Homeಕರೋನಾ ತಲ್ಲಣರಾಜ್ಯದ 17 ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಇಲ್ಲ: ಪಟ್ಟಭದ್ರರ ಲಾಬಿಗೆ ಕೊರೊನಾ ಉಲ್ಬಣ ಎಂದ...

ರಾಜ್ಯದ 17 ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಇಲ್ಲ: ಪಟ್ಟಭದ್ರರ ಲಾಬಿಗೆ ಕೊರೊನಾ ಉಲ್ಬಣ ಎಂದ ರವಿ ಕೃಷ್ಣಾರೆಡ್ಡಿ

- Advertisement -
- Advertisement -

ನಮ್ಮ ದೇಶದ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಸಮರ್ಪಕವಾಗಿಲ್ಲದಿರುವುದೇ ಕೋವಿಡ್ ವಿರುದ್ಧ ಹೋರಾಟದಲ್ಲಿ ಬಹುದೊಡ್ಡ ಅಡ್ಡಿ ಎಂಬುದು ಈ ಒಂದು ವರ್ಷದಲ್ಲಿ ನಮಗೆ ಗೊತ್ತಾಗಿದೆ. ದೇಶದಂತೆಯೇ ಕರ್ನಾಟಕವು ಸಹ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ನಿರ್ಲಕ್ಷ್ಯ ಮಾಡಿದುದರ ಪರಿಣಾಮವಾಗಿ ಇಂದು ಬಹುದೊಡ್ಡ ಹೊಡೆತ ಅನುಭವಿಸಬೇಕಾದ ಪರಿಸ್ಥಿತಿ ಬಂದಿದೆ.

‘ಈ ರಾಜ್ಯದ ಅರ್ಧಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಒಂದೂ ಸರ್ಕಾರಿ ಮೆಡಿಕಲ್ ಕಾಲೇಜೇ ಇಲ್ಲ. ಇಂತಹ ಮೆಡಿಕಲ್ ಕಾಲೇಜು ಮತ್ತು ಅವಕ್ಕೆ ಹೊಂದಿಕೊಂಡ ಆಸ್ಪತ್ರೆಗಳೇ ಬಡವರ ಪಾಲಿಗೆ ಜೀವ ಸಂಜೀವಿನಿ. ಇವತ್ತು ಈ ಕೊರತೆಯೇ ರಾಜ್ಯದಲ್ಲಿ ಹೆಚ್ಚಿನ ಕೋವಿಡ್ ಸಾವುಗಳಿಗೆ ಕಾರಣ’ ಎನ್ನುತ್ತಾರೆ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಸಂಸ್ಥಾಪಕ ರವಿ ಕೃಷ್ಣಾರೆಡ್ಡಿ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಅವರು, ‘ಇಲ್ಲಿ ಪಟ್ಟಭದ್ರ ಹಿತಾಸಕ್ತಿಗಳು ಪ್ರಮುಖ ಜಿಲ್ಲಾಕೇಂದ್ರಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಬರದಂತೆ ತಡೆದಿವೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ (ಇದರ ಅಡಿಯೇ ಬರುವ ದೊಡ್ಡಬಳ್ಳಾಪುರದಲ್ಲಿ ಡಿಸಿ ಕಚೇರಿಯಿದೆ. ಆದರೆ ಸರ್ಕಾರಿ ಮೆಡಿಕಲ್ ಕಾಲೇಜು ಇಲ್ಲ), ರಾಮನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಉಡುಪಿ, ಮಂಗಳೂರು, ಚಿಕ್ಕಮಗಳೂರು ಇಲ್ಲೆಲ್ಲ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಇಲ್ಲವೇ ಇಲ್ಲ. ಕೊರೊನಾ ರೋಗಿಗಳಿಗೆ ಖಾಸಗಿ ಅಸ್ಪತ್ರೆಗಳಲ್ಲಿ ಚಿಕಿತ್ಸೆ ವೆಚ್ಚ ಭರಿಸಲು ಸಾಧ್ಯವೇ? ಜಿಲ್ಲಾ ಸರ್ಕಾರಿ ಆಸ್ಪತ್ರೆ, ತಾಲೂಕಾ ಆಸ್ಪತ್ರೆಗಳಲ್ಲಿ ಅರೆಬರೆ ಸೌಲಭ್ಯ ಇವೆಯಷ್ಟೇ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಭಧ್ರ ಶಕ್ತಿಗಳು ಅಂದರೆ ಯಾರು ಎಂದು ಅವರನ್ನು ಕೇಳಿದಾಗ, ‘ಮೇಲಿನ ಎಲ್ಲ ಜಿಲ್ಲಾ ಕೇಂದ್ರಗಳಿಗೆ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಬರದಂತೆ ತಡೆದವರು ಎಲ್ಲ ಪಕ್ಷಗಳ ಪ್ರಮುಖ ಭ್ರಷ್ಟ ರಾಜಕಾರಣಿಗಳು ಮತ್ತು ಮಠಗಳ ಹೆಸರಲ್ಲಿ, ಜಾತಿ ಹೆಸರಲ್ಲಿ ಆರೋಗ್ಯ ದಂಧೆ (ಹೆಲ್ತ್ ಬ್ಯುಸಿನೆಸ್) ಮಾಡುವ ಜನರು. ತುಮಕೂರಿನಲ್ಲಿ ಡಾ. ಜಿ. ಪರಮೇಶ್ವರ್,  ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಕುಟುಂಬ, ಕರಾವಳಿಯಲ್ಲಿ ಮಣಿಪಾಲ್ ಪೈಗಳು, ವಿಜಯಪುರದಲ್ಲಿ ಎಂ.ಬಿ ಪಾಟೀಲ್ ಕುಟುಂಬ, ಬಾಗಲಕೋಟೆಯಲ್ಲಿ ವೀರಣ್ಣ ಚರಂತಿಮಠ ನೇತೃತ್ವದ ಬಸವೇಶ್ವರ ವಿದ್ಯಾವರ್ಧಕ ಸಂಘ, ಚಿತ್ರದುರ್ಗದಲ್ಲಿ ಮಠವೊಂದರ ಹಿತಾಸಕ್ತಿ…. ಹೀಗೆ ಈ ಲಾಬಿ ಅಥವಾ ಮಾಫಿಯಾ ಗ್ಯಾಂಗ್ ತಮ್ಮ ಕಾಲೇಜು-ಆಸ್ಪತ್ರೆಗಳ ಕಾರಣಕ್ಕೆ ಸರ್ಕಾರಿ ಆಸ್ಪತ್ರೆಗಳು ತಮ್ಮ ಜಿಲ್ಲೆಗಳಿಗೆ ಬರದಂತೆ ತಡೆದಿವೆ’ ಎಂದು ವಿವರಿಸಿದರು.

