Homeರಾಷ್ಟ್ರೀಯಚುನಾವಣಾ ಆಯುಕ್ತರನ್ನು ಭಾರಿ ಆತುರದಲ್ಲಿ ನೇಮಿಸಿದ್ದೇಕೆ?: ಒಕ್ಕೂಟ ಸರ್ಕಾರಕ್ಕೆ ಸುಪ್ರಿಂ ಕೋರ್ಟ್ ಪ್ರಶ್ನೆ

ಚುನಾವಣಾ ಆಯುಕ್ತರನ್ನು ಭಾರಿ ಆತುರದಲ್ಲಿ ನೇಮಿಸಿದ್ದೇಕೆ?: ಒಕ್ಕೂಟ ಸರ್ಕಾರಕ್ಕೆ ಸುಪ್ರಿಂ ಕೋರ್ಟ್ ಪ್ರಶ್ನೆ

- Advertisement -
- Advertisement -

ನಿವೃತ್ತ ಅಧಿಕಾರಿ ಅರುಣ್ ಗೋಯೆಲ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ (ಅನೂಪ್ ಬರನ್ವಾಲ್ ವರ್ಸಸ್ ಯೂನಿಯನ್ ಆಫ್ ಇಂಡಿಯಾ ಮತ್ತು ಓರ್ಸ್) ನೇಮಕ ಮಾಡುವಲ್ಲಿ ಒಕ್ಕೂಟ ಸರ್ಕಾರವು “ಭಾರಿ ಆತುರ” ಪಡಿಸಿರುವ ಬಗ್ಗೆ ಸುಪ್ರೀಂಕೋರ್ಟ್ ಗುರುವಾರ ಪ್ರಶ್ನಿಸಿದೆ.

ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ನೇತೃತ್ವದ ಸಂವಿಧಾನ ಪೀಠವು, ಒಕ್ಕೂಟ ಸರ್ಕಾರವು ಕೇವಲ 24 ಗಂಟೆಗಳ ಅವಧಿಯಲ್ಲಿ ಗೋಯೆಲ್‌ ಅವರ ಮೌಲ್ಯಮಾಪನ ಮತ್ತು ಆಯ್ಕೆ ಮಾಡಲಾಗಿದೆ ಎಂಬುದನ್ನು ಗಮನಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅರುಣ್ ಗೋಯೆಲ್ ನೇಮಕಾತಿ ಕಡತವನ್ನು ನವೆಂಬರ್ 18 ರಂದು ಮುಂದೆ ತರಲಾಗಿದೆ. ಇದರ ನಂತರ ಹೆಸರುಗಳನ್ನು ಪರಿಶೀಲಿಸಲಾಗುತ್ತದೆ. ನಂತರ ಪ್ರಧಾನಿ ಬರುತ್ತಾರೆ… ಸಾಮಾನ್ಯವಾಗಿ ಇಷ್ಟು ತರಾತುರಿಯಲ್ಲಿ ನೇಮಕ ಮಾಡಲಾಗುತ್ತದೆಯೇ” ಎಂದು ನ್ಯಾಯಮೂರ್ತಿ ಜೋಸೆಫ್ ಅವರು ಒಕ್ಕೂಟ ಸರ್ಕಾರದ ಪರವಾಗಿ ಹಾಜರಾದ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರನ್ನು ಕೇಳಿದ್ದಾರೆ.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನ ಕೊಲಿಜಿಯಂ: ನಿರಂತರ ಚರ್ಚೆಗಳ ಒಳಹೊರಗೆ

“ಗೋಯೆಲ್ ಅವರ ನೇಮಕವನ್ನು ನವೆಂಬರ್ 18 ರಂದು ಒಂದೇ ದಿನದಲ್ಲಿ ಮಾಡಿದ್ದೀರಿ. ಈ ಬಗ್ಗೆಗಿನ ಕಡತವು ಅದನ್ನು ಸೂಚುಸುತ್ತಿದೆ” ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

ಕಾರ್ಯಾಂಗವು ಅಧಿಕಾರ ಅನುಭವಿಸುತ್ತದೆ ಎಂಬ ಕಾರಣಕ್ಕೆ ಭಾರತದ ಸಂವಿಧಾನದ 324(2)ನೇ ವಿಧಿಯನ್ನು ಉಲ್ಲಂಘಿಸಿ ಚುನಾವಣಾ ಆಯುಕ್ತರ ನೇಮಕಾತಿಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ಹಾಗೂ ಈ ವ್ಯವಸ್ಥೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ, ಅನಿರುದ್ಧ ಬೋಸ್, ಹೃಷಿಕೇಶ್ ರಾಯ್ ಮತ್ತು ಸಿಟಿ ರವಿಕುಮಾರ್ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸುತ್ತಿದೆ.

