Homeರಾಷ್ಟ್ರೀಯಚುನಾವಣಾ ಆಯುಕ್ತರನ್ನು ಭಾರಿ ಆತುರದಲ್ಲಿ ನೇಮಿಸಿದ್ದೇಕೆ?: ಒಕ್ಕೂಟ ಸರ್ಕಾರಕ್ಕೆ ಸುಪ್ರಿಂ ಕೋರ್ಟ್ ಪ್ರಶ್ನೆ

ಚುನಾವಣಾ ಆಯುಕ್ತರನ್ನು ಭಾರಿ ಆತುರದಲ್ಲಿ ನೇಮಿಸಿದ್ದೇಕೆ?: ಒಕ್ಕೂಟ ಸರ್ಕಾರಕ್ಕೆ ಸುಪ್ರಿಂ ಕೋರ್ಟ್ ಪ್ರಶ್ನೆ

- Advertisement -
- Advertisement -

ನಿವೃತ್ತ ಅಧಿಕಾರಿ ಅರುಣ್ ಗೋಯೆಲ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ (ಅನೂಪ್ ಬರನ್ವಾಲ್ ವರ್ಸಸ್ ಯೂನಿಯನ್ ಆಫ್ ಇಂಡಿಯಾ ಮತ್ತು ಓರ್ಸ್) ನೇಮಕ ಮಾಡುವಲ್ಲಿ ಒಕ್ಕೂಟ ಸರ್ಕಾರವು “ಭಾರಿ ಆತುರ” ಪಡಿಸಿರುವ ಬಗ್ಗೆ ಸುಪ್ರೀಂಕೋರ್ಟ್ ಗುರುವಾರ ಪ್ರಶ್ನಿಸಿದೆ.

ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ನೇತೃತ್ವದ ಸಂವಿಧಾನ ಪೀಠವು, ಒಕ್ಕೂಟ ಸರ್ಕಾರವು ಕೇವಲ 24 ಗಂಟೆಗಳ ಅವಧಿಯಲ್ಲಿ ಗೋಯೆಲ್‌ ಅವರ ಮೌಲ್ಯಮಾಪನ ಮತ್ತು ಆಯ್ಕೆ ಮಾಡಲಾಗಿದೆ ಎಂಬುದನ್ನು ಗಮನಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅರುಣ್ ಗೋಯೆಲ್ ನೇಮಕಾತಿ ಕಡತವನ್ನು ನವೆಂಬರ್ 18 ರಂದು ಮುಂದೆ ತರಲಾಗಿದೆ. ಇದರ ನಂತರ ಹೆಸರುಗಳನ್ನು ಪರಿಶೀಲಿಸಲಾಗುತ್ತದೆ. ನಂತರ ಪ್ರಧಾನಿ ಬರುತ್ತಾರೆ… ಸಾಮಾನ್ಯವಾಗಿ ಇಷ್ಟು ತರಾತುರಿಯಲ್ಲಿ ನೇಮಕ ಮಾಡಲಾಗುತ್ತದೆಯೇ” ಎಂದು ನ್ಯಾಯಮೂರ್ತಿ ಜೋಸೆಫ್ ಅವರು ಒಕ್ಕೂಟ ಸರ್ಕಾರದ ಪರವಾಗಿ ಹಾಜರಾದ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರನ್ನು ಕೇಳಿದ್ದಾರೆ.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನ ಕೊಲಿಜಿಯಂ: ನಿರಂತರ ಚರ್ಚೆಗಳ ಒಳಹೊರಗೆ

“ಗೋಯೆಲ್ ಅವರ ನೇಮಕವನ್ನು ನವೆಂಬರ್ 18 ರಂದು ಒಂದೇ ದಿನದಲ್ಲಿ ಮಾಡಿದ್ದೀರಿ. ಈ ಬಗ್ಗೆಗಿನ ಕಡತವು ಅದನ್ನು ಸೂಚುಸುತ್ತಿದೆ” ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

ಕಾರ್ಯಾಂಗವು ಅಧಿಕಾರ ಅನುಭವಿಸುತ್ತದೆ ಎಂಬ ಕಾರಣಕ್ಕೆ ಭಾರತದ ಸಂವಿಧಾನದ 324(2)ನೇ ವಿಧಿಯನ್ನು ಉಲ್ಲಂಘಿಸಿ ಚುನಾವಣಾ ಆಯುಕ್ತರ ನೇಮಕಾತಿಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ಹಾಗೂ ಈ ವ್ಯವಸ್ಥೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ, ಅನಿರುದ್ಧ ಬೋಸ್, ಹೃಷಿಕೇಶ್ ರಾಯ್ ಮತ್ತು ಸಿಟಿ ರವಿಕುಮಾರ್ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸುತ್ತಿದೆ.

