Homeರಾಷ್ಟ್ರೀಯಚುನಾವಣಾ ಆಯುಕ್ತರನ್ನು ಭಾರಿ ಆತುರದಲ್ಲಿ ನೇಮಿಸಿದ್ದೇಕೆ?: ಒಕ್ಕೂಟ ಸರ್ಕಾರಕ್ಕೆ ಸುಪ್ರಿಂ ಕೋರ್ಟ್ ಪ್ರಶ್ನೆ

ಚುನಾವಣಾ ಆಯುಕ್ತರನ್ನು ಭಾರಿ ಆತುರದಲ್ಲಿ ನೇಮಿಸಿದ್ದೇಕೆ?: ಒಕ್ಕೂಟ ಸರ್ಕಾರಕ್ಕೆ ಸುಪ್ರಿಂ ಕೋರ್ಟ್ ಪ್ರಶ್ನೆ

- Advertisement -
- Advertisement -

ನಿವೃತ್ತ ಅಧಿಕಾರಿ ಅರುಣ್ ಗೋಯೆಲ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ (ಅನೂಪ್ ಬರನ್ವಾಲ್ ವರ್ಸಸ್ ಯೂನಿಯನ್ ಆಫ್ ಇಂಡಿಯಾ ಮತ್ತು ಓರ್ಸ್) ನೇಮಕ ಮಾಡುವಲ್ಲಿ ಒಕ್ಕೂಟ ಸರ್ಕಾರವು “ಭಾರಿ ಆತುರ” ಪಡಿಸಿರುವ ಬಗ್ಗೆ ಸುಪ್ರೀಂಕೋರ್ಟ್ ಗುರುವಾರ ಪ್ರಶ್ನಿಸಿದೆ.

ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ನೇತೃತ್ವದ ಸಂವಿಧಾನ ಪೀಠವು, ಒಕ್ಕೂಟ ಸರ್ಕಾರವು ಕೇವಲ 24 ಗಂಟೆಗಳ ಅವಧಿಯಲ್ಲಿ ಗೋಯೆಲ್‌ ಅವರ ಮೌಲ್ಯಮಾಪನ ಮತ್ತು ಆಯ್ಕೆ ಮಾಡಲಾಗಿದೆ ಎಂಬುದನ್ನು ಗಮನಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅರುಣ್ ಗೋಯೆಲ್ ನೇಮಕಾತಿ ಕಡತವನ್ನು ನವೆಂಬರ್ 18 ರಂದು ಮುಂದೆ ತರಲಾಗಿದೆ. ಇದರ ನಂತರ ಹೆಸರುಗಳನ್ನು ಪರಿಶೀಲಿಸಲಾಗುತ್ತದೆ. ನಂತರ ಪ್ರಧಾನಿ ಬರುತ್ತಾರೆ… ಸಾಮಾನ್ಯವಾಗಿ ಇಷ್ಟು ತರಾತುರಿಯಲ್ಲಿ ನೇಮಕ ಮಾಡಲಾಗುತ್ತದೆಯೇ” ಎಂದು ನ್ಯಾಯಮೂರ್ತಿ ಜೋಸೆಫ್ ಅವರು ಒಕ್ಕೂಟ ಸರ್ಕಾರದ ಪರವಾಗಿ ಹಾಜರಾದ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರನ್ನು ಕೇಳಿದ್ದಾರೆ.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನ ಕೊಲಿಜಿಯಂ: ನಿರಂತರ ಚರ್ಚೆಗಳ ಒಳಹೊರಗೆ

“ಗೋಯೆಲ್ ಅವರ ನೇಮಕವನ್ನು ನವೆಂಬರ್ 18 ರಂದು ಒಂದೇ ದಿನದಲ್ಲಿ ಮಾಡಿದ್ದೀರಿ. ಈ ಬಗ್ಗೆಗಿನ ಕಡತವು ಅದನ್ನು ಸೂಚುಸುತ್ತಿದೆ” ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

ಕಾರ್ಯಾಂಗವು ಅಧಿಕಾರ ಅನುಭವಿಸುತ್ತದೆ ಎಂಬ ಕಾರಣಕ್ಕೆ ಭಾರತದ ಸಂವಿಧಾನದ 324(2)ನೇ ವಿಧಿಯನ್ನು ಉಲ್ಲಂಘಿಸಿ ಚುನಾವಣಾ ಆಯುಕ್ತರ ನೇಮಕಾತಿಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ಹಾಗೂ ಈ ವ್ಯವಸ್ಥೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ, ಅನಿರುದ್ಧ ಬೋಸ್, ಹೃಷಿಕೇಶ್ ರಾಯ್ ಮತ್ತು ಸಿಟಿ ರವಿಕುಮಾರ್ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸುತ್ತಿದೆ.

