Homeಕರ್ನಾಟಕಸಿದ್ದರಾಮಯ್ಯರ ಕೊಲೆಗೆ ಪ್ರಚೋದನೆ ನೀಡಿದವರ ಮೇಲೆ ಕೇಸ್ ಹಾಕಲಿಲ್ಲ ಯಾಕೆ?: ಪೊಲೀಸ್ ಅಧಿಕಾರಿಗಳಿಗೆ ಡಿಸಿಎಂ...

ಸಿದ್ದರಾಮಯ್ಯರ ಕೊಲೆಗೆ ಪ್ರಚೋದನೆ ನೀಡಿದವರ ಮೇಲೆ ಕೇಸ್ ಹಾಕಲಿಲ್ಲ ಯಾಕೆ?: ಪೊಲೀಸ್ ಅಧಿಕಾರಿಗಳಿಗೆ ಡಿಸಿಎಂ ಡಿಕೆಶಿ ತರಾಟೆ

- Advertisement -
- Advertisement -

”ಟಿಪ್ಪು ಸುಲ್ತಾನ್ ಅವರನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದು ಕೊಲೆ ಮಾಡಲು ಕರೆ ನೀಡಿದ, ಪ್ರಚೋದನೆ ನೀಡಿದವರ ವಿರುದ್ಧ ಯಾಕೆ ಕೇಸ್ ಹಾಕಲಿಲ್ಲ? ಅದು ಕ್ರೈಂ ಅಲ್ಲವೇ?” ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು  ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡಿದ್ದಾರೆ.

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪೊಲೀಸ್ ಇಲಾಖೆ ನಡೆದಕೊಂಡ ರೀತಿಯನ್ನು ನೆನಪಿಸುತ್ತ ಪೊಲೀಸ್ ಅಧಿಕಾರಿಗಳಿಗೆ ಡಿಕೆ ಶಿವಕುಮಾರ್ ಅವರು ಕ್ಲಾಸ್ ತಗೆದುಕೊಂಡಿದ್ದಾರೆ. ”ನೀವು ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ? ನಮ್ಮ ಸರ್ಕಾರದಲ್ಲಿ ಇದಕ್ಕೆ ಅವಕಾಶ ಕೊಡುವುದಿಲ್ಲ. ಮಂಗಳೂರು, ಬಿಜಾಪುರ, ಬಾಗಲಕೋಟದಲ್ಲಿ ನೀವು ಹೇಗೆ ಕೇಸರಿ ಬಟ್ಟೆ ಹಾಕೊಂಡು ಇಲಾಖೆಗೆ ಅವಮಾನ ಮಾಡಿದ್ದೀರಿ ಎನ್ನುವುದು ನಮಗೆ ಗೊತ್ತಿದೆ.  ಈ‌ ಸಭೆಗೂ ಕೇಸರಿ ಶಾಲು ಹಾಕಿಕೊಂಡು ಬರಬೇಕಾಗಿತ್ತು. ದೇಶದ ಬಗ್ಗೆ ಗೌರವ ಇದ್ದರೆ ರಾಷ್ಟ್ರ ಧ್ವಜ ಹಾಕಿಕೊಂಡು ಕೆಲಸ ಮಾಡಬೇಕಿತ್ತು. ನಮ್ಮ ಸರಕಾರದಲ್ಲಿ ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ನಾವು ಬಿಡೊಲ್ಲ” ಎಂದು ಹೇಳಿದರು.

”PSI ಅಕ್ರಮದಲ್ಲಿ ಒಬ್ಬ ಎಡಿಜಿಪಿ omr ಪೇಪರ್ ತಿದ್ದುತ್ತಾರೆ ಅಂದರೆ ಇಲಾಖೆ ಎಷ್ಟು ಕೆಟ್ಟು ಹೋಗಿದೆ ಎನ್ನುವುದು ಅರ್ಥವಾಗುತ್ತದೆ. ಪ್ರೆಸ್ ಕಾನ್ಫರೆನ್ಸ್ ಮಾಡಿ ಪ್ರಕರಣ ಬಯಲಿಗೆ ತಂದ ಪ್ರಿಯಾಂಕ್ ಖರ್ಗೆ ಅವರಿಗೆ ನೀವು ತೊಂದರೆ ಕೊಟ್ಟಿದ್ದೀರಿ. ಇಡೀ ದೇಶದಲ್ಲಿ ಕರ್ನಾಟಕ ಪೊಲೀಸ್ ಇಲಾಖೆಗೆ ಒಳ್ಳೆಯ ಹೆಸರಿತ್ತು. ಆ ಗೌರವ, ಘನತೆಯನ್ನ ಹಾಳು‌ ಮಾಡಿದ್ದೀರಿ. ಎಲ್ಲಿ ನೋಡಿದ್ರು ಬರೀ ಕಾಸು, ಕಾಸು, ಕಾಸು. ನಮ್ಮ ಸರ್ಕಾರದಲ್ಲಿ ಎಲ್ಲವೂ ಕ್ಲೀನ್ ಆಗಬೇಕು. ಜನ ಈ ಸರಕಾರದಿಂದ ಬಹುದೊಡ್ಡ ಬದಲಾವಣೆಯನ್ನು ನಿರೀಕ್ಷೆ ಮಾಡಿದ್ದಾರೆ. ಅದು ಪೊಲೀಸ್ ಇಲಾಖೆಯಿಂದಲೇ ಶುರು ಆಗಬೇಕು. ಈ ಸರಕಾರದಿಂದ ಬದಲಾವಣೆ ಸಂದೇಶ ಜನರಿಗೆ ಹೋಗಬೇಕು. ನಿಮ್ಮಿಂದ ನಮಗೆ ನಯಾಪೈಸೆ ಹಣ ಬೇಕಿಲ್ಲ. ನೀವು ಯಾರಿಗೂ ಹಣ ಕೊಡುವುದೂ ಬೇಡ. ಜನ ನರಳದಂತೆ ಉತ್ತಮವಾಗಿ ಕೆಲಸ ಮಾಡಿದರೆ ಅಷ್ಟೇ ಸಾಕು” ಎಂದು ಅಧಿಕಾರಿಕಾರಿಗಳಿಗೆ ತಿಳಿಸಿದ್ದಾರೆ.