ಗೋಯೆಲ್ ಅವರು ನವೆಂಬರ್ 18ರ ಶುಕ್ರವಾರದಂದು ತಮ್ಮ ಹಿಂದಿನ ಪೋಸ್ಟಿಂಗ್‌ನಿಂದ ಸ್ವಯಂ ನಿವೃತ್ತಿ ಪಡೆದಿದ್ದರು. ನವೆಂಬರ್ 19 ರಂದು ಅವರು ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಂಡರು ಮತ್ತು ನವೆಂಬರ್ 21 ರಂದು ಅಧಿಕಾರ ವಹಿಸಿಕೊಂಡಿದ್ದರು.

ಇದನ್ನೂ ಓದಿ: ನವ್ಲಾಖಾ ಗೃಹಬಂಧನದ ವಿರುದ್ಧ ಎನ್‌ಐಎ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಹಿಂದಿನ ಆದೇಶ ಜಾರಿಗೆ ಸೂಚನೆ

ಭಾರತೀಯ ಚುನಾವಣಾ ಆಯೋಗ (ಇಸಿಐ)ದ ನೇಮಕಾತಿಗಳಿಗೆ ತಡೆಯಾಜ್ಞೆ ಕೋರಿ ಸುಪ್ರೀಂಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಬಾಕಿ ಇರುವಾಗ ಈ ನೇಮಕಾತಿಯನ್ನು ಮಾಡಲಾಗಿತ್ತು. ಹೀಗಾಗಿ ಗೋಯೆಲ್ ಅವರನ್ನು ಚುನಾವಣಾ ಆಯುಕ್ತವಾರಿ ನೇಮಿಸಿದ್ದಕ್ಕೆ ಸಂಬಂಧಿಸಿದ ಕಡತವನ್ನು ಹಾಜರುಪಡಿಸುವಂತೆ ನ್ಯಾಯಾಲಯ ಬುಧವಾರ ಸರ್ಕಾರಕ್ಕೆ ಸೂಚಿಸಿತ್ತು.

ಅದರಂತೆ ಒಕ್ಕೂಟ ಸರ್ಕಾರವು ಕಡತಗಳನ್ನು ಹಾಜರುಪಡಿಸಿದ್ದು, ಪೀಠವು ಇಂದು ಪರಿಶೀಲಿಸಲು ಮುಂದಾಯಿತು.

“ನಿಮ್ಮ ಮೊದಲ ಪುಟದ ಪ್ರಕಾರ, ಈ ಹುದ್ದೆಯು ಮೇ 15 ರಿಂದ ಖಾಲಿಯಾಗಿದೆ. ಮೇ ನಿಂದ ನವೆಂಬರ್‌ ತಿಂಗಳ ವರೆಗೆ ಕಾದು, ನವೆಂಬರ್‌ನಲ್ಲಿ ಎಲ್ಲವನ್ನೂ ಸೂಪರ್‌ಫಾಸ್ಟ್ ಆಗಿ ಮಾಡಬೇಕು ಎಂದು ಸರ್ಕಾರಕ್ಕೆ ಯಾಕೆ ಅನಿಸಿತು ಎಂದು ನಮಗೆ ಹೇಳಬಹುದೇ. ಎಲ್ಲಿ ಇಚ್ಛೆ ಇರುತ್ತದೋ ಅಲ್ಲಿ ದಾರಿ ಇರುತ್ತದೆ ಎಂದು ನಮಗೆ ತಿಳಿದಿದೆ” ಎಂದು ನ್ಯಾಯಮೂರ್ತಿ ಅಜಯ್ ರಸ್ತೋಗಿ ಹೇಳಿದ್ದಾರೆ.

ಇದನ್ನೂ ಓದಿ: ಜಾರ್ಖಂಡ್ ಸಿಎಂ ವಿರುದ್ಧ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿದ್ದ ಪಿಐಎಲ್‌‌ಗೆ ಸುಪ್ರೀಂಕೋರ್ಟ್ ತಡೆ

“ಅದೇ ದಿನ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಕೇವಲ 24 ಗಂಟೆಗಳಲ್ಲಿ ಯಾವ ರೀತಿಯ ಮೌಲ್ಯಮಾಪನ ನಡೆದಿದೆ” ಎಂದು ನ್ಯಾಯಾಲಯ ಪ್ರಶ್ನಿಸಿದೆ.

“ಸರಿಯಾದ ಪ್ರಕ್ರಿಯೆಗಳೊಂದಿಗೆ ಹೆಸರನ್ನು ಪರಿಗಣಿಸಲಾಗಿದೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. 12 ಅಥವಾ 24 ಗಂಟೆಗಳಲ್ಲಿ ಸಾರ್ವಜನಿಕ ಕಚೇರಿಗಳಲ್ಲಿ ಎಷ್ಟು ನೇಮಕಾತಿಗಳು ನಡೆಯುತ್ತವೆ? ಇಂತಹ ಪ್ರಶ್ನೆಗಳು ಬೆಳೆಯುತ್ತಲೆ ಹೋಗುತ್ತದೆ. ಅಂತಹ ಎಲ್ಲಾ ನಿದರ್ಶನಗಳನ್ನು ಪಡೆಯಬಹುದೆ” ಎಂದು ಒಕ್ಕೂಟ ಸರ್ಕಾರದ ಪರ ಹಾಜರಾದ ಅಟಾರ್ನಿ ಜನರಲ್ ನ್ಯಾಯಾಲಯಕ್ಕೆ ಹೇಳಿದ್ದಾರೆ.

