Homeಮುಖಪುಟಉತ್ತರ ಭಾರತದಲ್ಲಿ ತಮಿಳು ಪ್ರಚಾರ ಸಭಾ ಏಕಿಲ್ಲ? ಕೇಂದ್ರ ಸರ್ಕಾರಕ್ಕೆ ಸಿಎಂ ಸ್ಟಾಲಿನ್ ಪ್ರಶ್ನೆ

ಉತ್ತರ ಭಾರತದಲ್ಲಿ ತಮಿಳು ಪ್ರಚಾರ ಸಭಾ ಏಕಿಲ್ಲ? ಕೇಂದ್ರ ಸರ್ಕಾರಕ್ಕೆ ಸಿಎಂ ಸ್ಟಾಲಿನ್ ಪ್ರಶ್ನೆ

- Advertisement -
- Advertisement -

ದಕ್ಷಿಣ ಭಾರತದ ರಾಜ್ಯಗಳಲ್ಲಿ ಹಿಂದಿಯನ್ನು ಉತ್ತೇಜಿಸಲು ‘ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ’ ಒಂದು ಶತಮಾನಕ್ಕೂ ಹೆಚ್ಚು ಕಾಲದಿಂದ ಅಸ್ತಿತ್ವದಲ್ಲಿದ್ದರೂ, ಉತ್ತರ ಭಾರತದಲ್ಲಿ ‘ಉತ್ತರ ಭಾರತ ತಮಿಳು ಪ್ರಚಾರ ಸಭಾ’ ಏಕೆ ಸ್ಥಾಪಿಸಲಿಲ್ಲ? ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಹಾಕಿರುವ ಸ್ಟಾಲಿನ್ “ದಕ್ಷಿಣ ಭಾರತೀಯರು ಹಿಂದಿ ಕಲಿಯುವಂತೆ ಮಾಡಲು ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯನ್ನು ಸ್ಥಾಪಿಸಿ ಒಂದು ಶತಮಾನ ಕಳೆದಿದೆ. ಈ ಅವಧಿಯಲ್ಲಿ ಉತ್ತರ ಭಾರತದಲ್ಲಿ ಎಷ್ಟು ಉತ್ತರ ಭಾರತ ತಮಿಳು ಪ್ರಚಾರ ಸಭೆಗಳನ್ನು ಸ್ಥಾಪಿಸಲಾಗಿದೆ? ಸತ್ಯವೆಂದರೆ, ಉತ್ತರ ಭಾರತೀಯರು ತಮಿಳು ಅಥವಾ ಯಾವುದೇ ದಕ್ಷಿಣ ಭಾರತೀಯ ಭಾಷೆಯನ್ನು ‘ಸಂರಕ್ಷಿಸುವ ಸಲುವಾಗಿ ಕಲಿಯಬೇಕೆಂದು ನಾವು ಎಂದಿಗೂ ಒತ್ತಾಯಿಸಿಲ್ಲ. ನಮ್ಮ ಮೇಲೆ ಹಿಂದಿ ಹೇರಿಕೆಯನ್ನು ನಿಲ್ಲಿಸಿ ಎಂದು ಮಾತ್ರ ನಾವು ಕೇಳಿಕೊಳ್ಳುತ್ತಿದ್ದೇವೆ. ಬಿಜೆಪಿ ಆಡಳಿತದ ರಾಜ್ಯಗಳು ಮೂರು ಅಥವಾ 30 ಭಾಷೆಗಳನ್ನು ಕಲಿಸಲಿ, ಅದು ಅವರಿಗೆ ಬಿಟ್ಟಿದ್ದು, ಆದರೆ, ತಮಿಳುನಾಡನ್ನು ಬಿಟ್ಟುಬಿಡಿ!” ಎಂದು ಬರೆದುಕೊಂಡಿದ್ದಾರೆ.

ತಮಿಳುನಾಡು ಮತ್ತು ದಕ್ಷಿಣದ ಇತರ ರಾಜ್ಯಗಳಲ್ಲಿ ಹಿಂದಿ ಹೇರಿಕೆಗೆ ತಮ್ಮ ವಿರೋಧವನ್ನು ಪುನರುಚ್ಚರಿಸಿದ ಸಿಎಂ ಸ್ಟಾಲಿನ್, “ಉತ್ತರದ ರಾಜ್ಯಗಳು ತಮಿಳು ಕಲಿಯಬೇಕೆಂದು ತಮಿಳುನಾಡು ಎಂದಿಗೂ ಒತ್ತಾಯಿಸಿಲ್ಲ” ಎಂದು ಒತ್ತಿ ಹೇಳಿದ್ದಾರೆ.

ಉತ್ತರ ಭಾರತದ ವಿದ್ಯಾರ್ಥಿಗಳು ಕೇವಲ ಎರಡು ಭಾಷೆಗಳನ್ನು ಕಲಿಯಬೇಕಾದರೆ, ದಕ್ಷಿಣ ಭಾರತದ ವಿದ್ಯಾರ್ಥಿಗಳು ಮಾತ್ರ ಮೂರನೇ ಭಾಷೆಯನ್ನು ಕಲಿಯುವಂತೆ ಒತ್ತಾಯಿಸುತ್ತಿರುವುದು ಏಕೆ? ಎಂದು ಕೇಂದ್ರದ ತ್ರಿಭಾಷಾ ನೀತಿಯನ್ನು ಸ್ಟಾಲಿನ್ ಪ್ರಶ್ನಿಸಿದ್ದಾರೆ.

