Homeರಾಷ್ಟ್ರೀಯಚುನಾವಣಾ ಆಯುಕ್ತರನ್ನು ಭಾರಿ ಆತುರದಲ್ಲಿ ನೇಮಿಸಿದ್ದೇಕೆ?: ಒಕ್ಕೂಟ ಸರ್ಕಾರಕ್ಕೆ ಸುಪ್ರಿಂ ಕೋರ್ಟ್ ಪ್ರಶ್ನೆ

ಚುನಾವಣಾ ಆಯುಕ್ತರನ್ನು ಭಾರಿ ಆತುರದಲ್ಲಿ ನೇಮಿಸಿದ್ದೇಕೆ?: ಒಕ್ಕೂಟ ಸರ್ಕಾರಕ್ಕೆ ಸುಪ್ರಿಂ ಕೋರ್ಟ್ ಪ್ರಶ್ನೆ

- Advertisement -
- Advertisement -

ನಿವೃತ್ತ ಅಧಿಕಾರಿ ಅರುಣ್ ಗೋಯೆಲ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ (ಅನೂಪ್ ಬರನ್ವಾಲ್ ವರ್ಸಸ್ ಯೂನಿಯನ್ ಆಫ್ ಇಂಡಿಯಾ ಮತ್ತು ಓರ್ಸ್) ನೇಮಕ ಮಾಡುವಲ್ಲಿ ಒಕ್ಕೂಟ ಸರ್ಕಾರವು “ಭಾರಿ ಆತುರ” ಪಡಿಸಿರುವ ಬಗ್ಗೆ ಸುಪ್ರೀಂಕೋರ್ಟ್ ಗುರುವಾರ ಪ್ರಶ್ನಿಸಿದೆ.

ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ನೇತೃತ್ವದ ಸಂವಿಧಾನ ಪೀಠವು, ಒಕ್ಕೂಟ ಸರ್ಕಾರವು ಕೇವಲ 24 ಗಂಟೆಗಳ ಅವಧಿಯಲ್ಲಿ ಗೋಯೆಲ್‌ ಅವರ ಮೌಲ್ಯಮಾಪನ ಮತ್ತು ಆಯ್ಕೆ ಮಾಡಲಾಗಿದೆ ಎಂಬುದನ್ನು ಗಮನಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅರುಣ್ ಗೋಯೆಲ್ ನೇಮಕಾತಿ ಕಡತವನ್ನು ನವೆಂಬರ್ 18 ರಂದು ಮುಂದೆ ತರಲಾಗಿದೆ. ಇದರ ನಂತರ ಹೆಸರುಗಳನ್ನು ಪರಿಶೀಲಿಸಲಾಗುತ್ತದೆ. ನಂತರ ಪ್ರಧಾನಿ ಬರುತ್ತಾರೆ… ಸಾಮಾನ್ಯವಾಗಿ ಇಷ್ಟು ತರಾತುರಿಯಲ್ಲಿ ನೇಮಕ ಮಾಡಲಾಗುತ್ತದೆಯೇ” ಎಂದು ನ್ಯಾಯಮೂರ್ತಿ ಜೋಸೆಫ್ ಅವರು ಒಕ್ಕೂಟ ಸರ್ಕಾರದ ಪರವಾಗಿ ಹಾಜರಾದ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರನ್ನು ಕೇಳಿದ್ದಾರೆ.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನ ಕೊಲಿಜಿಯಂ: ನಿರಂತರ ಚರ್ಚೆಗಳ ಒಳಹೊರಗೆ

“ಗೋಯೆಲ್ ಅವರ ನೇಮಕವನ್ನು ನವೆಂಬರ್ 18 ರಂದು ಒಂದೇ ದಿನದಲ್ಲಿ ಮಾಡಿದ್ದೀರಿ. ಈ ಬಗ್ಗೆಗಿನ ಕಡತವು ಅದನ್ನು ಸೂಚುಸುತ್ತಿದೆ” ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

ಕಾರ್ಯಾಂಗವು ಅಧಿಕಾರ ಅನುಭವಿಸುತ್ತದೆ ಎಂಬ ಕಾರಣಕ್ಕೆ ಭಾರತದ ಸಂವಿಧಾನದ 324(2)ನೇ ವಿಧಿಯನ್ನು ಉಲ್ಲಂಘಿಸಿ ಚುನಾವಣಾ ಆಯುಕ್ತರ ನೇಮಕಾತಿಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ಹಾಗೂ ಈ ವ್ಯವಸ್ಥೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ, ಅನಿರುದ್ಧ ಬೋಸ್, ಹೃಷಿಕೇಶ್ ರಾಯ್ ಮತ್ತು ಸಿಟಿ ರವಿಕುಮಾರ್ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸುತ್ತಿದೆ.

