Homeಮುಖಪುಟಉತ್ತರ ಭಾರತದಲ್ಲಿ ತಮಿಳು ಪ್ರಚಾರ ಸಭಾ ಏಕಿಲ್ಲ? ಕೇಂದ್ರ ಸರ್ಕಾರಕ್ಕೆ ಸಿಎಂ ಸ್ಟಾಲಿನ್ ಪ್ರಶ್ನೆ

ಉತ್ತರ ಭಾರತದಲ್ಲಿ ತಮಿಳು ಪ್ರಚಾರ ಸಭಾ ಏಕಿಲ್ಲ? ಕೇಂದ್ರ ಸರ್ಕಾರಕ್ಕೆ ಸಿಎಂ ಸ್ಟಾಲಿನ್ ಪ್ರಶ್ನೆ

- Advertisement -
- Advertisement -

ದಕ್ಷಿಣ ಭಾರತದ ರಾಜ್ಯಗಳಲ್ಲಿ ಹಿಂದಿಯನ್ನು ಉತ್ತೇಜಿಸಲು ‘ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ’ ಒಂದು ಶತಮಾನಕ್ಕೂ ಹೆಚ್ಚು ಕಾಲದಿಂದ ಅಸ್ತಿತ್ವದಲ್ಲಿದ್ದರೂ, ಉತ್ತರ ಭಾರತದಲ್ಲಿ ‘ಉತ್ತರ ಭಾರತ ತಮಿಳು ಪ್ರಚಾರ ಸಭಾ’ ಏಕೆ ಸ್ಥಾಪಿಸಲಿಲ್ಲ? ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಹಾಕಿರುವ ಸ್ಟಾಲಿನ್ “ದಕ್ಷಿಣ ಭಾರತೀಯರು ಹಿಂದಿ ಕಲಿಯುವಂತೆ ಮಾಡಲು ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯನ್ನು ಸ್ಥಾಪಿಸಿ ಒಂದು ಶತಮಾನ ಕಳೆದಿದೆ. ಈ ಅವಧಿಯಲ್ಲಿ ಉತ್ತರ ಭಾರತದಲ್ಲಿ ಎಷ್ಟು ಉತ್ತರ ಭಾರತ ತಮಿಳು ಪ್ರಚಾರ ಸಭೆಗಳನ್ನು ಸ್ಥಾಪಿಸಲಾಗಿದೆ? ಸತ್ಯವೆಂದರೆ, ಉತ್ತರ ಭಾರತೀಯರು ತಮಿಳು ಅಥವಾ ಯಾವುದೇ ದಕ್ಷಿಣ ಭಾರತೀಯ ಭಾಷೆಯನ್ನು ‘ಸಂರಕ್ಷಿಸುವ ಸಲುವಾಗಿ ಕಲಿಯಬೇಕೆಂದು ನಾವು ಎಂದಿಗೂ ಒತ್ತಾಯಿಸಿಲ್ಲ. ನಮ್ಮ ಮೇಲೆ ಹಿಂದಿ ಹೇರಿಕೆಯನ್ನು ನಿಲ್ಲಿಸಿ ಎಂದು ಮಾತ್ರ ನಾವು ಕೇಳಿಕೊಳ್ಳುತ್ತಿದ್ದೇವೆ. ಬಿಜೆಪಿ ಆಡಳಿತದ ರಾಜ್ಯಗಳು ಮೂರು ಅಥವಾ 30 ಭಾಷೆಗಳನ್ನು ಕಲಿಸಲಿ, ಅದು ಅವರಿಗೆ ಬಿಟ್ಟಿದ್ದು, ಆದರೆ, ತಮಿಳುನಾಡನ್ನು ಬಿಟ್ಟುಬಿಡಿ!” ಎಂದು ಬರೆದುಕೊಂಡಿದ್ದಾರೆ.

ತಮಿಳುನಾಡು ಮತ್ತು ದಕ್ಷಿಣದ ಇತರ ರಾಜ್ಯಗಳಲ್ಲಿ ಹಿಂದಿ ಹೇರಿಕೆಗೆ ತಮ್ಮ ವಿರೋಧವನ್ನು ಪುನರುಚ್ಚರಿಸಿದ ಸಿಎಂ ಸ್ಟಾಲಿನ್, “ಉತ್ತರದ ರಾಜ್ಯಗಳು ತಮಿಳು ಕಲಿಯಬೇಕೆಂದು ತಮಿಳುನಾಡು ಎಂದಿಗೂ ಒತ್ತಾಯಿಸಿಲ್ಲ” ಎಂದು ಒತ್ತಿ ಹೇಳಿದ್ದಾರೆ.

ಉತ್ತರ ಭಾರತದ ವಿದ್ಯಾರ್ಥಿಗಳು ಕೇವಲ ಎರಡು ಭಾಷೆಗಳನ್ನು ಕಲಿಯಬೇಕಾದರೆ, ದಕ್ಷಿಣ ಭಾರತದ ವಿದ್ಯಾರ್ಥಿಗಳು ಮಾತ್ರ ಮೂರನೇ ಭಾಷೆಯನ್ನು ಕಲಿಯುವಂತೆ ಒತ್ತಾಯಿಸುತ್ತಿರುವುದು ಏಕೆ? ಎಂದು ಕೇಂದ್ರದ ತ್ರಿಭಾಷಾ ನೀತಿಯನ್ನು ಸ್ಟಾಲಿನ್ ಪ್ರಶ್ನಿಸಿದ್ದಾರೆ.