ಗೋಯೆಲ್ ಅವರು ನವೆಂಬರ್ 18ರ ಶುಕ್ರವಾರದಂದು ತಮ್ಮ ಹಿಂದಿನ ಪೋಸ್ಟಿಂಗ್‌ನಿಂದ ಸ್ವಯಂ ನಿವೃತ್ತಿ ಪಡೆದಿದ್ದರು. ನವೆಂಬರ್ 19 ರಂದು ಅವರು ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಂಡರು ಮತ್ತು ನವೆಂಬರ್ 21 ರಂದು ಅಧಿಕಾರ ವಹಿಸಿಕೊಂಡಿದ್ದರು.

ಇದನ್ನೂ ಓದಿ: ನವ್ಲಾಖಾ ಗೃಹಬಂಧನದ ವಿರುದ್ಧ ಎನ್‌ಐಎ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಹಿಂದಿನ ಆದೇಶ ಜಾರಿಗೆ ಸೂಚನೆ

ಭಾರತೀಯ ಚುನಾವಣಾ ಆಯೋಗ (ಇಸಿಐ)ದ ನೇಮಕಾತಿಗಳಿಗೆ ತಡೆಯಾಜ್ಞೆ ಕೋರಿ ಸುಪ್ರೀಂಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಬಾಕಿ ಇರುವಾಗ ಈ ನೇಮಕಾತಿಯನ್ನು ಮಾಡಲಾಗಿತ್ತು. ಹೀಗಾಗಿ ಗೋಯೆಲ್ ಅವರನ್ನು ಚುನಾವಣಾ ಆಯುಕ್ತವಾರಿ ನೇಮಿಸಿದ್ದಕ್ಕೆ ಸಂಬಂಧಿಸಿದ ಕಡತವನ್ನು ಹಾಜರುಪಡಿಸುವಂತೆ ನ್ಯಾಯಾಲಯ ಬುಧವಾರ ಸರ್ಕಾರಕ್ಕೆ ಸೂಚಿಸಿತ್ತು.

ಅದರಂತೆ ಒಕ್ಕೂಟ ಸರ್ಕಾರವು ಕಡತಗಳನ್ನು ಹಾಜರುಪಡಿಸಿದ್ದು, ಪೀಠವು ಇಂದು ಪರಿಶೀಲಿಸಲು ಮುಂದಾಯಿತು.

“ನಿಮ್ಮ ಮೊದಲ ಪುಟದ ಪ್ರಕಾರ, ಈ ಹುದ್ದೆಯು ಮೇ 15 ರಿಂದ ಖಾಲಿಯಾಗಿದೆ. ಮೇ ನಿಂದ ನವೆಂಬರ್‌ ತಿಂಗಳ ವರೆಗೆ ಕಾದು, ನವೆಂಬರ್‌ನಲ್ಲಿ ಎಲ್ಲವನ್ನೂ ಸೂಪರ್‌ಫಾಸ್ಟ್ ಆಗಿ ಮಾಡಬೇಕು ಎಂದು ಸರ್ಕಾರಕ್ಕೆ ಯಾಕೆ ಅನಿಸಿತು ಎಂದು ನಮಗೆ ಹೇಳಬಹುದೇ. ಎಲ್ಲಿ ಇಚ್ಛೆ ಇರುತ್ತದೋ ಅಲ್ಲಿ ದಾರಿ ಇರುತ್ತದೆ ಎಂದು ನಮಗೆ ತಿಳಿದಿದೆ” ಎಂದು ನ್ಯಾಯಮೂರ್ತಿ ಅಜಯ್ ರಸ್ತೋಗಿ ಹೇಳಿದ್ದಾರೆ.

ಇದನ್ನೂ ಓದಿ: ಜಾರ್ಖಂಡ್ ಸಿಎಂ ವಿರುದ್ಧ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿದ್ದ ಪಿಐಎಲ್‌‌ಗೆ ಸುಪ್ರೀಂಕೋರ್ಟ್ ತಡೆ

“ಅದೇ ದಿನ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಕೇವಲ 24 ಗಂಟೆಗಳಲ್ಲಿ ಯಾವ ರೀತಿಯ ಮೌಲ್ಯಮಾಪನ ನಡೆದಿದೆ” ಎಂದು ನ್ಯಾಯಾಲಯ ಪ್ರಶ್ನಿಸಿದೆ.

“ಸರಿಯಾದ ಪ್ರಕ್ರಿಯೆಗಳೊಂದಿಗೆ ಹೆಸರನ್ನು ಪರಿಗಣಿಸಲಾಗಿದೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. 12 ಅಥವಾ 24 ಗಂಟೆಗಳಲ್ಲಿ ಸಾರ್ವಜನಿಕ ಕಚೇರಿಗಳಲ್ಲಿ ಎಷ್ಟು ನೇಮಕಾತಿಗಳು ನಡೆಯುತ್ತವೆ? ಇಂತಹ ಪ್ರಶ್ನೆಗಳು ಬೆಳೆಯುತ್ತಲೆ ಹೋಗುತ್ತದೆ. ಅಂತಹ ಎಲ್ಲಾ ನಿದರ್ಶನಗಳನ್ನು ಪಡೆಯಬಹುದೆ” ಎಂದು ಒಕ್ಕೂಟ ಸರ್ಕಾರದ ಪರ ಹಾಜರಾದ ಅಟಾರ್ನಿ ಜನರಲ್ ನ್ಯಾಯಾಲಯಕ್ಕೆ ಹೇಳಿದ್ದಾರೆ.

