇ ಟ್ರೋಲ್‌ಗಳಿಂದ ಬೇಸತ್ತು ಪೋಸ್ಟ್ ಮಾಡಿದ್ದರು.”ನಾನು ಆಯ್ಕೆ ಮಾಡಿದ ಜೀವನವು ಮೌಲ್ಯದೊಂದಿಗೆ ಕೂಡಿದೆ ಎಂದು ನನಗೆ ತಿಳಿದಿದೆ. ನಾನು ಪ್ರತಿಯೊಬ್ಬರ ಕಪ್‌ ಆಫ್‌ ಟೀ ಅಲ್ಲ. ಖಂಡಿತವಾಗಿಯೂ ಪ್ರತಿಯೊಬ್ಬ ವ್ಯಕ್ತಿಯಿಂದಲೂ ಪ್ರೀತಿಸಲ್ಪಡಬೇಕೆಂದು ನಾನು ನಿರೀಕ್ಷಿಸುವುದಿಲ್ಲ ಎಂಬುದನ್ನು ಅರ್ಥಮಾಡಿಕೊಂಡಿದ್ದೇನೆ. ನೀವು ನನ್ನನ್ನು ಒಪ್ಪದ ಕಾರಣ ನೀವು ನಕಾರಾತ್ಮಕತೆಯನ್ನು ಹೊರಹಾಕಬಹುದು ಎಂಬುದು ಇದರ ಅರ್ಥವಲ್ಲ. ನೀವೆಲ್ಲರೂ ಖುಷಿಯಿಂದರಲು ನಾನು ಯಾವ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇನೆ ಎಂದು ನನಗೆ ಮಾತ್ರ ತಿಳಿದಿದೆ. ನಾನು ಮಾಡಿದ ಕಾರ್ಯಕ್ಕೆ ನೀವು ಖುಷಿಯಾದಾಗ ನಾನು ಹೆಚ್ಚು ಕಾಳಜಿ ವಹಿಸುತ್ತೇನೆ. ನೀವು ಮತ್ತು ನಾನು ಹೆಮ್ಮೆಪಡುವ ವಿಷಯಗಳನ್ನು ಹಂಚಿಕೊಳ್ಳಲು ನಾನು ನಿಜವಾಗಿಯೂ ಪ್ರಯತ್ನಿಸುತ್ತಿದ್ದೇನೆ.” ಎಂದು ಬರೆದುಕೊಂಡಿದ್ದರು.

ನಾನು ಹೇಳದೆ ಇರುವ ವಿಷಯಗಳ ಕಾರಣಕ್ಕಾಗಿ ನನ್ನನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪಹಾಸ್ಯ ಮಾಡಿದಾಗ ನನ್ನ ಹೃದಯ ಘಾಸಿಯಾಗುತ್ತದೆ. ಸಂದರ್ಶನಗಳಲ್ಲಿ ನಾನು ಹೇಳಿದ ಕೆಲವು ವಿಷಯಗಳು ನನ್ನ ವಿರುದ್ಧವೇ ಬಳಕೆಯಾಗುತ್ತಿವೆ ಎಂಬುದನ್ನು ಕಂಡುಕೊಂಡಿದ್ದೇನೆ. ಅಂತರ್ಜಾಲದಲ್ಲಿ ಫೇಕ್‌ ನೆರೆಟಿವ್‌ಗಳನ್ನು (ನಕಲಿ ನಿರೂಪಣೆಗಳನ್ನು) ಹರಡಲಾಗುತ್ತಿದೆ. ಇದರಿಂದ ನನಗೆ, ಹೊರಗಿನ ವೃತ್ತಿ ಬಾಂಧವ್ಯಗಳಿಗೆ ತುಂಬಾ ಹಾನಿಕಾರಕವಾಗಿದೆ. “ನಾನು ರಚನಾತ್ಮಕ ಟೀಕೆಗಳನ್ನು ಸ್ವಾಗತಿಸುತ್ತೇನೆ. ಏಕೆಂದರೆ ಇವುಗಳಿಂದ ನನ್ನನ್ನು ಸುಧಾರಿಸಲು ಸಾಧ್ಯವಾಗುತ್ತದೆ. ಆದರೆ ನಕಾರಾತ್ಮಕತೆ ಮತ್ತು ದ್ವೇಷದಿಂದ ಏನು ಸಾಧ್ಯ? ಇದನ್ನು ನಿರ್ಲಕ್ಷಿಸುವಂತೆ ಹಿಂದೆಯೇ ಹೇಳಿದ್ದೇನೆ. ಆದರೆ ಪರಿಸ್ಥಿತಿ ಹದಗೆಟ್ಟಿದೆ. ನಾನು ಯಾರನ್ನೂ ಗೆಲ್ಲಲು ಪ್ರಯತ್ನಿಸುತ್ತಿಲ್ಲ. ನಾನು ಸ್ವೀಕರಿಸುತ್ತಿರುವ ಈ ದ್ವೇಷದ ಕಾರಣದಿಂದಾಗಿ ಬದಲಾಗಲು ಬಯಸುವುದಿಲ್ಲ” ಎಂದು ಅವರು ಪೋಸ್ಟ್‌ನಲ್ಲಿ ತಿಳಿಸಿದ್ದರು.