”ಈ ಹಿಂದೆ ಪೇ ಸಿಎಂ ಅಭಿಯಾನ ಮಾಡಿದಾಗ ನನ್ನ ಮತ್ತು ಸಿದ್ದರಾಮಯ್ಯರ ಜೊತೆ ಹೇಗೆ ನಡೆದುಕೊಂಡಿದ್ದೀರಾ ಎನ್ನುವುದು ಗೊತ್ತಿದೆ. ನಮ್ಮ ಮೇಲೆ ಕೇಸ್ ಹಾಕಿದ್ದೀರಿ. ನಮ್ಮ ಕಾರ್ಯಕರ್ತರ ಮೇಲೆ ಸುಳ್ಳು, ಸುಳ್ಳು ಸಾವಿರಾರು ಕೇಸ್ ಹಾಕಿ ತೊಂದರೆ ಕೊಟ್ಟಿದ್ದೀರಿ. ನಮ್ಮನ್ನ, ಸಿದ್ದರಾಮಯ್ಯ ಅವರನ್ನೇ ಬಿಡದ ನೀವು ಇನ್ನು ಸಾಮಾನ್ಯ ಜನರನ್ನು ಬಿಡುತ್ತೀರಾ? ಆದರೆ ಬಿಜೆಪಿ ವಿರುದ್ಧ ಮಾತ್ರ ಯಾವುದೇ ಕೇಸ್ ಹಾಕಲಿಲ್ಲ. ಅವರ ಜತೆ ಶಾಮೀಲಾಗಿ ಅವರು ಹೇಳಿದಂತೆ ನಡೆದುಕೊಂಡಿದ್ದೀರಿ” ಎಂದು ಆರೋಪ ಮಾಡಿದರು.

”ಟಿಪ್ಪು ಸುಲ್ತಾನ್ ಅವರನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂದು ಕೊಲೆ ಮಾಡಲು ಕರೆ ನೀಡಿದ, ಪ್ರೇರಣೆ ನೀಡಿದವರ ವಿರುದ್ಧ ಯಾಕೆ ಕೇಸ್ ಹಾಕಲಿಲ್ಲ? ಅದು ಕ್ರೈಂ ಅಲ್ವಾ? ನೀವು ಏನೇನೂ ಮಾಡಿದ್ದೀರಾ ಎನ್ನುವ ಬಗ್ಗೆ ನಮ್ಮ ಬಳಿ ಸಾಕ್ಷಿ ಇವೆ. ನಾವು ಎಲ್ಲವನ್ನೂ ನೋಡಿದ್ದೇವೆ. ಇವೆಲ್ಲ ನಮ್ಮ ಸರ್ಕಾರದಲ್ಲಿ ನಡೆಯುವುದಿಲ್. ನೀವು ಬದಲಾಗಬೇಕು, ನಿಮ್ಮ ವರ್ತನೆ ಬದಲಾಗಬೇಕು. ಇಲ್ಲದಿದ್ದರೆ ನಿಮ್ಮನ್ನೇ ಬದಲಾವಣೆ ಮಾಡಬೇಕಾಗುತ್ತದೆ” ಎಂದು ಅಧಿಕಾರಿಗಳಿಗಳಿಗೆ ಡಿಕೆಶಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಸಾರ್ವಜನಿಕರಿಗೆ ತೊಂದರೆಯಾಗಬಾರದೆಂದು ಜೀರೊ ಟ್ರಾಪಿಕ್‌ ಸೌಲಭ್ಯ ಬೇಡ ಎಂದ ಸಿಎಂ ಸಿದ್ದರಾಮಯ್ಯ

