Homeಕರೋನಾ ತಲ್ಲಣರಾಜ್ಯದ 17 ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಇಲ್ಲ: ಪಟ್ಟಭದ್ರರ ಲಾಬಿಗೆ ಕೊರೊನಾ ಉಲ್ಬಣ ಎಂದ...

ರಾಜ್ಯದ 17 ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಇಲ್ಲ: ಪಟ್ಟಭದ್ರರ ಲಾಬಿಗೆ ಕೊರೊನಾ ಉಲ್ಬಣ ಎಂದ ರವಿ ಕೃಷ್ಣಾರೆಡ್ಡಿ

- Advertisement -
- Advertisement -

ನಮ್ಮ ದೇಶದ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಸಮರ್ಪಕವಾಗಿಲ್ಲದಿರುವುದೇ ಕೋವಿಡ್ ವಿರುದ್ಧ ಹೋರಾಟದಲ್ಲಿ ಬಹುದೊಡ್ಡ ಅಡ್ಡಿ ಎಂಬುದು ಈ ಒಂದು ವರ್ಷದಲ್ಲಿ ನಮಗೆ ಗೊತ್ತಾಗಿದೆ. ದೇಶದಂತೆಯೇ ಕರ್ನಾಟಕವು ಸಹ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ನಿರ್ಲಕ್ಷ್ಯ ಮಾಡಿದುದರ ಪರಿಣಾಮವಾಗಿ ಇಂದು ಬಹುದೊಡ್ಡ ಹೊಡೆತ ಅನುಭವಿಸಬೇಕಾದ ಪರಿಸ್ಥಿತಿ ಬಂದಿದೆ.

‘ಈ ರಾಜ್ಯದ ಅರ್ಧಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಒಂದೂ ಸರ್ಕಾರಿ ಮೆಡಿಕಲ್ ಕಾಲೇಜೇ ಇಲ್ಲ. ಇಂತಹ ಮೆಡಿಕಲ್ ಕಾಲೇಜು ಮತ್ತು ಅವಕ್ಕೆ ಹೊಂದಿಕೊಂಡ ಆಸ್ಪತ್ರೆಗಳೇ ಬಡವರ ಪಾಲಿಗೆ ಜೀವ ಸಂಜೀವಿನಿ. ಇವತ್ತು ಈ ಕೊರತೆಯೇ ರಾಜ್ಯದಲ್ಲಿ ಹೆಚ್ಚಿನ ಕೋವಿಡ್ ಸಾವುಗಳಿಗೆ ಕಾರಣ’ ಎನ್ನುತ್ತಾರೆ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಸಂಸ್ಥಾಪಕ ರವಿ ಕೃಷ್ಣಾರೆಡ್ಡಿ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಅವರು, ‘ಇಲ್ಲಿ ಪಟ್ಟಭದ್ರ ಹಿತಾಸಕ್ತಿಗಳು ಪ್ರಮುಖ ಜಿಲ್ಲಾಕೇಂದ್ರಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಬರದಂತೆ ತಡೆದಿವೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ (ಇದರ ಅಡಿಯೇ ಬರುವ ದೊಡ್ಡಬಳ್ಳಾಪುರದಲ್ಲಿ ಡಿಸಿ ಕಚೇರಿಯಿದೆ. ಆದರೆ ಸರ್ಕಾರಿ ಮೆಡಿಕಲ್ ಕಾಲೇಜು ಇಲ್ಲ), ರಾಮನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಉಡುಪಿ, ಮಂಗಳೂರು, ಚಿಕ್ಕಮಗಳೂರು ಇಲ್ಲೆಲ್ಲ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಇಲ್ಲವೇ ಇಲ್ಲ. ಕೊರೊನಾ ರೋಗಿಗಳಿಗೆ ಖಾಸಗಿ ಅಸ್ಪತ್ರೆಗಳಲ್ಲಿ ಚಿಕಿತ್ಸೆ ವೆಚ್ಚ ಭರಿಸಲು ಸಾಧ್ಯವೇ? ಜಿಲ್ಲಾ ಸರ್ಕಾರಿ ಆಸ್ಪತ್ರೆ, ತಾಲೂಕಾ ಆಸ್ಪತ್ರೆಗಳಲ್ಲಿ ಅರೆಬರೆ ಸೌಲಭ್ಯ ಇವೆಯಷ್ಟೇ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಭಧ್ರ ಶಕ್ತಿಗಳು ಅಂದರೆ ಯಾರು ಎಂದು ಅವರನ್ನು ಕೇಳಿದಾಗ, ‘ಮೇಲಿನ ಎಲ್ಲ ಜಿಲ್ಲಾ ಕೇಂದ್ರಗಳಿಗೆ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಬರದಂತೆ ತಡೆದವರು ಎಲ್ಲ ಪಕ್ಷಗಳ ಪ್ರಮುಖ ಭ್ರಷ್ಟ ರಾಜಕಾರಣಿಗಳು ಮತ್ತು ಮಠಗಳ ಹೆಸರಲ್ಲಿ, ಜಾತಿ ಹೆಸರಲ್ಲಿ ಆರೋಗ್ಯ ದಂಧೆ (ಹೆಲ್ತ್ ಬ್ಯುಸಿನೆಸ್) ಮಾಡುವ ಜನರು. ತುಮಕೂರಿನಲ್ಲಿ ಡಾ. ಜಿ. ಪರಮೇಶ್ವರ್,  ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಕುಟುಂಬ, ಕರಾವಳಿಯಲ್ಲಿ ಮಣಿಪಾಲ್ ಪೈಗಳು, ವಿಜಯಪುರದಲ್ಲಿ ಎಂ.ಬಿ ಪಾಟೀಲ್ ಕುಟುಂಬ, ಬಾಗಲಕೋಟೆಯಲ್ಲಿ ವೀರಣ್ಣ ಚರಂತಿಮಠ ನೇತೃತ್ವದ ಬಸವೇಶ್ವರ ವಿದ್ಯಾವರ್ಧಕ ಸಂಘ, ಚಿತ್ರದುರ್ಗದಲ್ಲಿ ಮಠವೊಂದರ ಹಿತಾಸಕ್ತಿ…. ಹೀಗೆ ಈ ಲಾಬಿ ಅಥವಾ ಮಾಫಿಯಾ ಗ್ಯಾಂಗ್ ತಮ್ಮ ಕಾಲೇಜು-ಆಸ್ಪತ್ರೆಗಳ ಕಾರಣಕ್ಕೆ ಸರ್ಕಾರಿ ಆಸ್ಪತ್ರೆಗಳು ತಮ್ಮ ಜಿಲ್ಲೆಗಳಿಗೆ ಬರದಂತೆ ತಡೆದಿವೆ’ ಎಂದು ವಿವರಿಸಿದರು.