ಮತ್ತೊಂದು ಎಕ್ಸ್ ಪೋಸ್ಟ್‌ನಲ್ಲಿ ಅವರು ತಮಿಳುನಾಡಿನಲ್ಲಿ ಮೂರನೇ ಭಾಷೆಗಾಗಿ ಆಗ್ರಹಿಸುತ್ತಿರುವವರನ್ನು ಟೀಕಿಸಿಸಿದ್ದು, “ಕೆಲವು ಓರೆ ನೀತಿಗಳ ರಕ್ಷಕರು, ತೀವ್ರ ಕಳವಳದಿಂದ ಅಳುತ್ತಾ, ‘ತಮಿಳುನಾಡಿನ ವಿದ್ಯಾರ್ಥಿಗಳಿಗೆ ಮೂರನೇ ಭಾಷೆ ಕಲಿಯುವ ಅವಕಾಶವನ್ನು ಏಕೆ ನಿರಾಕರಿಸುತ್ತಿದ್ದೀರಿ?’ ಎಂದು ಕೇಳುತ್ತಿದ್ದಾರೆ. ಹಾಗಾದರೆ, ಸರಿ, ಉತ್ತರದಲ್ಲಿ ಯಾವ ಮೂರನೇ ಭಾಷೆಯನ್ನು ಕಲಿಸಲಾಗುತ್ತಿದೆ ಎಂದು ಅವರು ಏಕೆ ಹೇಳುತ್ತಿಲ್ಲ? ಉತ್ತರ ಭಾರತದವರು ಎರಡು ಭಾಷೆಗಳನ್ನು ಕಲಿಯುವಾಗ, ನಾವು ಮೂರನೇ ಭಾಷೆಯನ್ನು ಕಲಿಯುವ ಅಗತ್ಯ ಏನಿದೆ?” ಎಂದು ಕೇಳಿದ್ದಾರೆ.

“ಎನ್‌ಇಪಿ ಜಾರಿಗೆ ತಂದರೆ ತಮಿಳುನಾಡು 2 ಸಾವಿರ ವರ್ಷಗಳಷ್ಟು ಹಿಂದಕ್ಕೆ ಹೋಗಲಿದೆ. ಕೇಂದ್ರ ಸರ್ಕಾರ 10 ಸಾವಿರ ಕೋಟಿ ಕೊಟ್ಟರೂ, ನಾವು ಹೊಸ ಶಿಕ್ಷಣ ನೀತಿಯನ್ನು ತಮಿಳುನಾಡಿನಲ್ಲಿ ಜಾರಿಗೊಳಿಸುವುದಿಲ್ಲ” ಎಂದು ಇತ್ತೀಚೆಗೆ ಸಿಎಂ ಸ್ಟಾಲಿನ್ ಹೇಳಿದ್ದರು.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನೂ ಟೀಕಿಸಿದ್ದ ಸ್ಟಾಲಿನ್, “ಅವರು ಎನ್‌ಇಪಿ ಮೂಲಕ ಹಿಂದಿ ಹೇರಿಕೆ ಮಾಡುತ್ತಿದ್ದಾರೆ” ಎಂದು ಕಿಡಿಕಾರಿದ್ದರು.

ಭಾಷಾ ಅಭಿವೃದ್ಧಿಗೆ ನಿಧಿ ಹಂಚಿಕೆ ಮಾಡುವಲ್ಲಿನ ತಾರತಮ್ಯವನ್ನು ಸಿಎಂ ಸ್ಟಾಲಿನ್ ಎತ್ತಿ ತೋರಿಸಿದ್ದು, “8 ಕೋಟಿ ಜನರು ತಮಿಳು ಮಾತನಾಡುತ್ತಾರೆ. ಆದರೆ, ಕೇಂದ್ರ ಸರ್ಕಾರ ಅದರ ಅಭಿವೃದ್ಧಿಗೆ ಕೇವಲ 74 ಕೋಟಿ ರೂ.ಗಳನ್ನು ಮಾತ್ರ ಮೀಸಲಿಟ್ಟಿದೆ. ಆದರೆ, ಕೆಲವೇ ಸಾವಿರ ಜನರು ಮಾತನಾಡುವ ಸಂಸ್ಕೃತಕ್ಕೆ 1,488 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ” ಎಂದಿದ್ದಾರೆ.