ಇದನ್ನೂ ಓದಿ: ನನ್ನ ಹೃದಯ ಘಾಸಿಯಾಗಿದೆ: ದ್ವೇಷದ ಟ್ರೋಲ್‌ಗಳಿಂದ ಮನನೊಂದು ರಶ್ಮಿಕಾ ಪೋಸ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಕಾಂತಾರ ಶೆಟ್ಟಿ, ಚಾರ್ಲಿ ಶೆಟ್ಟಿಗಳೆಲ್ಲಾ ಪರಮ ಚಡ್ಡಿಗಳು. ಇವುಗಳ ಆರಾಧಕ ಲಂಭಕ್ತರ ಪಡೆ ರಶ್ಮಿಕಾ ಮೇಲೆ ಮುರಕೊಂಡು ಬಿದ್ದಿರೋದು ಶೆಟ್ಟಿದ್ವಯರ ಮೌನ ಸಮ್ಮತಿಯಿಂದ. ರಶ್ಮಿಕಾಗೆ ಅವಳಿಷ್ಟ ಪಟ್ಟಂತೆ ಬದುಕು ಕಟ್ಟಿಕೊಳ್ಳುವ ಹಕ್ಕಿದೆ.
    ಈ ಟ್ರೋಲಿಗ ಪುಂಡ ಪೋಕರಿಗಳದ್ದೇ ಒಂದು ಗ್ಯಾಂಗ್ ಇದೆ. ಕಾಶ್ಮೀರಿ ಪೈಲ್ಸ್, ಕಾಂತಾರ, 999 ಚಾರ್ಲಿ ಮೊದಲಾದ ಒಂದು ವರ್ಗದವರ (ಮೋದೀ ಆರಾಧಕರ) ಚಿತ್ರಗಳನ್ನಿವರು ಪ್ರಮೋಟ್ ಮಾಡುತ್ತಾ ರೆ. ಅದಕ್ಕೆ ಬಲಪಂಥೀಯ ರಾಜಕಾರಣಿಗಳು, ಸನ್ಯಾಸಿ -ಧರ್ಮಾಧಿಕಾರಿಗಳು ಇವರಿಗೆ ಸಹಕರಿಸುತ್ತಾರೆ. ಮತ್ತೊಂದೆಡೆ ಲಾಲ್ ಸಿಂಗ್ ಚಡ್ಡಾ, ಗಂಗೂಬಾಯಿ ಕಾಥಿಯಾವಾಡಿಯಂತಾ ಚಿತ್ರಗಳನ್ನು ಬಹಿಷ್ಕರಿಸಲು ಕರೆಕೊಡುತ್ತಾರೆ. ದ್ವೇಷ, ಕೋಮುವಾದ, ಮತಾಂಧತೆಯ ವಿಷ ವೇಗವಾಗಿ ಹರಡುತ್ತಿದೆ.

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...