ಮತ್ತೊಂದು ಎಕ್ಸ್ ಪೋಸ್ಟ್‌ನಲ್ಲಿ ಅವರು ತಮಿಳುನಾಡಿನಲ್ಲಿ ಮೂರನೇ ಭಾಷೆಗಾಗಿ ಆಗ್ರಹಿಸುತ್ತಿರುವವರನ್ನು ಟೀಕಿಸಿಸಿದ್ದು, “ಕೆಲವು ಓರೆ ನೀತಿಗಳ ರಕ್ಷಕರು, ತೀವ್ರ ಕಳವಳದಿಂದ ಅಳುತ್ತಾ, ‘ತಮಿಳುನಾಡಿನ ವಿದ್ಯಾರ್ಥಿಗಳಿಗೆ ಮೂರನೇ ಭಾಷೆ ಕಲಿಯುವ ಅವಕಾಶವನ್ನು ಏಕೆ ನಿರಾಕರಿಸುತ್ತಿದ್ದೀರಿ?’ ಎಂದು ಕೇಳುತ್ತಿದ್ದಾರೆ. ಹಾಗಾದರೆ, ಸರಿ, ಉತ್ತರದಲ್ಲಿ ಯಾವ ಮೂರನೇ ಭಾಷೆಯನ್ನು ಕಲಿಸಲಾಗುತ್ತಿದೆ ಎಂದು ಅವರು ಏಕೆ ಹೇಳುತ್ತಿಲ್ಲ? ಉತ್ತರ ಭಾರತದವರು ಎರಡು ಭಾಷೆಗಳನ್ನು ಕಲಿಯುವಾಗ, ನಾವು ಮೂರನೇ ಭಾಷೆಯನ್ನು ಕಲಿಯುವ ಅಗತ್ಯ ಏನಿದೆ?” ಎಂದು ಕೇಳಿದ್ದಾರೆ.

“ಎನ್‌ಇಪಿ ಜಾರಿಗೆ ತಂದರೆ ತಮಿಳುನಾಡು 2 ಸಾವಿರ ವರ್ಷಗಳಷ್ಟು ಹಿಂದಕ್ಕೆ ಹೋಗಲಿದೆ. ಕೇಂದ್ರ ಸರ್ಕಾರ 10 ಸಾವಿರ ಕೋಟಿ ಕೊಟ್ಟರೂ, ನಾವು ಹೊಸ ಶಿಕ್ಷಣ ನೀತಿಯನ್ನು ತಮಿಳುನಾಡಿನಲ್ಲಿ ಜಾರಿಗೊಳಿಸುವುದಿಲ್ಲ” ಎಂದು ಇತ್ತೀಚೆಗೆ ಸಿಎಂ ಸ್ಟಾಲಿನ್ ಹೇಳಿದ್ದರು.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನೂ ಟೀಕಿಸಿದ್ದ ಸ್ಟಾಲಿನ್, “ಅವರು ಎನ್‌ಇಪಿ ಮೂಲಕ ಹಿಂದಿ ಹೇರಿಕೆ ಮಾಡುತ್ತಿದ್ದಾರೆ” ಎಂದು ಕಿಡಿಕಾರಿದ್ದರು.

ಭಾಷಾ ಅಭಿವೃದ್ಧಿಗೆ ನಿಧಿ ಹಂಚಿಕೆ ಮಾಡುವಲ್ಲಿನ ತಾರತಮ್ಯವನ್ನು ಸಿಎಂ ಸ್ಟಾಲಿನ್ ಎತ್ತಿ ತೋರಿಸಿದ್ದು, “8 ಕೋಟಿ ಜನರು ತಮಿಳು ಮಾತನಾಡುತ್ತಾರೆ. ಆದರೆ, ಕೇಂದ್ರ ಸರ್ಕಾರ ಅದರ ಅಭಿವೃದ್ಧಿಗೆ ಕೇವಲ 74 ಕೋಟಿ ರೂ.ಗಳನ್ನು ಮಾತ್ರ ಮೀಸಲಿಟ್ಟಿದೆ. ಆದರೆ, ಕೆಲವೇ ಸಾವಿರ ಜನರು ಮಾತನಾಡುವ ಸಂಸ್ಕೃತಕ್ಕೆ 1,488 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ” ಎಂದಿದ್ದಾರೆ.