ಇದಕ್ಕೆ ಪ್ರಶ್ನಿಸಿದ ನ್ಯಾಯಾಲಯ, ಸೂಚಿಸಿದ ಕಾರ್ಯವಿಧಾನವನ್ನು ಸರಿಯಾಗಿ ಅನುಸರಿಸಲಾಗಿದೆಯೇ ಎಂದು ತಿಳಿಯಲು ಪೀಠ ಬಯಸುತ್ತದೆ ಎಂದು ಹೇಳಿದೆ.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಹೊಸ ಅರ್ಜಿ; ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ

“ನೀವು ನೇಮಕಾತಿಯಲ್ಲಿ ಕೈಗೊಂಡ ಪ್ರಕ್ರಿಯೆಯನ್ನು ಮಾತ್ರ ನಾವು ತಿಳಿದುಕೊಳ್ಳಲು ಬಯಸುತ್ತೇವೆ. ನೀವು ಟಾಸ್ ಹಾಕಿ ಎರಡೂ ಕಡೆ ಬಿದ್ದರೂ ಗೆಲ್ಲುತ್ತೀರಿ. ನಮಗೆ ತಿಳಿದಂತೆ ಅಧಿಕಾರ ಹೊಂದಿರುವ ವ್ಯಕ್ತಿ ನಿಮಗೆ ವಿಧೇಯನಾಗಿದ್ದರೆ ಏನು ಮಾಡುವುದು” ಎಂದು ಜಸ್ಟೀಸ್ ಜೋಸೆಫ್ ಪ್ರಶ್ನಿಸಿದ್ದಾರೆ.‘

“ಅವರು ನಮಗೆ ವಿಧೇಯನೆಂದು ಯಾರಾದರೊಬ್ಬರು ಹೇಳುತ್ತಾರೆ. ಅದು ಅಲ್ಲ ಎಂದು ಇನ್ನೊಬ್ಬ ಹೇಳುತ್ತಾರೆ. ಇವುಗಳಲ್ಲಿ ಕೋರ್ಟ್‌ ಯಾರನ್ನು ಪರಿಗಣಿಸುತ್ತದೆ” ಅಟಾರ್ನಿ ಜನರಲ್‌ ಕೇಳುತ್ತಾರೆ.

“ನಾಲ್ವರಿಗಿಂತ ಮುಂಚಿತವಾಗಿ ಅವರನ್ನು ಹೇಗೆ ಆಯ್ಕೆ ಮಾಡಲಾಗಿದೆ ಎಂದು ನಮಗೆ ತಿಳಿಸಿ” ಎಂದು ನ್ಯಾಯಮೂರ್ತಿ ಜೋಸೆಫ್ ಪಟ್ಟು ಹಿಡಿದರು.

ಇದನ್ನೂ ಓದಿ: ಪ್ರೊ.ಜಿ.ಎನ್. ಸಾಯಿಬಾಬಾ ಬಿಡುಗಡೆಯ ಆದೇಶ ಅಮಾನತು ಮಾಡಿದ ಸುಪ್ರೀಂಕೋರ್ಟ್‌

“ಅವರು ಸ್ವಯಂಪ್ರೇರಿತ ನಿವೃತ್ತಿ ಪಡೆದಿದ್ದು, ಸೇರಿದಂತೆ ಇತ್ಯಾದಿ ವಿಚರಗಳನ್ನು ನಾವು ಕಂಡುಕೊಂಡಿದ್ದೇವೆ…ಇದು ಸಾಮಾನ್ಯವೇ? ಸಾಮಾನ್ಯವಾಗಿ ಈ ರೀತಿ ನಡೆಯುತ್ತದೆಯೇ’’ ಎಂದು ನ್ಯಾಯಮೂರ್ತಿ ಬೋಸ್ ಕೇಳಿದ್ದಾರೆ.

ಈ ವೇಳೆ ಉತ್ತರಿಸಿದ ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಅಟಾರ್ನಿ ಜನರಲ್‌, “ಅವರು ಹೇಗಿದ್ದರೂ ಡಿಸೆಂಬರ್ 31 ರಂದು ನಿವೃತ್ತರಾಗಲಿದ್ದಾರೆ” ಎಂದು ಉತ್ತರಿಸಿದ್ದಾರೆ.

ಸುದೀರ್ಘ ವಿಚಾರಣೆ ನಡೆಸಿದ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...