Homeಮುಖಪುಟಉತ್ತರ ಭಾರತದಲ್ಲಿ ತಮಿಳು ಪ್ರಚಾರ ಸಭಾ ಏಕಿಲ್ಲ? ಕೇಂದ್ರ ಸರ್ಕಾರಕ್ಕೆ ಸಿಎಂ ಸ್ಟಾಲಿನ್ ಪ್ರಶ್ನೆ

ಉತ್ತರ ಭಾರತದಲ್ಲಿ ತಮಿಳು ಪ್ರಚಾರ ಸಭಾ ಏಕಿಲ್ಲ? ಕೇಂದ್ರ ಸರ್ಕಾರಕ್ಕೆ ಸಿಎಂ ಸ್ಟಾಲಿನ್ ಪ್ರಶ್ನೆ

- Advertisement -
- Advertisement -

ದಕ್ಷಿಣ ಭಾರತದ ರಾಜ್ಯಗಳಲ್ಲಿ ಹಿಂದಿಯನ್ನು ಉತ್ತೇಜಿಸಲು ‘ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ’ ಒಂದು ಶತಮಾನಕ್ಕೂ ಹೆಚ್ಚು ಕಾಲದಿಂದ ಅಸ್ತಿತ್ವದಲ್ಲಿದ್ದರೂ, ಉತ್ತರ ಭಾರತದಲ್ಲಿ ‘ಉತ್ತರ ಭಾರತ ತಮಿಳು ಪ್ರಚಾರ ಸಭಾ’ ಏಕೆ ಸ್ಥಾಪಿಸಲಿಲ್ಲ? ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಹಾಕಿರುವ ಸ್ಟಾಲಿನ್ “ದಕ್ಷಿಣ ಭಾರತೀಯರು ಹಿಂದಿ ಕಲಿಯುವಂತೆ ಮಾಡಲು ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯನ್ನು ಸ್ಥಾಪಿಸಿ ಒಂದು ಶತಮಾನ ಕಳೆದಿದೆ. ಈ ಅವಧಿಯಲ್ಲಿ ಉತ್ತರ ಭಾರತದಲ್ಲಿ ಎಷ್ಟು ಉತ್ತರ ಭಾರತ ತಮಿಳು ಪ್ರಚಾರ ಸಭೆಗಳನ್ನು ಸ್ಥಾಪಿಸಲಾಗಿದೆ? ಸತ್ಯವೆಂದರೆ, ಉತ್ತರ ಭಾರತೀಯರು ತಮಿಳು ಅಥವಾ ಯಾವುದೇ ದಕ್ಷಿಣ ಭಾರತೀಯ ಭಾಷೆಯನ್ನು ‘ಸಂರಕ್ಷಿಸುವ ಸಲುವಾಗಿ ಕಲಿಯಬೇಕೆಂದು ನಾವು ಎಂದಿಗೂ ಒತ್ತಾಯಿಸಿಲ್ಲ. ನಮ್ಮ ಮೇಲೆ ಹಿಂದಿ ಹೇರಿಕೆಯನ್ನು ನಿಲ್ಲಿಸಿ ಎಂದು ಮಾತ್ರ ನಾವು ಕೇಳಿಕೊಳ್ಳುತ್ತಿದ್ದೇವೆ. ಬಿಜೆಪಿ ಆಡಳಿತದ ರಾಜ್ಯಗಳು ಮೂರು ಅಥವಾ 30 ಭಾಷೆಗಳನ್ನು ಕಲಿಸಲಿ, ಅದು ಅವರಿಗೆ ಬಿಟ್ಟಿದ್ದು, ಆದರೆ, ತಮಿಳುನಾಡನ್ನು ಬಿಟ್ಟುಬಿಡಿ!” ಎಂದು ಬರೆದುಕೊಂಡಿದ್ದಾರೆ.

ತಮಿಳುನಾಡು ಮತ್ತು ದಕ್ಷಿಣದ ಇತರ ರಾಜ್ಯಗಳಲ್ಲಿ ಹಿಂದಿ ಹೇರಿಕೆಗೆ ತಮ್ಮ ವಿರೋಧವನ್ನು ಪುನರುಚ್ಚರಿಸಿದ ಸಿಎಂ ಸ್ಟಾಲಿನ್, “ಉತ್ತರದ ರಾಜ್ಯಗಳು ತಮಿಳು ಕಲಿಯಬೇಕೆಂದು ತಮಿಳುನಾಡು ಎಂದಿಗೂ ಒತ್ತಾಯಿಸಿಲ್ಲ” ಎಂದು ಒತ್ತಿ ಹೇಳಿದ್ದಾರೆ.

ಉತ್ತರ ಭಾರತದ ವಿದ್ಯಾರ್ಥಿಗಳು ಕೇವಲ ಎರಡು ಭಾಷೆಗಳನ್ನು ಕಲಿಯಬೇಕಾದರೆ, ದಕ್ಷಿಣ ಭಾರತದ ವಿದ್ಯಾರ್ಥಿಗಳು ಮಾತ್ರ ಮೂರನೇ ಭಾಷೆಯನ್ನು ಕಲಿಯುವಂತೆ ಒತ್ತಾಯಿಸುತ್ತಿರುವುದು ಏಕೆ? ಎಂದು ಕೇಂದ್ರದ ತ್ರಿಭಾಷಾ ನೀತಿಯನ್ನು ಸ್ಟಾಲಿನ್ ಪ್ರಶ್ನಿಸಿದ್ದಾರೆ.