“ತಮಿಳುನಾಡು ಸರ್ಕಾರ ಎನ್‌ಇಪಿ ಮತ್ತು ತ್ರಿಭಾಷಾ ನೀತಿಯನ್ನು ನಿರಂತರವಾಗಿ ವಿರೋಧಿಸುತ್ತಾ ಬಂದಿದೆ. ಪ್ರಸ್ತುತ ಅಸ್ತಿತ್ವದಲ್ಲಿರುವ ದ್ವಿಭಾಷಾ ವ್ಯವಸ್ಥೆಯಾದ ತಮಿಳು ಮತ್ತು ಇಂಗ್ಲಿಷ್‌ಗೆ ಆದ್ಯತೆ ನೀಡಿದೆ. ಪ್ರಮುಖ ವಿರೋಧ ಪಕ್ಷವಾದ ಎಐಎಡಿಎಂಕೆ ಕೂಡ ಈ ನಿಲುವನ್ನು ಬೆಂಬಲಿಸಿದೆ” ಎಂದು ಸಿಎಂ ಸ್ಟಾಲಿನ್ ತಿಳಿಸಿದ್ದಾರೆ.

ಈ ನಡುವೆ, ಸಿಎಂ ಸ್ಟಾಲಿನ್ ಅವರು ರಾಜಕೀಯಕ್ಕಾಗಿ ಎನ್‌ಇಪಿ ಕುರಿತು ತಪ್ಪು ಹೇಳಿಕೆ ನೀಡುತ್ತಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಆರೋಪಿಸಿದ್ದಾರೆ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ವಿದ್ಯಾರ್ಥಿಗಳ ಹಿತಾಸಕ್ತಿಗಳ ಮೇಲೆ ಕೇಂದ್ರೀಕರಿಸುವಂತೆ ಅವರು ಮನವಿ ಮಾಡಿದ್ದಾರೆ.

ಪ್ರಧಾನ ಮಂತ್ರಿ ಶ್ರೀ ಶಾಲೆಗಳ ಯೋಜನೆಯೊಂದಿಗೆ ಸಮಗ್ರ ಶಿಕ್ಷಾ ಅಭಿಯಾನ (ಎಸ್‌ಎಸ್‌ಎ) ನಿಧಿಯನ್ನು ಜೋಡಿಸುವುದನ್ನು ಆಕ್ಷೇಪಿಸಿ ಸಿಎಂ ಸ್ಟಾಲಿನ್ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ನಂತರ ಪ್ರಧಾನ್ ಅವರ ಪ್ರತಿಕ್ರಿಯೆ ಬಂದಿದೆ.

ಪ್ರಧಾನ ಮಂತ್ರಿ ಶ್ರೀ ಶಾಲೆ ಮತ್ತು ಎಸ್‌ಎಸ್‌ಎ ಪ್ರತ್ಯೇಕ ಕೇಂದ್ರ ಪ್ರಾಯೋಜಿತ ಕಾರ್ಯಕ್ರಮಗಳಾಗಿದ್ದು, ಇವುಗಳನ್ನು ಲಿಂಕ್ ಮಾಡುವುದು ಅನ್ಯಾಯ ಎಂದು ಸ್ಟಾಲಿನ್ ಅವರು ಪ್ರಧಾನಿಗೆ ಬರೆದ ಪತ್ರದಲ್ಲಿ ಹೇಳಿದ್ದರು. ಎನ್‌ಇಪಿ ಜೊತೆ ಸೇರಿಸದೆ ಎಸ್‌ಎಸ್‌ಎ ಯೋಜನೆಯ ಹಣವಾದ 2,152 ಕೋಟಿ ರೂ.ಗಳನ್ನು ತಮಿಳುನಾಡಿಗೆ ತಕ್ಷಣ ಬಿಡುಗಡೆ ಮಾಡಬೇಕೆಂದು ಅವರು ಒತ್ತಾಯಿಸಿದ್ದರು.

ರಾಜ್ಯಗಳು ತಾವು ಹೇಳಿದಂತೆ ಕೇಳಲು ಕೇಂದ್ರ ಸರ್ಕಾರ ಅನುದಾನ ಹಂಚಿಕೆಯನ್ನು ಒಂದು ಅಸ್ತ್ರವಾಗಿ ಬಳಸುತ್ತಿದೆ. ಇದು ಸಹಕಾರಿ ಒಕ್ಕೂಟ ವ್ಯವಸ್ಥೆಗೆ ವಿರುದ್ದ ಎಂದು ಸ್ಟಾಲಿನ್ ಪತ್ರದಲ್ಲಿ ಹೇಳಿದ್ದರು.

ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಕೂಡ ಹೊಸ ಶಿಕ್ಷಣ ನೀತಿ (ಎನ್‌ಇಪಿ) ಮತ್ತು ಇತರ ರೀತಿಯಲ್ಲಿ ಹಿಂದಿ ಹೇರಿಕೆಯನ್ನು ಬಲವಾಗಿ ವಿರೋಧಿಸಿದ್ದಾರೆ. ತಮಿಳು ಗುರುತನ್ನು ಯಾವುದೇ ಬೆಲೆ ತೆತ್ತಾದರೂ ರಕ್ಷಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

‘ತಕ್ಷಣ ಮಕ್ಕಳನ್ನು ಹೊಂದಿ’ | ಕ್ಷೇತ್ರ ವಿಂಗಡನೆ ಬಗ್ಗೆ ತಮಿಳುನಾಡು ನಿವಾಸಿಗಳಿಗೆ ಸಿಎಂ ಸ್ಟಾಲಿನ್ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...