Homeಕರೋನಾ ತಲ್ಲಣರಾಜ್ಯದ 17 ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಇಲ್ಲ: ಪಟ್ಟಭದ್ರರ ಲಾಬಿಗೆ ಕೊರೊನಾ ಉಲ್ಬಣ ಎಂದ...

ರಾಜ್ಯದ 17 ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಇಲ್ಲ: ಪಟ್ಟಭದ್ರರ ಲಾಬಿಗೆ ಕೊರೊನಾ ಉಲ್ಬಣ ಎಂದ ರವಿ ಕೃಷ್ಣಾರೆಡ್ಡಿ

- Advertisement -
- Advertisement -

ನಮ್ಮ ದೇಶದ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಸಮರ್ಪಕವಾಗಿಲ್ಲದಿರುವುದೇ ಕೋವಿಡ್ ವಿರುದ್ಧ ಹೋರಾಟದಲ್ಲಿ ಬಹುದೊಡ್ಡ ಅಡ್ಡಿ ಎಂಬುದು ಈ ಒಂದು ವರ್ಷದಲ್ಲಿ ನಮಗೆ ಗೊತ್ತಾಗಿದೆ. ದೇಶದಂತೆಯೇ ಕರ್ನಾಟಕವು ಸಹ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ನಿರ್ಲಕ್ಷ್ಯ ಮಾಡಿದುದರ ಪರಿಣಾಮವಾಗಿ ಇಂದು ಬಹುದೊಡ್ಡ ಹೊಡೆತ ಅನುಭವಿಸಬೇಕಾದ ಪರಿಸ್ಥಿತಿ ಬಂದಿದೆ.

‘ಈ ರಾಜ್ಯದ ಅರ್ಧಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಒಂದೂ ಸರ್ಕಾರಿ ಮೆಡಿಕಲ್ ಕಾಲೇಜೇ ಇಲ್ಲ. ಇಂತಹ ಮೆಡಿಕಲ್ ಕಾಲೇಜು ಮತ್ತು ಅವಕ್ಕೆ ಹೊಂದಿಕೊಂಡ ಆಸ್ಪತ್ರೆಗಳೇ ಬಡವರ ಪಾಲಿಗೆ ಜೀವ ಸಂಜೀವಿನಿ. ಇವತ್ತು ಈ ಕೊರತೆಯೇ ರಾಜ್ಯದಲ್ಲಿ ಹೆಚ್ಚಿನ ಕೋವಿಡ್ ಸಾವುಗಳಿಗೆ ಕಾರಣ’ ಎನ್ನುತ್ತಾರೆ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಸಂಸ್ಥಾಪಕ ರವಿ ಕೃಷ್ಣಾರೆಡ್ಡಿ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಅವರು, ‘ಇಲ್ಲಿ ಪಟ್ಟಭದ್ರ ಹಿತಾಸಕ್ತಿಗಳು ಪ್ರಮುಖ ಜಿಲ್ಲಾಕೇಂದ್ರಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಬರದಂತೆ ತಡೆದಿವೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ (ಇದರ ಅಡಿಯೇ ಬರುವ ದೊಡ್ಡಬಳ್ಳಾಪುರದಲ್ಲಿ ಡಿಸಿ ಕಚೇರಿಯಿದೆ. ಆದರೆ ಸರ್ಕಾರಿ ಮೆಡಿಕಲ್ ಕಾಲೇಜು ಇಲ್ಲ), ರಾಮನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಉಡುಪಿ, ಮಂಗಳೂರು, ಚಿಕ್ಕಮಗಳೂರು ಇಲ್ಲೆಲ್ಲ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಇಲ್ಲವೇ ಇಲ್ಲ. ಕೊರೊನಾ ರೋಗಿಗಳಿಗೆ ಖಾಸಗಿ ಅಸ್ಪತ್ರೆಗಳಲ್ಲಿ ಚಿಕಿತ್ಸೆ ವೆಚ್ಚ ಭರಿಸಲು ಸಾಧ್ಯವೇ? ಜಿಲ್ಲಾ ಸರ್ಕಾರಿ ಆಸ್ಪತ್ರೆ, ತಾಲೂಕಾ ಆಸ್ಪತ್ರೆಗಳಲ್ಲಿ ಅರೆಬರೆ ಸೌಲಭ್ಯ ಇವೆಯಷ್ಟೇ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಭಧ್ರ ಶಕ್ತಿಗಳು ಅಂದರೆ ಯಾರು ಎಂದು ಅವರನ್ನು ಕೇಳಿದಾಗ, ‘ಮೇಲಿನ ಎಲ್ಲ ಜಿಲ್ಲಾ ಕೇಂದ್ರಗಳಿಗೆ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಬರದಂತೆ ತಡೆದವರು ಎಲ್ಲ ಪಕ್ಷಗಳ ಪ್ರಮುಖ ಭ್ರಷ್ಟ ರಾಜಕಾರಣಿಗಳು ಮತ್ತು ಮಠಗಳ ಹೆಸರಲ್ಲಿ, ಜಾತಿ ಹೆಸರಲ್ಲಿ ಆರೋಗ್ಯ ದಂಧೆ (ಹೆಲ್ತ್ ಬ್ಯುಸಿನೆಸ್) ಮಾಡುವ ಜನರು. ತುಮಕೂರಿನಲ್ಲಿ ಡಾ. ಜಿ. ಪರಮೇಶ್ವರ್,  ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಕುಟುಂಬ, ಕರಾವಳಿಯಲ್ಲಿ ಮಣಿಪಾಲ್ ಪೈಗಳು, ವಿಜಯಪುರದಲ್ಲಿ ಎಂ.ಬಿ ಪಾಟೀಲ್ ಕುಟುಂಬ, ಬಾಗಲಕೋಟೆಯಲ್ಲಿ ವೀರಣ್ಣ ಚರಂತಿಮಠ ನೇತೃತ್ವದ ಬಸವೇಶ್ವರ ವಿದ್ಯಾವರ್ಧಕ ಸಂಘ, ಚಿತ್ರದುರ್ಗದಲ್ಲಿ ಮಠವೊಂದರ ಹಿತಾಸಕ್ತಿ…. ಹೀಗೆ ಈ ಲಾಬಿ ಅಥವಾ ಮಾಫಿಯಾ ಗ್ಯಾಂಗ್ ತಮ್ಮ ಕಾಲೇಜು-ಆಸ್ಪತ್ರೆಗಳ ಕಾರಣಕ್ಕೆ ಸರ್ಕಾರಿ ಆಸ್ಪತ್ರೆಗಳು ತಮ್ಮ ಜಿಲ್ಲೆಗಳಿಗೆ ಬರದಂತೆ ತಡೆದಿವೆ’ ಎಂದು ವಿವರಿಸಿದರು.

