Homeರಾಷ್ಟ್ರೀಯಚುನಾವಣಾ ಆಯುಕ್ತರನ್ನು ಭಾರಿ ಆತುರದಲ್ಲಿ ನೇಮಿಸಿದ್ದೇಕೆ?: ಒಕ್ಕೂಟ ಸರ್ಕಾರಕ್ಕೆ ಸುಪ್ರಿಂ ಕೋರ್ಟ್ ಪ್ರಶ್ನೆ

ಚುನಾವಣಾ ಆಯುಕ್ತರನ್ನು ಭಾರಿ ಆತುರದಲ್ಲಿ ನೇಮಿಸಿದ್ದೇಕೆ?: ಒಕ್ಕೂಟ ಸರ್ಕಾರಕ್ಕೆ ಸುಪ್ರಿಂ ಕೋರ್ಟ್ ಪ್ರಶ್ನೆ

- Advertisement -
- Advertisement -

ನಿವೃತ್ತ ಅಧಿಕಾರಿ ಅರುಣ್ ಗೋಯೆಲ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ (ಅನೂಪ್ ಬರನ್ವಾಲ್ ವರ್ಸಸ್ ಯೂನಿಯನ್ ಆಫ್ ಇಂಡಿಯಾ ಮತ್ತು ಓರ್ಸ್) ನೇಮಕ ಮಾಡುವಲ್ಲಿ ಒಕ್ಕೂಟ ಸರ್ಕಾರವು “ಭಾರಿ ಆತುರ” ಪಡಿಸಿರುವ ಬಗ್ಗೆ ಸುಪ್ರೀಂಕೋರ್ಟ್ ಗುರುವಾರ ಪ್ರಶ್ನಿಸಿದೆ.

ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ನೇತೃತ್ವದ ಸಂವಿಧಾನ ಪೀಠವು, ಒಕ್ಕೂಟ ಸರ್ಕಾರವು ಕೇವಲ 24 ಗಂಟೆಗಳ ಅವಧಿಯಲ್ಲಿ ಗೋಯೆಲ್‌ ಅವರ ಮೌಲ್ಯಮಾಪನ ಮತ್ತು ಆಯ್ಕೆ ಮಾಡಲಾಗಿದೆ ಎಂಬುದನ್ನು ಗಮನಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅರುಣ್ ಗೋಯೆಲ್ ನೇಮಕಾತಿ ಕಡತವನ್ನು ನವೆಂಬರ್ 18 ರಂದು ಮುಂದೆ ತರಲಾಗಿದೆ. ಇದರ ನಂತರ ಹೆಸರುಗಳನ್ನು ಪರಿಶೀಲಿಸಲಾಗುತ್ತದೆ. ನಂತರ ಪ್ರಧಾನಿ ಬರುತ್ತಾರೆ… ಸಾಮಾನ್ಯವಾಗಿ ಇಷ್ಟು ತರಾತುರಿಯಲ್ಲಿ ನೇಮಕ ಮಾಡಲಾಗುತ್ತದೆಯೇ” ಎಂದು ನ್ಯಾಯಮೂರ್ತಿ ಜೋಸೆಫ್ ಅವರು ಒಕ್ಕೂಟ ಸರ್ಕಾರದ ಪರವಾಗಿ ಹಾಜರಾದ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರನ್ನು ಕೇಳಿದ್ದಾರೆ.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನ ಕೊಲಿಜಿಯಂ: ನಿರಂತರ ಚರ್ಚೆಗಳ ಒಳಹೊರಗೆ

“ಗೋಯೆಲ್ ಅವರ ನೇಮಕವನ್ನು ನವೆಂಬರ್ 18 ರಂದು ಒಂದೇ ದಿನದಲ್ಲಿ ಮಾಡಿದ್ದೀರಿ. ಈ ಬಗ್ಗೆಗಿನ ಕಡತವು ಅದನ್ನು ಸೂಚುಸುತ್ತಿದೆ” ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

ಕಾರ್ಯಾಂಗವು ಅಧಿಕಾರ ಅನುಭವಿಸುತ್ತದೆ ಎಂಬ ಕಾರಣಕ್ಕೆ ಭಾರತದ ಸಂವಿಧಾನದ 324(2)ನೇ ವಿಧಿಯನ್ನು ಉಲ್ಲಂಘಿಸಿ ಚುನಾವಣಾ ಆಯುಕ್ತರ ನೇಮಕಾತಿಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ಹಾಗೂ ಈ ವ್ಯವಸ್ಥೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ, ಅನಿರುದ್ಧ ಬೋಸ್, ಹೃಷಿಕೇಶ್ ರಾಯ್ ಮತ್ತು ಸಿಟಿ ರವಿಕುಮಾರ್ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸುತ್ತಿದೆ.

