Homeಕರ್ನಾಟಕಸಿದ್ದರಾಮಯ್ಯರ ಕೊಲೆಗೆ ಪ್ರಚೋದನೆ ನೀಡಿದವರ ಮೇಲೆ ಕೇಸ್ ಹಾಕಲಿಲ್ಲ ಯಾಕೆ?: ಪೊಲೀಸ್ ಅಧಿಕಾರಿಗಳಿಗೆ ಡಿಸಿಎಂ...

ಸಿದ್ದರಾಮಯ್ಯರ ಕೊಲೆಗೆ ಪ್ರಚೋದನೆ ನೀಡಿದವರ ಮೇಲೆ ಕೇಸ್ ಹಾಕಲಿಲ್ಲ ಯಾಕೆ?: ಪೊಲೀಸ್ ಅಧಿಕಾರಿಗಳಿಗೆ ಡಿಸಿಎಂ ಡಿಕೆಶಿ ತರಾಟೆ

- Advertisement -
- Advertisement -

”ಟಿಪ್ಪು ಸುಲ್ತಾನ್ ಅವರನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದು ಕೊಲೆ ಮಾಡಲು ಕರೆ ನೀಡಿದ, ಪ್ರಚೋದನೆ ನೀಡಿದವರ ವಿರುದ್ಧ ಯಾಕೆ ಕೇಸ್ ಹಾಕಲಿಲ್ಲ? ಅದು ಕ್ರೈಂ ಅಲ್ಲವೇ?” ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು  ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡಿದ್ದಾರೆ.

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪೊಲೀಸ್ ಇಲಾಖೆ ನಡೆದಕೊಂಡ ರೀತಿಯನ್ನು ನೆನಪಿಸುತ್ತ ಪೊಲೀಸ್ ಅಧಿಕಾರಿಗಳಿಗೆ ಡಿಕೆ ಶಿವಕುಮಾರ್ ಅವರು ಕ್ಲಾಸ್ ತಗೆದುಕೊಂಡಿದ್ದಾರೆ. ”ನೀವು ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ? ನಮ್ಮ ಸರ್ಕಾರದಲ್ಲಿ ಇದಕ್ಕೆ ಅವಕಾಶ ಕೊಡುವುದಿಲ್ಲ. ಮಂಗಳೂರು, ಬಿಜಾಪುರ, ಬಾಗಲಕೋಟದಲ್ಲಿ ನೀವು ಹೇಗೆ ಕೇಸರಿ ಬಟ್ಟೆ ಹಾಕೊಂಡು ಇಲಾಖೆಗೆ ಅವಮಾನ ಮಾಡಿದ್ದೀರಿ ಎನ್ನುವುದು ನಮಗೆ ಗೊತ್ತಿದೆ.  ಈ‌ ಸಭೆಗೂ ಕೇಸರಿ ಶಾಲು ಹಾಕಿಕೊಂಡು ಬರಬೇಕಾಗಿತ್ತು. ದೇಶದ ಬಗ್ಗೆ ಗೌರವ ಇದ್ದರೆ ರಾಷ್ಟ್ರ ಧ್ವಜ ಹಾಕಿಕೊಂಡು ಕೆಲಸ ಮಾಡಬೇಕಿತ್ತು. ನಮ್ಮ ಸರಕಾರದಲ್ಲಿ ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ನಾವು ಬಿಡೊಲ್ಲ” ಎಂದು ಹೇಳಿದರು.

”PSI ಅಕ್ರಮದಲ್ಲಿ ಒಬ್ಬ ಎಡಿಜಿಪಿ omr ಪೇಪರ್ ತಿದ್ದುತ್ತಾರೆ ಅಂದರೆ ಇಲಾಖೆ ಎಷ್ಟು ಕೆಟ್ಟು ಹೋಗಿದೆ ಎನ್ನುವುದು ಅರ್ಥವಾಗುತ್ತದೆ. ಪ್ರೆಸ್ ಕಾನ್ಫರೆನ್ಸ್ ಮಾಡಿ ಪ್ರಕರಣ ಬಯಲಿಗೆ ತಂದ ಪ್ರಿಯಾಂಕ್ ಖರ್ಗೆ ಅವರಿಗೆ ನೀವು ತೊಂದರೆ ಕೊಟ್ಟಿದ್ದೀರಿ. ಇಡೀ ದೇಶದಲ್ಲಿ ಕರ್ನಾಟಕ ಪೊಲೀಸ್ ಇಲಾಖೆಗೆ ಒಳ್ಳೆಯ ಹೆಸರಿತ್ತು. ಆ ಗೌರವ, ಘನತೆಯನ್ನ ಹಾಳು‌ ಮಾಡಿದ್ದೀರಿ. ಎಲ್ಲಿ ನೋಡಿದ್ರು ಬರೀ ಕಾಸು, ಕಾಸು, ಕಾಸು. ನಮ್ಮ ಸರ್ಕಾರದಲ್ಲಿ ಎಲ್ಲವೂ ಕ್ಲೀನ್ ಆಗಬೇಕು. ಜನ ಈ ಸರಕಾರದಿಂದ ಬಹುದೊಡ್ಡ ಬದಲಾವಣೆಯನ್ನು ನಿರೀಕ್ಷೆ ಮಾಡಿದ್ದಾರೆ. ಅದು ಪೊಲೀಸ್ ಇಲಾಖೆಯಿಂದಲೇ ಶುರು ಆಗಬೇಕು. ಈ ಸರಕಾರದಿಂದ ಬದಲಾವಣೆ ಸಂದೇಶ ಜನರಿಗೆ ಹೋಗಬೇಕು. ನಿಮ್ಮಿಂದ ನಮಗೆ ನಯಾಪೈಸೆ ಹಣ ಬೇಕಿಲ್ಲ. ನೀವು ಯಾರಿಗೂ ಹಣ ಕೊಡುವುದೂ ಬೇಡ. ಜನ ನರಳದಂತೆ ಉತ್ತಮವಾಗಿ ಕೆಲಸ ಮಾಡಿದರೆ ಅಷ್ಟೇ ಸಾಕು” ಎಂದು ಅಧಿಕಾರಿಕಾರಿಗಳಿಗೆ ತಿಳಿಸಿದ್ದಾರೆ.