ಈಗ ದಾವಣಗೆರೆ, ತುಮಕೂರು, ಉಡುಪಿ, ಮಣಿಪಾಲ್, ಮಂಗಳೂರು ಇತ್ಯಾದಿ ಕಡೆ ಇರುವ ಖಾಸಗಿ ಆಸ್ಪತ್ರೆಗಳು ಕೊರೊನಾ ಬಿಕ್ಕಟ್ಟಿನಲ್ಲಿ ಕೆಲಸ ಮಾಡುತ್ತಿಲ್ಲವೇ ಎಂಬ ನಮ್ಮ ಪ್ರಶ್ನೆಗೆ ಉತ್ತರಿಸಿದ ರವಿ ರೆಡ್ಡಿ, ‘ಮಾಡ್ತಾ ಇವೆ. ಬಡವರಿಗೆ ಇರಲಿ, ಮಧ್ಯಮವರ್ಗದವರಿಗೂ ಆ ಆಸ್ಪತ್ರೆಗಳ ವೆಚ್ಚ ಭರಿಸಲು ಸಾಧ್ಯವೇ?’ ಎಂದು ಪ್ರಶ್ನಿಸಿದರು.

‘ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ನೀಡುವ ಅನುದಾನವೇ ಕಡಿಮೆಯಿದೆಯಲ್ಲ?’ ಎಂದು ಕೇಳಿದಾಗ, ‘ಈ ದೇಶದಲ್ಲಿ ಆರೋಗ್ಯ, ಶಿಕ್ಷಣಕ್ಕೆ ಎಂದೂ ಸಮರ್ಪಕ ಬಜೆಟ್ ಸಿಕ್ಕಿಲ್ಲ. ನನಗೆ ತಿಳಿದ ಮಟ್ಟಿಗೆ ಹಿಂದೆ ಪಶ್ಚಿಮ ಬಂಗಾಳದ ಎಡಪಂಥೀಯ ಸರ್ಕಾರ ಮತ್ತು ಕೇರಳದಲ್ಲಿರುವ ಎಡಪಂಥೀಯ ಸರ್ಕಾರಗಳು ಮಾತ್ರ ಆರೋಗ್ಯ ಮತ್ತು ಶಿಕ್ಷಣಕ್ಕೆ ಪ್ರಾಶಸ್ತ್ಯ ನೀಡುತ್ತ ಬಂದಿವೆ. ಇತ್ತೀಚಿನ ವರ್ಷಗಳಲ್ಲಿ ದೆಹಲಿ ಆಪ್ ಸರ್ಕಾರ ಕೂಡ ಗಮನಾರ್ಹ ಸಾಧನೆ ಮಾಡಿದೆ’ ಎಂದ ರವಿಕೃಷ್ಣಾ ರೆಡ್ಡಿ, ‘ಕೇಂದ್ರ ಸರ್ಕಾರ ಆಗಾಗ ತಾನು ಆರೋಗ್ಯ ಕ್ಷೇತ್ರಕ್ಕೆ ಸಾಕಷ್ಟು ನೀಡುತ್ತಿದೆ ಎಂದು ತುತ್ತೂರಿ ಊದುತ್ತಿದೆ. ಆದರೆ ಪರಿಸ್ಥಿತಿ ಗಂಭೀರವಾದಾಗ, ಆರೋಗ್ಯ ರಾಜ್ಯಗಳ ವಿಷಯ (ಸ್ಟೇಟ್ ಸಬ್ಜೆಕ್ಟ್) ಎಂದು ಕೈ ತೊಳೆದುಕೊಳ್ಳುತ್ತಿದೆ’ ಎಂದು ಮೋದಿ ಸರ್ಕಾರದ ವಿರುದ್ಧ ಕಿಡಿ ಕಾರಿದರು.

