Homeಕರೋನಾ ತಲ್ಲಣರಾಜ್ಯದ 17 ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಇಲ್ಲ: ಪಟ್ಟಭದ್ರರ ಲಾಬಿಗೆ ಕೊರೊನಾ ಉಲ್ಬಣ ಎಂದ...

ರಾಜ್ಯದ 17 ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಇಲ್ಲ: ಪಟ್ಟಭದ್ರರ ಲಾಬಿಗೆ ಕೊರೊನಾ ಉಲ್ಬಣ ಎಂದ ರವಿ ಕೃಷ್ಣಾರೆಡ್ಡಿ

- Advertisement -
- Advertisement -

ನಮ್ಮ ದೇಶದ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಸಮರ್ಪಕವಾಗಿಲ್ಲದಿರುವುದೇ ಕೋವಿಡ್ ವಿರುದ್ಧ ಹೋರಾಟದಲ್ಲಿ ಬಹುದೊಡ್ಡ ಅಡ್ಡಿ ಎಂಬುದು ಈ ಒಂದು ವರ್ಷದಲ್ಲಿ ನಮಗೆ ಗೊತ್ತಾಗಿದೆ. ದೇಶದಂತೆಯೇ ಕರ್ನಾಟಕವು ಸಹ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ನಿರ್ಲಕ್ಷ್ಯ ಮಾಡಿದುದರ ಪರಿಣಾಮವಾಗಿ ಇಂದು ಬಹುದೊಡ್ಡ ಹೊಡೆತ ಅನುಭವಿಸಬೇಕಾದ ಪರಿಸ್ಥಿತಿ ಬಂದಿದೆ.

‘ಈ ರಾಜ್ಯದ ಅರ್ಧಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಒಂದೂ ಸರ್ಕಾರಿ ಮೆಡಿಕಲ್ ಕಾಲೇಜೇ ಇಲ್ಲ. ಇಂತಹ ಮೆಡಿಕಲ್ ಕಾಲೇಜು ಮತ್ತು ಅವಕ್ಕೆ ಹೊಂದಿಕೊಂಡ ಆಸ್ಪತ್ರೆಗಳೇ ಬಡವರ ಪಾಲಿಗೆ ಜೀವ ಸಂಜೀವಿನಿ. ಇವತ್ತು ಈ ಕೊರತೆಯೇ ರಾಜ್ಯದಲ್ಲಿ ಹೆಚ್ಚಿನ ಕೋವಿಡ್ ಸಾವುಗಳಿಗೆ ಕಾರಣ’ ಎನ್ನುತ್ತಾರೆ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಸಂಸ್ಥಾಪಕ ರವಿ ಕೃಷ್ಣಾರೆಡ್ಡಿ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಅವರು, ‘ಇಲ್ಲಿ ಪಟ್ಟಭದ್ರ ಹಿತಾಸಕ್ತಿಗಳು ಪ್ರಮುಖ ಜಿಲ್ಲಾಕೇಂದ್ರಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಬರದಂತೆ ತಡೆದಿವೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ (ಇದರ ಅಡಿಯೇ ಬರುವ ದೊಡ್ಡಬಳ್ಳಾಪುರದಲ್ಲಿ ಡಿಸಿ ಕಚೇರಿಯಿದೆ. ಆದರೆ ಸರ್ಕಾರಿ ಮೆಡಿಕಲ್ ಕಾಲೇಜು ಇಲ್ಲ), ರಾಮನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಉಡುಪಿ, ಮಂಗಳೂರು, ಚಿಕ್ಕಮಗಳೂರು ಇಲ್ಲೆಲ್ಲ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಇಲ್ಲವೇ ಇಲ್ಲ. ಕೊರೊನಾ ರೋಗಿಗಳಿಗೆ ಖಾಸಗಿ ಅಸ್ಪತ್ರೆಗಳಲ್ಲಿ ಚಿಕಿತ್ಸೆ ವೆಚ್ಚ ಭರಿಸಲು ಸಾಧ್ಯವೇ? ಜಿಲ್ಲಾ ಸರ್ಕಾರಿ ಆಸ್ಪತ್ರೆ, ತಾಲೂಕಾ ಆಸ್ಪತ್ರೆಗಳಲ್ಲಿ ಅರೆಬರೆ ಸೌಲಭ್ಯ ಇವೆಯಷ್ಟೇ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಭಧ್ರ ಶಕ್ತಿಗಳು ಅಂದರೆ ಯಾರು ಎಂದು ಅವರನ್ನು ಕೇಳಿದಾಗ, ‘ಮೇಲಿನ ಎಲ್ಲ ಜಿಲ್ಲಾ ಕೇಂದ್ರಗಳಿಗೆ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಬರದಂತೆ ತಡೆದವರು ಎಲ್ಲ ಪಕ್ಷಗಳ ಪ್ರಮುಖ ಭ್ರಷ್ಟ ರಾಜಕಾರಣಿಗಳು ಮತ್ತು ಮಠಗಳ ಹೆಸರಲ್ಲಿ, ಜಾತಿ ಹೆಸರಲ್ಲಿ ಆರೋಗ್ಯ ದಂಧೆ (ಹೆಲ್ತ್ ಬ್ಯುಸಿನೆಸ್) ಮಾಡುವ ಜನರು. ತುಮಕೂರಿನಲ್ಲಿ ಡಾ. ಜಿ. ಪರಮೇಶ್ವರ್,  ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಕುಟುಂಬ, ಕರಾವಳಿಯಲ್ಲಿ ಮಣಿಪಾಲ್ ಪೈಗಳು, ವಿಜಯಪುರದಲ್ಲಿ ಎಂ.ಬಿ ಪಾಟೀಲ್ ಕುಟುಂಬ, ಬಾಗಲಕೋಟೆಯಲ್ಲಿ ವೀರಣ್ಣ ಚರಂತಿಮಠ ನೇತೃತ್ವದ ಬಸವೇಶ್ವರ ವಿದ್ಯಾವರ್ಧಕ ಸಂಘ, ಚಿತ್ರದುರ್ಗದಲ್ಲಿ ಮಠವೊಂದರ ಹಿತಾಸಕ್ತಿ…. ಹೀಗೆ ಈ ಲಾಬಿ ಅಥವಾ ಮಾಫಿಯಾ ಗ್ಯಾಂಗ್ ತಮ್ಮ ಕಾಲೇಜು-ಆಸ್ಪತ್ರೆಗಳ ಕಾರಣಕ್ಕೆ ಸರ್ಕಾರಿ ಆಸ್ಪತ್ರೆಗಳು ತಮ್ಮ ಜಿಲ್ಲೆಗಳಿಗೆ ಬರದಂತೆ ತಡೆದಿವೆ’ ಎಂದು ವಿವರಿಸಿದರು.