ಇದಕ್ಕೆ ಪ್ರಶ್ನಿಸಿದ ನ್ಯಾಯಾಲಯ, ಸೂಚಿಸಿದ ಕಾರ್ಯವಿಧಾನವನ್ನು ಸರಿಯಾಗಿ ಅನುಸರಿಸಲಾಗಿದೆಯೇ ಎಂದು ತಿಳಿಯಲು ಪೀಠ ಬಯಸುತ್ತದೆ ಎಂದು ಹೇಳಿದೆ.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಹೊಸ ಅರ್ಜಿ; ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ

“ನೀವು ನೇಮಕಾತಿಯಲ್ಲಿ ಕೈಗೊಂಡ ಪ್ರಕ್ರಿಯೆಯನ್ನು ಮಾತ್ರ ನಾವು ತಿಳಿದುಕೊಳ್ಳಲು ಬಯಸುತ್ತೇವೆ. ನೀವು ಟಾಸ್ ಹಾಕಿ ಎರಡೂ ಕಡೆ ಬಿದ್ದರೂ ಗೆಲ್ಲುತ್ತೀರಿ. ನಮಗೆ ತಿಳಿದಂತೆ ಅಧಿಕಾರ ಹೊಂದಿರುವ ವ್ಯಕ್ತಿ ನಿಮಗೆ ವಿಧೇಯನಾಗಿದ್ದರೆ ಏನು ಮಾಡುವುದು” ಎಂದು ಜಸ್ಟೀಸ್ ಜೋಸೆಫ್ ಪ್ರಶ್ನಿಸಿದ್ದಾರೆ.‘

“ಅವರು ನಮಗೆ ವಿಧೇಯನೆಂದು ಯಾರಾದರೊಬ್ಬರು ಹೇಳುತ್ತಾರೆ. ಅದು ಅಲ್ಲ ಎಂದು ಇನ್ನೊಬ್ಬ ಹೇಳುತ್ತಾರೆ. ಇವುಗಳಲ್ಲಿ ಕೋರ್ಟ್‌ ಯಾರನ್ನು ಪರಿಗಣಿಸುತ್ತದೆ” ಅಟಾರ್ನಿ ಜನರಲ್‌ ಕೇಳುತ್ತಾರೆ.

“ನಾಲ್ವರಿಗಿಂತ ಮುಂಚಿತವಾಗಿ ಅವರನ್ನು ಹೇಗೆ ಆಯ್ಕೆ ಮಾಡಲಾಗಿದೆ ಎಂದು ನಮಗೆ ತಿಳಿಸಿ” ಎಂದು ನ್ಯಾಯಮೂರ್ತಿ ಜೋಸೆಫ್ ಪಟ್ಟು ಹಿಡಿದರು.

ಇದನ್ನೂ ಓದಿ: ಪ್ರೊ.ಜಿ.ಎನ್. ಸಾಯಿಬಾಬಾ ಬಿಡುಗಡೆಯ ಆದೇಶ ಅಮಾನತು ಮಾಡಿದ ಸುಪ್ರೀಂಕೋರ್ಟ್‌

“ಅವರು ಸ್ವಯಂಪ್ರೇರಿತ ನಿವೃತ್ತಿ ಪಡೆದಿದ್ದು, ಸೇರಿದಂತೆ ಇತ್ಯಾದಿ ವಿಚರಗಳನ್ನು ನಾವು ಕಂಡುಕೊಂಡಿದ್ದೇವೆ…ಇದು ಸಾಮಾನ್ಯವೇ? ಸಾಮಾನ್ಯವಾಗಿ ಈ ರೀತಿ ನಡೆಯುತ್ತದೆಯೇ’’ ಎಂದು ನ್ಯಾಯಮೂರ್ತಿ ಬೋಸ್ ಕೇಳಿದ್ದಾರೆ.

ಈ ವೇಳೆ ಉತ್ತರಿಸಿದ ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಅಟಾರ್ನಿ ಜನರಲ್‌, “ಅವರು ಹೇಗಿದ್ದರೂ ಡಿಸೆಂಬರ್ 31 ರಂದು ನಿವೃತ್ತರಾಗಲಿದ್ದಾರೆ” ಎಂದು ಉತ್ತರಿಸಿದ್ದಾರೆ.

ಸುದೀರ್ಘ ವಿಚಾರಣೆ ನಡೆಸಿದ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...