Homeಕರೋನಾ ತಲ್ಲಣರಾಜ್ಯದ 17 ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಇಲ್ಲ: ಪಟ್ಟಭದ್ರರ ಲಾಬಿಗೆ ಕೊರೊನಾ ಉಲ್ಬಣ ಎಂದ...

ರಾಜ್ಯದ 17 ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಇಲ್ಲ: ಪಟ್ಟಭದ್ರರ ಲಾಬಿಗೆ ಕೊರೊನಾ ಉಲ್ಬಣ ಎಂದ ರವಿ ಕೃಷ್ಣಾರೆಡ್ಡಿ

- Advertisement -
- Advertisement -

ನಮ್ಮ ದೇಶದ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಸಮರ್ಪಕವಾಗಿಲ್ಲದಿರುವುದೇ ಕೋವಿಡ್ ವಿರುದ್ಧ ಹೋರಾಟದಲ್ಲಿ ಬಹುದೊಡ್ಡ ಅಡ್ಡಿ ಎಂಬುದು ಈ ಒಂದು ವರ್ಷದಲ್ಲಿ ನಮಗೆ ಗೊತ್ತಾಗಿದೆ. ದೇಶದಂತೆಯೇ ಕರ್ನಾಟಕವು ಸಹ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ನಿರ್ಲಕ್ಷ್ಯ ಮಾಡಿದುದರ ಪರಿಣಾಮವಾಗಿ ಇಂದು ಬಹುದೊಡ್ಡ ಹೊಡೆತ ಅನುಭವಿಸಬೇಕಾದ ಪರಿಸ್ಥಿತಿ ಬಂದಿದೆ.

‘ಈ ರಾಜ್ಯದ ಅರ್ಧಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಒಂದೂ ಸರ್ಕಾರಿ ಮೆಡಿಕಲ್ ಕಾಲೇಜೇ ಇಲ್ಲ. ಇಂತಹ ಮೆಡಿಕಲ್ ಕಾಲೇಜು ಮತ್ತು ಅವಕ್ಕೆ ಹೊಂದಿಕೊಂಡ ಆಸ್ಪತ್ರೆಗಳೇ ಬಡವರ ಪಾಲಿಗೆ ಜೀವ ಸಂಜೀವಿನಿ. ಇವತ್ತು ಈ ಕೊರತೆಯೇ ರಾಜ್ಯದಲ್ಲಿ ಹೆಚ್ಚಿನ ಕೋವಿಡ್ ಸಾವುಗಳಿಗೆ ಕಾರಣ’ ಎನ್ನುತ್ತಾರೆ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಸಂಸ್ಥಾಪಕ ರವಿ ಕೃಷ್ಣಾರೆಡ್ಡಿ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಅವರು, ‘ಇಲ್ಲಿ ಪಟ್ಟಭದ್ರ ಹಿತಾಸಕ್ತಿಗಳು ಪ್ರಮುಖ ಜಿಲ್ಲಾಕೇಂದ್ರಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಬರದಂತೆ ತಡೆದಿವೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ (ಇದರ ಅಡಿಯೇ ಬರುವ ದೊಡ್ಡಬಳ್ಳಾಪುರದಲ್ಲಿ ಡಿಸಿ ಕಚೇರಿಯಿದೆ. ಆದರೆ ಸರ್ಕಾರಿ ಮೆಡಿಕಲ್ ಕಾಲೇಜು ಇಲ್ಲ), ರಾಮನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಉಡುಪಿ, ಮಂಗಳೂರು, ಚಿಕ್ಕಮಗಳೂರು ಇಲ್ಲೆಲ್ಲ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಇಲ್ಲವೇ ಇಲ್ಲ. ಕೊರೊನಾ ರೋಗಿಗಳಿಗೆ ಖಾಸಗಿ ಅಸ್ಪತ್ರೆಗಳಲ್ಲಿ ಚಿಕಿತ್ಸೆ ವೆಚ್ಚ ಭರಿಸಲು ಸಾಧ್ಯವೇ? ಜಿಲ್ಲಾ ಸರ್ಕಾರಿ ಆಸ್ಪತ್ರೆ, ತಾಲೂಕಾ ಆಸ್ಪತ್ರೆಗಳಲ್ಲಿ ಅರೆಬರೆ ಸೌಲಭ್ಯ ಇವೆಯಷ್ಟೇ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಭಧ್ರ ಶಕ್ತಿಗಳು ಅಂದರೆ ಯಾರು ಎಂದು ಅವರನ್ನು ಕೇಳಿದಾಗ, ‘ಮೇಲಿನ ಎಲ್ಲ ಜಿಲ್ಲಾ ಕೇಂದ್ರಗಳಿಗೆ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಬರದಂತೆ ತಡೆದವರು ಎಲ್ಲ ಪಕ್ಷಗಳ ಪ್ರಮುಖ ಭ್ರಷ್ಟ ರಾಜಕಾರಣಿಗಳು ಮತ್ತು ಮಠಗಳ ಹೆಸರಲ್ಲಿ, ಜಾತಿ ಹೆಸರಲ್ಲಿ ಆರೋಗ್ಯ ದಂಧೆ (ಹೆಲ್ತ್ ಬ್ಯುಸಿನೆಸ್) ಮಾಡುವ ಜನರು. ತುಮಕೂರಿನಲ್ಲಿ ಡಾ. ಜಿ. ಪರಮೇಶ್ವರ್,  ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಕುಟುಂಬ, ಕರಾವಳಿಯಲ್ಲಿ ಮಣಿಪಾಲ್ ಪೈಗಳು, ವಿಜಯಪುರದಲ್ಲಿ ಎಂ.ಬಿ ಪಾಟೀಲ್ ಕುಟುಂಬ, ಬಾಗಲಕೋಟೆಯಲ್ಲಿ ವೀರಣ್ಣ ಚರಂತಿಮಠ ನೇತೃತ್ವದ ಬಸವೇಶ್ವರ ವಿದ್ಯಾವರ್ಧಕ ಸಂಘ, ಚಿತ್ರದುರ್ಗದಲ್ಲಿ ಮಠವೊಂದರ ಹಿತಾಸಕ್ತಿ…. ಹೀಗೆ ಈ ಲಾಬಿ ಅಥವಾ ಮಾಫಿಯಾ ಗ್ಯಾಂಗ್ ತಮ್ಮ ಕಾಲೇಜು-ಆಸ್ಪತ್ರೆಗಳ ಕಾರಣಕ್ಕೆ ಸರ್ಕಾರಿ ಆಸ್ಪತ್ರೆಗಳು ತಮ್ಮ ಜಿಲ್ಲೆಗಳಿಗೆ ಬರದಂತೆ ತಡೆದಿವೆ’ ಎಂದು ವಿವರಿಸಿದರು.