ಗೋಯೆಲ್ ಅವರು ನವೆಂಬರ್ 18ರ ಶುಕ್ರವಾರದಂದು ತಮ್ಮ ಹಿಂದಿನ ಪೋಸ್ಟಿಂಗ್‌ನಿಂದ ಸ್ವಯಂ ನಿವೃತ್ತಿ ಪಡೆದಿದ್ದರು. ನವೆಂಬರ್ 19 ರಂದು ಅವರು ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಂಡರು ಮತ್ತು ನವೆಂಬರ್ 21 ರಂದು ಅಧಿಕಾರ ವಹಿಸಿಕೊಂಡಿದ್ದರು.

ಇದನ್ನೂ ಓದಿ: ನವ್ಲಾಖಾ ಗೃಹಬಂಧನದ ವಿರುದ್ಧ ಎನ್‌ಐಎ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಹಿಂದಿನ ಆದೇಶ ಜಾರಿಗೆ ಸೂಚನೆ

ಭಾರತೀಯ ಚುನಾವಣಾ ಆಯೋಗ (ಇಸಿಐ)ದ ನೇಮಕಾತಿಗಳಿಗೆ ತಡೆಯಾಜ್ಞೆ ಕೋರಿ ಸುಪ್ರೀಂಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಬಾಕಿ ಇರುವಾಗ ಈ ನೇಮಕಾತಿಯನ್ನು ಮಾಡಲಾಗಿತ್ತು. ಹೀಗಾಗಿ ಗೋಯೆಲ್ ಅವರನ್ನು ಚುನಾವಣಾ ಆಯುಕ್ತವಾರಿ ನೇಮಿಸಿದ್ದಕ್ಕೆ ಸಂಬಂಧಿಸಿದ ಕಡತವನ್ನು ಹಾಜರುಪಡಿಸುವಂತೆ ನ್ಯಾಯಾಲಯ ಬುಧವಾರ ಸರ್ಕಾರಕ್ಕೆ ಸೂಚಿಸಿತ್ತು.

ಅದರಂತೆ ಒಕ್ಕೂಟ ಸರ್ಕಾರವು ಕಡತಗಳನ್ನು ಹಾಜರುಪಡಿಸಿದ್ದು, ಪೀಠವು ಇಂದು ಪರಿಶೀಲಿಸಲು ಮುಂದಾಯಿತು.

“ನಿಮ್ಮ ಮೊದಲ ಪುಟದ ಪ್ರಕಾರ, ಈ ಹುದ್ದೆಯು ಮೇ 15 ರಿಂದ ಖಾಲಿಯಾಗಿದೆ. ಮೇ ನಿಂದ ನವೆಂಬರ್‌ ತಿಂಗಳ ವರೆಗೆ ಕಾದು, ನವೆಂಬರ್‌ನಲ್ಲಿ ಎಲ್ಲವನ್ನೂ ಸೂಪರ್‌ಫಾಸ್ಟ್ ಆಗಿ ಮಾಡಬೇಕು ಎಂದು ಸರ್ಕಾರಕ್ಕೆ ಯಾಕೆ ಅನಿಸಿತು ಎಂದು ನಮಗೆ ಹೇಳಬಹುದೇ. ಎಲ್ಲಿ ಇಚ್ಛೆ ಇರುತ್ತದೋ ಅಲ್ಲಿ ದಾರಿ ಇರುತ್ತದೆ ಎಂದು ನಮಗೆ ತಿಳಿದಿದೆ” ಎಂದು ನ್ಯಾಯಮೂರ್ತಿ ಅಜಯ್ ರಸ್ತೋಗಿ ಹೇಳಿದ್ದಾರೆ.

ಇದನ್ನೂ ಓದಿ: ಜಾರ್ಖಂಡ್ ಸಿಎಂ ವಿರುದ್ಧ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿದ್ದ ಪಿಐಎಲ್‌‌ಗೆ ಸುಪ್ರೀಂಕೋರ್ಟ್ ತಡೆ

“ಅದೇ ದಿನ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಕೇವಲ 24 ಗಂಟೆಗಳಲ್ಲಿ ಯಾವ ರೀತಿಯ ಮೌಲ್ಯಮಾಪನ ನಡೆದಿದೆ” ಎಂದು ನ್ಯಾಯಾಲಯ ಪ್ರಶ್ನಿಸಿದೆ.

“ಸರಿಯಾದ ಪ್ರಕ್ರಿಯೆಗಳೊಂದಿಗೆ ಹೆಸರನ್ನು ಪರಿಗಣಿಸಲಾಗಿದೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. 12 ಅಥವಾ 24 ಗಂಟೆಗಳಲ್ಲಿ ಸಾರ್ವಜನಿಕ ಕಚೇರಿಗಳಲ್ಲಿ ಎಷ್ಟು ನೇಮಕಾತಿಗಳು ನಡೆಯುತ್ತವೆ? ಇಂತಹ ಪ್ರಶ್ನೆಗಳು ಬೆಳೆಯುತ್ತಲೆ ಹೋಗುತ್ತದೆ. ಅಂತಹ ಎಲ್ಲಾ ನಿದರ್ಶನಗಳನ್ನು ಪಡೆಯಬಹುದೆ” ಎಂದು ಒಕ್ಕೂಟ ಸರ್ಕಾರದ ಪರ ಹಾಜರಾದ ಅಟಾರ್ನಿ ಜನರಲ್ ನ್ಯಾಯಾಲಯಕ್ಕೆ ಹೇಳಿದ್ದಾರೆ.

