Homeಮುಖಪುಟಅರವಿಂದ್ ಕೇಜ್ರಿವಾಲ್‌ನ್ನು ಚುನಾವಣೆಗೆ ಮುನ್ನ ಬಂಧಿಸಿದ್ದು ಏಕೆ? EDಗೆ ಉತ್ತರಿಸುವಂತೆ ಸೂಚಿಸಿದ ಸುಪ್ರೀಂ ಕೋರ್ಟ್‌

ಅರವಿಂದ್ ಕೇಜ್ರಿವಾಲ್‌ನ್ನು ಚುನಾವಣೆಗೆ ಮುನ್ನ ಬಂಧಿಸಿದ್ದು ಏಕೆ? EDಗೆ ಉತ್ತರಿಸುವಂತೆ ಸೂಚಿಸಿದ ಸುಪ್ರೀಂ ಕೋರ್ಟ್‌

- Advertisement -
- Advertisement -

ಸಾರ್ವತ್ರಿಕ ಚುನಾವಣೆಗೆ ಮುನ್ನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸುವಂತೆ ಸುಪ್ರೀಂಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ಸೂಚಿಸಿದ್ದು, ಅರವಿಂದ್ ಕೇಜ್ರಿವಾಲ್ ಅವರನ್ನು ಚುನಾವಣೆಗೂ ಮುನ್ನ ಬಂಧಿಸಿದ್ದು ಏಕೆ? ಎಂದು ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಕೇಳಿದೆ.

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಬಂಧನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಿಚಾರಣೆ ನಡೆಸುತ್ತಿದೆ. ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು, ಸ್ವಾತಂತ್ರ್ಯವು ಅತ್ಯಂತ ಮಹತ್ವದ್ದಾಗಿದೆ, ನೀವು ಅದನ್ನು ಅಲ್ಲಗಳೆಯಲು ಸಾಧ್ಯವಿಲ್ಲ. ಕೊನೆಯ ಪ್ರಶ್ನೆಯೆಂದರೆ ಸಾರ್ವತ್ರಿಕ ಚುನಾವಣೆಗೆ ಮುನ್ನ ಅವರು ಸೂಚಿಸಿರುವ ಬಂಧನದ ಸಮಯದ ಬಗ್ಗೆ ಉತ್ತರಿಸಬೇಕು ಎಂದು ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂಕೋರ್ಟ್‌ ಹೇಳಿದೆ.

ಅರವಿಂದ್ ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಅಪರಾಧದ ಬಗ್ಗೆ ಕುರುಹು ಇಲ್ಲ ಮತ್ತು ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥರು ನೇರವಾಗಿ ಭಾಗಿಯಾಗಿದ್ದಾರೆ ಎಂಬುವುದಕ್ಕೆ ಪುರಾವೆಗಳಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಮುಂದಿನ ವಿಚಾರಣೆ ನಡೆಯುವ ಮೇ 3ರ ಶುಕ್ರವಾರದಂದು ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂಕೋರ್ಟ್‌ ಸೂಚಿಸಿದೆ.

ಈಗ ರದ್ದಾದ ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಜಾರಿ ನಿರ್ದೇಶನಾಲಯವು ಬಂಧಿಸಿತ್ತು. ಅವರು ಏಪ್ರಿಲ್ 1ರಿಂದ ತಿಹಾರ್ ಜೈಲಿನಲ್ಲಿದ್ದು, ಮೇ 7ರವರೆಗೆ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 2021-22ರ ಅಬಕಾರಿ ನೀತಿಯನ್ನು ರೂಪಿಸುವ ಪಿತೂರಿಯಲ್ಲಿ ಅರವಿಂದ್ ಕೇಜ್ರಿವಾಲ್ ಭಾಗಿಯಾಗಿದ್ದಾರೆ. ನಿರ್ದಿಷ್ಟ ವ್ಯಕ್ತಿಗಳಿಗೆ ಸಹಾಯ ಮಾಡಲು ಮತ್ತು ಸದರಿ ನೀತಿಯ ಮೂಲಕ ಮದ್ಯದ ಉದ್ಯಮಿಗಳಿಂದ ಕಿಕ್‌ಬ್ಯಾಕ್‌ಗೆ ಬೇಡಿಕೆ ಇಟ್ಟಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ ಬಂಧನವಾಗುತ್ತಿದ್ದಂತೆ ಈ ಹಿಂದೆ ದೆಹಲಿ ಹೈಕೋರ್ಟ್‌ಗೆ ಕೇಜ್ರಿವಾಲ್‌ ಅವರನ್ನು ಸಿಎಂ ಹದ್ದೆಯಿಂದ ವಜಾಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಕುರಿತು ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಕೇಜ್ರಿವಾಲ್‌ ಅವರನ್ನು ಸಿಎಂ ಹುದ್ದೆಯಿಂದ ವಜಾಕ್ಕೆ ನಿರಾಕರಿಸಿತ್ತು. ಮುಖ್ಯಮಂತ್ರಿಯಾಗಿ ಮುಂದುವರಿಯುವುದು ಕೇಜ್ರಿವಾಲ್ ಅವರ ವೈಯಕ್ತಿಕ ಆಯ್ಕೆಯಾಗಿದೆ. ಈ ವಿಷಯದಲ್ಲಿ ನ್ಯಾಯಾಂಗದ ಹಸ್ತಕ್ಷೇಪಕ್ಕೆ ಯಾವುದೇ ಅವಕಾಶವಿಲ್ಲ ಮತ್ತು ರಾಜ್ಯದ ಇತರ ಅಂಗಗಳು ಈ ಸಮಸ್ಯೆಯನ್ನು ಪರಿಶೀಲಿಸಬೇಕು ಎಂದು ಕೋರ್ಟ್‌ ಹೇಳಿತ್ತು.

ಇದನ್ನು ಓದಿ: ಮೋದಿಯನ್ನು ಟೀಕಿಸಿದ್ದಕ್ಕೆ ಸ್ವಪಕ್ಷದ ನಾಯಕನ ಬಂಧನ: ಮೌನಕ್ಕೆ ಶರಣಾದ ಬಿಜೆಪಿ ಅಲ್ಪಸಂಖ್ಯಾತ ಘಟಕದ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...