”ಈ ಹಿಂದೆ ಪೇ ಸಿಎಂ ಅಭಿಯಾನ ಮಾಡಿದಾಗ ನನ್ನ ಮತ್ತು ಸಿದ್ದರಾಮಯ್ಯರ ಜೊತೆ ಹೇಗೆ ನಡೆದುಕೊಂಡಿದ್ದೀರಾ ಎನ್ನುವುದು ಗೊತ್ತಿದೆ. ನಮ್ಮ ಮೇಲೆ ಕೇಸ್ ಹಾಕಿದ್ದೀರಿ. ನಮ್ಮ ಕಾರ್ಯಕರ್ತರ ಮೇಲೆ ಸುಳ್ಳು, ಸುಳ್ಳು ಸಾವಿರಾರು ಕೇಸ್ ಹಾಕಿ ತೊಂದರೆ ಕೊಟ್ಟಿದ್ದೀರಿ. ನಮ್ಮನ್ನ, ಸಿದ್ದರಾಮಯ್ಯ ಅವರನ್ನೇ ಬಿಡದ ನೀವು ಇನ್ನು ಸಾಮಾನ್ಯ ಜನರನ್ನು ಬಿಡುತ್ತೀರಾ? ಆದರೆ ಬಿಜೆಪಿ ವಿರುದ್ಧ ಮಾತ್ರ ಯಾವುದೇ ಕೇಸ್ ಹಾಕಲಿಲ್ಲ. ಅವರ ಜತೆ ಶಾಮೀಲಾಗಿ ಅವರು ಹೇಳಿದಂತೆ ನಡೆದುಕೊಂಡಿದ್ದೀರಿ” ಎಂದು ಆರೋಪ ಮಾಡಿದರು.

”ಟಿಪ್ಪು ಸುಲ್ತಾನ್ ಅವರನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂದು ಕೊಲೆ ಮಾಡಲು ಕರೆ ನೀಡಿದ, ಪ್ರೇರಣೆ ನೀಡಿದವರ ವಿರುದ್ಧ ಯಾಕೆ ಕೇಸ್ ಹಾಕಲಿಲ್ಲ? ಅದು ಕ್ರೈಂ ಅಲ್ವಾ? ನೀವು ಏನೇನೂ ಮಾಡಿದ್ದೀರಾ ಎನ್ನುವ ಬಗ್ಗೆ ನಮ್ಮ ಬಳಿ ಸಾಕ್ಷಿ ಇವೆ. ನಾವು ಎಲ್ಲವನ್ನೂ ನೋಡಿದ್ದೇವೆ. ಇವೆಲ್ಲ ನಮ್ಮ ಸರ್ಕಾರದಲ್ಲಿ ನಡೆಯುವುದಿಲ್. ನೀವು ಬದಲಾಗಬೇಕು, ನಿಮ್ಮ ವರ್ತನೆ ಬದಲಾಗಬೇಕು. ಇಲ್ಲದಿದ್ದರೆ ನಿಮ್ಮನ್ನೇ ಬದಲಾವಣೆ ಮಾಡಬೇಕಾಗುತ್ತದೆ” ಎಂದು ಅಧಿಕಾರಿಗಳಿಗಳಿಗೆ ಡಿಕೆಶಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಸಾರ್ವಜನಿಕರಿಗೆ ತೊಂದರೆಯಾಗಬಾರದೆಂದು ಜೀರೊ ಟ್ರಾಪಿಕ್‌ ಸೌಲಭ್ಯ ಬೇಡ ಎಂದ ಸಿಎಂ ಸಿದ್ದರಾಮಯ್ಯ