ಈಗ ದಾವಣಗೆರೆ, ತುಮಕೂರು, ಉಡುಪಿ, ಮಣಿಪಾಲ್, ಮಂಗಳೂರು ಇತ್ಯಾದಿ ಕಡೆ ಇರುವ ಖಾಸಗಿ ಆಸ್ಪತ್ರೆಗಳು ಕೊರೊನಾ ಬಿಕ್ಕಟ್ಟಿನಲ್ಲಿ ಕೆಲಸ ಮಾಡುತ್ತಿಲ್ಲವೇ ಎಂಬ ನಮ್ಮ ಪ್ರಶ್ನೆಗೆ ಉತ್ತರಿಸಿದ ರವಿ ರೆಡ್ಡಿ, ‘ಮಾಡ್ತಾ ಇವೆ. ಬಡವರಿಗೆ ಇರಲಿ, ಮಧ್ಯಮವರ್ಗದವರಿಗೂ ಆ ಆಸ್ಪತ್ರೆಗಳ ವೆಚ್ಚ ಭರಿಸಲು ಸಾಧ್ಯವೇ?’ ಎಂದು ಪ್ರಶ್ನಿಸಿದರು.

‘ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ನೀಡುವ ಅನುದಾನವೇ ಕಡಿಮೆಯಿದೆಯಲ್ಲ?’ ಎಂದು ಕೇಳಿದಾಗ, ‘ಈ ದೇಶದಲ್ಲಿ ಆರೋಗ್ಯ, ಶಿಕ್ಷಣಕ್ಕೆ ಎಂದೂ ಸಮರ್ಪಕ ಬಜೆಟ್ ಸಿಕ್ಕಿಲ್ಲ. ನನಗೆ ತಿಳಿದ ಮಟ್ಟಿಗೆ ಹಿಂದೆ ಪಶ್ಚಿಮ ಬಂಗಾಳದ ಎಡಪಂಥೀಯ ಸರ್ಕಾರ ಮತ್ತು ಕೇರಳದಲ್ಲಿರುವ ಎಡಪಂಥೀಯ ಸರ್ಕಾರಗಳು ಮಾತ್ರ ಆರೋಗ್ಯ ಮತ್ತು ಶಿಕ್ಷಣಕ್ಕೆ ಪ್ರಾಶಸ್ತ್ಯ ನೀಡುತ್ತ ಬಂದಿವೆ. ಇತ್ತೀಚಿನ ವರ್ಷಗಳಲ್ಲಿ ದೆಹಲಿ ಆಪ್ ಸರ್ಕಾರ ಕೂಡ ಗಮನಾರ್ಹ ಸಾಧನೆ ಮಾಡಿದೆ’ ಎಂದ ರವಿಕೃಷ್ಣಾ ರೆಡ್ಡಿ, ‘ಕೇಂದ್ರ ಸರ್ಕಾರ ಆಗಾಗ ತಾನು ಆರೋಗ್ಯ ಕ್ಷೇತ್ರಕ್ಕೆ ಸಾಕಷ್ಟು ನೀಡುತ್ತಿದೆ ಎಂದು ತುತ್ತೂರಿ ಊದುತ್ತಿದೆ. ಆದರೆ ಪರಿಸ್ಥಿತಿ ಗಂಭೀರವಾದಾಗ, ಆರೋಗ್ಯ ರಾಜ್ಯಗಳ ವಿಷಯ (ಸ್ಟೇಟ್ ಸಬ್ಜೆಕ್ಟ್) ಎಂದು ಕೈ ತೊಳೆದುಕೊಳ್ಳುತ್ತಿದೆ’ ಎಂದು ಮೋದಿ ಸರ್ಕಾರದ ವಿರುದ್ಧ ಕಿಡಿ ಕಾರಿದರು.