‘ನಾನು ಕರ್ನಾಟಕದಾದ್ಯಂತ ಪ್ರವಾಸ ಮಾಡಿದ್ದೇನೆ. ಕೇರಳದಲ್ಲಿ ಓಡಾಡಿದ್ದರೂ ಅಲ್ಲಿನ ಆಸ್ಪತ್ರೆಗಳ ಬಗ್ಗೆ ಹೆಚ್ಚು ತಿಳಿದಿಲ್ಲ. ಆದರೆ ಅಧಿಕೃತ ಅಂಕಿಸಂಖ್ಯೆಗಳ ಪ್ರಕಾರ, ಕೇರಳ ಈ ಬಿಕ್ಕಟ್ಟಿನ ಸಮಯದಲ್ಲಿ ನಮಗಿಂತಲೂ ಅದ್ಭುತ ಸಾಧನೆ ಮಾಡಿದೆ. ಆಡಳಿತ ನಡೆಸುವವರು ಜೀವಪರ ವ್ಯಕ್ತಿಯೇ ಎಂಬ ಪ್ರಶ್ನೆ ಮುಖ್ಯವಾಗುತ್ತದೆ. ಈ ವಿಷಯದಲ್ಲಿ ಕೇರಳದ ಆರೋಗ್ಯ ಸಚಿವೆ ಶೈಲಜಾ ಟೀಚರ್ ನಮಗೆ ಮಾದರಿ ಆಗುತ್ತಾರೆ. ಇಲ್ಲಿಯ ಸಚಿವರಿಂದ ಜನ ಏನನ್ನು ನಿರೀಕ್ಷಿಸಲು ಸಾಧ್ಯ? ಎಂದರು.

‘ನಿರ್ಮಾಣ ಅಂದರೆ ಬೃಹತ್ ರಸ್ತೆ, ರಿಂಗ್‌ರೋಡ್, ಸರ್ಕಾರಿ ಭವನಗಳಿಗೆ ನೀಡುವ ಬಜೆಟ್ ಅನುದಾನಕ್ಕಿಂತ ಹೆಚ್ಚಿನ ಅನುದಾನವನ್ನು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ನೀಡಬೇಕು. ಈ ದೇಶದ ಜೀವಾಳವಾದ ಕೃಷಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂಬುದು ನಮ್ಮ ಪಕ್ಷದ ನಿಲುವು’ ಎಂದು ರವಿ ಕೃಷ್ಣಾರೆಡ್ಡಿ ಹೇಳಿದರು.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಕೊರೊನಾ ಲಸಿಕೆ ಖರೀದಿಗೆ ಕಾಂಗ್ರೆಸ್‌ನಿಂದ 100 ಕೋಟಿ ನೆರವು- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಶಿಕ್ಷಣ ಮತ್ತು ಆರೋಗ್ಯ, ಈ ಎರಡೂ ಕ್ಷೇತ್ರಗಳು ಸಂಪೂರ್ಣ ರಾಷ್ಟ್ರೀಕರಣ ಆಗಬೇಕು. ಆಗ ಮಾತ್ರ ಈ ದೇಶದ ಬಡವರ ಬದುಕು ಹಸನಾಗುತ್ತದೆ.

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...