ಗೋಯೆಲ್ ಅವರು ನವೆಂಬರ್ 18ರ ಶುಕ್ರವಾರದಂದು ತಮ್ಮ ಹಿಂದಿನ ಪೋಸ್ಟಿಂಗ್‌ನಿಂದ ಸ್ವಯಂ ನಿವೃತ್ತಿ ಪಡೆದಿದ್ದರು. ನವೆಂಬರ್ 19 ರಂದು ಅವರು ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಂಡರು ಮತ್ತು ನವೆಂಬರ್ 21 ರಂದು ಅಧಿಕಾರ ವಹಿಸಿಕೊಂಡಿದ್ದರು.

ಇದನ್ನೂ ಓದಿ: ನವ್ಲಾಖಾ ಗೃಹಬಂಧನದ ವಿರುದ್ಧ ಎನ್‌ಐಎ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಹಿಂದಿನ ಆದೇಶ ಜಾರಿಗೆ ಸೂಚನೆ

ಭಾರತೀಯ ಚುನಾವಣಾ ಆಯೋಗ (ಇಸಿಐ)ದ ನೇಮಕಾತಿಗಳಿಗೆ ತಡೆಯಾಜ್ಞೆ ಕೋರಿ ಸುಪ್ರೀಂಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಬಾಕಿ ಇರುವಾಗ ಈ ನೇಮಕಾತಿಯನ್ನು ಮಾಡಲಾಗಿತ್ತು. ಹೀಗಾಗಿ ಗೋಯೆಲ್ ಅವರನ್ನು ಚುನಾವಣಾ ಆಯುಕ್ತವಾರಿ ನೇಮಿಸಿದ್ದಕ್ಕೆ ಸಂಬಂಧಿಸಿದ ಕಡತವನ್ನು ಹಾಜರುಪಡಿಸುವಂತೆ ನ್ಯಾಯಾಲಯ ಬುಧವಾರ ಸರ್ಕಾರಕ್ಕೆ ಸೂಚಿಸಿತ್ತು.

ಅದರಂತೆ ಒಕ್ಕೂಟ ಸರ್ಕಾರವು ಕಡತಗಳನ್ನು ಹಾಜರುಪಡಿಸಿದ್ದು, ಪೀಠವು ಇಂದು ಪರಿಶೀಲಿಸಲು ಮುಂದಾಯಿತು.

“ನಿಮ್ಮ ಮೊದಲ ಪುಟದ ಪ್ರಕಾರ, ಈ ಹುದ್ದೆಯು ಮೇ 15 ರಿಂದ ಖಾಲಿಯಾಗಿದೆ. ಮೇ ನಿಂದ ನವೆಂಬರ್‌ ತಿಂಗಳ ವರೆಗೆ ಕಾದು, ನವೆಂಬರ್‌ನಲ್ಲಿ ಎಲ್ಲವನ್ನೂ ಸೂಪರ್‌ಫಾಸ್ಟ್ ಆಗಿ ಮಾಡಬೇಕು ಎಂದು ಸರ್ಕಾರಕ್ಕೆ ಯಾಕೆ ಅನಿಸಿತು ಎಂದು ನಮಗೆ ಹೇಳಬಹುದೇ. ಎಲ್ಲಿ ಇಚ್ಛೆ ಇರುತ್ತದೋ ಅಲ್ಲಿ ದಾರಿ ಇರುತ್ತದೆ ಎಂದು ನಮಗೆ ತಿಳಿದಿದೆ” ಎಂದು ನ್ಯಾಯಮೂರ್ತಿ ಅಜಯ್ ರಸ್ತೋಗಿ ಹೇಳಿದ್ದಾರೆ.

ಇದನ್ನೂ ಓದಿ: ಜಾರ್ಖಂಡ್ ಸಿಎಂ ವಿರುದ್ಧ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿದ್ದ ಪಿಐಎಲ್‌‌ಗೆ ಸುಪ್ರೀಂಕೋರ್ಟ್ ತಡೆ

“ಅದೇ ದಿನ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಕೇವಲ 24 ಗಂಟೆಗಳಲ್ಲಿ ಯಾವ ರೀತಿಯ ಮೌಲ್ಯಮಾಪನ ನಡೆದಿದೆ” ಎಂದು ನ್ಯಾಯಾಲಯ ಪ್ರಶ್ನಿಸಿದೆ.

“ಸರಿಯಾದ ಪ್ರಕ್ರಿಯೆಗಳೊಂದಿಗೆ ಹೆಸರನ್ನು ಪರಿಗಣಿಸಲಾಗಿದೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. 12 ಅಥವಾ 24 ಗಂಟೆಗಳಲ್ಲಿ ಸಾರ್ವಜನಿಕ ಕಚೇರಿಗಳಲ್ಲಿ ಎಷ್ಟು ನೇಮಕಾತಿಗಳು ನಡೆಯುತ್ತವೆ? ಇಂತಹ ಪ್ರಶ್ನೆಗಳು ಬೆಳೆಯುತ್ತಲೆ ಹೋಗುತ್ತದೆ. ಅಂತಹ ಎಲ್ಲಾ ನಿದರ್ಶನಗಳನ್ನು ಪಡೆಯಬಹುದೆ” ಎಂದು ಒಕ್ಕೂಟ ಸರ್ಕಾರದ ಪರ ಹಾಜರಾದ ಅಟಾರ್ನಿ ಜನರಲ್ ನ್ಯಾಯಾಲಯಕ್ಕೆ ಹೇಳಿದ್ದಾರೆ.