‘ನಾನು ಕರ್ನಾಟಕದಾದ್ಯಂತ ಪ್ರವಾಸ ಮಾಡಿದ್ದೇನೆ. ಕೇರಳದಲ್ಲಿ ಓಡಾಡಿದ್ದರೂ ಅಲ್ಲಿನ ಆಸ್ಪತ್ರೆಗಳ ಬಗ್ಗೆ ಹೆಚ್ಚು ತಿಳಿದಿಲ್ಲ. ಆದರೆ ಅಧಿಕೃತ ಅಂಕಿಸಂಖ್ಯೆಗಳ ಪ್ರಕಾರ, ಕೇರಳ ಈ ಬಿಕ್ಕಟ್ಟಿನ ಸಮಯದಲ್ಲಿ ನಮಗಿಂತಲೂ ಅದ್ಭುತ ಸಾಧನೆ ಮಾಡಿದೆ. ಆಡಳಿತ ನಡೆಸುವವರು ಜೀವಪರ ವ್ಯಕ್ತಿಯೇ ಎಂಬ ಪ್ರಶ್ನೆ ಮುಖ್ಯವಾಗುತ್ತದೆ. ಈ ವಿಷಯದಲ್ಲಿ ಕೇರಳದ ಆರೋಗ್ಯ ಸಚಿವೆ ಶೈಲಜಾ ಟೀಚರ್ ನಮಗೆ ಮಾದರಿ ಆಗುತ್ತಾರೆ. ಇಲ್ಲಿಯ ಸಚಿವರಿಂದ ಜನ ಏನನ್ನು ನಿರೀಕ್ಷಿಸಲು ಸಾಧ್ಯ? ಎಂದರು.

‘ನಿರ್ಮಾಣ ಅಂದರೆ ಬೃಹತ್ ರಸ್ತೆ, ರಿಂಗ್‌ರೋಡ್, ಸರ್ಕಾರಿ ಭವನಗಳಿಗೆ ನೀಡುವ ಬಜೆಟ್ ಅನುದಾನಕ್ಕಿಂತ ಹೆಚ್ಚಿನ ಅನುದಾನವನ್ನು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ನೀಡಬೇಕು. ಈ ದೇಶದ ಜೀವಾಳವಾದ ಕೃಷಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂಬುದು ನಮ್ಮ ಪಕ್ಷದ ನಿಲುವು’ ಎಂದು ರವಿ ಕೃಷ್ಣಾರೆಡ್ಡಿ ಹೇಳಿದರು.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಕೊರೊನಾ ಲಸಿಕೆ ಖರೀದಿಗೆ ಕಾಂಗ್ರೆಸ್‌ನಿಂದ 100 ಕೋಟಿ ನೆರವು- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಶಿಕ್ಷಣ ಮತ್ತು ಆರೋಗ್ಯ, ಈ ಎರಡೂ ಕ್ಷೇತ್ರಗಳು ಸಂಪೂರ್ಣ ರಾಷ್ಟ್ರೀಕರಣ ಆಗಬೇಕು. ಆಗ ಮಾತ್ರ ಈ ದೇಶದ ಬಡವರ ಬದುಕು ಹಸನಾಗುತ್ತದೆ.

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...