”ನಾವು ದ್ವೇಷ ಸಾಧಿಸೋದಿಲ್ಲ, ಅದರಲ್ಲಿ ನಮಗೆ ನಂಬಿಕೆ ಇಲ್ಲ. ನೀವು ಬದಲಾಗಿ, ಹಳೆಯದು ಬಿಡಿ. ಹೊಸದಾಗಿ ಕೆಲಸ ಶುರು ಮಾಡಿ, ಜನರ ನೆಮ್ಮದಿ ಕಾಪಾಡಬೇಕು. ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ನಾವು ನಿಮ್ಮ ಜೊತೆ ಇರುತ್ತೇವೆ. ಈ ಸರ್ಕಾರದ ಮೇಲೆ ಜನ ನಂಬಿಕೆ ಇಟ್ಟಿದ್ದಾರೆ. ಅದನ್ನ ಉಳಿಸಿಕೊಳ್ಳಿ. ಈ ಸರಕಾರದಿಂದ ಬದಲಾವಣೆ ಆಗುತ್ತಿದೆ ಎಂಬ ಸಂದೇಶವನ್ನು ನಿಮ್ಮ ಕೆಲಸದ ಮೂಲಕ ಜನರಿಗೆ ಭರವಸೆ ಮೂಡಿಸಬೇಕು” ಎಂದು ಪೊಲೀಸ್ ಅಧಿಕಾರಿಗಳಿಗೆ ಡಿಕೆಶಿ ಹೇಳಿದ್ದಾರೆ.

ಡಿಸಿ, ಜಿಪಂ ಸಿಇಒಗಳಿಗೂ ಡಿಕೆಶಿ ವಾರ್ನಿಂಗ್

ಜಿಲ್ಲಾಧಿಕಾರಿಗಳು (ಡಿಸಿ) ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ (ಸಿಇಒ) ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಡಿಯೋ ಸಂವಾದ ನಡೆಸಿದರು. ನೀವು ಸರಿಯಾಗಿ ಕೆಲಸ ಮಾಡಬೇಕು ಇಲ್ಲದಿದ್ದರೆ ನಾವು ಸಹಿಸುವುದಿಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

”ಹಿಂದಿನ ಸರಕಾರದ ಅವಧಿಯಲ್ಲಿ ನಿಮ್ಮ ಕೆಲಸ ವೈಖರಿ ಸರಿ ಇರಲಿಲ್ಲ. ರಾಜ್ಯದ ಜನ ಸಾಕಷ್ಟು ಕಷ್ಟ ಅನುಭವಿಸಿದ್ದಾರೆ. ಮಳೆ, ಪ್ರವಾಹದಿಂದ ಸಾಕಷ್ಟು ಬೆಳೆ ನಷ್ಟವಾಗಿದೆ. ಹಲವರು ಪ್ರಾಣವನ್ನೇ ಕಳೆದುಕೊಂಡರು. ಮನೆ ಮಠ ಇಲ್ಲದೇ ನಿರ್ಗತಿಕರಾದರು. ಆದರೆ ನಿಮ್ಮಲ್ಲಿ ಸಾಕಷ್ಟು ಾಧಿಕಾರಿಗಳು ಈ ಅನಾಹುತ ಸಂದರ್ಭದಲ್ಲಿ ಸರಿಯಾಗಿ ಸ್ಪಂದಿಸಲಿಲ್ಲ” ಎಂದು ಗರಂ ಆದರು.

”ಸರಕಾರಕ್ಕೆ ಉತ್ತಮ ಹೆಸರು ತರುವುದು, ಬಿಡುವುದು ನಿಮ್ಮ ಕೈಯಲ್ಲಿಯೇ ಇದೆ. ನೀವು ಸರಿಯಾಗಿ ಕೆಲಸ ಮಾಡಿದರೆ ಸರಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ. ನಮ್ಮ ಸರಕಾರ ನಿಮ್ಮಿಂದ ಉತ್ತಮ ಕೆಲಸ ಬಯಸುತ್ತದೆ. ಸರಿಯಾಗಿ ಕೆಲಸ ಮಾಡದಿದ್ದರೆ ನಾವು ಸಹಿಸುವುದಿಲ್ಲ. ನಾವು ಕಠಿಣ ಕ್ರಮ ತೆಗೆದುಕೊಳ್ಳಲು ಅವಕಾಶ ಕೊಡಬೇಡಿ. ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ” ಎಂದು ಹೇಳಿದರು.

”ರೈತರಿಗೆ ಅಗತ್ಯ ವಸ್ತುಗಳು ಪೂರೈಕೆ ಆಗುವಂತೆ ನೋಡಿಕೊಳ್ಳಿ. ಸಂಬಂಧ ಪಟ್ಟ ಇಲಾಖೆಗಳಲ್ಲಿ ಶೋಷಣೆ ನಡೆಯದಂತೆ ನೋಡಿಕೊಳ್ಳಿ. ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಮಾರೋಪಾದಿಯಲ್ಲಿ ಕೆಲಸ ಮಾಡಿ. ಸರಕಾರಕ್ಕೆ ಉತ್ತಮ ಹೆಸರು ಬರುವಂತೆ ಕೆಲಸ ಮಾಡಬೇಕು” ಎಂದು ಅಧಿಕಾರಿಗಳಿಗೆ ಡಿಕೆ ಶಿವಕುಮಾರ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...