ಈಗ ದಾವಣಗೆರೆ, ತುಮಕೂರು, ಉಡುಪಿ, ಮಣಿಪಾಲ್, ಮಂಗಳೂರು ಇತ್ಯಾದಿ ಕಡೆ ಇರುವ ಖಾಸಗಿ ಆಸ್ಪತ್ರೆಗಳು ಕೊರೊನಾ ಬಿಕ್ಕಟ್ಟಿನಲ್ಲಿ ಕೆಲಸ ಮಾಡುತ್ತಿಲ್ಲವೇ ಎಂಬ ನಮ್ಮ ಪ್ರಶ್ನೆಗೆ ಉತ್ತರಿಸಿದ ರವಿ ರೆಡ್ಡಿ, ‘ಮಾಡ್ತಾ ಇವೆ. ಬಡವರಿಗೆ ಇರಲಿ, ಮಧ್ಯಮವರ್ಗದವರಿಗೂ ಆ ಆಸ್ಪತ್ರೆಗಳ ವೆಚ್ಚ ಭರಿಸಲು ಸಾಧ್ಯವೇ?’ ಎಂದು ಪ್ರಶ್ನಿಸಿದರು.

‘ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ನೀಡುವ ಅನುದಾನವೇ ಕಡಿಮೆಯಿದೆಯಲ್ಲ?’ ಎಂದು ಕೇಳಿದಾಗ, ‘ಈ ದೇಶದಲ್ಲಿ ಆರೋಗ್ಯ, ಶಿಕ್ಷಣಕ್ಕೆ ಎಂದೂ ಸಮರ್ಪಕ ಬಜೆಟ್ ಸಿಕ್ಕಿಲ್ಲ. ನನಗೆ ತಿಳಿದ ಮಟ್ಟಿಗೆ ಹಿಂದೆ ಪಶ್ಚಿಮ ಬಂಗಾಳದ ಎಡಪಂಥೀಯ ಸರ್ಕಾರ ಮತ್ತು ಕೇರಳದಲ್ಲಿರುವ ಎಡಪಂಥೀಯ ಸರ್ಕಾರಗಳು ಮಾತ್ರ ಆರೋಗ್ಯ ಮತ್ತು ಶಿಕ್ಷಣಕ್ಕೆ ಪ್ರಾಶಸ್ತ್ಯ ನೀಡುತ್ತ ಬಂದಿವೆ. ಇತ್ತೀಚಿನ ವರ್ಷಗಳಲ್ಲಿ ದೆಹಲಿ ಆಪ್ ಸರ್ಕಾರ ಕೂಡ ಗಮನಾರ್ಹ ಸಾಧನೆ ಮಾಡಿದೆ’ ಎಂದ ರವಿಕೃಷ್ಣಾ ರೆಡ್ಡಿ, ‘ಕೇಂದ್ರ ಸರ್ಕಾರ ಆಗಾಗ ತಾನು ಆರೋಗ್ಯ ಕ್ಷೇತ್ರಕ್ಕೆ ಸಾಕಷ್ಟು ನೀಡುತ್ತಿದೆ ಎಂದು ತುತ್ತೂರಿ ಊದುತ್ತಿದೆ. ಆದರೆ ಪರಿಸ್ಥಿತಿ ಗಂಭೀರವಾದಾಗ, ಆರೋಗ್ಯ ರಾಜ್ಯಗಳ ವಿಷಯ (ಸ್ಟೇಟ್ ಸಬ್ಜೆಕ್ಟ್) ಎಂದು ಕೈ ತೊಳೆದುಕೊಳ್ಳುತ್ತಿದೆ’ ಎಂದು ಮೋದಿ ಸರ್ಕಾರದ ವಿರುದ್ಧ ಕಿಡಿ ಕಾರಿದರು.