ಇದಕ್ಕೆ ಪ್ರಶ್ನಿಸಿದ ನ್ಯಾಯಾಲಯ, ಸೂಚಿಸಿದ ಕಾರ್ಯವಿಧಾನವನ್ನು ಸರಿಯಾಗಿ ಅನುಸರಿಸಲಾಗಿದೆಯೇ ಎಂದು ತಿಳಿಯಲು ಪೀಠ ಬಯಸುತ್ತದೆ ಎಂದು ಹೇಳಿದೆ.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಹೊಸ ಅರ್ಜಿ; ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ

“ನೀವು ನೇಮಕಾತಿಯಲ್ಲಿ ಕೈಗೊಂಡ ಪ್ರಕ್ರಿಯೆಯನ್ನು ಮಾತ್ರ ನಾವು ತಿಳಿದುಕೊಳ್ಳಲು ಬಯಸುತ್ತೇವೆ. ನೀವು ಟಾಸ್ ಹಾಕಿ ಎರಡೂ ಕಡೆ ಬಿದ್ದರೂ ಗೆಲ್ಲುತ್ತೀರಿ. ನಮಗೆ ತಿಳಿದಂತೆ ಅಧಿಕಾರ ಹೊಂದಿರುವ ವ್ಯಕ್ತಿ ನಿಮಗೆ ವಿಧೇಯನಾಗಿದ್ದರೆ ಏನು ಮಾಡುವುದು” ಎಂದು ಜಸ್ಟೀಸ್ ಜೋಸೆಫ್ ಪ್ರಶ್ನಿಸಿದ್ದಾರೆ.‘

“ಅವರು ನಮಗೆ ವಿಧೇಯನೆಂದು ಯಾರಾದರೊಬ್ಬರು ಹೇಳುತ್ತಾರೆ. ಅದು ಅಲ್ಲ ಎಂದು ಇನ್ನೊಬ್ಬ ಹೇಳುತ್ತಾರೆ. ಇವುಗಳಲ್ಲಿ ಕೋರ್ಟ್‌ ಯಾರನ್ನು ಪರಿಗಣಿಸುತ್ತದೆ” ಅಟಾರ್ನಿ ಜನರಲ್‌ ಕೇಳುತ್ತಾರೆ.

“ನಾಲ್ವರಿಗಿಂತ ಮುಂಚಿತವಾಗಿ ಅವರನ್ನು ಹೇಗೆ ಆಯ್ಕೆ ಮಾಡಲಾಗಿದೆ ಎಂದು ನಮಗೆ ತಿಳಿಸಿ” ಎಂದು ನ್ಯಾಯಮೂರ್ತಿ ಜೋಸೆಫ್ ಪಟ್ಟು ಹಿಡಿದರು.

ಇದನ್ನೂ ಓದಿ: ಪ್ರೊ.ಜಿ.ಎನ್. ಸಾಯಿಬಾಬಾ ಬಿಡುಗಡೆಯ ಆದೇಶ ಅಮಾನತು ಮಾಡಿದ ಸುಪ್ರೀಂಕೋರ್ಟ್‌

“ಅವರು ಸ್ವಯಂಪ್ರೇರಿತ ನಿವೃತ್ತಿ ಪಡೆದಿದ್ದು, ಸೇರಿದಂತೆ ಇತ್ಯಾದಿ ವಿಚರಗಳನ್ನು ನಾವು ಕಂಡುಕೊಂಡಿದ್ದೇವೆ…ಇದು ಸಾಮಾನ್ಯವೇ? ಸಾಮಾನ್ಯವಾಗಿ ಈ ರೀತಿ ನಡೆಯುತ್ತದೆಯೇ’’ ಎಂದು ನ್ಯಾಯಮೂರ್ತಿ ಬೋಸ್ ಕೇಳಿದ್ದಾರೆ.

ಈ ವೇಳೆ ಉತ್ತರಿಸಿದ ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಅಟಾರ್ನಿ ಜನರಲ್‌, “ಅವರು ಹೇಗಿದ್ದರೂ ಡಿಸೆಂಬರ್ 31 ರಂದು ನಿವೃತ್ತರಾಗಲಿದ್ದಾರೆ” ಎಂದು ಉತ್ತರಿಸಿದ್ದಾರೆ.

ಸುದೀರ್ಘ ವಿಚಾರಣೆ ನಡೆಸಿದ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...