ಮತ್ತೊಂದು ಎಕ್ಸ್ ಪೋಸ್ಟ್‌ನಲ್ಲಿ ಅವರು ತಮಿಳುನಾಡಿನಲ್ಲಿ ಮೂರನೇ ಭಾಷೆಗಾಗಿ ಆಗ್ರಹಿಸುತ್ತಿರುವವರನ್ನು ಟೀಕಿಸಿಸಿದ್ದು, “ಕೆಲವು ಓರೆ ನೀತಿಗಳ ರಕ್ಷಕರು, ತೀವ್ರ ಕಳವಳದಿಂದ ಅಳುತ್ತಾ, ‘ತಮಿಳುನಾಡಿನ ವಿದ್ಯಾರ್ಥಿಗಳಿಗೆ ಮೂರನೇ ಭಾಷೆ ಕಲಿಯುವ ಅವಕಾಶವನ್ನು ಏಕೆ ನಿರಾಕರಿಸುತ್ತಿದ್ದೀರಿ?’ ಎಂದು ಕೇಳುತ್ತಿದ್ದಾರೆ. ಹಾಗಾದರೆ, ಸರಿ, ಉತ್ತರದಲ್ಲಿ ಯಾವ ಮೂರನೇ ಭಾಷೆಯನ್ನು ಕಲಿಸಲಾಗುತ್ತಿದೆ ಎಂದು ಅವರು ಏಕೆ ಹೇಳುತ್ತಿಲ್ಲ? ಉತ್ತರ ಭಾರತದವರು ಎರಡು ಭಾಷೆಗಳನ್ನು ಕಲಿಯುವಾಗ, ನಾವು ಮೂರನೇ ಭಾಷೆಯನ್ನು ಕಲಿಯುವ ಅಗತ್ಯ ಏನಿದೆ?” ಎಂದು ಕೇಳಿದ್ದಾರೆ.

“ಎನ್‌ಇಪಿ ಜಾರಿಗೆ ತಂದರೆ ತಮಿಳುನಾಡು 2 ಸಾವಿರ ವರ್ಷಗಳಷ್ಟು ಹಿಂದಕ್ಕೆ ಹೋಗಲಿದೆ. ಕೇಂದ್ರ ಸರ್ಕಾರ 10 ಸಾವಿರ ಕೋಟಿ ಕೊಟ್ಟರೂ, ನಾವು ಹೊಸ ಶಿಕ್ಷಣ ನೀತಿಯನ್ನು ತಮಿಳುನಾಡಿನಲ್ಲಿ ಜಾರಿಗೊಳಿಸುವುದಿಲ್ಲ” ಎಂದು ಇತ್ತೀಚೆಗೆ ಸಿಎಂ ಸ್ಟಾಲಿನ್ ಹೇಳಿದ್ದರು.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನೂ ಟೀಕಿಸಿದ್ದ ಸ್ಟಾಲಿನ್, “ಅವರು ಎನ್‌ಇಪಿ ಮೂಲಕ ಹಿಂದಿ ಹೇರಿಕೆ ಮಾಡುತ್ತಿದ್ದಾರೆ” ಎಂದು ಕಿಡಿಕಾರಿದ್ದರು.

ಭಾಷಾ ಅಭಿವೃದ್ಧಿಗೆ ನಿಧಿ ಹಂಚಿಕೆ ಮಾಡುವಲ್ಲಿನ ತಾರತಮ್ಯವನ್ನು ಸಿಎಂ ಸ್ಟಾಲಿನ್ ಎತ್ತಿ ತೋರಿಸಿದ್ದು, “8 ಕೋಟಿ ಜನರು ತಮಿಳು ಮಾತನಾಡುತ್ತಾರೆ. ಆದರೆ, ಕೇಂದ್ರ ಸರ್ಕಾರ ಅದರ ಅಭಿವೃದ್ಧಿಗೆ ಕೇವಲ 74 ಕೋಟಿ ರೂ.ಗಳನ್ನು ಮಾತ್ರ ಮೀಸಲಿಟ್ಟಿದೆ. ಆದರೆ, ಕೆಲವೇ ಸಾವಿರ ಜನರು ಮಾತನಾಡುವ ಸಂಸ್ಕೃತಕ್ಕೆ 1,488 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ” ಎಂದಿದ್ದಾರೆ.