ಈಗ ದಾವಣಗೆರೆ, ತುಮಕೂರು, ಉಡುಪಿ, ಮಣಿಪಾಲ್, ಮಂಗಳೂರು ಇತ್ಯಾದಿ ಕಡೆ ಇರುವ ಖಾಸಗಿ ಆಸ್ಪತ್ರೆಗಳು ಕೊರೊನಾ ಬಿಕ್ಕಟ್ಟಿನಲ್ಲಿ ಕೆಲಸ ಮಾಡುತ್ತಿಲ್ಲವೇ ಎಂಬ ನಮ್ಮ ಪ್ರಶ್ನೆಗೆ ಉತ್ತರಿಸಿದ ರವಿ ರೆಡ್ಡಿ, ‘ಮಾಡ್ತಾ ಇವೆ. ಬಡವರಿಗೆ ಇರಲಿ, ಮಧ್ಯಮವರ್ಗದವರಿಗೂ ಆ ಆಸ್ಪತ್ರೆಗಳ ವೆಚ್ಚ ಭರಿಸಲು ಸಾಧ್ಯವೇ?’ ಎಂದು ಪ್ರಶ್ನಿಸಿದರು.

‘ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ನೀಡುವ ಅನುದಾನವೇ ಕಡಿಮೆಯಿದೆಯಲ್ಲ?’ ಎಂದು ಕೇಳಿದಾಗ, ‘ಈ ದೇಶದಲ್ಲಿ ಆರೋಗ್ಯ, ಶಿಕ್ಷಣಕ್ಕೆ ಎಂದೂ ಸಮರ್ಪಕ ಬಜೆಟ್ ಸಿಕ್ಕಿಲ್ಲ. ನನಗೆ ತಿಳಿದ ಮಟ್ಟಿಗೆ ಹಿಂದೆ ಪಶ್ಚಿಮ ಬಂಗಾಳದ ಎಡಪಂಥೀಯ ಸರ್ಕಾರ ಮತ್ತು ಕೇರಳದಲ್ಲಿರುವ ಎಡಪಂಥೀಯ ಸರ್ಕಾರಗಳು ಮಾತ್ರ ಆರೋಗ್ಯ ಮತ್ತು ಶಿಕ್ಷಣಕ್ಕೆ ಪ್ರಾಶಸ್ತ್ಯ ನೀಡುತ್ತ ಬಂದಿವೆ. ಇತ್ತೀಚಿನ ವರ್ಷಗಳಲ್ಲಿ ದೆಹಲಿ ಆಪ್ ಸರ್ಕಾರ ಕೂಡ ಗಮನಾರ್ಹ ಸಾಧನೆ ಮಾಡಿದೆ’ ಎಂದ ರವಿಕೃಷ್ಣಾ ರೆಡ್ಡಿ, ‘ಕೇಂದ್ರ ಸರ್ಕಾರ ಆಗಾಗ ತಾನು ಆರೋಗ್ಯ ಕ್ಷೇತ್ರಕ್ಕೆ ಸಾಕಷ್ಟು ನೀಡುತ್ತಿದೆ ಎಂದು ತುತ್ತೂರಿ ಊದುತ್ತಿದೆ. ಆದರೆ ಪರಿಸ್ಥಿತಿ ಗಂಭೀರವಾದಾಗ, ಆರೋಗ್ಯ ರಾಜ್ಯಗಳ ವಿಷಯ (ಸ್ಟೇಟ್ ಸಬ್ಜೆಕ್ಟ್) ಎಂದು ಕೈ ತೊಳೆದುಕೊಳ್ಳುತ್ತಿದೆ’ ಎಂದು ಮೋದಿ ಸರ್ಕಾರದ ವಿರುದ್ಧ ಕಿಡಿ ಕಾರಿದರು.