ಗೋಯೆಲ್ ಅವರು ನವೆಂಬರ್ 18ರ ಶುಕ್ರವಾರದಂದು ತಮ್ಮ ಹಿಂದಿನ ಪೋಸ್ಟಿಂಗ್‌ನಿಂದ ಸ್ವಯಂ ನಿವೃತ್ತಿ ಪಡೆದಿದ್ದರು. ನವೆಂಬರ್ 19 ರಂದು ಅವರು ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಂಡರು ಮತ್ತು ನವೆಂಬರ್ 21 ರಂದು ಅಧಿಕಾರ ವಹಿಸಿಕೊಂಡಿದ್ದರು.

ಇದನ್ನೂ ಓದಿ: ನವ್ಲಾಖಾ ಗೃಹಬಂಧನದ ವಿರುದ್ಧ ಎನ್‌ಐಎ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಹಿಂದಿನ ಆದೇಶ ಜಾರಿಗೆ ಸೂಚನೆ

ಭಾರತೀಯ ಚುನಾವಣಾ ಆಯೋಗ (ಇಸಿಐ)ದ ನೇಮಕಾತಿಗಳಿಗೆ ತಡೆಯಾಜ್ಞೆ ಕೋರಿ ಸುಪ್ರೀಂಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಬಾಕಿ ಇರುವಾಗ ಈ ನೇಮಕಾತಿಯನ್ನು ಮಾಡಲಾಗಿತ್ತು. ಹೀಗಾಗಿ ಗೋಯೆಲ್ ಅವರನ್ನು ಚುನಾವಣಾ ಆಯುಕ್ತವಾರಿ ನೇಮಿಸಿದ್ದಕ್ಕೆ ಸಂಬಂಧಿಸಿದ ಕಡತವನ್ನು ಹಾಜರುಪಡಿಸುವಂತೆ ನ್ಯಾಯಾಲಯ ಬುಧವಾರ ಸರ್ಕಾರಕ್ಕೆ ಸೂಚಿಸಿತ್ತು.

ಅದರಂತೆ ಒಕ್ಕೂಟ ಸರ್ಕಾರವು ಕಡತಗಳನ್ನು ಹಾಜರುಪಡಿಸಿದ್ದು, ಪೀಠವು ಇಂದು ಪರಿಶೀಲಿಸಲು ಮುಂದಾಯಿತು.

“ನಿಮ್ಮ ಮೊದಲ ಪುಟದ ಪ್ರಕಾರ, ಈ ಹುದ್ದೆಯು ಮೇ 15 ರಿಂದ ಖಾಲಿಯಾಗಿದೆ. ಮೇ ನಿಂದ ನವೆಂಬರ್‌ ತಿಂಗಳ ವರೆಗೆ ಕಾದು, ನವೆಂಬರ್‌ನಲ್ಲಿ ಎಲ್ಲವನ್ನೂ ಸೂಪರ್‌ಫಾಸ್ಟ್ ಆಗಿ ಮಾಡಬೇಕು ಎಂದು ಸರ್ಕಾರಕ್ಕೆ ಯಾಕೆ ಅನಿಸಿತು ಎಂದು ನಮಗೆ ಹೇಳಬಹುದೇ. ಎಲ್ಲಿ ಇಚ್ಛೆ ಇರುತ್ತದೋ ಅಲ್ಲಿ ದಾರಿ ಇರುತ್ತದೆ ಎಂದು ನಮಗೆ ತಿಳಿದಿದೆ” ಎಂದು ನ್ಯಾಯಮೂರ್ತಿ ಅಜಯ್ ರಸ್ತೋಗಿ ಹೇಳಿದ್ದಾರೆ.

ಇದನ್ನೂ ಓದಿ: ಜಾರ್ಖಂಡ್ ಸಿಎಂ ವಿರುದ್ಧ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿದ್ದ ಪಿಐಎಲ್‌‌ಗೆ ಸುಪ್ರೀಂಕೋರ್ಟ್ ತಡೆ

“ಅದೇ ದಿನ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಕೇವಲ 24 ಗಂಟೆಗಳಲ್ಲಿ ಯಾವ ರೀತಿಯ ಮೌಲ್ಯಮಾಪನ ನಡೆದಿದೆ” ಎಂದು ನ್ಯಾಯಾಲಯ ಪ್ರಶ್ನಿಸಿದೆ.

“ಸರಿಯಾದ ಪ್ರಕ್ರಿಯೆಗಳೊಂದಿಗೆ ಹೆಸರನ್ನು ಪರಿಗಣಿಸಲಾಗಿದೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. 12 ಅಥವಾ 24 ಗಂಟೆಗಳಲ್ಲಿ ಸಾರ್ವಜನಿಕ ಕಚೇರಿಗಳಲ್ಲಿ ಎಷ್ಟು ನೇಮಕಾತಿಗಳು ನಡೆಯುತ್ತವೆ? ಇಂತಹ ಪ್ರಶ್ನೆಗಳು ಬೆಳೆಯುತ್ತಲೆ ಹೋಗುತ್ತದೆ. ಅಂತಹ ಎಲ್ಲಾ ನಿದರ್ಶನಗಳನ್ನು ಪಡೆಯಬಹುದೆ” ಎಂದು ಒಕ್ಕೂಟ ಸರ್ಕಾರದ ಪರ ಹಾಜರಾದ ಅಟಾರ್ನಿ ಜನರಲ್ ನ್ಯಾಯಾಲಯಕ್ಕೆ ಹೇಳಿದ್ದಾರೆ.