‘ನಾನು ಕರ್ನಾಟಕದಾದ್ಯಂತ ಪ್ರವಾಸ ಮಾಡಿದ್ದೇನೆ. ಕೇರಳದಲ್ಲಿ ಓಡಾಡಿದ್ದರೂ ಅಲ್ಲಿನ ಆಸ್ಪತ್ರೆಗಳ ಬಗ್ಗೆ ಹೆಚ್ಚು ತಿಳಿದಿಲ್ಲ. ಆದರೆ ಅಧಿಕೃತ ಅಂಕಿಸಂಖ್ಯೆಗಳ ಪ್ರಕಾರ, ಕೇರಳ ಈ ಬಿಕ್ಕಟ್ಟಿನ ಸಮಯದಲ್ಲಿ ನಮಗಿಂತಲೂ ಅದ್ಭುತ ಸಾಧನೆ ಮಾಡಿದೆ. ಆಡಳಿತ ನಡೆಸುವವರು ಜೀವಪರ ವ್ಯಕ್ತಿಯೇ ಎಂಬ ಪ್ರಶ್ನೆ ಮುಖ್ಯವಾಗುತ್ತದೆ. ಈ ವಿಷಯದಲ್ಲಿ ಕೇರಳದ ಆರೋಗ್ಯ ಸಚಿವೆ ಶೈಲಜಾ ಟೀಚರ್ ನಮಗೆ ಮಾದರಿ ಆಗುತ್ತಾರೆ. ಇಲ್ಲಿಯ ಸಚಿವರಿಂದ ಜನ ಏನನ್ನು ನಿರೀಕ್ಷಿಸಲು ಸಾಧ್ಯ? ಎಂದರು.

‘ನಿರ್ಮಾಣ ಅಂದರೆ ಬೃಹತ್ ರಸ್ತೆ, ರಿಂಗ್‌ರೋಡ್, ಸರ್ಕಾರಿ ಭವನಗಳಿಗೆ ನೀಡುವ ಬಜೆಟ್ ಅನುದಾನಕ್ಕಿಂತ ಹೆಚ್ಚಿನ ಅನುದಾನವನ್ನು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ನೀಡಬೇಕು. ಈ ದೇಶದ ಜೀವಾಳವಾದ ಕೃಷಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂಬುದು ನಮ್ಮ ಪಕ್ಷದ ನಿಲುವು’ ಎಂದು ರವಿ ಕೃಷ್ಣಾರೆಡ್ಡಿ ಹೇಳಿದರು.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಕೊರೊನಾ ಲಸಿಕೆ ಖರೀದಿಗೆ ಕಾಂಗ್ರೆಸ್‌ನಿಂದ 100 ಕೋಟಿ ನೆರವು- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಶಿಕ್ಷಣ ಮತ್ತು ಆರೋಗ್ಯ, ಈ ಎರಡೂ ಕ್ಷೇತ್ರಗಳು ಸಂಪೂರ್ಣ ರಾಷ್ಟ್ರೀಕರಣ ಆಗಬೇಕು. ಆಗ ಮಾತ್ರ ಈ ದೇಶದ ಬಡವರ ಬದುಕು ಹಸನಾಗುತ್ತದೆ.

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...