‘ನಾನು ಕರ್ನಾಟಕದಾದ್ಯಂತ ಪ್ರವಾಸ ಮಾಡಿದ್ದೇನೆ. ಕೇರಳದಲ್ಲಿ ಓಡಾಡಿದ್ದರೂ ಅಲ್ಲಿನ ಆಸ್ಪತ್ರೆಗಳ ಬಗ್ಗೆ ಹೆಚ್ಚು ತಿಳಿದಿಲ್ಲ. ಆದರೆ ಅಧಿಕೃತ ಅಂಕಿಸಂಖ್ಯೆಗಳ ಪ್ರಕಾರ, ಕೇರಳ ಈ ಬಿಕ್ಕಟ್ಟಿನ ಸಮಯದಲ್ಲಿ ನಮಗಿಂತಲೂ ಅದ್ಭುತ ಸಾಧನೆ ಮಾಡಿದೆ. ಆಡಳಿತ ನಡೆಸುವವರು ಜೀವಪರ ವ್ಯಕ್ತಿಯೇ ಎಂಬ ಪ್ರಶ್ನೆ ಮುಖ್ಯವಾಗುತ್ತದೆ. ಈ ವಿಷಯದಲ್ಲಿ ಕೇರಳದ ಆರೋಗ್ಯ ಸಚಿವೆ ಶೈಲಜಾ ಟೀಚರ್ ನಮಗೆ ಮಾದರಿ ಆಗುತ್ತಾರೆ. ಇಲ್ಲಿಯ ಸಚಿವರಿಂದ ಜನ ಏನನ್ನು ನಿರೀಕ್ಷಿಸಲು ಸಾಧ್ಯ? ಎಂದರು.

‘ನಿರ್ಮಾಣ ಅಂದರೆ ಬೃಹತ್ ರಸ್ತೆ, ರಿಂಗ್‌ರೋಡ್, ಸರ್ಕಾರಿ ಭವನಗಳಿಗೆ ನೀಡುವ ಬಜೆಟ್ ಅನುದಾನಕ್ಕಿಂತ ಹೆಚ್ಚಿನ ಅನುದಾನವನ್ನು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ನೀಡಬೇಕು. ಈ ದೇಶದ ಜೀವಾಳವಾದ ಕೃಷಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂಬುದು ನಮ್ಮ ಪಕ್ಷದ ನಿಲುವು’ ಎಂದು ರವಿ ಕೃಷ್ಣಾರೆಡ್ಡಿ ಹೇಳಿದರು.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಕೊರೊನಾ ಲಸಿಕೆ ಖರೀದಿಗೆ ಕಾಂಗ್ರೆಸ್‌ನಿಂದ 100 ಕೋಟಿ ನೆರವು- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಶಿಕ್ಷಣ ಮತ್ತು ಆರೋಗ್ಯ, ಈ ಎರಡೂ ಕ್ಷೇತ್ರಗಳು ಸಂಪೂರ್ಣ ರಾಷ್ಟ್ರೀಕರಣ ಆಗಬೇಕು. ಆಗ ಮಾತ್ರ ಈ ದೇಶದ ಬಡವರ ಬದುಕು ಹಸನಾಗುತ್ತದೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...