ಈಗ ದಾವಣಗೆರೆ, ತುಮಕೂರು, ಉಡುಪಿ, ಮಣಿಪಾಲ್, ಮಂಗಳೂರು ಇತ್ಯಾದಿ ಕಡೆ ಇರುವ ಖಾಸಗಿ ಆಸ್ಪತ್ರೆಗಳು ಕೊರೊನಾ ಬಿಕ್ಕಟ್ಟಿನಲ್ಲಿ ಕೆಲಸ ಮಾಡುತ್ತಿಲ್ಲವೇ ಎಂಬ ನಮ್ಮ ಪ್ರಶ್ನೆಗೆ ಉತ್ತರಿಸಿದ ರವಿ ರೆಡ್ಡಿ, ‘ಮಾಡ್ತಾ ಇವೆ. ಬಡವರಿಗೆ ಇರಲಿ, ಮಧ್ಯಮವರ್ಗದವರಿಗೂ ಆ ಆಸ್ಪತ್ರೆಗಳ ವೆಚ್ಚ ಭರಿಸಲು ಸಾಧ್ಯವೇ?’ ಎಂದು ಪ್ರಶ್ನಿಸಿದರು.

‘ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ನೀಡುವ ಅನುದಾನವೇ ಕಡಿಮೆಯಿದೆಯಲ್ಲ?’ ಎಂದು ಕೇಳಿದಾಗ, ‘ಈ ದೇಶದಲ್ಲಿ ಆರೋಗ್ಯ, ಶಿಕ್ಷಣಕ್ಕೆ ಎಂದೂ ಸಮರ್ಪಕ ಬಜೆಟ್ ಸಿಕ್ಕಿಲ್ಲ. ನನಗೆ ತಿಳಿದ ಮಟ್ಟಿಗೆ ಹಿಂದೆ ಪಶ್ಚಿಮ ಬಂಗಾಳದ ಎಡಪಂಥೀಯ ಸರ್ಕಾರ ಮತ್ತು ಕೇರಳದಲ್ಲಿರುವ ಎಡಪಂಥೀಯ ಸರ್ಕಾರಗಳು ಮಾತ್ರ ಆರೋಗ್ಯ ಮತ್ತು ಶಿಕ್ಷಣಕ್ಕೆ ಪ್ರಾಶಸ್ತ್ಯ ನೀಡುತ್ತ ಬಂದಿವೆ. ಇತ್ತೀಚಿನ ವರ್ಷಗಳಲ್ಲಿ ದೆಹಲಿ ಆಪ್ ಸರ್ಕಾರ ಕೂಡ ಗಮನಾರ್ಹ ಸಾಧನೆ ಮಾಡಿದೆ’ ಎಂದ ರವಿಕೃಷ್ಣಾ ರೆಡ್ಡಿ, ‘ಕೇಂದ್ರ ಸರ್ಕಾರ ಆಗಾಗ ತಾನು ಆರೋಗ್ಯ ಕ್ಷೇತ್ರಕ್ಕೆ ಸಾಕಷ್ಟು ನೀಡುತ್ತಿದೆ ಎಂದು ತುತ್ತೂರಿ ಊದುತ್ತಿದೆ. ಆದರೆ ಪರಿಸ್ಥಿತಿ ಗಂಭೀರವಾದಾಗ, ಆರೋಗ್ಯ ರಾಜ್ಯಗಳ ವಿಷಯ (ಸ್ಟೇಟ್ ಸಬ್ಜೆಕ್ಟ್) ಎಂದು ಕೈ ತೊಳೆದುಕೊಳ್ಳುತ್ತಿದೆ’ ಎಂದು ಮೋದಿ ಸರ್ಕಾರದ ವಿರುದ್ಧ ಕಿಡಿ ಕಾರಿದರು.