“ತಮಿಳುನಾಡು ಸರ್ಕಾರ ಎನ್‌ಇಪಿ ಮತ್ತು ತ್ರಿಭಾಷಾ ನೀತಿಯನ್ನು ನಿರಂತರವಾಗಿ ವಿರೋಧಿಸುತ್ತಾ ಬಂದಿದೆ. ಪ್ರಸ್ತುತ ಅಸ್ತಿತ್ವದಲ್ಲಿರುವ ದ್ವಿಭಾಷಾ ವ್ಯವಸ್ಥೆಯಾದ ತಮಿಳು ಮತ್ತು ಇಂಗ್ಲಿಷ್‌ಗೆ ಆದ್ಯತೆ ನೀಡಿದೆ. ಪ್ರಮುಖ ವಿರೋಧ ಪಕ್ಷವಾದ ಎಐಎಡಿಎಂಕೆ ಕೂಡ ಈ ನಿಲುವನ್ನು ಬೆಂಬಲಿಸಿದೆ” ಎಂದು ಸಿಎಂ ಸ್ಟಾಲಿನ್ ತಿಳಿಸಿದ್ದಾರೆ.

ಈ ನಡುವೆ, ಸಿಎಂ ಸ್ಟಾಲಿನ್ ಅವರು ರಾಜಕೀಯಕ್ಕಾಗಿ ಎನ್‌ಇಪಿ ಕುರಿತು ತಪ್ಪು ಹೇಳಿಕೆ ನೀಡುತ್ತಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಆರೋಪಿಸಿದ್ದಾರೆ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ವಿದ್ಯಾರ್ಥಿಗಳ ಹಿತಾಸಕ್ತಿಗಳ ಮೇಲೆ ಕೇಂದ್ರೀಕರಿಸುವಂತೆ ಅವರು ಮನವಿ ಮಾಡಿದ್ದಾರೆ.

ಪ್ರಧಾನ ಮಂತ್ರಿ ಶ್ರೀ ಶಾಲೆಗಳ ಯೋಜನೆಯೊಂದಿಗೆ ಸಮಗ್ರ ಶಿಕ್ಷಾ ಅಭಿಯಾನ (ಎಸ್‌ಎಸ್‌ಎ) ನಿಧಿಯನ್ನು ಜೋಡಿಸುವುದನ್ನು ಆಕ್ಷೇಪಿಸಿ ಸಿಎಂ ಸ್ಟಾಲಿನ್ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ನಂತರ ಪ್ರಧಾನ್ ಅವರ ಪ್ರತಿಕ್ರಿಯೆ ಬಂದಿದೆ.

ಪ್ರಧಾನ ಮಂತ್ರಿ ಶ್ರೀ ಶಾಲೆ ಮತ್ತು ಎಸ್‌ಎಸ್‌ಎ ಪ್ರತ್ಯೇಕ ಕೇಂದ್ರ ಪ್ರಾಯೋಜಿತ ಕಾರ್ಯಕ್ರಮಗಳಾಗಿದ್ದು, ಇವುಗಳನ್ನು ಲಿಂಕ್ ಮಾಡುವುದು ಅನ್ಯಾಯ ಎಂದು ಸ್ಟಾಲಿನ್ ಅವರು ಪ್ರಧಾನಿಗೆ ಬರೆದ ಪತ್ರದಲ್ಲಿ ಹೇಳಿದ್ದರು. ಎನ್‌ಇಪಿ ಜೊತೆ ಸೇರಿಸದೆ ಎಸ್‌ಎಸ್‌ಎ ಯೋಜನೆಯ ಹಣವಾದ 2,152 ಕೋಟಿ ರೂ.ಗಳನ್ನು ತಮಿಳುನಾಡಿಗೆ ತಕ್ಷಣ ಬಿಡುಗಡೆ ಮಾಡಬೇಕೆಂದು ಅವರು ಒತ್ತಾಯಿಸಿದ್ದರು.

ರಾಜ್ಯಗಳು ತಾವು ಹೇಳಿದಂತೆ ಕೇಳಲು ಕೇಂದ್ರ ಸರ್ಕಾರ ಅನುದಾನ ಹಂಚಿಕೆಯನ್ನು ಒಂದು ಅಸ್ತ್ರವಾಗಿ ಬಳಸುತ್ತಿದೆ. ಇದು ಸಹಕಾರಿ ಒಕ್ಕೂಟ ವ್ಯವಸ್ಥೆಗೆ ವಿರುದ್ದ ಎಂದು ಸ್ಟಾಲಿನ್ ಪತ್ರದಲ್ಲಿ ಹೇಳಿದ್ದರು.

ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಕೂಡ ಹೊಸ ಶಿಕ್ಷಣ ನೀತಿ (ಎನ್‌ಇಪಿ) ಮತ್ತು ಇತರ ರೀತಿಯಲ್ಲಿ ಹಿಂದಿ ಹೇರಿಕೆಯನ್ನು ಬಲವಾಗಿ ವಿರೋಧಿಸಿದ್ದಾರೆ. ತಮಿಳು ಗುರುತನ್ನು ಯಾವುದೇ ಬೆಲೆ ತೆತ್ತಾದರೂ ರಕ್ಷಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

‘ತಕ್ಷಣ ಮಕ್ಕಳನ್ನು ಹೊಂದಿ’ | ಕ್ಷೇತ್ರ ವಿಂಗಡನೆ ಬಗ್ಗೆ ತಮಿಳುನಾಡು ನಿವಾಸಿಗಳಿಗೆ ಸಿಎಂ ಸ್ಟಾಲಿನ್ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...