“ತಮಿಳುನಾಡು ಸರ್ಕಾರ ಎನ್‌ಇಪಿ ಮತ್ತು ತ್ರಿಭಾಷಾ ನೀತಿಯನ್ನು ನಿರಂತರವಾಗಿ ವಿರೋಧಿಸುತ್ತಾ ಬಂದಿದೆ. ಪ್ರಸ್ತುತ ಅಸ್ತಿತ್ವದಲ್ಲಿರುವ ದ್ವಿಭಾಷಾ ವ್ಯವಸ್ಥೆಯಾದ ತಮಿಳು ಮತ್ತು ಇಂಗ್ಲಿಷ್‌ಗೆ ಆದ್ಯತೆ ನೀಡಿದೆ. ಪ್ರಮುಖ ವಿರೋಧ ಪಕ್ಷವಾದ ಎಐಎಡಿಎಂಕೆ ಕೂಡ ಈ ನಿಲುವನ್ನು ಬೆಂಬಲಿಸಿದೆ” ಎಂದು ಸಿಎಂ ಸ್ಟಾಲಿನ್ ತಿಳಿಸಿದ್ದಾರೆ.

ಈ ನಡುವೆ, ಸಿಎಂ ಸ್ಟಾಲಿನ್ ಅವರು ರಾಜಕೀಯಕ್ಕಾಗಿ ಎನ್‌ಇಪಿ ಕುರಿತು ತಪ್ಪು ಹೇಳಿಕೆ ನೀಡುತ್ತಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಆರೋಪಿಸಿದ್ದಾರೆ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ವಿದ್ಯಾರ್ಥಿಗಳ ಹಿತಾಸಕ್ತಿಗಳ ಮೇಲೆ ಕೇಂದ್ರೀಕರಿಸುವಂತೆ ಅವರು ಮನವಿ ಮಾಡಿದ್ದಾರೆ.

ಪ್ರಧಾನ ಮಂತ್ರಿ ಶ್ರೀ ಶಾಲೆಗಳ ಯೋಜನೆಯೊಂದಿಗೆ ಸಮಗ್ರ ಶಿಕ್ಷಾ ಅಭಿಯಾನ (ಎಸ್‌ಎಸ್‌ಎ) ನಿಧಿಯನ್ನು ಜೋಡಿಸುವುದನ್ನು ಆಕ್ಷೇಪಿಸಿ ಸಿಎಂ ಸ್ಟಾಲಿನ್ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ನಂತರ ಪ್ರಧಾನ್ ಅವರ ಪ್ರತಿಕ್ರಿಯೆ ಬಂದಿದೆ.

ಪ್ರಧಾನ ಮಂತ್ರಿ ಶ್ರೀ ಶಾಲೆ ಮತ್ತು ಎಸ್‌ಎಸ್‌ಎ ಪ್ರತ್ಯೇಕ ಕೇಂದ್ರ ಪ್ರಾಯೋಜಿತ ಕಾರ್ಯಕ್ರಮಗಳಾಗಿದ್ದು, ಇವುಗಳನ್ನು ಲಿಂಕ್ ಮಾಡುವುದು ಅನ್ಯಾಯ ಎಂದು ಸ್ಟಾಲಿನ್ ಅವರು ಪ್ರಧಾನಿಗೆ ಬರೆದ ಪತ್ರದಲ್ಲಿ ಹೇಳಿದ್ದರು. ಎನ್‌ಇಪಿ ಜೊತೆ ಸೇರಿಸದೆ ಎಸ್‌ಎಸ್‌ಎ ಯೋಜನೆಯ ಹಣವಾದ 2,152 ಕೋಟಿ ರೂ.ಗಳನ್ನು ತಮಿಳುನಾಡಿಗೆ ತಕ್ಷಣ ಬಿಡುಗಡೆ ಮಾಡಬೇಕೆಂದು ಅವರು ಒತ್ತಾಯಿಸಿದ್ದರು.

ರಾಜ್ಯಗಳು ತಾವು ಹೇಳಿದಂತೆ ಕೇಳಲು ಕೇಂದ್ರ ಸರ್ಕಾರ ಅನುದಾನ ಹಂಚಿಕೆಯನ್ನು ಒಂದು ಅಸ್ತ್ರವಾಗಿ ಬಳಸುತ್ತಿದೆ. ಇದು ಸಹಕಾರಿ ಒಕ್ಕೂಟ ವ್ಯವಸ್ಥೆಗೆ ವಿರುದ್ದ ಎಂದು ಸ್ಟಾಲಿನ್ ಪತ್ರದಲ್ಲಿ ಹೇಳಿದ್ದರು.

ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಕೂಡ ಹೊಸ ಶಿಕ್ಷಣ ನೀತಿ (ಎನ್‌ಇಪಿ) ಮತ್ತು ಇತರ ರೀತಿಯಲ್ಲಿ ಹಿಂದಿ ಹೇರಿಕೆಯನ್ನು ಬಲವಾಗಿ ವಿರೋಧಿಸಿದ್ದಾರೆ. ತಮಿಳು ಗುರುತನ್ನು ಯಾವುದೇ ಬೆಲೆ ತೆತ್ತಾದರೂ ರಕ್ಷಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

‘ತಕ್ಷಣ ಮಕ್ಕಳನ್ನು ಹೊಂದಿ’ | ಕ್ಷೇತ್ರ ವಿಂಗಡನೆ ಬಗ್ಗೆ ತಮಿಳುನಾಡು ನಿವಾಸಿಗಳಿಗೆ ಸಿಎಂ ಸ್ಟಾಲಿನ್ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...