‘ನಾನು ಕರ್ನಾಟಕದಾದ್ಯಂತ ಪ್ರವಾಸ ಮಾಡಿದ್ದೇನೆ. ಕೇರಳದಲ್ಲಿ ಓಡಾಡಿದ್ದರೂ ಅಲ್ಲಿನ ಆಸ್ಪತ್ರೆಗಳ ಬಗ್ಗೆ ಹೆಚ್ಚು ತಿಳಿದಿಲ್ಲ. ಆದರೆ ಅಧಿಕೃತ ಅಂಕಿಸಂಖ್ಯೆಗಳ ಪ್ರಕಾರ, ಕೇರಳ ಈ ಬಿಕ್ಕಟ್ಟಿನ ಸಮಯದಲ್ಲಿ ನಮಗಿಂತಲೂ ಅದ್ಭುತ ಸಾಧನೆ ಮಾಡಿದೆ. ಆಡಳಿತ ನಡೆಸುವವರು ಜೀವಪರ ವ್ಯಕ್ತಿಯೇ ಎಂಬ ಪ್ರಶ್ನೆ ಮುಖ್ಯವಾಗುತ್ತದೆ. ಈ ವಿಷಯದಲ್ಲಿ ಕೇರಳದ ಆರೋಗ್ಯ ಸಚಿವೆ ಶೈಲಜಾ ಟೀಚರ್ ನಮಗೆ ಮಾದರಿ ಆಗುತ್ತಾರೆ. ಇಲ್ಲಿಯ ಸಚಿವರಿಂದ ಜನ ಏನನ್ನು ನಿರೀಕ್ಷಿಸಲು ಸಾಧ್ಯ? ಎಂದರು.

‘ನಿರ್ಮಾಣ ಅಂದರೆ ಬೃಹತ್ ರಸ್ತೆ, ರಿಂಗ್‌ರೋಡ್, ಸರ್ಕಾರಿ ಭವನಗಳಿಗೆ ನೀಡುವ ಬಜೆಟ್ ಅನುದಾನಕ್ಕಿಂತ ಹೆಚ್ಚಿನ ಅನುದಾನವನ್ನು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ನೀಡಬೇಕು. ಈ ದೇಶದ ಜೀವಾಳವಾದ ಕೃಷಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂಬುದು ನಮ್ಮ ಪಕ್ಷದ ನಿಲುವು’ ಎಂದು ರವಿ ಕೃಷ್ಣಾರೆಡ್ಡಿ ಹೇಳಿದರು.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಕೊರೊನಾ ಲಸಿಕೆ ಖರೀದಿಗೆ ಕಾಂಗ್ರೆಸ್‌ನಿಂದ 100 ಕೋಟಿ ನೆರವು- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಶಿಕ್ಷಣ ಮತ್ತು ಆರೋಗ್ಯ, ಈ ಎರಡೂ ಕ್ಷೇತ್ರಗಳು ಸಂಪೂರ್ಣ ರಾಷ್ಟ್ರೀಕರಣ ಆಗಬೇಕು. ಆಗ ಮಾತ್ರ ಈ ದೇಶದ ಬಡವರ ಬದುಕು ಹಸನಾಗುತ್ತದೆ.

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...