ಇದಕ್ಕೆ ಪ್ರಶ್ನಿಸಿದ ನ್ಯಾಯಾಲಯ, ಸೂಚಿಸಿದ ಕಾರ್ಯವಿಧಾನವನ್ನು ಸರಿಯಾಗಿ ಅನುಸರಿಸಲಾಗಿದೆಯೇ ಎಂದು ತಿಳಿಯಲು ಪೀಠ ಬಯಸುತ್ತದೆ ಎಂದು ಹೇಳಿದೆ.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಹೊಸ ಅರ್ಜಿ; ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ

“ನೀವು ನೇಮಕಾತಿಯಲ್ಲಿ ಕೈಗೊಂಡ ಪ್ರಕ್ರಿಯೆಯನ್ನು ಮಾತ್ರ ನಾವು ತಿಳಿದುಕೊಳ್ಳಲು ಬಯಸುತ್ತೇವೆ. ನೀವು ಟಾಸ್ ಹಾಕಿ ಎರಡೂ ಕಡೆ ಬಿದ್ದರೂ ಗೆಲ್ಲುತ್ತೀರಿ. ನಮಗೆ ತಿಳಿದಂತೆ ಅಧಿಕಾರ ಹೊಂದಿರುವ ವ್ಯಕ್ತಿ ನಿಮಗೆ ವಿಧೇಯನಾಗಿದ್ದರೆ ಏನು ಮಾಡುವುದು” ಎಂದು ಜಸ್ಟೀಸ್ ಜೋಸೆಫ್ ಪ್ರಶ್ನಿಸಿದ್ದಾರೆ.‘

“ಅವರು ನಮಗೆ ವಿಧೇಯನೆಂದು ಯಾರಾದರೊಬ್ಬರು ಹೇಳುತ್ತಾರೆ. ಅದು ಅಲ್ಲ ಎಂದು ಇನ್ನೊಬ್ಬ ಹೇಳುತ್ತಾರೆ. ಇವುಗಳಲ್ಲಿ ಕೋರ್ಟ್‌ ಯಾರನ್ನು ಪರಿಗಣಿಸುತ್ತದೆ” ಅಟಾರ್ನಿ ಜನರಲ್‌ ಕೇಳುತ್ತಾರೆ.

“ನಾಲ್ವರಿಗಿಂತ ಮುಂಚಿತವಾಗಿ ಅವರನ್ನು ಹೇಗೆ ಆಯ್ಕೆ ಮಾಡಲಾಗಿದೆ ಎಂದು ನಮಗೆ ತಿಳಿಸಿ” ಎಂದು ನ್ಯಾಯಮೂರ್ತಿ ಜೋಸೆಫ್ ಪಟ್ಟು ಹಿಡಿದರು.

ಇದನ್ನೂ ಓದಿ: ಪ್ರೊ.ಜಿ.ಎನ್. ಸಾಯಿಬಾಬಾ ಬಿಡುಗಡೆಯ ಆದೇಶ ಅಮಾನತು ಮಾಡಿದ ಸುಪ್ರೀಂಕೋರ್ಟ್‌

“ಅವರು ಸ್ವಯಂಪ್ರೇರಿತ ನಿವೃತ್ತಿ ಪಡೆದಿದ್ದು, ಸೇರಿದಂತೆ ಇತ್ಯಾದಿ ವಿಚರಗಳನ್ನು ನಾವು ಕಂಡುಕೊಂಡಿದ್ದೇವೆ…ಇದು ಸಾಮಾನ್ಯವೇ? ಸಾಮಾನ್ಯವಾಗಿ ಈ ರೀತಿ ನಡೆಯುತ್ತದೆಯೇ’’ ಎಂದು ನ್ಯಾಯಮೂರ್ತಿ ಬೋಸ್ ಕೇಳಿದ್ದಾರೆ.

ಈ ವೇಳೆ ಉತ್ತರಿಸಿದ ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಅಟಾರ್ನಿ ಜನರಲ್‌, “ಅವರು ಹೇಗಿದ್ದರೂ ಡಿಸೆಂಬರ್ 31 ರಂದು ನಿವೃತ್ತರಾಗಲಿದ್ದಾರೆ” ಎಂದು ಉತ್ತರಿಸಿದ್ದಾರೆ.

ಸುದೀರ್ಘ ವಿಚಾರಣೆ ನಡೆಸಿದ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...