”ನಾವು ದ್ವೇಷ ಸಾಧಿಸೋದಿಲ್ಲ, ಅದರಲ್ಲಿ ನಮಗೆ ನಂಬಿಕೆ ಇಲ್ಲ. ನೀವು ಬದಲಾಗಿ, ಹಳೆಯದು ಬಿಡಿ. ಹೊಸದಾಗಿ ಕೆಲಸ ಶುರು ಮಾಡಿ, ಜನರ ನೆಮ್ಮದಿ ಕಾಪಾಡಬೇಕು. ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ನಾವು ನಿಮ್ಮ ಜೊತೆ ಇರುತ್ತೇವೆ. ಈ ಸರ್ಕಾರದ ಮೇಲೆ ಜನ ನಂಬಿಕೆ ಇಟ್ಟಿದ್ದಾರೆ. ಅದನ್ನ ಉಳಿಸಿಕೊಳ್ಳಿ. ಈ ಸರಕಾರದಿಂದ ಬದಲಾವಣೆ ಆಗುತ್ತಿದೆ ಎಂಬ ಸಂದೇಶವನ್ನು ನಿಮ್ಮ ಕೆಲಸದ ಮೂಲಕ ಜನರಿಗೆ ಭರವಸೆ ಮೂಡಿಸಬೇಕು” ಎಂದು ಪೊಲೀಸ್ ಅಧಿಕಾರಿಗಳಿಗೆ ಡಿಕೆಶಿ ಹೇಳಿದ್ದಾರೆ.

ಡಿಸಿ, ಜಿಪಂ ಸಿಇಒಗಳಿಗೂ ಡಿಕೆಶಿ ವಾರ್ನಿಂಗ್

ಜಿಲ್ಲಾಧಿಕಾರಿಗಳು (ಡಿಸಿ) ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ (ಸಿಇಒ) ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಡಿಯೋ ಸಂವಾದ ನಡೆಸಿದರು. ನೀವು ಸರಿಯಾಗಿ ಕೆಲಸ ಮಾಡಬೇಕು ಇಲ್ಲದಿದ್ದರೆ ನಾವು ಸಹಿಸುವುದಿಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

”ಹಿಂದಿನ ಸರಕಾರದ ಅವಧಿಯಲ್ಲಿ ನಿಮ್ಮ ಕೆಲಸ ವೈಖರಿ ಸರಿ ಇರಲಿಲ್ಲ. ರಾಜ್ಯದ ಜನ ಸಾಕಷ್ಟು ಕಷ್ಟ ಅನುಭವಿಸಿದ್ದಾರೆ. ಮಳೆ, ಪ್ರವಾಹದಿಂದ ಸಾಕಷ್ಟು ಬೆಳೆ ನಷ್ಟವಾಗಿದೆ. ಹಲವರು ಪ್ರಾಣವನ್ನೇ ಕಳೆದುಕೊಂಡರು. ಮನೆ ಮಠ ಇಲ್ಲದೇ ನಿರ್ಗತಿಕರಾದರು. ಆದರೆ ನಿಮ್ಮಲ್ಲಿ ಸಾಕಷ್ಟು ಾಧಿಕಾರಿಗಳು ಈ ಅನಾಹುತ ಸಂದರ್ಭದಲ್ಲಿ ಸರಿಯಾಗಿ ಸ್ಪಂದಿಸಲಿಲ್ಲ” ಎಂದು ಗರಂ ಆದರು.

”ಸರಕಾರಕ್ಕೆ ಉತ್ತಮ ಹೆಸರು ತರುವುದು, ಬಿಡುವುದು ನಿಮ್ಮ ಕೈಯಲ್ಲಿಯೇ ಇದೆ. ನೀವು ಸರಿಯಾಗಿ ಕೆಲಸ ಮಾಡಿದರೆ ಸರಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ. ನಮ್ಮ ಸರಕಾರ ನಿಮ್ಮಿಂದ ಉತ್ತಮ ಕೆಲಸ ಬಯಸುತ್ತದೆ. ಸರಿಯಾಗಿ ಕೆಲಸ ಮಾಡದಿದ್ದರೆ ನಾವು ಸಹಿಸುವುದಿಲ್ಲ. ನಾವು ಕಠಿಣ ಕ್ರಮ ತೆಗೆದುಕೊಳ್ಳಲು ಅವಕಾಶ ಕೊಡಬೇಡಿ. ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ” ಎಂದು ಹೇಳಿದರು.

”ರೈತರಿಗೆ ಅಗತ್ಯ ವಸ್ತುಗಳು ಪೂರೈಕೆ ಆಗುವಂತೆ ನೋಡಿಕೊಳ್ಳಿ. ಸಂಬಂಧ ಪಟ್ಟ ಇಲಾಖೆಗಳಲ್ಲಿ ಶೋಷಣೆ ನಡೆಯದಂತೆ ನೋಡಿಕೊಳ್ಳಿ. ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಮಾರೋಪಾದಿಯಲ್ಲಿ ಕೆಲಸ ಮಾಡಿ. ಸರಕಾರಕ್ಕೆ ಉತ್ತಮ ಹೆಸರು ಬರುವಂತೆ ಕೆಲಸ ಮಾಡಬೇಕು” ಎಂದು ಅಧಿಕಾರಿಗಳಿಗೆ ಡಿಕೆ ಶಿವಕುಮಾರ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...