ಇದಕ್ಕೆ ಪ್ರಶ್ನಿಸಿದ ನ್ಯಾಯಾಲಯ, ಸೂಚಿಸಿದ ಕಾರ್ಯವಿಧಾನವನ್ನು ಸರಿಯಾಗಿ ಅನುಸರಿಸಲಾಗಿದೆಯೇ ಎಂದು ತಿಳಿಯಲು ಪೀಠ ಬಯಸುತ್ತದೆ ಎಂದು ಹೇಳಿದೆ.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಹೊಸ ಅರ್ಜಿ; ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ

“ನೀವು ನೇಮಕಾತಿಯಲ್ಲಿ ಕೈಗೊಂಡ ಪ್ರಕ್ರಿಯೆಯನ್ನು ಮಾತ್ರ ನಾವು ತಿಳಿದುಕೊಳ್ಳಲು ಬಯಸುತ್ತೇವೆ. ನೀವು ಟಾಸ್ ಹಾಕಿ ಎರಡೂ ಕಡೆ ಬಿದ್ದರೂ ಗೆಲ್ಲುತ್ತೀರಿ. ನಮಗೆ ತಿಳಿದಂತೆ ಅಧಿಕಾರ ಹೊಂದಿರುವ ವ್ಯಕ್ತಿ ನಿಮಗೆ ವಿಧೇಯನಾಗಿದ್ದರೆ ಏನು ಮಾಡುವುದು” ಎಂದು ಜಸ್ಟೀಸ್ ಜೋಸೆಫ್ ಪ್ರಶ್ನಿಸಿದ್ದಾರೆ.‘

“ಅವರು ನಮಗೆ ವಿಧೇಯನೆಂದು ಯಾರಾದರೊಬ್ಬರು ಹೇಳುತ್ತಾರೆ. ಅದು ಅಲ್ಲ ಎಂದು ಇನ್ನೊಬ್ಬ ಹೇಳುತ್ತಾರೆ. ಇವುಗಳಲ್ಲಿ ಕೋರ್ಟ್‌ ಯಾರನ್ನು ಪರಿಗಣಿಸುತ್ತದೆ” ಅಟಾರ್ನಿ ಜನರಲ್‌ ಕೇಳುತ್ತಾರೆ.

“ನಾಲ್ವರಿಗಿಂತ ಮುಂಚಿತವಾಗಿ ಅವರನ್ನು ಹೇಗೆ ಆಯ್ಕೆ ಮಾಡಲಾಗಿದೆ ಎಂದು ನಮಗೆ ತಿಳಿಸಿ” ಎಂದು ನ್ಯಾಯಮೂರ್ತಿ ಜೋಸೆಫ್ ಪಟ್ಟು ಹಿಡಿದರು.

ಇದನ್ನೂ ಓದಿ: ಪ್ರೊ.ಜಿ.ಎನ್. ಸಾಯಿಬಾಬಾ ಬಿಡುಗಡೆಯ ಆದೇಶ ಅಮಾನತು ಮಾಡಿದ ಸುಪ್ರೀಂಕೋರ್ಟ್‌

“ಅವರು ಸ್ವಯಂಪ್ರೇರಿತ ನಿವೃತ್ತಿ ಪಡೆದಿದ್ದು, ಸೇರಿದಂತೆ ಇತ್ಯಾದಿ ವಿಚರಗಳನ್ನು ನಾವು ಕಂಡುಕೊಂಡಿದ್ದೇವೆ…ಇದು ಸಾಮಾನ್ಯವೇ? ಸಾಮಾನ್ಯವಾಗಿ ಈ ರೀತಿ ನಡೆಯುತ್ತದೆಯೇ’’ ಎಂದು ನ್ಯಾಯಮೂರ್ತಿ ಬೋಸ್ ಕೇಳಿದ್ದಾರೆ.

ಈ ವೇಳೆ ಉತ್ತರಿಸಿದ ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಅಟಾರ್ನಿ ಜನರಲ್‌, “ಅವರು ಹೇಗಿದ್ದರೂ ಡಿಸೆಂಬರ್ 31 ರಂದು ನಿವೃತ್ತರಾಗಲಿದ್ದಾರೆ” ಎಂದು ಉತ್ತರಿಸಿದ್ದಾರೆ.

ಸುದೀರ್ಘ ವಿಚಾರಣೆ ನಡೆಸಿದ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...